Editor

ಬಂಟ್ವಾಳ: ಅಡಿಕೆ ವ್ಯಾಪಾರಿಯಿಂದ ಕೃಷಿಕರಿಗೆ ಪಂಗನಾಮ

ಸಮಗ್ರ ನ್ಯೂಸ್: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ‌ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ‌ನಗರ ಪೋಲೀಸ್ ಠಾಣೆಯ ಮುಂದೆ ಜಮಾಯಿಸಿದ್ದು, ವಂಚನೆಗೆ ಒಳಗಾದ ಕೃಷಿಕರು ಹಣ ನೀಡದೆ ವಂಚಿಸಿದ ವ್ಯಕ್ತಿಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. ಸ್ಥಳೀಯ ಕೃಷಿಕ ಮಹಿಳೆಯೊಬ್ಬರು ತಮ್ಮ ಬ್ಯಾಂಕ್ ಸಾಲದ ಮೊತ್ತ ಪಾವತಿಯ ‌ಹಿನ್ನಲೆಯಲ್ಲಿ ವ್ಯಾಪಾರಿಯ ಬಳಿ ಹಣಕ್ಕಾಗಿ ಹೋದಾಗ ಆತ ಪರಾರಿಯಾಗಿರುವುದು […]

ಬಂಟ್ವಾಳ: ಅಡಿಕೆ ವ್ಯಾಪಾರಿಯಿಂದ ಕೃಷಿಕರಿಗೆ ಪಂಗನಾಮ Read More »

ಚಿಕ್ಕಮಗಳೂರು: ಸುಹಾಸ್ ಶೆಟ್ಟಿ ಮನೆಗೆ ಮೂಡಿಗೆರೆ ಹಿಂದೂ ಕಾರ್ಯಕರ್ತರ ಬೇಟಿ

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿನ ಕೊಟ್ಟೆಗೆಹಾರದ ಹಿಂದೂ ಕಾರ್ಯಕರ್ತರು ಮಂಗಳೂರಿನಲ್ಲಿ ಹತ್ಯೆಯಾದ ಸಹಾಸ್ ಶೆಟ್ಟಿ ಮನೆಗೆ ಜೂ.10 ರಂದು ಬೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಮೂಡಿಗೆರೆ ಪಟ್ಟಣ ಪಂಚಾಯಿತಿ ಸದಸ್ಯ ಅನುಕುಮಾರ್ ಮಾತನಾಡಿ’ ಸುಹಾಸ್ ಶೆಟ್ಟಿ ಹತ್ಯೆಯ ಪ್ರಕರಣ ಎನ್.ಐ.ಎ ಗೆ ವಹಿಸಿರುವುದು ಸ್ವಾಗತಾರ್ಹ ಕಾರ್ಯವಾಗಿದೆ. ಹಿಂದೂ ಕಾರ್ಯಕರ್ತೆಯಾಗುತ್ತಿರುವುದು ಬೇಸರದ ಸಂಗತಿಯಾಗಿದೆ.ಮಂಗಳೂರು ಭಾಗದಲ್ಲಿ ಇಂತಹ ದುಷ್ಕೃತ್ಯಗಳು ನಿಲ್ಲಬೇಕು. ಕೋಮು ಸೌಹಾರ್ದತೆಯು ಜಿಲ್ಲೆಯಲ್ಲಿ ನೆಲೆಸಬೇಕು’ಎಂದರು. ಮುಖಂಡ ಸಂಜಯ್ ಗೌಡ ಮಾತನಾಡಿ’ ಸುಹಾಸ್ ಶೆಟ್ಟಿ ದಕ್ಷ ಮುಖಂಡರಾಗಿದ್ದರು.ಅವರ ಸಾವು

ಚಿಕ್ಕಮಗಳೂರು: ಸುಹಾಸ್ ಶೆಟ್ಟಿ ಮನೆಗೆ ಮೂಡಿಗೆರೆ ಹಿಂದೂ ಕಾರ್ಯಕರ್ತರ ಬೇಟಿ Read More »

ರಾಜ್ಯಾದ್ಯಂತ ಭಾರೀ ಮಳೆ‌ ಮನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಮೂರು ದಿನ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯು ಮತ್ತೆ ಅಬ್ಬರಿಸುವ ಲಕ್ಷಣಗಳಿದ್ದು, ಜೂನ್‌ 11 ರಿಂದ ಜೂನ್‌14ರ ವರೆಗೆ ಕರಾವಳಿ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈ ಜಿಲ್ಲೆಗಳಿಗೆ ಜೂನ್‌ 12 ರಿಂದ 14ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂ.12 ರಿಂದ 15ರವರೆಗೆ ‘ರೆಡ್ ಅಲರ್ಟ್’

ರಾಜ್ಯಾದ್ಯಂತ ಭಾರೀ ಮಳೆ‌ ಮನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಮೂರು ದಿನ ರೆಡ್ ಅಲರ್ಟ್ Read More »

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ‌ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಜೂನ್‌ 10ರಂದು ಹವಾಮಾನ ಇಲಾಖೆ ರಾಜ್ಯಕ್ಕೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಜೂನ್‌ 10ರಂದು ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಹಾಗೆಯೇ ಜೂನ್‌ 11ರಂದು ಕರಾವಳಿ ಜಿಲ್ಲೆಗಳು,

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ‌ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ Read More »

ರಾಜ್ಯದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ – ರಾಮಲಿಂಗಾರೆಡ್ಡಿ

ಸಮಗ್ರ ನ್ಯೂಸ್: ಇದೇ ಬರುವ ಆ.15ರಿಂದ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಲಾಗುವುದು. ಯಾರೂ ಬಳಕೆ ಮಾಡುವ ಹಾಗಿಲ್ಲ ಎಂದು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದರು. ಕಳೆದ 3 ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ. 11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ ಎಂದ ಅವರು, ಹೊರರಾಜ್ಯಗಳಲ್ಲಿ ವಸತಿ ಗೃಹಗಳನ್ನು ನಿರ್ಮಿಸಲೂ

ರಾಜ್ಯದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ – ರಾಮಲಿಂಗಾರೆಡ್ಡಿ Read More »

ಕಡಬ: ನದಿಯಲ್ಲಿ ಮುಳುಗಿ ಯುವಕ ಸಾವು

ಸಮಗ್ರ ನ್ಯೂಸ್: ಕಡಬ ತಾಲ್ಲೂಕಿನ ಇಚ್ಲಂಪಾಡಿ ಗ್ರಾಮದ ಗುಂಡ್ಯಹೊಳೆ ಸೇತುವೆ ಬಳಿ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಇಚ್ಲಂಪಾಡಿ ಗ್ರಾಮದ ಕೆಡೆಂಬೇಲು ನಿವಾಸಿ ಜಯಾನಂದ ಶೆಟ್ಟಿ ಅವರ ಪುತ್ರ ಚೇತನ್ ಶೆಟ್ಟಿ (21) ಮೃತಪಟ್ಟವರು. ಚೇತನ್ ಮಂಗಳೂರಿನಲ್ಲಿ ವೈದ್ಯಕೀಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದು, ಈ ದಿನ ರಜೆಯ ನಿಮಿತ್ತ ಮನೆಯಲ್ಲೇ ಇದ್ದರು. ಬೆಳಿಗ್ಗೆ ಕ್ರಿಕೆಟ್ ಆಡಲು ಹೊರಟ ಚೇತನ್ ಶೆಟ್ಟಿ, ಮಧ್ಯಾಹ್ನದ ವೇಳೆಗೆ ಸ್ನೇಹಿತರ ಜೊತೆ ಇಚ್ಲಂಪಾಡಿ ಸೇತುವೆ ಬಳಿ ಇರುವ ನೂಜಿಬಾಳ್ತಿಲ

ಕಡಬ: ನದಿಯಲ್ಲಿ ಮುಳುಗಿ ಯುವಕ ಸಾವು Read More »

‘ಓಯೋ’ ರೂಂನಲ್ಲಿ ಪ್ರೇಯಸಿಯ ಹತ್ಯೆಗೈದ ಪ್ರಿಯಕರ| ಅನೈತಿಕ ಸಂಬಂಧದಿಂದ ಬದುಕು ಕಳೆದುಕೊಂಡ ಮಹಿಳೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕಳೆದ ಕೆಲವು ತಿಂಗಳುಗಳ ಹಿಂದೆ ಸಿಕ್ಕಿದ್ದ ಪ್ರಿಯತಮೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಯಶಸ್ ತನ್ನ ಪ್ರೇಯಸಿಯನ್ನು ಓಯೋ ಹೋಟೆಲ್‌ಗೆ ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾನೆ. ಮೃತಳನ್ನು ಹರಿಣಿ(36) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಸಾಫ್ಟ್‌ವೇರ್ ಇಂಜಿನಿಯರ್ (ಟೆಕ್ಕಿ) ಯಶಸ್ಸ್ (25) ಆಗಿದ್ದಾನೆ. ಇಬ್ಬೂ ಕೆಂಗೇರಿ ನಿವಾಸಿಗಳಾಗಿದ್ದರು. ಪೂರ್ಣ ಪ್ರಜ್ಞಾ ಲೇಔಟ್ ನ ಹೋಟೆಲ್ ಓಯೋ ರೂಮಿನಲ್ಲಿ‌ ಶುಕ್ರವಾರ ಕೊಲೆ ನಡೆದಿದೆ. ಯಶಸ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.

‘ಓಯೋ’ ರೂಂನಲ್ಲಿ ಪ್ರೇಯಸಿಯ ಹತ್ಯೆಗೈದ ಪ್ರಿಯಕರ| ಅನೈತಿಕ ಸಂಬಂಧದಿಂದ ಬದುಕು ಕಳೆದುಕೊಂಡ ಮಹಿಳೆ Read More »

ಹಾಳೆತಟ್ಟೆ ಆಮದು ನಿಷೇಧಿಸಿದ ಅಮೇರಿಕಾ| ಕೋರ್ಟ್ ಮೆಟ್ಟಿಲೇರಲು ಸಜ್ಜಾದ ಹಾಳೆ ತಟ್ಟೆ ಉತ್ಪಾದಕರು

ಸಮಗ್ರ ನ್ಯೂಸ್: ಅಡಿಕೆ ಹಾಳೆ ತಟ್ಟೆ ಉತ್ಪಾದನೆಯನ್ನು ಉದ್ಯಮವಾಗಿ ರೂಪಿಸಿಕೊಂಡಿರುವ ದ.ಕ ಜಿಲ್ಲೆಯ ಹಲವಾರು ಸಂಸ್ಥೆಗಳು ಎರಡು ವಾರಗಳಿಂದ ಉತ್ಪಾದನೆಯನ್ನು ಶೇ 50ರಷ್ಟು ಇಳಿಕೆ ಮಾಡಿವೆ. ‘ಅಡಿಕೆ ಹಾಳೆಯಲ್ಲಿ ನೈಸರ್ಗಿಕವಾಗಿ ಇರುವ ವಿಷಕಾರಿ ಅಂಶದಿಂದ ಕ್ಯಾನ್ಸರ್‌ ಬರುತ್ತದೆ.ಅದಕ್ಕಾಗಿ ಅವುಗಳನ್ನು ಬಳಸಬೇಡಿ’ ಎಂದು ಅಮೆರಿಕದ ಆಹಾರ ಮತ್ತು ಔಷಧ ವ್ಯವಹಾರಗಳ ಸಚಿವಾಲಯವು ಮೂರು ವಾರಗಳ ಹಿಂದೆ ಸುತ್ತೋಲೆ ಹೊರಡಿಸಿತ್ತು‌. ಈ ಸುತ್ತೋಲೆ ಬೆನ್ನಲ್ಲೇ ಅಡಿಕೆ ಹಾಳೆಯಿಂದ ತಯಾರಿಸುವ ತಟ್ಟೆ, ಲೋಟಗಳ ರಫ್ತು ನಿಷೇಧಗೊಂಡಿದೆ. ಅಮೇರಿಕಾದ ಈ ನಿರ್ಧಾರದಿಂದ ಸ್ಥಳೀಯ

ಹಾಳೆತಟ್ಟೆ ಆಮದು ನಿಷೇಧಿಸಿದ ಅಮೇರಿಕಾ| ಕೋರ್ಟ್ ಮೆಟ್ಟಿಲೇರಲು ಸಜ್ಜಾದ ಹಾಳೆ ತಟ್ಟೆ ಉತ್ಪಾದಕರು Read More »

ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಪರಿಹಾರ ಮೊತ್ತ 25ಲಕ್ಷಕ್ಕೆ ಏರಿಸಿ ‌ಸಿಎಂ ಆದೇಶ

ಸಮಗ್ರ ನ್ಯೂಸ್: ಆರ್‌ಸಿಬಿ ವಿಜಯೋತ್ಸವದ ದುರಂತ ಘಟನೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ.56ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳದೆ ತರಾತುರಿಯಲ್ಲಿ ಸರ್ಕಾರ ಕಾರ್ಯಕ್ರಮ ಆಯೋಜಿಸಿದ ಕಾರಣ ಈ ಘಟನೆ ನಡೆದಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಈ ದುರಂತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸರ್ಕಾರ ಘೋಷಿಸಿದ ಪರಿಹಾರ ಮೊತ್ತ ಕಡಿಮೆ ಎಂದು

ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಪರಿಹಾರ ಮೊತ್ತ 25ಲಕ್ಷಕ್ಕೆ ಏರಿಸಿ ‌ಸಿಎಂ ಆದೇಶ Read More »

ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ( ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್‌ ಸ್ಕೂಲ್‌ ನ ಮಾಲಕ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್‌ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಬಳಿಕ ಪೊಲೀಸರು ಹಾಗೂ

ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ Read More »