Editor

ಮಂಡ್ಯ ಟಿಕೆಟ್ ಜೆಡಿಎಸ್‍ಗೆ/ ಅಭ್ಯರ್ಥಿ ಯಾರು ಎಂಬುದು ಇಂದು ನಿರ್ಧಾರ

ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದು, ಇಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಕಣಕ್ಕಿಳಿಯುತ್ತಾರೋ ಇಲ್ಲವೋ ಎಂಬ ಬಗ್ಗೆ ಸೋಮವಾರ ನಿರ್ಧಾರವಾಗಲಿದೆ. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ವಿಷಯ ತಿಳಿಸಿದ್ದಾರೆ. ಚೆನ್ನೈನಲ್ಲಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಬೆಂಗಳೂರಿನ ನಿವಾಸಕ್ಕೆ ಮರಳಿದರು. ಈ ವೇಳೆ ಜೆ.ಪಿ.ನಗರದ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ನೆರೆದಿದ್ದರು. ಅವರು, ಕುಮಾರಸ್ವಾಮಿಯೇ ಮಂಡ್ಯದಿಂದ ಸ್ಪರ್ಧಿಸಬೇಕು ಎಂದು ಒತ್ತಾಯಿಸುತ್ತಿದ್ದರು. ಈ ವೇಳೆ ಮಾತನಾಡಿದ

ಮಂಡ್ಯ ಟಿಕೆಟ್ ಜೆಡಿಎಸ್‍ಗೆ/ ಅಭ್ಯರ್ಥಿ ಯಾರು ಎಂಬುದು ಇಂದು ನಿರ್ಧಾರ Read More »

ಬರ ಪರಿಹಾರದ ಕುರಿತು ಕೋರ್ಟ್ ತೀರ್ಮಾನಿಸಲಿ/ ನಿರ್ಮಲಾ ಸೀತರಾಮನ್ ಹೇಳಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎಂದು ಸುಪ್ರೀಂಕೋರ್ಟ್‍ಗೆ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದ ಕ್ರಮಕ್ಕೆ, ಈ ವಿಚಾರದಲ್ಲಿ ಯಾರಿಂದ ಲೋಪವಾಗಿದೆ ಎಂದು ನ್ಯಾಯಾಲಯವೇ ತೀರ್ಮಾನಿಸಲಿ ಎಂದು ತೀಕ್ಷ್ಣವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಅನುದಾನ ಬಂದಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬೆಂಗಳೂರಿನ ಆರ್.ವಿ.ದಂತ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಚಿಂತಕರ ವೇದಿಕೆ ಹಾಗೂ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯ

ಬರ ಪರಿಹಾರದ ಕುರಿತು ಕೋರ್ಟ್ ತೀರ್ಮಾನಿಸಲಿ/ ನಿರ್ಮಲಾ ಸೀತರಾಮನ್ ಹೇಳಿಕೆ Read More »

ಧರ್ಮಸ್ಥಳ: ತಾಯಿ ಮಗು ನಾಪತ್ತೆ

ಸಮಗ್ರ ನ್ಯೂಸ್: ತಾಯಿ ಒಂಭತ್ತು ತಿಂಗಳ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ನಡೆದಿದೆ. ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡ ಅವರ ಪತ್ನಿ ಜಯಶ್ರೀ (29ವ) ಹಾಗೂ ಅವರ ಪುತ್ರಿ ರುಷಿಕಾ (9ತಿಂಗಳು) ನಾಪತ್ತೆಯಾದವರು. ಮಾ.22ರಂದು ರಾತ್ರಿ ಜಯಶ್ರೀ ರೂಮಿನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಮಲಗಿದ್ದು, ವೆಂಕಪ್ಪ ಗೌಡ ಅವರು ಮನೆಯ ಹಾಲ್ ನಲ್ಲಿ ಮಲಗಿದ್ದರು. ಮರುದಿನ ಬೆಳಿಗೆ ವೆಂಕಪ್ಪ ಗೌಡರು ಎದ್ದು ನೋಡಿದಾಗ ಮನೆಯಲ್ಲಿ ಪತ್ನಿ ಜಯಶ್ರೀ ಹಾಗೂ 9 ತಿಂಗಳ

ಧರ್ಮಸ್ಥಳ: ತಾಯಿ ಮಗು ನಾಪತ್ತೆ Read More »

ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ ಆಗುತ್ತೆ: ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡ್ತಿದೆ. ಇದೀಗ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಕ್ಷೇತ್ರಗಳಿಗೆ ಯಾವುದೇ ಅಭ್ಯರ್ಥಿಗಳನ್ನು ಘೋಷಿಸದೆ ಪೆಂಡಿಂಗ್ ಉಳಿಸಿಕೊಂಡಿದೆ. ಇದೆ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವ ಕಗ್ಗಂಟು ಆಗಿಲ್ಲ. ಎಳೆದಾಟವೂ ಆಗಿಲ್ಲ. ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತೆ. ಇಪ್ಪತ್ತು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ. ಅವ್ರು 28 ಕ್ಷೇತ್ರ

ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ ಆಗುತ್ತೆ: ಸಿಎಂ ಸಿದ್ದರಾಮಯ್ಯ Read More »

ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದ ವೇಳೆ ನೂಕುನುಗ್ಗಲು| ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದ ವೇಳೆ ನೂಕುನುಗ್ಗಲು ಉಂಟಾಗಿದ್ದು ಹತ್ತಾರು ಮಂದಿ ಕೆಳಗೆ ಬಿದ್ದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ರಥದ ಹಗ್ಗ ಎಳೆಯುವಾಗ ಹತ್ತಾರು ಮಂದಿ ಆಯತಪ್ಪಿ ಬಿದ್ದಿದ್ದು ಕಾಲ್ತುಳಿತಕ್ಕೊಳಗಾಗಿದ್ದಾರೆ. ಗಾಬರಿಯಿಂದ ಜನರು ಒಬ್ಬರ ಮೇಲೆ ಒಬ್ಬರು ತುಳಿದುಕೊಂಡು ಓಡಿದ್ದಾರೆ. ಕೂಡಲೇ ಕೆಳಗೆ ಬಿದ್ದವರನ್ನು ಮೇಲೆತ್ತಲಾಗಿದ್ದು ಇದರಿಂದ ರಥೋತ್ಸವದ ವೇಳೆ ಭಾರಿ ಅನಾಹುತ ತಪ್ಪಿದೆ. ಇನ್ನು ಇದೇ ರಥೋತ್ಸವದಲ್ಲಿ ಭಾಗಿಯಾಗಿದ್ದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಸೊಸೆ ಭವಾನಿರೇವಣ್ಣ ಅವರಿಗೆ ರಥಕ್ಕೆ

ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದ ವೇಳೆ ನೂಕುನುಗ್ಗಲು| ತಪ್ಪಿದ ಭಾರೀ ಅನಾಹುತ Read More »

ಉಡುಪಿ: ಬೀದಿ ನಾಯಿಗೆ ಊಟ ಹಾಕಿದ್ದಕ್ಕೆ ದಲಿತ ಮಹಿಳೆಗೆ ಹಲ್ಲೆ|ಆರೋಪಿ ಬಂಧನ

ಸಮಗ್ರ ನ್ಯೂಸ್‌ : ಬೀದಿನಾಯಿಗೆ ಊಟ ಹಾಕಿದರು ಎಂಬ ಕಾರಣಕ್ಕಾಗಿ ದಲಿತ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಇಂದ್ರಾಳಿ ಹಯಗ್ರೀವ ನಗರದ ಚಂದ್ರಕಾಂತ ಭಟ್ ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕುಂಜಿಬೆಟ್ಟು ಬುಡ್ನಾರ್ ನಿವಾಸಿ ಬೇಬಿ(50) ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ತಮ್ಮ ಪರಿಚಯದ ಚಂದ್ರಕಾಂತ ಎಂಬವರ ಮನೆ ಸಮೀಪ ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದರು. ಈ ವೇಳೆ ಚಂದ್ರಕಾಂತ ನಾಯಿಗಳಿಗೆ ಊಟ ಹಾಕುವುದಕ್ಕೆ ಆಕ್ಷೇಪಿಸಿ ಅವಾಚ್ಯ

ಉಡುಪಿ: ಬೀದಿ ನಾಯಿಗೆ ಊಟ ಹಾಕಿದ್ದಕ್ಕೆ ದಲಿತ ಮಹಿಳೆಗೆ ಹಲ್ಲೆ|ಆರೋಪಿ ಬಂಧನ Read More »

ವಿದೇಶದಲ್ಲೂ ಅವರಿಸಿದೆ ಲೋಕಸಭಾ ಚುನಾವಣೆಯ ಗಾಳಿ/ ಸಾಗರದಾಚೆಗೂ ವಿಸ್ತರಿಸಿದೆ ಮೋದಿ ಹವಾ

ಸಮಗ್ರ ನ್ಯೂಸ್: ಭಾರತದ ಲೋಕಸಭಾ ಚುನಾವಣೆಯ ಗಾಳಿ ವಿದೇಶದಲ್ಲೂ ಪಸರಿಸಿದ್ದು. ಅಲ್ಲಿ ಕೂಡ ವಿವಿಧ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಮೋದಿಗೆ ವಿದೇಶಗಳಲ್ಲಿರುವ ಭಾರತೀಯ ಸಮುದಾಯಗಳ ಜನರು ಸತತವಾಗಿ ಬೆಂಬಲ ಕೊಡುತ್ತಾ ಬಂದಿದ್ದು, ಈ ಬಾರಿ ವಿದೇಶಗಳಲ್ಲೂ ಮೋದಿ ಪರ ಕಲರವ ಕೇಳಿಬರತೊಡಗಿದೆ. ಆಸ್ಟ್ರೇಲಿಯಾದ ‘ಓವರ್‍ಸೀಸ್ ಫ್ರೆಂಡ್ಸ್ ಆಫ್ ಬಿಜೆಪಿ’ ಎನ್ನುವ ಸಂಘಟನೆಯು ಮೋದಿ ಫಾರ್ 2024 ಎನ್ನುವ ಅಭಿಯಾನ ನಡೆಸುತ್ತಿದೆ. ಏಳು ಪ್ರಮುಖ ನಗರಗಳಲ್ಲಿ ಈ ಆಂದೋಲನ ನಡೆಯಲಿದ್ದು, ಪಿಎಂ ಮೋದಿ ನೇತೃತ್ವದ ಬಿಜೆಪಿ ಮತ್ತು

ವಿದೇಶದಲ್ಲೂ ಅವರಿಸಿದೆ ಲೋಕಸಭಾ ಚುನಾವಣೆಯ ಗಾಳಿ/ ಸಾಗರದಾಚೆಗೂ ವಿಸ್ತರಿಸಿದೆ ಮೋದಿ ಹವಾ Read More »

ಅನಂತಕುಮಾರ್ ಹೆಗಡೆಗೆ ಟಿಕೆಟ್ ಮಿಸ್/ ಜನರಿಗೊಂದು ಭಾವುಕ ಪತ್ರ

ಸಮಗ್ರ ನ್ಯೂಸ್: ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಅನಂತಕುಮಾರ್ ಹೆಗಡೆ ಅವರು ಭಾವುಕ ಪತ್ರ ಬರೆದಿದ್ದು, ಸೇವೆಯ ಸೌಭಾಗ್ಯ ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು

ಅನಂತಕುಮಾರ್ ಹೆಗಡೆಗೆ ಟಿಕೆಟ್ ಮಿಸ್/ ಜನರಿಗೊಂದು ಭಾವುಕ ಪತ್ರ Read More »

“ಆರ್ಟಿಕಲ್ 370” ಸಿನಿಮಾ/ ಏಪ್ರಿಲ್ 19ರಂದು ಒಟಿಟಿಯಲ್ಲಿ ರಿಲೀಸ್

ಸಮಗ್ರ ನ್ಯೂಸ್”: ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದ ಘಟನೆಗಳನ್ನು ಆಧರಿಸಿ ಮೂಡಿ ಬಂದ ‘ಆರ್ಟಿಕಲ್ 370’ ಸಿನಿಮಾ ಇದೀಗ ಒಟಿಟಿಯಲ್ಲಿ ಅಬ್ಬರಿಸಲು ‘ಆರ್ಟಿಕಲ್ 370’ ಸಿದ್ಧವಾಗಿದೆ. ನಟಿ ಯಾಮಿ ಗೌತಮ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾಗೆ ಒಳ್ಳೆಯ ಕಲೆಕ್ಷನ್ ಆಗಿದೆ. ಆರಂಭದಲ್ಲೇ ‘ಆರ್ಟಿಕಲ್ 370’ ಸಿನಿಮಾಗೆ ಸಾಧಾರಣ ಕಲೆಕ್ಷನ್ ಆಯಿತು. ನಂತರದ ದಿನಗಳಲ್ಲಿ ಅದೇ ಸ್ಥಿತಿ ಮುಂದುವರಿಯಿತು. ಅಚ್ಚರಿ ಏನೆಂದರೆ, ಸತತ ಒಂದು ತಿಂಗಳ ಪ್ರದರ್ಶನದ

“ಆರ್ಟಿಕಲ್ 370” ಸಿನಿಮಾ/ ಏಪ್ರಿಲ್ 19ರಂದು ಒಟಿಟಿಯಲ್ಲಿ ರಿಲೀಸ್ Read More »

IPL ಪಂದ್ಯದ ವೇಳೆ ತುಂಡಾಗಿ ಬಿದ್ದ ಸ್ಪೈಡರ್‌ಕ್ಯಾಮ್ ಕೇಬಲ್​; ಕೆಲಕಾಲ ಆಟ ಸ್ಥಗಿತ

ಸಮಗ್ರ ನ್ಯೂಸ್: ಐಪಿಎಲ್​ನ ರಾಜಸ್ಥಾನ್​ ರಾಯಲ್ಸ್ ಮತ್ತು ಲಕ್ನೋ ಸೂಪರ್​ ಜೈಂಟ್ಸ್ ನಡುವಣ ಪಂದ್ಯ ಆರಂಭಗೊಂಡ ಕೆಲವೇ ನಿಮಿಷದಲ್ಲಿ ಸ್ಪೈಡರ್ ಕ್ಯಾಮೆರಾದ ಕೇಬಲ್​ ಏಕಾಏಕಿ ತುಂಡಾಗಿ ಪಿಚ್​ ಮೇಲೆ ಬಿದ್ದ ಘಟನೆ ನಡೆದಿದೆ. ಇದರಿಂದ ಕೆಲಕಾಲ ಆಟ ಸ್ಥಗಿತಗೊಂಡಿತು. ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ರಾಜಸ್ಥಾನ್​ ರಾಯಲ್ಸ್​ 2 ಎಸೆತಗಳನ್ನು ಎದುರಿಸಿದ್ದ ವೇಳೆ ಸ್ಪೈಡರ್ ಕ್ಯಾಮೆರಾದ ಕೇಬಲ್​ ತುಂಡಾಗಿ ಪಿಚ್ ಮೇಲೆ ಬಿದ್ದಿತು. ಇದರಿಂದ ಕೆಲವು ಕಾಲ ಪಂದ್ಯ ಸ್ಥಗಿತಗೊಂಡಿತ್ತು. ಬಳಿಕ ಮೈದಾನ ಸಿಬ್ಬಂದಿಗಳು ಇದನ್ನು ತೆರವುಗೊಳಿಸಿ

IPL ಪಂದ್ಯದ ವೇಳೆ ತುಂಡಾಗಿ ಬಿದ್ದ ಸ್ಪೈಡರ್‌ಕ್ಯಾಮ್ ಕೇಬಲ್​; ಕೆಲಕಾಲ ಆಟ ಸ್ಥಗಿತ Read More »