Editor

ಸುಹಾಸ್ ಶೆಟ್ಟಿ, ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಪೊಲೀಸರ ವಿರುದ್ಧ NHRC ತನಿಖೆಗೆ ಆದೇಶ

ಸಮಗ್ರ ನ್ಯೂಸ್: ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾಗಿತ್ತು. ಅದಾದ ನಂತರ ಕೆಲವೇ ದಿನಗಳಲ್ಲಿ ರೆಹಿಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣಗಳಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಮಧ್ಯಪ್ರವೇಶಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೋಲೀಸರ ವಿರುದ್ಧ ತನಿಖೆ ನಡೆಸಿ 2 ವಾರದಲ್ಲಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತನಿಖಾ ವಿಭಾಗದ ಡಿಜಿಗೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ […]

ಸುಹಾಸ್ ಶೆಟ್ಟಿ, ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಪೊಲೀಸರ ವಿರುದ್ಧ NHRC ತನಿಖೆಗೆ ಆದೇಶ Read More »

ಕಿಟಕಿ‌ ಬದಿಯ ಸೀಟಿಗಾಗಿ ಜಗಳ| ಯುವಕನಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದಲೂ, ಪುರುಷರಿಗೆ ಬಸ್ನಲ್ಲಿ ಕುಳಿತುಕೊಳ್ಳಲು ಸೀಟ್ ಸಿಗುವುದೇ ಅಪರೂಪ ಅಂತದರಲ್ಲಿ ಇದೀಗ ಬಸ್ ನಲ್ಲಿ ಕಿಟಕಿ ಪಕ್ಕ ಸೀಟ್ ಗಾಗಿ ಯುವಕರ ಮಧ್ಯ ಗಲಾಟೆ ನಡೆದು ಓರ್ವ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಬರುತ್ತಿದ್ದ ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಯುವಕರ ಮಧ್ಯೆ ಗಲಾಟೆ ನಡೆದಿದ್ದು, ಓರ್ವ ಯುವಕನಿಗೆ ಚಾಕು ಇರಿಯಲಾಗಿದೆ.ಗ್ರಾಮದ ಮಜ್ಜು ಸನದಿ(20) ಎಂಬ ಯುವಕ ಎದೆ ಭಾಗಕ್ಕೆ

ಕಿಟಕಿ‌ ಬದಿಯ ಸೀಟಿಗಾಗಿ ಜಗಳ| ಯುವಕನಿಗೆ ಚೂರಿ ಇರಿತ Read More »

ಪುತ್ತೂರು: ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನೇ ಅಡವಿಟ್ಟ ಚಾಲಕ

ಸಮಗ್ರ ನ್ಯೂಸ್: ಲಾರಿಯನ್ನು ಬಾಡಿಗೆ ಓಡಿಸಲು ನೀಡಿದರೆ ಡ್ರೈವರ್ ಮಾತ್ರ ಅದನ್ನು ತೆಗೆದುಕೊಂಡು ಹೋಗಿ ಅಡವಿಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಇದೀಗ ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಸೋಮವಾರ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ ಫರ್ವೀಝ್ ಎಂ. ಎಂಬವರು ದೂರು ನೀಡಿದ್ದು, ಲಾರಿ ಚಾಲಕ ಅಸಾಸುದ್ದೀನ್ ಫೈರೋಝ್ ಮತ್ತು ಮಂಗಳೂರಿನ ಕಿರಣ್ ಪ್ರಕರಣದ ಆರೋಪಿಗಳು ಎಂದು ತಿಳಿದುಬಂದಿದೆ. ಕಳೆದ ಮಾರ್ಚ್‌ನಲ್ಲಿ ಲಾರಿ ಮಾಲೀಕರು

ಪುತ್ತೂರು: ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನೇ ಅಡವಿಟ್ಟ ಚಾಲಕ Read More »

ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಉಪ್ಪಿನಂಗಡಿ ಶಾಲಾ ವಿದ್ಯಾರ್ಥಿಯ ಮಾದರಿ ಪ್ರದರ್ಶನ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಸರ್ಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಬ್ದುಲ್ ಬಾಶಿತ್ ಜಪಾನ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಈ ಮೂಲಕ ಗ್ರಾಮೀಣ ವಿದ್ಯಾರ್ಥಿಯೊಬ್ಬರು ರಾಷ್ಟ್ರವನ್ನು ಪ್ರತಿನಿಧಿಸಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ಕಡವಿನಬಾಗಿಲು ನಿವಾಸಿ ಇಲಿಯಾಸ್ ಪಾಷ ಹಾಗೂ ಸಬಿಯಾ ಎಂಬುವರ ಪುತ್ರ ನಿವಾಸಿ ಅಬ್ದುಲ್ ಬಾಸಿತ್ ತಾನು ಅನ್ವೇಷಿಸಿದ ‘ಸೀವಿಂಗ್ ಚಯರ್ ಫಾರ್ ಹ್ಯಾಂಡಿಕ್ಯಾಪ್ಸ್’ ಎಂಬ ವಿಜ್ಞಾನ ಮಾದರಿಯನ್ನು ಜಪಾನ್‌ನಲ್ಲಿ ಜೂನ್ 15ರಿಂದ 21ರವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ವಿಜ್ಞಾನ ಸಮ್ಮೇಳನ ‘ಸುಕುರಾ’ದಲ್ಲಿ

ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಉಪ್ಪಿನಂಗಡಿ ಶಾಲಾ ವಿದ್ಯಾರ್ಥಿಯ ಮಾದರಿ ಪ್ರದರ್ಶನ Read More »

ಪಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಘೋಷಣೆ| ಕಡಿಮೆಯಾಯ್ತು ಟೋಲ್ ದರ

ಸಮಗ್ರ ನ್ಯೂಸ್: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ಹೆದ್ದಾರಿಯಲ್ಲಿ ತೊಂದರೆಯಿಲ್ಲದ ಪ್ರಯಾಣಕ್ಕೆ ಅನುಕೂಲವಾಗುವಂತೆ ಫಾಸ್ಟ್ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ಘೋಷಿಸಿದೆ. X ನಲ್ಲಿ ಈ ಬಗ್ಗೆ ಘೋಷಣೆ ಮಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಆಗಸ್ಟ್ 15, 2025 ರಿಂದ ಜಾರಿಗೆ ಬರುವಂತೆ ಒಂದು ವರ್ಷಕ್ಕೆ ಈ ಪಾಸ್ನ ಬೆಲೆ 3,000 ರೂ.ಗಳಾಗಿರುತ್ತದೆ ಎಂದು ಹೇಳಿದರು. ಇತ್ತೀಚಿನ ಫಾಸ್ಟ್ಟ್ಯಾಗ್ ಪಾಸ್ ಕಾರುಗಳು, ಜೀಪ್ಗಳು ಮತ್ತು ವ್ಯಾನ್ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಮತ್ತು

ಪಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಘೋಷಣೆ| ಕಡಿಮೆಯಾಯ್ತು ಟೋಲ್ ದರ Read More »

ಮಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವಕರಿಬ್ಬರು ಸಾವು

ಸಮಗ್ರ ನ್ಯೂಸ್: ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತವಾದ ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ

ಮಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವಕರಿಬ್ಬರು ಸಾವು Read More »

ಮಂಗಲ ಸೂತ್ರ ಉಚಿತವಾಗಿ ನೀಡಿದ ಚಿನ್ನದ ವ್ಯಾಪಾರಿ| ಕಣ್ಣೀರಾದ ವೃದ್ಧ‌ ದಂಪತಿ

ಸಮಗ್ರ ನ್ಯೂಸ್: ತಮ್ಮ ಪತ್ನಿಗಾಗಿ ಚಿನ್ನದ ಮಂಗಳಸೂತ್ರ ಖರೀದಿಸಲು ಆಭರಣದ ಅಂಗಡಿಗೆ ಬಂದಿದ್ದ ವೃದ್ಧರೊಬ್ಬರು, ತಮ್ಮಲ್ಲಿನ ಸಂಪೂರ್ಣ ಉಳಿತಾಯವನ್ನು ಅಂಗಡಿ ಮಾಲೀಕರಿಗೆ ನೀಡಿದ್ದಾರೆ. ಆದರೆ, ಆ ಹಣ ಮಂಗಳಸೂತ್ರದ ಬೆಲೆಗೆ ಸಾಕಾಗಲಿಲ್ಲ. ಆಗ ಆಭರಣ ವ್ಯಾಪಾರಿ ಮಾಡಿದ ಕೆಲಸ ಎಲ್ಲರ ಹೃದಯವನ್ನು ತಟ್ಟಿದೆ. ವೃದ್ಧ ಮಹಿಳೆಗೆ ಬಹಳ ದಿನಗಳಿಂದ ಚಿನ್ನದ ಮಂಗಳಸೂತ್ರ ಖರೀದಿಸುವ ಆಸೆಯಿತ್ತು. ಪತ್ನಿಯ ಈ ಆಸೆಯನ್ನು ಈಡೇರಿಸಲು, ವೃದ್ಧ ವ್ಯಕ್ತಿ ಪಂಢರಪುರಕ್ಕೆ ತೀರ್ಥಯಾತ್ರೆಗೆ ಬಂದಿದ್ದಾಗ ಆಭರಣ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದರು. ಮಂಗಳಸೂತ್ರ ಖರೀದಿಸಲು ತಮ್ಮಲ್ಲಿದ್ದ

ಮಂಗಲ ಸೂತ್ರ ಉಚಿತವಾಗಿ ನೀಡಿದ ಚಿನ್ನದ ವ್ಯಾಪಾರಿ| ಕಣ್ಣೀರಾದ ವೃದ್ಧ‌ ದಂಪತಿ Read More »

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ

ಸಮಗ್ರ ನ್ಯೂಸ್: ಆರ್‌ಡಿಪಿಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿದ್ದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಉಡುಪಿ ಡಿಸಿಯಾಗಿದ್ದ ವಿದ್ಯಾಕುಮಾರಿ ಕೆ. ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ.

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ Read More »

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ| ನೂತನ ಡಿಸಿಯಾಗಿ ದರ್ಶನ್ ಎಚ್.ವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ| ನೂತನ ಡಿಸಿಯಾಗಿ ದರ್ಶನ್ ಎಚ್.ವಿ Read More »

ಮಂಗಳೂರು: ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಯುವವೈದ್ಯ ಸಾವು

ಸಮಗ್ರ ನ್ಯೂಸ್: ಮಂಗಳೂರು ನಗರದ ನಂತೂರಿನ ತಾರೆತೋಟ ಬಳಿ ಸೋಮವಾರ ರಾತ್ರಿ ಕಾರೊಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಸಂಭವಿಸಿದ ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಫಿಸಿಯೋಥೆರಪಿ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೂಲತಃ ಕೇರಳದ ಆಲಪ್ಪುಝ ನಿವಾಸಿ ಡಾ.ಮುಹಮ್ಮದ್ ಅಮಲ್ (29) ಮೃತಪಟ್ಟವರು ಎಂದು ತಿಳಿದು ಬಂದಿದೆ. ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಮುಗಿಸಿ ಅಲ್ಲಿಯೇ ಡ್ಯೂಟಿಗೆ ಸೇರಿದ್ದ ಡಾ.ಮುಹಮ್ಮದ್ ಅಮಲ್ ನಿನ್ನೆ ರಾತ್ರಿ 11:45ರ ಸುಮಾರಿಗೆ

ಮಂಗಳೂರು: ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಯುವವೈದ್ಯ ಸಾವು Read More »