Editor

ಹವಾಮಾನ ವರದಿ |ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ 

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 1 ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಒಂದು ವಾರ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವಡೆ ಜೂ.23ರಿಂದ ಜೂ.29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಜೂ.23ರಿಂದ ಜೂ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, […]

ಹವಾಮಾನ ವರದಿ |ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ  Read More »

ಮಂಗಳೂರು: ಎರಡೆರಡು ಬಾರಿ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದಿದ್ದ ಗಣಿ ಇಲಾಖೆ ಡಿಡಿ ಸಸ್ಪೆಂಡ್

ಸಮಗ್ರ ನ್ಯೂಸ್: ಕಚೇರಿಯಲ್ಲಿ ದರ್ಬಾರ್ ಮಾಡುತ್ತಿದ್ದ ಅಧಿಕಾರಿಯನ್ನು ಕೊನೆಗೂ ಅಮಾನತು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಡಿಡಿ ಕೃಷ್ಣವೇಣಿ ಅನ್ನು ಇಲಾಖೆ ತನಿಖೆ ಬಾಕಿ ಇರಿಸಿ ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ ಮಂಜುನಾಥ್ ಭಾನುವಾರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​​ ಶನಿವಾರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವ ಮೂಲಕ ಕೃಷ್ಣವೇಣಿಯನ್ನು ಸೇವೆಯಿಂದ ಅಮಾನತುಗೊಳಿಸಿ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಡಿಡಿ ಕೃಷ್ಣವೇಣಿ ಅವರ ಮೇಲೆ

ಮಂಗಳೂರು: ಎರಡೆರಡು ಬಾರಿ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದಿದ್ದ ಗಣಿ ಇಲಾಖೆ ಡಿಡಿ ಸಸ್ಪೆಂಡ್ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ

ಯೋಗದಿಂದ ಶಾರೀರಿಕ, ಮಾನಸಿಕತೆ ಸದೃಡತೆಗೊಳ್ಳುತ್ತದೆ. ಇದು ಮನುಷ್ಯನ ಶಾರೀರಿಕ ಮತ್ತು ಮಾನಸಿಕತೆ ಕೊಂಡಿಯಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಸುಳ್ಯ ಕೆ. ವಿ ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಇದರ ಸಹಯೋಗದಲ್ಲಿ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು.ಆಯುರ್ವೇದ ಕಾಲೇಜಿನ ವೈದ್ಯೆ ಡಾ.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ Read More »

ಪಂಚಾಯತ್ ಸಭೆಗಳಲ್ಲಿ ತುಳು ಬಳಸದಂತೆ ಸುತ್ತೋಲೆ| ಸಂಸದ ಕೋಟ ಶ್ರೀ‌ನಿವಾಸ ಪೂಜಾರಿ ಸಹಿತ ಹಲವರ ಆಕ್ರೋಶ

ಸಮಗ್ರ ನ್ಯೂಸ್: ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದೆ ಕನ್ನಡಕ್ಕೆ ಪ್ರಾಮುಖ್ಯತೆ ನೀಡಬೇಕೆಂಬ ಸುತ್ತೋಲೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಕಳದ ಯಶಸ್ವಿ ನಾಗರಿಕ ಸೇವಾ ಸಂಘದ ಸಂಚಾಲಕ ಮುರಳೀಧರ ಎಂಬವರು ದ.ಕ ಜಿ. ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಚರ್ಚಿಸುವಾಗ ತುಳು ಭಾಷೆ ಬಳಕೆ ಮಾಡದಂತೆ ಹಾಗೂ ಕನ್ನಡಕ್ಕೆ ಪ್ರಾಮುಖ್ಯತೆ ನೀಡುವಂತೆ

ಪಂಚಾಯತ್ ಸಭೆಗಳಲ್ಲಿ ತುಳು ಬಳಸದಂತೆ ಸುತ್ತೋಲೆ| ಸಂಸದ ಕೋಟ ಶ್ರೀ‌ನಿವಾಸ ಪೂಜಾರಿ ಸಹಿತ ಹಲವರ ಆಕ್ರೋಶ Read More »

ರೈತ‌ಬಾಂಧವರಿಗೆ ಗುಡ್ ನ್ಯೂಸ್| ಈ ದಿನಾಂಕದಂದು ಖಾತೆಗೆ ಜಮೆಯಾಗಲಿದೆ ಕಿಸಾನ್ ಸಮ್ಮಾನ್ 20ನೇ ಕಂತು

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಕೃಷಿ ಒಳಹರಿವು ಮತ್ತು ದೇಶೀಯ ಅಗತ್ಯಗಳಿಗಾಗಿ ರೈತರ ಆರ್ಥಿಕ ಅಗತ್ಯಗಳನ್ನು ಪೂರೈಸಲು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದೊಂದಿಗೆ ಭಾರತ ಸರ್ಕಾರ ಪ್ರಾರಂಭಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಎಂದರೇನು?ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಭಾರತ ಸರ್ಕಾರವು ಪ್ರಾರಂಭಿಸಿದ ಯೋಜನೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರ್ಷಕ್ಕೆ 6,000 ರೂ.ಗಳ ಆರ್ಥಿಕ ಸಹಾಯವನ್ನು ಒದಗಿಸುತ್ತಿದ್ದು, ಈ ಯೋಜನೆಯಡಿಯಲ್ಲಿ,

ರೈತ‌ಬಾಂಧವರಿಗೆ ಗುಡ್ ನ್ಯೂಸ್| ಈ ದಿನಾಂಕದಂದು ಖಾತೆಗೆ ಜಮೆಯಾಗಲಿದೆ ಕಿಸಾನ್ ಸಮ್ಮಾನ್ 20ನೇ ಕಂತು Read More »

ಬಂಟ್ವಾಳ: ಬೈಕಿನಲ್ಲಿ ತೆರಳುತ್ತಿದ್ದ ಸವಾರರನ್ನು ಬೆನ್ನತ್ತಿದ ವ್ಯಕ್ತಿ| ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಯುವಕನ ಮೇಲೆ ತಲವಾರು ದಾಳಿಯೆಂದು ಸುಳ್ಳುಸುದ್ದಿ ಪ್ರಚಾರ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಸಜೀಪದ ದೇರಾಜೆಯಲ್ಲಿ‌ ತಲವಾರು ದಾಳಿ ನಡೆದಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅಲ್ಲಿ ನಿಜವಾಗಿ ಬೈಕಿನಲ್ಲಿ ತೆರಳುತ್ತಿದ್ದ ಸವಾರರನ್ನು ಓರ್ವ ವ್ಯಕ್ತಿ ಓಡಿಸಿಕೊಂಡು ಹೋದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮುಕ್ಬುಲ್ ಎಂಬವರು ಬೋಳಿಯಾರು ಕಡೆಯಿಂದ ಮೆಲ್ಕಾರಿಗೆ ಬೈಕಿನಲ್ಲಿ ಸಹಸವಾರರಾಗಿ ಹೋಗುತ್ತಿದ್ದ ಸಂದರ್ಭ ದೇರಾಜೆ ಎಂಬಲ್ಲಿ ಬೈಕಿನಲ್ಲಿ ಕುಳಿತ್ತಿದ್ದ ವ್ಯಕ್ತಿಯೊಬ್ಬ ಇವರ ಬೈಕನ್ನು ಹಿಂಬಾಲಿಸಿ ಓಡಿಸಿಕೊಂಡು ಬಂದಿದ್ದಾರೆ. ಈ ವೇಳೆ ಸವಾರರು ಬೈಕಿನ ವೇಗವನ್ನು ಹೆಚ್ಚಿಸಿ ತಪ್ಪಿಸಿಕೊಂಡು

ಬಂಟ್ವಾಳ: ಬೈಕಿನಲ್ಲಿ ತೆರಳುತ್ತಿದ್ದ ಸವಾರರನ್ನು ಬೆನ್ನತ್ತಿದ ವ್ಯಕ್ತಿ| ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಯುವಕನ ಮೇಲೆ ತಲವಾರು ದಾಳಿಯೆಂದು ಸುಳ್ಳುಸುದ್ದಿ ಪ್ರಚಾರ Read More »

ದ.ಕ‌ ಎಸ್ಪಿ ಅರುಣ್ ಗೆ ನೋಟೀಸ್ ನೀಡಿದ ಹೈಕೋರ್ಟ್| ರಾತ್ರೋರಾತ್ರಿ ಹಿಂದೂ ಮುಖಂಡರ ಮನೆಗೆ ನುಗ್ಗಿ ಫೋಟೋ ತೆಗೆಸಿದ್ದೇ ಮುಳುವಾಯ್ತೇ?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರೋ ರಾತ್ರಿ ಹಿಂದೂ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಜಿಲ್ಲೆಯ ಹಿರಿಯ ಆರ್.ಎಸ್.ಎಸ್ ಮುಖಂಡ ಯು.ಜಿ.ರಾಧಾ ಅವರ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೋಲನೆ ನಡೆಸಿದ್ದರು. ಇದೀಗ ಎಸ್ ಪಿ ಡಾ.ಅರುಣ್ ಕುಮಾರ್ ಅವರಿಗೆ ಕಾರಣ ಕೇಳಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಸಂಬಂಧ ಸೂಕ್ತ ದಾಖಲೆ ಸಲ್ಲಿಸಬೇಕು. ಅಲ್ಲದೇ ಕಾನೂನು ಹೊರತಾಗಿ

ದ.ಕ‌ ಎಸ್ಪಿ ಅರುಣ್ ಗೆ ನೋಟೀಸ್ ನೀಡಿದ ಹೈಕೋರ್ಟ್| ರಾತ್ರೋರಾತ್ರಿ ಹಿಂದೂ ಮುಖಂಡರ ಮನೆಗೆ ನುಗ್ಗಿ ಫೋಟೋ ತೆಗೆಸಿದ್ದೇ ಮುಳುವಾಯ್ತೇ? Read More »

ಸರ್ಕಾರಿ ನೌಕರರಿಗೆ ಬಿಗ್ ಶಾಕ್| ಎರಡು ಹಾಗೂ ನಾಲ್ಕನೇ ಶನಿವಾರದ ರಜೆ ರದ್ದು

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆಗಳನ್ನು ರದ್ದುಗೊಳಿಸಿರುವ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಆದೇಶವು ಜೂನ್ 14, 2025ರ ಎರಡನೇ ಶನಿವಾರದಿಂದಲೇ ಅನ್ವಯವಾಗಲಿದ್ದು, ಜುಲೈ 14, 2025ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ. ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನ ಆದೇಶದ ಆಧಾರದ ಮೇಲೆ ರಾಷ್ಟ್ರಪತಿಗಳ ಅನುಮತಿಯೊಂದಿಗೆ ಜಾರಿಗೊಳಿಸಲಾಗಿದೆ. ಸಂವಿಧಾನದ 145ನೇ ವಿಧಿಯಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ, 2013ರ ಆದೇಶದ ಕ್ಲಾಸ್ 2ರ ನಿಯಮಗಳನ್ನು ತಿದ್ದುಪಡಿ

ಸರ್ಕಾರಿ ನೌಕರರಿಗೆ ಬಿಗ್ ಶಾಕ್| ಎರಡು ಹಾಗೂ ನಾಲ್ಕನೇ ಶನಿವಾರದ ರಜೆ ರದ್ದು Read More »

ಬಂಟ್ವಾಳ: ಗರ್ಭಿಣಿ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ| 15 ವರ್ಷಗಳ ಬಳಿಕ ಚಿಗುರಿದ ಕರುಳ ಕುಡಿಗೆ ಎಳ್ಳುನೀರು!!

ಸಮಗ್ರ ನ್ಯೂಸ್: ಪತಿಯೇ ಗರ್ಭಿಣಿ ಪತ್ನಿಯನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ನಡೆದಿದೆ. ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಅವರ ಮೃತದೇಹಗಳು ಇಂದು ಪತ್ತೆಯಾಗಿದ್ದವು. ಆದರೆ ಯಾವುದೋ ವಿಷಯಕ್ಕೆ ಪತ್ನಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಮೃತರ ಸಂಬಂಧಿಗಳ ದೂರಿನಂತೆ ಪ್ರಕರಣ ದಾಖಲಾಗಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ

ಬಂಟ್ವಾಳ: ಗರ್ಭಿಣಿ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ| 15 ವರ್ಷಗಳ ಬಳಿಕ ಚಿಗುರಿದ ಕರುಳ ಕುಡಿಗೆ ಎಳ್ಳುನೀರು!! Read More »

ಗಾಯಕಿ‌ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು| ವಿಚ್ಛೇದನಕ್ಕೆ ಅರ್ಜಿ

ಸಮಗ್ರ ನ್ಯೂಸ್: ಪುತ್ತೂರಿನ ಖ್ಯಾತ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇದೀಗ ವಿಚ್ಚೇಧನಕ್ಕೆ ಪುತ್ತೂರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಅಖಿಲಾ ಪಜಿಮಣ್ಣು ಪುತ್ತೂರಿನ ಪಜಿಮಣ್ಣು ಎನ್ನುವ ಗ್ರಾಮದ ನಿವಾಸಿಯಾಗಿದ್ದು, ಕನ್ನಡ ಕೋಗಿಲೆ 1 ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿರುವ ಅಖಿಲಾ ಪಜಿಮಣ್ಣು ತಮ್ಮ ಸುಮಧುರ ಕಂಠದಿಂದ ಎಲ್ಲರ ಮನೆ ಮಾತಾಗಿದ್ದಾರೆ. ಇದೀಗ ಅವರ ಬಾಳಲ್ಲಿ ಬಿರುಗಾಳಿ ಎದ್ದಿದ್ದು ಅಖಿಲಾ ಪಜಿಮಣ್ಣು ಮತ್ತು ಆಕೆಯ ಪತಿ ಟಿ.ಆರ್. ಧನರಾಜ್

ಗಾಯಕಿ‌ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು| ವಿಚ್ಛೇದನಕ್ಕೆ ಅರ್ಜಿ Read More »