Editor

ಉಡುಪಿ: ಸರಳೇಬೆಟ್ಟುವಿನಲ್ಲಿ ಮನೆಯೊಳಗೆ ನುಗ್ಗಿ ಕೋಳಿಗಳನ್ನು ಬಲಿ ಪಡೆದ ಚಿರತೆ

ಸಮಗ್ರ ನ್ಯೂಸ್‌ : ಮಣಿಪಾಲ ಸಮೀಪದ ಸರಳೇಬೆಟ್ಟು ಪರಿಸರದಲ್ಲಿ ಮತ್ತೆ ಚಿರತೆ ಹಾವಳಿ ಕಂಡುಬಂದಿದ್ದು, ಮನೆಯೊಂದರ ಕೋಳಿ ಗೂಡಿಗೆ ಲಗ್ಗೆ ಇಟ್ಟ ಚಿರತೆ, ಕೋಳಿಗಳನ್ನು ಬಲಿ ಪಡೆದುಕೊಂಡಿದೆ. ಸರಳೇಬೆಟ್ಟುವಿನ ರಾಮಮಂದಿರದ ಸಮೀಪ ಸುನಿತಾ ಡಿಸೋಜ ಎಂಬವರ ಮನೆಗೆ ರಾತ್ರಿ ಹೊತ್ತಿನಲ್ಲಿ ದಾಳಿ ನಡೆಸಿದ ಚಿರತೆ, ಕೋಳಿ ಗೂಡಿನಲ್ಲಿದ್ದ ಎರಡು ಕೋಳಿಗಳನ್ನು ತಿಂದಿದೆ. ಒಂದು ಕೋಳಿಯನ್ನು ಗೂಡಿನಲ್ಲಿಯೇ ಬಿಟ್ಟು ಓಡಿ ಹೋಗಿದೆ. ಈ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಕಂಡು ಬಂದಿದೆ. ಮಣಿಪಾಲದ ಸುತ್ತಮುತ್ತ ಪ್ರದೇಶಗಳಾದ ಸರಳೇಬೆಟ್ಟು, ಕೋಡಿ, ಎಂಡ್

ಉಡುಪಿ: ಸರಳೇಬೆಟ್ಟುವಿನಲ್ಲಿ ಮನೆಯೊಳಗೆ ನುಗ್ಗಿ ಕೋಳಿಗಳನ್ನು ಬಲಿ ಪಡೆದ ಚಿರತೆ Read More »

ನವದೆಹಲಿ: ಚುನಾವಣೆ ಮುಗಿಯುವರೆಗೆ ಕಾಂಗ್ರೆಸ್‌ ಪಕ್ಷದ ತೆರಿಗೆ ವಸೂಲಿ ಇಲ್ಲ| ಕೇಂದ್ರ ಭರವಸೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿಯುವರೆಗೂ ಕಾಂಗ್ರೆಸ್‌ ಪಕ್ಷ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.‌ ಆದಾಯ ತೆರಿಗೆ ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್‌ ಪ್ರಶ್ನಿಸಿ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾ. ಬಿ.ವಿ.ನಾಗರತ್ನ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತು. ಈ ವೇಳೆ ಸಾಲಿಸಿಟರ್‌ ಜನರಲ್‌

ನವದೆಹಲಿ: ಚುನಾವಣೆ ಮುಗಿಯುವರೆಗೆ ಕಾಂಗ್ರೆಸ್‌ ಪಕ್ಷದ ತೆರಿಗೆ ವಸೂಲಿ ಇಲ್ಲ| ಕೇಂದ್ರ ಭರವಸೆ Read More »

ಕಾರವಾರ :ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ: ಶಿಕ್ಷಕಿ ಸಾವು

ಸಮಗ್ರ ನ್ಯೂಸ್‌ : ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ ಹೊಡೆದು ಶಿಕ್ಷಕಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ವಿಜಯಾ ಮಾಸ್ತೆಪ್ಪ ಭೋವಿ (40) ಮೃತ ಪಟ್ಟ ದುರ್ದೈವಿ. ವಿಜಯಾ ಅವರು ತಾಲ್ಲೂಕಿನ ಬಂಡಲದ ಬಡಗಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದರು. ಪತಿ ಜತೆಗೆ ವಿಜಯಾ ಅವರು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ಗೆ ನಗರಸಭೆಯ ತ್ಯಾಜ್ಯ ತುಂಬುವ ಟ್ರಕ್ ಬಡಿದಿದೆ. ಈ ವೇಳೆ ಕೆಳಗೆ ಬಿದ್ದ ಶಿಕ್ಷಕಿ ವಿಜಯಾ

ಕಾರವಾರ :ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ: ಶಿಕ್ಷಕಿ ಸಾವು Read More »

ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ… ಚುನಾವಣಾ ಆಯೋಗದಿಂದ ನೋಟಿಸ್

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಮುಡಿಪುವಿನಲ್ಲಿ ರಂಜಾನ್​ ಆಚರಣೆ ವೇಳೆ ರೋಜಾ ಪ್ರಯುಕ್ತ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ವ್ಯವಸ್ಥೆ ಆಯೋಜಿಸಿದ್ದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಸಾರ್ವಜನಿಕ ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕಿಗೆ ಚುನಾವಣಾ ಆಯೋಗ ತುರ್ತು ನೋಟಿಸ್ ನೀಡಿದೆ. ಮುಡಿಪುವಿನ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆಗೊಂಡಿತ್ತು. ಇಫ್ತಾರ್ ಕೂಟದ ವಿಡಿಯೋ ವೈರಲ್ ಆಗಿದೆ. ವಿಡಿಯೋ ಕುರಿತು ಪರ ಮತ್ತು ವಿರೋಧ ಚರ್ಚೆ ನಡೆದಿತ್ತು.

ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ… ಚುನಾವಣಾ ಆಯೋಗದಿಂದ ನೋಟಿಸ್ Read More »

ಗ್ಯಾಸ್​ ಬಳಕೆದಾರರಿಗೆ ಗುಡ್​ನ್ಯೂಸ್​… ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​​ ಬೆಲೆ ಇಳಿಕೆ

ಸಮಗ್ರ ನ್ಯೂಸ್: ಇಂದು ಗ್ಯಾಸ್​ ಬಳಕೆದಾರರಿಗೆ ಗುಡ್​ನ್ಯೂಸ್​ ಸಿಕ್ಕಿದೆ. ಹೌದು ಹಣಕಾಸು ವರ್ಷದ ಮೊದಲ ದಿನ ಎಲ್​​ಪಿಜಿ ದರವನ್ನು ಕಡಿಮೆ ಮಾಡಲಾಗಿದ್ದು, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್​ಟಿಎಲ್ ಸಿಲಿಂಡರ್​ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದಿನಿಂದಲೇ ಅನ್ವಯವಾಗಲಿದೆ. ದೆಹಲಿಯಲ್ಲಿ 19 ಕೆಜಿ ಎಲ್​ಪಿಜಿ ಸಿಲಿಂಡರ್​ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32

ಗ್ಯಾಸ್​ ಬಳಕೆದಾರರಿಗೆ ಗುಡ್​ನ್ಯೂಸ್​… ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​​ ಬೆಲೆ ಇಳಿಕೆ Read More »

ಬಂಟ್ವಾಳ: ರಿಕ್ಷಾ-ಸ್ಕೂಟರ್ ಢಿಕ್ಕಿ

ಸಮಗ್ರ ನ್ಯೂಸ್‌ : ರಿಕ್ಷಾ ಢಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳದ ಪರಂಗಿಪೇಟೆ ಎಂಬಲ್ಲಿ ನಡೆದಿದೆ. ಮೂಡಬಿದಿರೆ ನಿವಾಸಿ ಕೌಶಿಕ್ ಗಾಯಗೊಂಡ ವ್ಯಕ್ತಿ. ಪರಂಗಿಪೇಟೆ ಎಂಬಲ್ಲಿ ಏಕಮುಖ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕನೋರ್ವ ಸ್ಕೂಟರ್ ಗೆ ಎದುರಿನಿಂದ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳ: ರಿಕ್ಷಾ-ಸ್ಕೂಟರ್ ಢಿಕ್ಕಿ Read More »

ಹದಿನೈದು ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ| ಇಂದಿನಿಂದ ನೂತನ ದರ ಜಾರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ವಿದ್ಯುತ್‌ ಪರಿಷ್ಕರಣೆ ಮಾಡಿರುವ ಆದೇಶ ಸೋಮವಾರದಿಂದ (ಏ.1) ಜಾರಿಯಾಗಲಿದ್ದು, 100 ಯುನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡುವವರಿಗೆ ಪ್ರತಿ ಯುನಿಟ್‌ಗೆ 1.10 ರೂ. ಕಡಿಮೆಯಾಗಲಿದೆ. ತನ್ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್‌ ದರ ಕಡಿಮೆಯಾದಂತಾಗಲಿದೆ 2024-25ನೇ ಸಾಲಿಗೆ ಅನ್ವಯವಾಗುವಂತೆ ಕೆಇಆರ್‌ಸಿ ಮಾಡಿರುವ ದರ ಪರಿಷ್ಕರಣೆ ಆದೇಶದಲ್ಲಿ ಈವರೆಗೆ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ 0-100 ವರೆಗಿನ ಯುನಿಟ್‌ ಹಾಗೂ 100ಕ್ಕಿಂತ ಹೆಚ್ಚು ಯುನಿಟ್ ಬಳಕೆಗೆ ಪ್ರತ್ಯೇಕವಾಗಿದ್ದ

ಹದಿನೈದು ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ| ಇಂದಿನಿಂದ ನೂತನ ದರ ಜಾರಿ Read More »

ನೀತಿ ಸಂಹಿತೆ| ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರನ್ನು ತಪಾಸಣೆ ಮಾಡಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲೆಡೆ ನೀತಿ ಸಂಹಿತೆ ಜಾರಿಯಲ್ಲಿದೆ. ಅಲ್ಲಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ತನಿಖೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರನ್ನು ಕೋಲಾರದ ಗಡಿ ರಾಮಸಂದ್ರ ಬಳಿ ತಪಾಸಣೆ ಮಾಡಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳು ಕಾರು ತಪಾಸಣೆ ಮಾಡಿದ್ದಾರೆ. ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್‌ನಲ್ಲಿ ನಡೆದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಸಹೋದರ ಮಗಳ ಮದುವೆಗೆ ಹೋಗಿದ್ದ ಸಿಎಂ, ಗೃಹ ಸಚಿವ

ನೀತಿ ಸಂಹಿತೆ| ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರನ್ನು ತಪಾಸಣೆ ಮಾಡಿದ ಅಧಿಕಾರಿಗಳು Read More »

ಪತ್ನಿಯ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪತಿಯನ್ನು ಕೊಂದವರಿಗೆ ₹ 50,000 ಬಹುಮಾನ ಘೋಷಣೆ

ಸಮಗ್ರ ನ್ಯೂಸ್: ಪತಿಯ ಹತ್ಯೆಗೆ ಪತ್ನಿ ₹ 50,000 ಬಹುಮಾನವನ್ನು ಘೋಷಿಸಿದ್ದ ಘಟನೆ ಆಗ್ರಾದ ಬಹ್ ಜಿಲ್ಲೆಯಲ್ಲಿ ನಡೆದಿದೆ. ಪತ್ನಿಯು ವಾಟ್ಸಾಪ್ ಸ್ಟೇಟಸ್‌ನಲ್ಲಿ ಗಂಡನನ್ನು ಕೊಂದವರಿಗೆ ಬಹುಮಾನ ಘೋಷಣೆ ಮಾಡಿದ್ದಾರೆ. ಪತಿಯು ಪತ್ನಿಯ ಸ್ಟೇಟಸ್ ನೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿಂದೆ ಪತ್ನಿಯ ಸ್ನೇಹಿತರೊಬ್ಬರು ಬೆದರಿಕೆ ಹಾಕಿದ್ದರು ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬಹ್ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ಸಿಂಗ್ ಹೇಳಿದ್ದಾರೆ.‌ ಇವರು

ಪತ್ನಿಯ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪತಿಯನ್ನು ಕೊಂದವರಿಗೆ ₹ 50,000 ಬಹುಮಾನ ಘೋಷಣೆ Read More »

ರೆಡ್ ಕಾರ್ಪೆಟ್ ನಿಷೇಧ/ ಆರ್ಥಿಕ ಸಂಕಷ್ಟಕ್ಕೆ ಪಾಕಿಸ್ತಾನದ ನೂತನ ಪರಿಹಾರ

ಸಮಗ್ರ ನ್ಯೂಸ್: ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನ ಹಣ ಉಳಿಸಲು ನೂತನ ಪರಿಹಾರದ ಮೊರೆ ಹೋಗಿದ್ದು, ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ರೆಡ್ ಕಾರ್ಪೆಟ್ ಬಳಸುವಂತಿಲ್ಲ ಎಂದು ಪ್ರಧಾನಿ ಶಹಬಾಜ್ ಷರೀಫ್ ಆದೇಶ ಹೊರಡಿಸಿದ್ದಾರೆ. ರೆಡ್ ಕಾರ್ಪೆಟ್ ಬಳಕೆ ನಿಷೇಧಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಹೊರೆ ಕಡಿಮೆ ಮಾಡುವುದು ಇದರ ಹಿಂದಿನ ಉದ್ದೇಶ ಎಂದು ವಿಶ್ಲೇಷಿಸಲಾಗಿದೆ. ರಾಯಭಾರಿಗಳು, ರಾಜತಾಂತ್ರಿಕ ಅಧಿಕಾರಿಗಳು ಭಾಗವಹಿಸುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಾತ್ರ ಶಿಷ್ಟಾಚಾರವಾಗಿ ರೆಡ್ ಕಾರ್ಪೆಟ್ ಬಳಕೆ ಅವಕಾಶ ನೀಡಲಾಗಿದೆ. ಇತ್ತೀಚೆಗಷ್ಟೇ ಪ್ರಧಾನಿ

ರೆಡ್ ಕಾರ್ಪೆಟ್ ನಿಷೇಧ/ ಆರ್ಥಿಕ ಸಂಕಷ್ಟಕ್ಕೆ ಪಾಕಿಸ್ತಾನದ ನೂತನ ಪರಿಹಾರ Read More »