Editor

ಕೊನೆಗೂ ಕಳಕೊಂಡ ಚೋಕರ್ಸ್ ಪಟ್ಟ| ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ಸ್ ಗೆ ಮುತ್ತಿಟ್ಟ ದ.ಆಫ್ರಿಕಾ

ಸಮಗ್ರ ನ್ಯೂಸ್: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025 ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಚೊಚ್ಚಲ ಟ್ರೋಫಿ ತನ್ನದಾಗಿಸಿಕೊಳ್ಳುವ ಹೊಸ ದಾಖಲೆಯನ್ನೇ ಸೃಷ್ಟಿಸಿದೆ ಕ್ರಿಕೆಟ್ ತವರು ಲಾರ್ಡ್ಸ್ ಕ್ರಿಕೆಟ್​ ಮೈದಾನದಲ್ಲಿ ಚಾಂಪಿಯನ್‌ಶಿಪ್ 2025ರ ಫೈನಲ್‌ ಪಂದ್ಯದಲ್ಲಿ ಆಸಿಸ್‌ ತಂಡವನ್ನು ಮಣಿಸುವ ಮೂಲಕ ದಕ್ಷಿಣ ಆಫ್ರಿಕಾ 27 ವರ್ಷಗಳ ಬಳಿಕ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಈ ಮೂಲಕ ಹೊಸ ಚರಿತ್ರೆಯನ್ನೇ ಸೃಷ್ಟಿಸಿದ್ದು, ಇದರಿಂದ ಬರೀ ದಕ್ಷಿಣ […]

ಕೊನೆಗೂ ಕಳಕೊಂಡ ಚೋಕರ್ಸ್ ಪಟ್ಟ| ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ಸ್ ಗೆ ಮುತ್ತಿಟ್ಟ ದ.ಆಫ್ರಿಕಾ Read More »

ಹವಾಮಾನ ವರದಿ; ಕರಾವಳಿಯಲ್ಲಿ ಭಾರೀ ಮಳೆ‌ ಸಾಧ್ಯತೆ| ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಅಬ್ಬರಿಸಿದ್ದ ಮುಂಗಾರು ಮಳೆ ಶುಕ್ರವಾರ ಕೊಂಚ ಬಿಡುವು ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಸಂಭವ ಹೆಚ್ಚಿರುವ ಕಾರಣ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೀದರ್‌ ಸೇರಿದಂತೆ ಹಲವೆಡೆ ಶುಕ್ರವಾರ ಅಲ್ಪ ಪ್ರಮಾಣದಲ್ಲಿ ಮಳೆ ಸುರಿದಿದೆ. ಬುಧವಾರ ತಡರಾತ್ರಿ ಸುರಿದ ಧಾರಕಾರ ಮಳೆಗೆ ತತ್ತರಿಸಿದ್ದ ಹುಬ್ಬಳ್ಳಿ, ಧಾರವಾಡ ಸೇರಿ ಉತ್ತರ ಕರ್ನಾಟಕದ

ಹವಾಮಾನ ವರದಿ; ಕರಾವಳಿಯಲ್ಲಿ ಭಾರೀ ಮಳೆ‌ ಸಾಧ್ಯತೆ| ರೆಡ್ ಅಲರ್ಟ್ ಘೋಷಣೆ Read More »

ಭಾರತೀಯ ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಅನನ್ಯಾ ರಾವ್ ನೇಮಕ

ಸಮಗ್ರ ನ್ಯೂಸ್: NITK ಹಳೆಯ ವಿದ್ಯಾರ್ಥಿ ಮತ್ತು NCC ಕೆಡೆಟ್ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನಿಯೋಜನೆಗೊಂಡಿದ್ದಾರೆ. ಎಳಿಮಲದ ಭಾರತೀಯ ನೌಕಾ ಅಕಾಡೆಮಿಯಲ್ಲಿ 10 ತಿಂಗಳ ತೀವ್ರ ಮಿಲಿಟರಿ ತರಬೇತಿ ಕಾರ್ಯಕ್ರಮದ ನಂತರ, ಮೇ 31, 2025 ರಂದು ನಡೆದ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಅನನ್ಯ ಅವರನ್ನು ಔಪಚಾರಿಕವಾಗಿ ನೌಕಾಪಡೆಗೆ ಸೇರಿಸಲಾಯಿತು. ನಿವೃತ್ತ ಟೆಲಿಕಾಂ ಉದ್ಯೋಗಿ ಶ್ರೀ ಸತೀಶ್ ರಾವ್ ಮತ್ತು ವೀಣಾ ದಂಪತಿಗಳ ಪುತ್ರಿ ಕುಮಾರಿ ಅನನ್ಯಾ ರಾವ್ LKg ಇಂದ SSLC

ಭಾರತೀಯ ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಅನನ್ಯಾ ರಾವ್ ನೇಮಕ Read More »

ಮಂಗಳೂರು: ದೇಶದ ಮೊದಲ ಕೋಮುಹಿಂಸೆ ನಿಗ್ರಹ ಪಡೆ ಉದ್ಘಾಟನೆ

ಸಮಗ್ರ ನ್ಯೂಸ್: ರಾಜ್ಯಸರ್ಕಾರದ ನೆಮ್ಮದಿ ಕೆಡಿಸಿದ್ದ ಇತ್ತೀಚಿನ ಸರಣಿ ಕೊಲೆಗಳು ಹಾಗೂ ಕೋಮು ಹಿಂಸಾಚಾರವನ್ನು ಹತ್ತಿಕ್ಕಲು ದೇಶದಲ್ಲೇ ಮೊದಲ ಬಾರಿಗೆ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಸೀಮಿತವಾಗಿ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಮಂಗಳೂರಿನಲ್ಲಿ ಲೋಕಾರ್ಪಣೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ವಿಧಾನಪರಿಷತ್‌ ಸದಸ್ಯರಾದ ಮಂಜುನಾಥ್‌ ಭಂಡಾರಿ, ಐವಾನ್‌ ಡಿಸೋಜ, ಪುತ್ತೂರು ಕ್ಷೇತ್ರದ ಶಾಸಕ ಅಶೋಕ್‌ ರೈ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್‌, ಕೊಂಕಣಿ

ಮಂಗಳೂರು: ದೇಶದ ಮೊದಲ ಕೋಮುಹಿಂಸೆ ನಿಗ್ರಹ ಪಡೆ ಉದ್ಘಾಟನೆ Read More »

ಸುಳ್ಯ: ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಡಿಕ್ಕಿ

ಸಮಗ್ರ ನ್ಯೂಸ್: ಮಾಣಿ ಮೈಸೂರು ಹೆದ್ದಾರಿಯ ಸುಳ್ಯದ ಓಡಾಬೈ ನಲ್ಲಿ ಜೂ.14 ರಂದು ಮುಂಜಾನೆ ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿ ಪ್ರಯಾಣಿಕರು ಇರದ ಕಾರಣ ಹೆಚ್ಚಿನ ಅಪಘಾತ ಸಂಭವಿಸಿಲ್ಲ,ಸುಳ್ಯ ಕಡೆಗೆ ಬರುತ್ತಿದ್ದ ಬಸ್ ಹಾಗೂ ಸುಳ್ಯ ದಿಂದ ಪೈಚಾರ್ ಕಡೆಗೆ ಹೋಗುತ್ತಿದ್ದ ಟಿಪ್ಪರ್ ನಡುವೆ ಈ ಘಟನೆ ನಡೆದಿದೆ. ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಸುಳ್ಯ: ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಡಿಕ್ಕಿ Read More »

ಭಾರತೀಯ ರೆಡ್ ಕ್ರಾಸ್ ರಾಜ್ಯ ಸಮಿತಿಗೆ ಚೂಂತಾರು ಆಯ್ಕೆ

ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ 2025-2028ರ ಮೂರು ವರ್ಷದ ಅವಧಿಗೆ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಡಾ.ಮುರಲೀ ಮೋಹನ್ ಚೂಂತಾರು ಅವರು ಆಯ್ಕೆಯಾಗಿದ್ದಾರೆ. ರಾಜ್ಯಪಾಲರ ಸಚಿವಾಲಯ ಅವರ ನೇಮಕಾತಿ ಆದೇಶ ಹೊರಡಿಸಿದೆ. ಡಾ.ಮುರಲೀ ಮೋಹನ್ ಚೂಂತಾರು ಅವರು ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಚೇರ್‌ಮನ್ ಮತ್ತು ಲೇಡಿಗೋಶನ್ ಆಸ್ಪತ್ರೆಯಲ್ಲಿರುವ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್‌ನ ಚೇರ್‌ಮೆನ್ ಆಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಆಗಿ ಹಾಗೂ ಪೌರ ರಕ್ಷಣಾ

ಭಾರತೀಯ ರೆಡ್ ಕ್ರಾಸ್ ರಾಜ್ಯ ಸಮಿತಿಗೆ ಚೂಂತಾರು ಆಯ್ಕೆ Read More »

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದೆ. ಕಟ್ಟಡದಿಂದ ಬಿದ್ದು ವೈದ್ಯ ದಂಪತಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿದ್ದಾಳೆ. ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ. ವೈದ್ಯ ದಂಪತಿ ಡಾ.ಮುಮ್ತಾಜ್ ಅಹ್ಮದ್ ದಂಪತಿ ಅಪಾರ್ಟ್ ಮೆಂಟ್ ನ 12ನೇ ಮಹಡಿಯಲ್ಲಿ ವಾಸವಾಗಿದ್ದರು. ಮಂಗಳೂರಿನ ಉಳ್ಳಾಲ ಪೊಲೀಸ್

ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು Read More »

‘ನೀವು ನನ್ನನ್ನು ರೇಪ್ ಒಂದು ಮಾಡಿಲ್ಲ ಬಿಟ್ಟರೆ ಮತ್ತೆಲ್ಲಾ ಮಾಡಿದ್ದೀರಿ’| ಮಾಧ್ಯಮಗಳ ಮೇಲೆ‌ ಹರಿಹಾಯ್ದ ಡಿಕೆಶಿ

ಸಮಗ್ರ ನ್ಯೂಸ್: ನೀವು ಮಾಧ್ಯಮದವರೆಲ್ಲಾ ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ… ಇನ್ ಏನ್ ಮಾಡಬೇಕೆಲ್ಲಾ ಮಾಡಿದ್ದೀರಿ, ಸುಳ್ಳು ಪಳ್ಳು ಹೇಳಿ ನನ್ನನ್ನು ವಿಲನ್ ಮಾಡಿದ್ದೀರಿ… ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜಾತಿಗಣತಿ ವರದಿ ಬಗ್ಗೆ ಯಾರು ಏನು ಬೇಕಾದರೂ ಹೇಳಲಿ. ಜನರು, ಶಾಸಕರು ಹಾಗೂ ಮಂತ್ರಿಗಳ ಭಾವನೆಗಳನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಕಾನೂನಿನಲ್ಲಿ ಏನು ಮಾಡಬೇಕು ಎಲ್ಲಾ ಮಾಡಿದ್ದೀವಿ. ನಾಳೆ ಬೆಳಗ್ಗೆ ಯಾರಾದರೂ ಕೋರ್ಟ್‌ಗೆ ಹೋದ್ರೆ ಸಮಸ್ಯೆ ಆಗುತ್ತದೆ ಎಂದು ಹೇಳಿದರು. ರಾಜ್ಯದಲ್ಲಿ ಮಾಡಿದ

‘ನೀವು ನನ್ನನ್ನು ರೇಪ್ ಒಂದು ಮಾಡಿಲ್ಲ ಬಿಟ್ಟರೆ ಮತ್ತೆಲ್ಲಾ ಮಾಡಿದ್ದೀರಿ’| ಮಾಧ್ಯಮಗಳ ಮೇಲೆ‌ ಹರಿಹಾಯ್ದ ಡಿಕೆಶಿ Read More »

ಶಕ್ತಿ ಯೋಜನೆ: ಎರಡು ವರ್ಷದಲ್ಲಿ 7 ಕೋಟಿ 41 ಲಕ್ಷ ಮಹಿಳೆಯರ ಉಚಿತ ಪ್ರಯಾಣ

ಸಮಗ್ರ ನ್ಯೂಸ್‌: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾಗಿ 2 ವರ್ಷ ಸಂದಿದ್ದು, 7 ಕೋಟಿ 41 ಲಕ್ಷ ಮಹಿಳೆಯರು ಶೂನ್ಯ ದರದ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 2023ರ ಜೂನ್ 11 ರಿಂದ 2025ರ ಜೂನ್ 11ರವರೆಗೆ ಅಂದರೆ ಎರಡು ವರ್ಷಗಳಲ್ಲಿ 7,41,90,451 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದರ ಟಿಕೆಟ್ ಮೌಲ್ಯ 206 ಕೋಟಿ ರುಪಾಯಿಗಳಾಗಿದೆ. 2023ರ ಜೂನ್ 11 ರಿಂದ 2024ರ ಜುಲೈ 31ರವರೆಗೆ ಅಂದರೆ ಒಂದು ವರ್ಷ 2 ತಿಂಗಳಲ್ಲಿ

ಶಕ್ತಿ ಯೋಜನೆ: ಎರಡು ವರ್ಷದಲ್ಲಿ 7 ಕೋಟಿ 41 ಲಕ್ಷ ಮಹಿಳೆಯರ ಉಚಿತ ಪ್ರಯಾಣ Read More »

ಭಾರೀ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆ ಕರ್ನಾಟಕದ ಧಾರವಾಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತಗಳು ಆದೇಶಿಸಿದೆ. ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಜೂ.13ರ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,‌ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಜಟರಾಜಾ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜೂ.13ರಂದು ಶಾಲಾ-ಕಾಲೇಜುಗಳಿಗೆ

ಭಾರೀ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »