Editor

ಬೆಂಗಳೂರಿನಲ್ಲಿ ರಿಯಲ್‌ಎಸ್ಟೇಟ್ ಉದ್ಯಮಿ ಕೊಲೆ: ಕಾರಿನಲ್ಲಿ ಶವ ಬಿಟ್ಟು ಹಂತಕರು ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನ ಬಾಗಲೂರು ಕ್ರಾಸ್​​ ಬಳಿಕಾರೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಕಾರಿನಲ್ಲಿ ಅನುಮಾನಾಸ್ಪದವಾಗಿ ರಿಯಲ್‌ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವಪತ್ತೆಯಾಗಿದೆ. ಶವದ ಮೇಲೆ ಗಾಯದ ಗುರುತುಗಳಿದ್ದು ಕೊಲೆ ಮಾಡಿ ಕಾರಿನಲ್ಲಿ ಶವ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದ್ಯಮಿ ಕೃಷ್ಣ ಯಾದವ್ ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದರು. ಕೆಲಸಕ್ಕೆಂದು ಹೊರ ಹೋಗಿದ್ದವರು

ಬೆಂಗಳೂರಿನಲ್ಲಿ ರಿಯಲ್‌ಎಸ್ಟೇಟ್ ಉದ್ಯಮಿ ಕೊಲೆ: ಕಾರಿನಲ್ಲಿ ಶವ ಬಿಟ್ಟು ಹಂತಕರು ಪರಾರಿ Read More »

ಹೊಸ ಚುನಾವಣಾ ಆಯುಕ್ತರ ನೇಮಕ/ ಅಡ್ಡಿ ಮಾಡಲಿದೆಯೇ ಸುಪ್ರೀಂ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಘೋಷಣೆಯಾಗಲು ಕೆಲವೇ ದಿನಗಳು ಇರುವಾಗ, ಇಬ್ಬರು ಹೊಸ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಕೇಂದ್ರ ಸರ್ಕಾರದ ಸಿದ್ಧತೆಗೆ ಸುಪ್ರೀಂಕೋರ್ಟ್‍ನಲ್ಲಿ ಹಿನ್ನಡೆಯಾಗುವ ಆತಂಕ ಎದುರಾಗಿದೆ. 2023ರ ಹೊಸ ಕಾಯ್ದೆಯ ಪ್ರಕಾರ ಕೇಂದ್ರ ಚುನಾವಣಾ ಆಯುಕ್ತರನ್ನು ನೇಮಕಗೊಳಿಸುವ ಪ್ರಕ್ರಿಯೆಯ ವಿರುದ್ಧ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ಬಾಕಿಯಿರುವಾಗಲೇ ಕೇಂದ್ರ ಸರ್ಕಾರ ಆ ಕಾಯ್ದೆಯ ಪ್ರಕಾರ ಹೊಸ ಚುನಾವಣಾ ಆಯುಕ್ತರನ್ನು ನೇಮಿಸಲು ಮುಂದಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರೊಬ್ಬರು ಸಲ್ಲಿಸಿದ ಮನವಿಯನ್ನು ವಿಚಾರಣೆಗೆ ಅಂಗೀಕರಿಸಲು ಸುಪ್ರೀಂಕೋರ್ಟ್ ಒಲವು ತೋರಿದೆ.

ಹೊಸ ಚುನಾವಣಾ ಆಯುಕ್ತರ ನೇಮಕ/ ಅಡ್ಡಿ ಮಾಡಲಿದೆಯೇ ಸುಪ್ರೀಂ Read More »

ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ/ ಇಸ್ರೋದಿಂದ ಎರಡು ರಾಕೆಟ್ ಬಳಕೆ

ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ ಹೊಂದಿರುವ ತನ್ನ ಮಹತ್ವಕಾಂಕ್ಷೆ ಯೋಜನೆಗೆ 2 ರಾಕೆಟ್‍ಗಳನ್ನು ಬಳಸಲಿದೆ. ಒಂದೇ ಯೋಜನೆಗೆ ಎರಡು ರಾಕೆಟ್ ಬಳಕೆ ಇಸ್ರೋ ಇತಿಹಾಸದಲ್ಲೇ ಮೊದಲು ಆಗಿದೆ. ಚಂದ್ರಯಾನ 4 ಯೋಜನೆಯಲ್ಲಿ ಅತ್ಯಂತ ತೂಕದ ಉಪಗ್ರಹ ಹೊತ್ತೊಯ್ಯಬಲ್ಲ ಎಲ್‍ವಿಎಂ-3 ಮತ್ತು ಇಸ್ರೋದ ಅತ್ಯಂತ ಯಶಸ್ವಿ ರಾಕೆಟ್‍ಗಳ ಪೈಕಿ ಒಂದಾದ ಪಿಎಸ್‍ಎಲ್‍ವಿ ಅನ್ನು ಎರಡು ಪ್ರತ್ಯೇಕ ದಿನಗಳಂದು ಹಾರಿಬಿಡಲಾಗುವುದು. ಇಸ್ರೋದ ಈ ಯೋಜನೆ ಯಶಸ್ವಿಯಾದಲ್ಲಿ ಚಂದ್ರನಿಂದ

ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ/ ಇಸ್ರೋದಿಂದ ಎರಡು ರಾಕೆಟ್ ಬಳಕೆ Read More »

ಪುತ್ತೂರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ

ಸಮಗ್ರ ನ್ಯೂಸ್ : ಅಂಬಿಕಾ ವಿದ್ಯಾಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಅವರು ಇಂದು ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಟ್ಟೋಜ ಶಿವಾನಂದ ರಾವ್ ಅವರು ಪುತ್ತೂರಿನ ಅತ್ಯಂತ ಹಿರಿಯ ಕರಸೇವಕರು. ಸಾಮಾಜಿಕ ಹಾಗೂ ರಾಜಕೀಯವಾರಿ ಸಕ್ರಿಯರಾಗಿದ್ದು, ಪ್ರಗತಿಪರ ಕೃಷಿಕರಾಗಿದ್ದರು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಮೃತರು ಪುತ್ರ ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

ಪುತ್ತೂರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ Read More »

ಮುರಿದು ಬಿದ್ದ ಬಿಜೆಪಿ – ಜೆಜೆಪಿ ಮೈತ್ರಿ| ಹರಿಯಾಣ ಸಿಎಂ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಹಿರಿಯ ನಾಯಕ ಮನೋಹರ್ ಲಾಲ್ ಖಟ್ಟರ್ ಅವರು ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲರಿಗೆ ನೀಡಿದ್ದಾರೆ ಅಂತ ತಿಳಿದುಬಂದಿದೆ. ಮನೋಹರ್ ಲಾಲ್ ಖಟ್ಟರ್ ಅವರು ರಾಜೀನಾಮೆ ಹಿನ್ನಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕರ್ಣದಿಂದ ಕಣಕ್ಕಿಳಿಸಬಹುದು ಮತ್ತು ನಯಾಬ್ ಸೈನಿ ಅಥವಾ ಸಂಜಯ್ ಭಾಟಿಯಾ ಅವರನ್ನು ಹರಿಯಾಣದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬಹುದು ಎಂದು ಮೂಲಗಳು ತಿಳಿಸಿವೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ

ಮುರಿದು ಬಿದ್ದ ಬಿಜೆಪಿ – ಜೆಜೆಪಿ ಮೈತ್ರಿ| ಹರಿಯಾಣ ಸಿಎಂ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ Read More »

ವಿಟ್ಲ :ಇಸ್ಪೀಟ್ ಆಟ- ಪೊಲೀಸರ ದಾಳಿ, ನಾಲ್ವರ ವಶ

ಸಮಗ್ರ ನ್ಯೂಸ್ : ಜೂಜಾಟ ಆಡುತ್ತಿದ್ದ ನಾಲ್ವರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿರುವ ಘಟನೆಯೊಂದು ಇತ್ತೀಚೆಗೆ ನಡೆದಿದೆ. ಇಸ್ಪೀಟ್ ಎಲೆಗಳನ್ನು ಬಳಸಿ ಆಡುತ್ತಿದ್ದ, ಧರ್ಮರಾಜ್, ಗೋಪಾಲ ಯಾನೆ ಚಂದ್ರಶೇಖರ, ವಲಿತ್ ಕೆ ಮತ್ತು ಖಲಂದರ್ ಶಾಫಿ ಬಂಧಿತ ಆರೋಪಿಗಳು. ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ, ನೆಕ್ಕರೆ ಕಾಡು ಎಂಬಲ್ಲಿರುವ ಕಲ್ಲಿನಕೋರೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಈ ಜೂಜಾಟ ಆಡುತ್ತಿದ್ದಾಗ ವಿಟ್ಲ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್-ಬಾಹರ್ ಇಸ್ಪೀಟು ಜುಗಾರಿ ಆಟ ಆಡುತ್ತಿದ್ದರೆಂದು ವರದಿಯಾಗಿದೆ. ದಾಳಿ

ವಿಟ್ಲ :ಇಸ್ಪೀಟ್ ಆಟ- ಪೊಲೀಸರ ದಾಳಿ, ನಾಲ್ವರ ವಶ Read More »

ಕಡಬ: ಮನೆಯಿಂದ ಲಕ್ಷಾಂತರ ರೂ. ಚಿನ್ನ, ನಗದು ಕಳವು

ಸಮಗ್ರ ನ್ಯೂಸ್ : ರಾಮಕುಂಜ ಗ್ರಾಮದ ಗೋಳಿತ್ತಡಿಯ ಮನೆಯಿಂದ ಲಕ್ಷಾಂತರ ರೂ. ಚಿನ್ನಾಭರಣ ಹಾಗೂ ನಗದು ಕಳವುಗೊಂಡಿರುವ ಘಟನೆ ಮಾ. 11ರಂದು ಸಂಜೆ ವೇಳೆ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ‘ವಿವಾ’ ವಸ್ತರ ಮಳಿಗೆ ಮಾಲಕ ಇಮ್ತಿಯಾಜ್ ಅವರ ತಾಯಿ ನೆಬಿಸಾ ವಾಸ್ತವ್ಯವಿದ್ದ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿನ ಮನೆಯಲ್ಲಿ ಈ ಕಳ್ಳತನ ನಡೆದಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಮನೆಯಲ್ಲಿ ನೆಬಿಸಾ, ಅವರ ಪುತ್ರಿ ನಸೀಮಾ, ಅಳಿಯ ನಾಸೀರ್, ನಸೀಮಾ-ನಾಸೀರ್ ದಂಪತಿಯ ಮಕ್ಕಳು ಹಾಗೂ ಸಂಬಂಧಿಕೆ ಯುವತಿ ಪಾಯಿಜಾ

ಕಡಬ: ಮನೆಯಿಂದ ಲಕ್ಷಾಂತರ ರೂ. ಚಿನ್ನ, ನಗದು ಕಳವು Read More »

10 ಹೊಸ ವಂದೇ ಭಾರತ್ ರೈಲುಗಳು ಇಂದು ಪ್ರಧಾನಿ ಮೋದಿ ಚಾಲನೆ

ಸಮಗ್ರ ನ್ಯೂಸ್: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್​​​ನ ಅಹಮದಾಬಾದ್‌ನಲ್ಲಿ 10 ಹೊಸ ವಂದೇ ಭಾರತ್ ರೈಲುಗಳು ಮತ್ತು ಇತರ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇನ್ನು ಪ್ರಧಾನಿ ಮೋದಿ ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯ , ಸಂಪರ್ಕ ಮತ್ತು ಪೆಟ್ರೋಕೆಮಿಕಲ್ ವಲಯವನ್ನು ಉತ್ತೇಜಿಸುವ ಸಲುವಾಗಿದೆ. ರೈಲ್ವೆ ವರ್ಕ್‌ಶಾಪ್‌ಗಳು, ಲೋಕೋ ಶೆಡ್‌ಗಳು ಮತ್ತು ಪಿಟ್‌ಲೈನ್‌ಗಳು/ಕೋಚಿಂಗ್ ಡಿಪೋಗಳು ಸೇರಿದಂತೆ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಮೋದಿ ಅವರು ಫಾಲ್ಟನ್-ಬಾರಾಮತಿ ಹೊಸ ಮಾರ್ಗ, ಎಲೆಕ್ಟ್ರಿಕ್ ಟ್ರಾಕ್ಷನ್ ಸಿಸ್ಟಮ್

10 ಹೊಸ ವಂದೇ ಭಾರತ್ ರೈಲುಗಳು ಇಂದು ಪ್ರಧಾನಿ ಮೋದಿ ಚಾಲನೆ Read More »

ನೇರಳಕಟ್ಟೆ: ಚಿನ್ನದ ಸರ ಅಪಹರಣ-ಇಬ್ಬರ ಬಂಧನ

ಸಮಗ್ರ ನ್ಯೂಸ್: ದ್ವಿಚಕ್ರ ವಾಹನದಲ್ಲಿ ಬಂದು ನೀರು ಕೇಳಿ ಮಹಿಳೆಯ ಚಿನ್ನದ ಸರ ಅಪಹರಿಸಿದ ಇಬ್ಬರನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಾ. 5ರಂದು ಕಕುರ್ಂಜೆ ಗ್ರಾಮದ ನೇರಳಕಟ್ಟೆಯ ಗುಡ್ರಿಯಲ್ಲಿ ಅಪರಿಚಿತರು 75 ವರ್ಷ ಪ್ರಾಯದ ಬಾಬಿ ದಾಸ್ ಬಳಿ ನೀರು ಕೇಳುವ ನೆಪದಲ್ಲಿ ಮಾತನಾಡಿಸಿ 8 ಗ್ರಾಂ ತೂಕದ ಚಿನ್ನದ ಸರ ಅಪಹರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಲುಬುರಗಿ ಅಫಜಲ್‍ಪುರ ಹಾಗರಗಿ ಮೂಲದ ಪ್ರಸ್ತುತ ಬೆಂಗಳೂರಿನ ನಿವಾಸಿ ವಿಜಯ ಕುಮಾರ್ (23), ಕುಂದಾಪುರ ನೇರಳಕಟ್ಟೆ ಹಿಲ್ಕೋಡು ಮೂಲದ

ನೇರಳಕಟ್ಟೆ: ಚಿನ್ನದ ಸರ ಅಪಹರಣ-ಇಬ್ಬರ ಬಂಧನ Read More »

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ : ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ವಿಸಿಟಿಂಗ್ ಕನ್ಸಲ್ಟೆಂಟ್ (ರೇಡಿಯಾಲಜಿ)ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 12, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಈಗಲೇ ಅಪ್ಲೈ ಮಾಡಿ Read More »