Editor

ಉಡುಪಿ: ಬೆಳ್ಳಿ ಆಭರಣ ಮಳಿಗೆಗೆ ಮ್ಯಾನೇಜರ್‌ನಿಂದ ಲಕ್ಷಾಂತರ ರೂ. ವಂಚನೆ

ಸಮಗ್ರ ನ್ಯೂಸ್: ಉಡುಪಿ ಒಳಕಾಡಿನಲ್ಲಿರುವ ಬೆಳ್ಳಿಯ ಆಭರಣಗಳ ಅಂಗಡಿಯ ಮ್ಯಾನೇಜರ್ ವಿಶಾಲ್ ಎಂಬಾತನು ತನ್ನ ಸಂಸ್ಥೆಗೆ ಲಕ್ಷಾಂತರ ರೂ. ವಂಚಿಸಿದ್ದಾನೆ ಎಂದು ದೂರು ದಾಖಲಾಗಿದೆ. ಸೆ.25ರಂದು ಈತನ ಬಗ್ಗೆ ಅನುಮಾನಗೊಂಡು ಸಂಸ್ಥೆಯ ಮಾಲಕರು ಲೆಕ್ಕಪತ್ರಗಳನ್ನು ಪರಿಶೀಲಿಸಿದಾಗ ಆರೋಪಿಯು 17 ಲ.ರೂ.ಮೌಲ್ಯದ 25 ಕೆಜಿ 980 ಗ್ರಾಂ ತೂಕದ ಬೆಳ್ಳಿಯ ಬಗ್ಗೆ ಮೋಸ ಮಾಡಿ ನಷ್ಟ ಉಂಟು ಮಾಡಿದ್ದ. ಈ ಬಗ್ಗೆ ಆತನನ್ನು ದೂರವಾಣಿ ಮೂಲಕ ವಿಚಾರಿಸಿದಾಗ ತಪ್ಪನ್ನು ಒಪ್ಪಿಕೊಂಡು 10 ಲ.ರೂ.ಗಳನ್ನು ಮಾಲಕರಿಗೆ ನೀಡಿದ್ದ. ಬಳಿಕ ಉಳಿದ

ಉಡುಪಿ: ಬೆಳ್ಳಿ ಆಭರಣ ಮಳಿಗೆಗೆ ಮ್ಯಾನೇಜರ್‌ನಿಂದ ಲಕ್ಷಾಂತರ ರೂ. ವಂಚನೆ Read More »

ಪಡುಬಿದ್ರಿ : ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಬಾಲಕಾರ್ಮಿಕರ ರಕ್ಷಣೆ

ಸಮಗ್ರ ನ್ಯೂಸ್ : ಸಂತೆಯಲ್ಲಿ ಬಾಲಕಾರ್ಮಿಕರು ಹಾಗೂ ಭಿಕ್ಷಾಟನೆ ನಡೆಸುತ್ತಿರುವವರ ಬಗ್ಗೆ ಮಾಹಿತಿ ಪಡೆದ ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್. ಅವರು ಮಕ್ಕಳ ರಕ್ಷಣ ಘಟಕ ಸಿಬ್ಬಂದಿ ಸಹಕಾರದೊಂದಿಗೆ ದಿಢೀರ್ ಕಾರ್ಯಾಚರಣೆ ನಡೆಸಿ ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಿದರು. ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದಾಗ ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಬಾಲಕಾರ್ಮಿಕರು ಪತ್ತೆಯಾದರು. ಇದೇ ವೇಳೆ ಮಕ್ಕಳನ್ನು ಬಳಸಿ ಭಿಕ್ಷಾಟನೆ ನಡೆಸುತ್ತಿರುವುದೂ ಕಂಡು ಬಂದಿದ್ದು, ಅವರು ಅಧಿಕಾರಿಗಳನ್ನು ನೋಡಿ ಅಲ್ಲಿಂದ ಪರಾರಿಯಾದರು. ಪತ್ತೆಹಚ್ಚಲಾದ ಬಾಲ ಕಾರ್ಮಿಕರನ್ನು ಮಕ್ಕಳ

ಪಡುಬಿದ್ರಿ : ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಬಾಲಕಾರ್ಮಿಕರ ರಕ್ಷಣೆ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ಬಳ್ಳಾರಿಯಲ್ಲಿ ಓರ್ವ ಎನ್ಐಎ. ವಶಕ್ಕೆ

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಓರ್ವನನ್ನು ಎನ್ ಐ ಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ಬಳ್ಳಾರಿಯಲ್ಲಿ ಓರ್ವ ಎನ್ಐಎ. ವಶಕ್ಕೆ Read More »

ಶಿರಾಡಿ‌ ಘಾಟ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ| ಭಾರೀ ಪ್ರಮಾಣದ ಗ್ಯಾಸ್ ಸೋರಿಕೆ| ವಾಹನ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಮಂಗಳೂರು-ಬೆಂಗಳೂರು ಎನ್‍ಎಚ್-75 ರ ಡಬಲ್ ಕ್ರಾಸ್ ಬಳಿ ಗ್ಯಾಸ್ ಟ್ಯಾಂಕರ್‍ವೊಂದು ಪಲ್ಟಿಯಾಗಿ ಟ್ಯಾಂಕರ್‍ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಇಂದು (ಮಾ.13) ಸಂಭವಿಸಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಪಲ್ಟಿಯಾದ ಗ್ಯಾಸ್ ಟ್ಯಾಂಕರ್‍ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಾರ್ಗಮಧ್ಯೆ ನೂರಾರು ವಾಹನಗಳು ನಿಂತಲ್ಲೆ ನಿಂತಿವೆ. ಸದ್ಯ ಪೊಲೀಸರು ಮಂಗಳೂರು- ಹಾಸನ- ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ. ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು

ಶಿರಾಡಿ‌ ಘಾಟ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ| ಭಾರೀ ಪ್ರಮಾಣದ ಗ್ಯಾಸ್ ಸೋರಿಕೆ| ವಾಹನ ಸಂಚಾರಕ್ಕೆ ನಿರ್ಬಂಧ Read More »

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್ : ವಿವೇಕಾನಂದ ಪಾಲಿಟೆಕ್ನಿಕ್‌ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ (60)ಯವರು ಹೃದಯಾಘಾತದಿಂದ ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧಾನರಾದರು. 1986ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆರಂಭಗೊAಡಿದ್ದು 1987ರಲ್ಲಿ ಅದರ ಪ್ರಾಂಶುಪಾಲರಾಗಿ ಗೋಪಿನಾಥ್ ಶೆಟ್ಟಿಯವರು ನೇಮಕಗೊಂಡಿದ್ದರು. ಅದಾದ ಬಳಿಕ ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಈ ಮೂಲಕ ವಿವೇಕಾನಂದ ಪಾಲಿಟೆಕ್ನಿಕ್ ಆಧಾರ ಸ್ಥಂಭವಾಗಿದ್ದರು, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಪ್ರಸ್ತುತ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ಹೃದಯಾಘಾತದಿಂದ ನಿಧನ Read More »

ಪುತ್ತೂರು: ಮಹಿಳೆಯ ಖಾತೆಯಿಂದ ಹಣ ವಂಚನೆ- ದೂರು ದಾಖಲು..!

ಸಮಗ್ರ ನ್ಯೂಸ್ : ಮಹಿಳೆಯೋರ್ವರ ಖಾತೆಯಿಂದ ಅಪರಿಚಿತ ವ್ಯಕ್ತಿ ಯಾವುದೋ ರೀತಿಯಲ್ಲಿ ವಂಚಿಸಿ ಹಣವನ್ನು ಪಡೆದುಕೊಂಡ ಘಟನೆ ಚಿಕ್ಕಮಡ್ನೂರು ಗ್ರಾಮ ಪುತ್ತೂರಿನಲ್ಲಿ ನಡೆದಿದೆ. ಚಿಕ್ಕಮಡ್ನೂರು ಗ್ರಾಮ ,ಪುತ್ತೂರು ನಿವಾಸಿ ಐಡಾ ಶಾಂತಿ ಲೋಬೊ (43) ಎಂಬವರ ದೂರಿನಂತೆ, ಪುತ್ತೂರಿನ ದರ್ಬೆ ಎಂಬಲ್ಲಿರುವ ಯೂನಿಯನ್ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು, ಖಾತೆಯಿಂದ ದಿನಾಂಕ 02-02-2024 ರಂದು ರಾತ್ರಿ ಸಮಯ ರೂ 13,000/- ಹಣ ಕಡಿತಗೊಂಡಿರುವ ಬಗ್ಗೆ ಮೊಬೈಲ್ ಗೆ ಸಂದೇಶ ಬಂದಿರುತ್ತದೆ. ಮಹಿಳೆಯ ಖಾತೆಯಿಂದ ಯಾರೋ ಅಪರಿಚಿತ ವ್ಯಕ್ತಿ ಯಾವುದೋ

ಪುತ್ತೂರು: ಮಹಿಳೆಯ ಖಾತೆಯಿಂದ ಹಣ ವಂಚನೆ- ದೂರು ದಾಖಲು..! Read More »

ಬೆಳ್ಳಾರೆ: ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ!

ಸಮಗ್ರ ನ್ಯೂಸ್ : ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದಾರೆ ನಂತರ ಸಹೋದ್ಯೋಗಿ ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಮಾಡಿದರು. ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ. ಬೆಳ್ಳಾರೆಯ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಮಹಿಳೆಯನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ಳಾರೆ: ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ! Read More »

ತುಮಕೂರಿನಲ್ಲಿ ಹಣಕ್ಕಾಗಿ ಬಾಲಕಿಗೆ ಇಸ್ತ್ರಿಯಿಂದ ಸುಟ್ಟ ದೊಡ್ಡಮ್ಮ

ಸಮಗ್ರ ನ್ಯೂಸ್: ಹಣಕ್ಕಾಗಿ ಬಾಲಕಿಗೆ ಇಸ್ತ್ರಿಯಿಂದ ಸುಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಿಡಘಟ್ಟೆ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದು, ಬ್ಯಾಂಕ್​ನಲ್ಲಿದ್ದ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಐದನೇ ತರಗತಿಯಲ್ಲಿ ಓದುತ್ತಿದ್ದ ಮಗಳ ತೊಡೆ ಸುಟ್ಟಿದ್ದಾಳೆ. ತುಮಕೂರು ತಾಲೂಕಿನ ಪೂಜಾರಹಳ್ಳಿ ಗ್ರಾಮದ ನಿವಾಸಿಯಾಗಿರುವ ಬಾಲಕಿ ಲಕ್ಷ್ಮೀಗೆ ದೊಡ್ಡಮ್ಮ ನರಸಮ್ಮ ಕಿರುಕುಳ ನೀಡಿದ್ದಾರೆ. ಲಕ್ಷ್ಮೀಯ ತಾಯಿ ನರಸಮ್ಮ ಕಳೆದ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಮೃತ ತಾಯಿ ನರಸಮ್ಮ ಹಾಗೂ ಬಾಲಕಿ ಲಕ್ಷ್ಮೀ ಹೆಸರಿನಲ್ಲಿ

ತುಮಕೂರಿನಲ್ಲಿ ಹಣಕ್ಕಾಗಿ ಬಾಲಕಿಗೆ ಇಸ್ತ್ರಿಯಿಂದ ಸುಟ್ಟ ದೊಡ್ಡಮ್ಮ Read More »

ಕಾಂಗ್ರೆಸ್ ಸೇರಿದ ಕೆ. ಜಯಪ್ರಕಾಶ್ ಹೆಗ್ಡೆ

ಸಮಗ್ರ ನ್ಯೂಸ್: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಮತ್ತಿತರರನ್ನು, ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಹಿರಿಯ ಸಚಿವರಾದ ಡಾ. ಜಿ. ಪರಮೇಶ್ವರ, ಕೆ ಜೆ ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಳರ್, ಉಡುಪಿ ಮತ್ತು ಚಿಕ್ಕಮಗಳೂರಿನ ಹಲವು ನಾಯಕರು ಪಾಲ್ಗೊಂಡಿದ್ದರು. ಜಯಪ್ರಕಾಶ್ ಹೆಗ್ಡೆ ಅವರನ್ನು ಉಡುಪಿ ಚಿಕ್ಕಮಗಳೂರಿಗೆ

ಕಾಂಗ್ರೆಸ್ ಸೇರಿದ ಕೆ. ಜಯಪ್ರಕಾಶ್ ಹೆಗ್ಡೆ Read More »

ರಾಜಧಾನಿಯಲ್ಲಿ ನೀರಿಗಾಗಿ ಹಾಹಾಕಾರ/ ನೀರು ಪೂರೈಕೆ 20% ರಷ್ಟು ಕಡಿತ

ಸಮಗ್ರ ನ್ಯೂಸ್: ಬೃಹತ್ ಪ್ರಮಾಣದಲ್ಲಿ ನೀರನ್ನು ಬಳಸುವ ಕಂಪನಿಗಳು, ಆಸ್ಪತ್ರೆಗಳು, ರೈಲ್ವೆ, ವಿಮಾನ ನಿಲ್ದಾಣಗಳಿಗೆ 20% ರಷ್ಟು ನೀರು ಪೂರೈಕೆಯನ್ನು ಕಡಿತಗೊಳಿಸುವ ಮೂಲಕ ರಾಜಧಾನಿಯಲ್ಲಿನ ಕುಡಿಯುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು ಬೆಂಗಳೂರು ನೀರು ಸರಬರಾಜು ಮಂಡಳಿ ನಿರ್ಧರಿಸಿದೆ. ಮಂಡಳಿಯು ಬೆಂಗಳೂರಿನಲ್ಲಿ ದೊಡ್ಡ ನೀರು ಸರಬರಾಜು ಜಾಲಗಳನ್ನು ಹೊಂದಿರುವ ಗ್ರಾಹಕರೊಂದಿಗೆ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದು, ಬೃಹತ್ ಪ್ರಮಾಣದಲ್ಲಿ ನೀರನ್ನು ಪಡೆಯುವ 3 ಲಕ್ಷ ಸಂಸ್ಥೆಗಳಿದ್ದು ಏಪ್ರಿಲ್ 1 ರಿಂದ 20% ರಷ್ಟು ನೀರು ಪೂರೈಕೆಯನ್ನು ಸಂಪೂರ್ಣವಾಗಿ

ರಾಜಧಾನಿಯಲ್ಲಿ ನೀರಿಗಾಗಿ ಹಾಹಾಕಾರ/ ನೀರು ಪೂರೈಕೆ 20% ರಷ್ಟು ಕಡಿತ Read More »