Editor

ರಾಜ್ಯದ ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಪ್ಟ್| ಇನ್ನೆರಡು ದಿನದಲ್ಲಿ ನಗದು ಜಮಾ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ್ದು ಆಗಸ್ಟ್ ತಿಂಗಳ ಬಾಕಿ ಹಣವನ್ನು 2-3 ದಿನಗಳಲ್ಲಿ ಅಕೌಂಟ್ ಗೆ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಹಾಸನಾಂಬೆ ದೇವಿ ದರ್ಶನದ ಸಂದರ್ಭದಲ್ಲಿ ಸರದಿ ಸಾಲಿನಲ್ಲಿದ್ದಂತ ಸಾರ್ವಜನಿಕರು ಮೂರು ತಿಂಗಳ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂಬುದಾಗಿ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದಂತ ಅವರು, ಜುಲೈ ತಿಂಗಳವರೆಗಿನ ಹಣ ಈಗಾಗಲೇ ಕ್ಲಿಯರ್ ಆಗಿದೆ ಎಂದರು. ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ. 2-3 ದಿನಗಳಲ್ಲಿ […]

ರಾಜ್ಯದ ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಪ್ಟ್| ಇನ್ನೆರಡು ದಿನದಲ್ಲಿ ನಗದು ಜಮಾ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಕನ್ನಡ ನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ Read More »

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್

ಸಮಗ್ರ ನ್ಯೂಸ್: 2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ RSS ಹೆಸರು ಉಲ್ಲೇಖಿಸದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಯಮ ಜಾರಿಯಾದರೆ RSS ಮಾತ್ರವಲ್ಲ. ಖಾಸಗಿ ಸಂಘ ಸಂಸ್ಥೆಗಳು/ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್ Read More »

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ (ಅ16) ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು. ಆ ಕಾಲದ ಪ್ರಸಿದ್ದ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ Read More »

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ

ಸಮಗ್ರ ನ್ಯೂಸ್: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಈ ಮೇಲ್ ಸಂದೇಶ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಇಮೇಲ್ ಐಡಿಗೆ ಅಪರಿಚಿತ ಇ-ಮೇಲ್ ನಿಂದ ಬೆದರಿಕೆ ಸಂದೇಶ ಬಂದಿದ್ದು ರಿಮೋಟ್ ಮೂಲಕ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಇನ್ನು ಬೆಂಗಳೂರು ನಗರದಾದ್ಯಂತ ಈ ಹಿಂದೆ ಶಾಲಾ ಕಾಲೇಜುಗಳಿಗೆ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಬಾಂಬ್ ಬೆದರಿಕೆ ಸಂದೇಶ ಕುರಿತಂತೆ

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಈ ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆ Read More »

ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ‌ 33 ಅಂಕ‌ ಸಾಕು – ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ .ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು . ಕನ್ನಡ ಭಾಷೆಗೆ ನಿಗದಿ ಮಾಡಿರುವ 125 ಅಂಕವನ್ನು 100ಕ್ಕೆ

ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ‌ 33 ಅಂಕ‌ ಸಾಕು – ಮಧು ಬಂಗಾರಪ್ಪ Read More »

ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಂಗಾರದ ಬೆಲೆ ಗಗನಕ್ಕೇರಿದೆ. ಚಿನ್ನ ಕೊಳ್ಳುವುದು ಮಿಡಲ್ ಕ್ಲಾಸ್ ಜನರಿಗೆ ಕನಸಿನ ಮಾತಾಗಿದೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರುತ್ತಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಇಂದು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಬರೋಬ್ಬರಿ 3280 ರೂಪಾಯಿ ಹೆಚ್ಚಳ ಆಗಿದೆ.‌ 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 12,868 ರೂಪಾಯಿಗೆ ತಲುಪಿದೆ. ಇಂದು ಗ್ರಾಂ ಒಂದಕ್ಕೆ ಬೆಲೆ ಬರೋಬ್ಬರಿ 328 ರೂಪಾಯಿ

ಆಭರಣ ಪ್ರಿಯರಿಗೆ ಬಿಗ್ ಶಾಕ್| 13 ಸಾವಿರದ ಸನಿಹದಲ್ಲಿ ಬಂಗಾರ ದರ Read More »

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ

ಸಮಗ್ರ ನ್ಯೂಸ್: ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಸುದೀಪ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆ

ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ Read More »

ಮಹಿಳೆಯರಿಗೆ ಮಾಸಿಕ ಒಂದು ದಿನ ಋತುಚಕ್ರ ರಜೆ| ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಸಮಗ್ರ ನ್ಯೂಸ್: ಮಹಿಳೆಯರ ಆರೋಗ್ಯದ ದೃಷ್ಟಿಯಿಂದ “ಋತುಚಕ್ರ ರಜೆ” ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಚರ್ಚೆ ನಡೆಸುತ್ತಿದ್ದು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ. ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಖಾಸಗಿ ಕಂಪೆನಿ, ಕೈಗಾರಿಕಾ ವಲಯದಲ್ಲಿ ಕಾರನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ರಜೆ ನೀಡು ವ ‘ಋತು ಚಕ್ರ ರಜೆ ನೀತಿ -2025’ ಜಾರಿಗೆ ತರುವ ಬಗ್ಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸುವ

ಮಹಿಳೆಯರಿಗೆ ಮಾಸಿಕ ಒಂದು ದಿನ ಋತುಚಕ್ರ ರಜೆ| ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ Read More »

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿ ಮಂಜು ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ‘ಕಲ್ಲೇಗ ಟೈಗರ್ಸ್’ ಹುಲಿ ವೇಷ ತಂಡದ ಅಕ್ಷಯ್ ಕಲ್ಲೇಗ (26) ಅವರ ಕೊಲೆ ಪ್ರಕರಣದ ಮೂರನೇ ಆರೋಪಿ, ಪುತ್ತೂರು ನಗರದ ಹೊರವಲಯದ ಪಡೀಲು ನಿವಾಸಿ ಮಂಜುನಾಥ್ ಅಲಿಯಾಸ್ ಮಂಜು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಅಕ್ಷಯ್ ಕಲ್ಲೇಗ ಅವರನ್ನು ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಮನೀಶ್, ಖಾಸಗಿ ಬಸ್ ಚಾಲಕನಾಗಿದ್ದ ಬನ್ನೂರು ಗ್ರಾಮದ ಕೃಷ್ಣನಗರ ನಿವಾಸಿ ಚೇತನ್, ಪಡೀಲು ನಿವಾಸಿ ಮಂಜುನಾಥ್ ಯಾನೆ

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿ ಮಂಜು ಜಾಮೀನು ಅರ್ಜಿ ವಜಾ Read More »