Editor

ಮೌಂಟ್ ಎವರೆಸ್ಟ್ ನಲ್ಲಿ ಕಾಳಿಂಗ ಸರ್ಪ ಪತ್ತೆ| ಜಗತ್ತಿಗೆ ಕಾದಿದೆಯಾ ಗಂಡಾಂತರ

ಸಮಗ್ರ ನ್ಯೂಸ್: ವಿಶ್ವದ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ ಬಳಿ ವಿಷಕಾರಿ ಹಾವುಗಳು ಕಾಣಿಸಿಕೊಂಡಿರುವುದು ವಿಜ್ಞಾನಿಗಳನ್ನು ಚಿಂತೆಗೀಡು ಮಾಡಿದೆ. ಒಂದೂವರೆ ತಿಂಗಳ ಅವಧಿಯಲ್ಲಿ, ನೇಪಾಳದ ಮೌಂಟ್ ಎವರೆಸ್ಟ್ ಬಳಿ 9 ಕಾಳಿಂಗ ಸರ್ಪಗಳು ಸೇರಿದಂತೆ 10 ವಿಷಕಾರಿ ಹಾವುಗಳನ್ನು ಹಿಡಿಯಲಾಗಿದೆ. ಮೌಂಟ್ ಎವರೆಸ್ಟ್ ನಂತಹ ಶೀತ ಪ್ರದೇಶದಲ್ಲಿ ಕಾಳಿಂಗ ಸರ್ಪಗಳು ಕಾಣಿಸಿಕೊಂಡ ಬಗ್ಗೆ ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ನೇಪಾಳದ ದಕ್ಷಿಣ ಕಾಳಿ ಪುರಸಭೆ ಅಧಿಕಾರಿಗಳ ಪ್ರಕಾರ, ಈ ಹಾವುಗಳನ್ನು ನಾಲ್ಕು ವಿಭಿನ್ನ ಪ್ರದೇಶಗಳಾದ ಗೋಪಾಲೇಶ್ವರ, ಭಂಜ್ಯಾಂಗ್, […]

ಮೌಂಟ್ ಎವರೆಸ್ಟ್ ನಲ್ಲಿ ಕಾಳಿಂಗ ಸರ್ಪ ಪತ್ತೆ| ಜಗತ್ತಿಗೆ ಕಾದಿದೆಯಾ ಗಂಡಾಂತರ Read More »

ಮಂಗಳೂರು – ವಿಜಯಪುರ ವಿಶೇಷ ರೈಲು ಸಂಚಾರ ವೇಳಾಪಟ್ಟಿ ಬದಲಾವಣೆ

ಸಮಗ್ರ ನ್ಯೂಸ್: ನೈಋತ್ಯ ರೈಲ್ವೆಯು ಮಂಗಳೂರು ಸೆಂಟ್ರಲ್‌- ವಿಜಯಪುರ ವಿಶೇಷ ರೈಲಿನ (ಸಂಖ್ಯೆ 07378) ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ್ದು, ಜುಲೈ 1, 2025ರಿಂದ ಜಾರಿಗೆ ಬರಲಿದೆ. ಪ್ರಸ್ತುತ ಈ ರೈಲು ಮಧ್ಯಾಹ್ನ 2:35ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮರುದಿನ ಬೆಳಗ್ಗೆ 9:35ಕ್ಕೆ ವಿಜಯಪುರ ತಲುಪುತ್ತದೆ. ಆದರೆ, ಜುಲೈ 1ರಿಂದ ರೈಲು ಸಂಜೆ 4:45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 11:15ಕ್ಕೆ ವಿಜಯಪುರ ತಲುಪಲಿದೆ. ಕೋವಿಡ್‌ ಪೂರ್ವದಲ್ಲಿ ಈ ರೈಲು ಸಂಜೆ 4:30ಕ್ಕೆ ಹೊರಡುತ್ತಿತ್ತು. ನಂತರ ಮಧ್ಯಾಹ್ನ

ಮಂಗಳೂರು – ವಿಜಯಪುರ ವಿಶೇಷ ರೈಲು ಸಂಚಾರ ವೇಳಾಪಟ್ಟಿ ಬದಲಾವಣೆ Read More »

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಜೂನ್ 16ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದ್ದು, ವಿವಿಧ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ವ್ಯಾಪಕವಾಗಿ ಸಾಧಾರಣ ಮಳೆ ಸಹಿತ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ:ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ‌ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿಯಾದ್ಯಂತದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜೂ.12ರಂದು (ಗುರುವಾರ) ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಎರಡೂ ಜಿಲ್ಲೆಗಳ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಕರಾವಳಿಯಲ್ಲಿ ಆಗಾಗ ಮಳೆ ಸುರಿಯುತ್ತಿದ್ದರೂ, ಇಂದು ಸಂಜೆಯ ಬಳಿಕ ಮಳೆಯ ಅಬ್ಬರ ಹೆಚ್ಚಾಗಿದೆ .ಹವಾಮಾನ ಇಲಾಖೆಯು ಗುರುವಾರದಿಂದ ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ‌ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ| ಜೂ.12ರಂದು ಉಡುಪಿ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಕರವಾಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುರುವಾರ (ಜೂ.12) ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಈ ಎರಡು ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಗೆ ರೆಡ್

ಭಾರೀ ಮಳೆ ಹಿನ್ನಲೆ| ಜೂ.12ರಂದು ಉಡುಪಿ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ Read More »

ಉಡುಪಿ ಬಳಿಕ ದ.ಕ ದಲ್ಲಿ ಕೋಳಿ ಅಂಕ‌ದ ವಿರುದ್ಧ ತೊಡೆ ತಟ್ಟಿದ ಎಸ್.ಪಿ ಅರುಣ್| ಕಡಬದಲ್ಲಿ ಮೂವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಕೋಳಿ ಅಂಕ ನಡೆಸದಂತೆ ಸಂಪೂರ್ಣ ತಡೆ ಒಡ್ಡಿದ ಎಸ್ಪಿ ಅರುಣ್ ಕುಮಾರ್ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೋಳಿ ಅಂಕ ನಡೆಯದಂತೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಭಿನಂದನ್ ರವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು,

ಉಡುಪಿ ಬಳಿಕ ದ.ಕ ದಲ್ಲಿ ಕೋಳಿ ಅಂಕ‌ದ ವಿರುದ್ಧ ತೊಡೆ ತಟ್ಟಿದ ಎಸ್.ಪಿ ಅರುಣ್| ಕಡಬದಲ್ಲಿ ಮೂವರು ಪೊಲೀಸ್ ವಶಕ್ಕೆ Read More »

ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು

ಸಮಗ್ರ ನ್ಯೂಸ್: ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಇದೀಗ ಜಾಮೀನು ಮಂಜೂರು ಮಾಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ಇದೀಗ ತೆಲಂಗಾಣ ಹೈಕೋರ್ಟ್‌ ತಡೆ ನೀಡಿದೆ. ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿರುವ

ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು Read More »

ಮೈಸೂರು: ಲವ್, ಸೆಕ್ಸ್ ಆ್ಯಂಡ್ ದೋಖಾ| ಪಂಜ ಮೂಲದ ವೈದ್ಯನ ವಿರುದ್ಧ ದೂರು

ಸಮಗ್ರ ನ್ಯೂಸ್: ವಿವಾಹವಾಗುವುದಾಗಿ ನಂಬಿಸಿ ಸರಸವಾಡಿದ ಆರೋಪದ ಮೇಲೆ‌ ಸುಳ್ಯ ತಾಲೂಕಿನ ‌ಪಂಜ ಮೂಲದ ವೈದ್ಯರೊಬ್ಬರ ವಿರುದ್ಧ ಮೈಸೂರಿನ ಯುವತಿಯೊಬ್ಬರು ದೂರು ದಾಖಲಿಸಿರುವ ಘಟನೆ ನಡೆದಿದೆ. ಯುವತಿ ವೈದ್ಯರಿಗೆ ಫೇಸ್ಬುಕ್‌ ಮೂಲಕ ಪರಿಚಯವಾಗಿದ್ದು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ನಂತರ ರಿಜಿಸ್ಟರ್ಡ್‌ ವಿವಾಹವಾಗಿದ್ದು, ಇದೀಗ ಪತ್ನಿಯಾಗಿ ಸ್ವೀಕರಿಸಲು ನಿರಾಕರಿಸಿ ವಂಚನೆ ಮಾಡಿದ್ದಾರೆ ಎನ್ನುವ ಆರೋಪದ ಮೇರೆಗೆ ದೂರು ದಾಖಲು ಮಾಡಲಾಗಿದೆ. ಪಂಜ ಮೂಲದ ಡಾ.ಆದರ್ಶ್‌ ಅವರು ಫೇಸ್ಬುಕ್‌ ಮೂಲಕ ತನ್ನನ್ನು ಪರಿಚಯಿಸಿ, ವಿವಾಹದ ಭರವಸೆ ನೀಡಿ

ಮೈಸೂರು: ಲವ್, ಸೆಕ್ಸ್ ಆ್ಯಂಡ್ ದೋಖಾ| ಪಂಜ ಮೂಲದ ವೈದ್ಯನ ವಿರುದ್ಧ ದೂರು Read More »

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪ| ಕಾಂಗ್ರೆಸ್ ಸಂಸದ ಇ ತುಕರಾಂ ಹಾಗೂ ಶಾಸಕರಿಗೆ ಇಡಿ‌ ಶಾಕ್

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಇಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿದೆ. ವಾಲ್ಮೀಕಿ ನಿಗಮದ ಅನುದಾನವನ್ನು ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಹಂಚಲಾಗಿದೆ ಎನ್ನಲಾಗಿದೆ. ಈ ಹಣವನ್ನು ಬಳ್ಳಾರಿ

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪ| ಕಾಂಗ್ರೆಸ್ ಸಂಸದ ಇ ತುಕರಾಂ ಹಾಗೂ ಶಾಸಕರಿಗೆ ಇಡಿ‌ ಶಾಕ್ Read More »

ಮಂಡ್ಯ: ಮದೀನಾ ಹೊಟೇಲ್ ನಲ್ಲಿ ಬೌಬೌ ಬಿರಿಯಾನಿ| ಮಾಂಸದೊಂದಿಗೆ ಸಿಕ್ಕಿಬಿದ್ದ ಹೊಟೇಲ್ ಮಾಲೀಕ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿರುವ ಮದೀನಾ ಎನ್ನುವ ಹೋಟೆಲ್‌ ಮಾಲೀಕನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮದೀನಾ ಹೋಟೆಲ್ ಮಾಲೀಕ ಆಜಾದ್ ಬಿರಿಯಾನಿಗೆ ನಾಯಿ ಮಾಂಸವನ್ನು ಬೆರೆಸುವ ಆರೋಪ ಕೇಳಿಬಂದಿದೆ. ಹೋಟೆಲ್ ಮಾಲೀಕ ಆಜಾದ್ ಬಿರಿಯಾನಿಗೆ ನಾಯಿ ಮಾಂಸವನ್ನು ಬೆರೆಸಿ ಗ್ರಾಹಕರಿಗೆ ಬಡಿಸುತ್ತಿದ್ದ ಎನ್ನಲಾಗಿದೆ. ಬಿರಿಯಾನಿ ತಿಂದ ಕೆಲ ಗ್ರಾಹಕರಿಗೆ ಮಾಂಸದ ರುಚಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ನಾಯಿ ಮಾಂಸ ಇರಬಹುದು ಎನ್ನುವ ಶಂಕೆ ವ್ಯಕ್ತಪಡಿಸಿದ್ದಾರೆ. ಅನುಮಾನಗೊಂಡ ಕೆಲ ಗ್ರಾಹಕರು ಒಟ್ಟಾಗಿ

ಮಂಡ್ಯ: ಮದೀನಾ ಹೊಟೇಲ್ ನಲ್ಲಿ ಬೌಬೌ ಬಿರಿಯಾನಿ| ಮಾಂಸದೊಂದಿಗೆ ಸಿಕ್ಕಿಬಿದ್ದ ಹೊಟೇಲ್ ಮಾಲೀಕ Read More »