Editor

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನ ವಂಚನೆ, ಆರೋಪಿಗಳ ಸೆರೆ

ಸಮಗ್ರ ನ್ಯೂಸ್ : ಕೇರಳ ಮೂಲದ ರಾಜೀವ್ ಎಂಬಾತ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದನ್ನು ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್‍ಐ ಪ್ರಸನ್ನ ಮತ್ತು ತಂಡ ಕಂಡು ಹಿಡಿದಿದೆ. ಆರೋಪಿಗಳು ಸಾಲ ಪಡೆಯಲು ಸ್ಥಳೀಯ ಸೊಸೈಟಿಗಳು ಮತ್ತು ಬ್ಯಾಂಕ್‍ಗಳಲ್ಲಿ 30 ಗ್ರಾಂ ಚಿನ್ನಾಭರಣಗಳನ್ನು ಗಿರವಿ ಇಟ್ಟಿದ್ದರು, ಬ್ಯಾಂಕ್‍ಗಳು ಮತ್ತು ಸೊಸೈಟಿಗಳನ್ನು ವಂಚಿಸಲು ಚಲನಚಿತ್ರದ ಕಥಾವಸ್ತುವನ್ನು ಪ್ರೇರೇಪಿಸಿದರು. ಹೆಚ್ಚುವರಿಯಾಗಿ, ಕುಮಟಾ ಮೂಲದ ನಿತಿಲ್ ಭಾಸ್ಕರ ಶೇಟ್ (35), ಸಂಜಯ ಶೇಟ್ (42), ಮತ್ತು ಬೆಳಗಾವಿಯ ಕೈಲಾಸ್ ಗೊರಡಾ (26) ಪ್ರಮುಖ

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನ ವಂಚನೆ, ಆರೋಪಿಗಳ ಸೆರೆ Read More »

ಮಂಗಳೂರಿನಿಂದ ಅಯೋಧ್ಯೆಗೆ 1400 ಯಾತ್ರಿಕರ ಪ್ರಯಾಣ ಆರಂಭ

ಸಮಗ್ರ ನ್ಯೂಸ್ : ರಾಮಮಂದಿರ ದರ್ಶನ ಅಭಿಯಾನದ ಮೊದಲ ಹಂತದ ಅಂತಿಮ ರೈಲು ಬುಧವಾರ ಅಯೋಧ್ಯೆಗೆ 1400 ಯಾತ್ರಾರ್ಥಿಗಳನ್ನು ಹೊತ್ತು ನಗರದಿಂದ ಹೊರಟಿದೆ. ಇದು ಯಾತ್ರೆ ಅಭಿಯಾನದ ಆರಂಭಿಕ ಹಂತದ ಪರಾಕಾಷ್ಠೆಯನ್ನು ಸೂಚಿಸುತ್ತದೆ. ಫೆಬ್ರವರಿಯಲ್ಲಿ, ಭಗವಾನ್ ರಾಮನ 20,000 ಭಕ್ತರು ಕರ್ನಾಟಕದಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು, ಸಾರಿಗೆಗಾಗಿ 12 ರೈಲುಗಳನ್ನು ಬಳಸಿಕೊಂಡರು. ಈ ಮಾಹಿತಿಯನ್ನು ಅಭಿಯಾನದ ರಾಜ್ಯ ಸಂಚಾಲಕ ಜಗದೀಶ ಹಿರೇಮನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬಿಜೆಪಿಯು ಅಯೋಧ್ಯೆಗೆ ಭೇಟಿ ನೀಡಲು ಆಸಕ್ತಿ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಗೆ 3000

ಮಂಗಳೂರಿನಿಂದ ಅಯೋಧ್ಯೆಗೆ 1400 ಯಾತ್ರಿಕರ ಪ್ರಯಾಣ ಆರಂಭ Read More »

ಕಾಂಗ್ರೆಸ್‍ನಿಂದ ಸ್ವಾತಂತ್ರ್ಯ ಹರಣ|ಸತೀಶ್ ಕುಂಪಲ

ಸಮಗ್ರ ನ್ಯೂಸ್ :ತುಮಕೂರಿನಲ್ಲಿ ನಡೆಯಬೇಕಾಗಿದ್ದ ಭಯೋತ್ಪಾದನೆ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರನ್ನು ಕುಣಿಗಲ್ ನಲ್ಲಿ ಪೋಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಸರಕಾರವು ಪೋಲೀಸ್ ಇಲಾಖೆಯ ಮುಖಾಂತರ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲುವಂತಹ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ದ.ಕ. ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದು, ಕಾಂಗ್ರೆಸ್ ಸರಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿಯುವ ಮೂಲಕ ಸಂವಿಧಾನ ವಿರೋಧಿಯಾಗಿದೆ ಎಂದಿದ್ದಾರೆ. ಹಸಂತಡ್ಕ ಅವರ ಬಂಧನವನ್ನು

ಕಾಂಗ್ರೆಸ್‍ನಿಂದ ಸ್ವಾತಂತ್ರ್ಯ ಹರಣ|ಸತೀಶ್ ಕುಂಪಲ Read More »

ಪುತ್ತೂರು:ಬೈಕ್ ಸ್ಕಿಡ್ -ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಸಮಗ್ರ ನ್ಯೂಸ್ :ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‍ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಾಳು ಯುವಕ ಮೃತಪಟ್ಟಿದ್ದಾನೆ. ಪುತ್ತೂರು ಶಾಂತಿ ಗೋಡು ಗ್ರಾಮದ ಬೀರ್ಮಕಜೆ ನಿವಾಸಿ ಪ್ರಸಾದ್ (27) ಮೃತ ಯುವಕ. ಒಂದು ವಾರದ ಹಿಂದೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗಿದೆ ಯುವಕ ಇಹಲೋಕ ತ್ಯಜಿಸಿದ್ದಾರೆ. ನಗರದ ಬೈಪಾಸ್ ನ ಗ್ಯಾರೇಜ್‍ನಲ್ಲಿ ಮೆಕ್ಯಾನಿಕ್ ಆಗಿದ್ದ ಪ್ರಸಾದ್ ಫೆ.29 ರಂದು ಬೈಕ್

ಪುತ್ತೂರು:ಬೈಕ್ ಸ್ಕಿಡ್ -ಗಂಭೀರ ಗಾಯಗೊಂಡಿದ್ದ ಯುವಕ ಸಾವು Read More »

ಉಡುಪಿ: ಹೆಗಡೆ ಭಾವಚಿತ್ರವಿಟ್ಟು ಬೀಡ ಉಗಿದ ಬಿಜೆಪಿ ಕಾರ್ಯಕರ್ತರು

ಸಮಗ್ರ ನ್ಯೂಸ್ :ಭಯೋತ್ಪಾದನಾ ವಿರೋಧಿ ವೇದಿಕೆ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡನ ಭಾವಚಿತ್ರಕ್ಕೆ ಉಗಿದು ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ಉಡುಪಿಯ ಅಜ್ಜರಕಾಡಿನಲ್ಲಿ ನಡೆದಿದೆ. ಮಂಗಳೂರಿನ ಕಾಂಗ್ರೆಸ್ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿರುವ ಎಂ.ಜಿ.ಹೆಗಡೆ ಅವರ ಭಾವಚಿತ್ರಕ್ಕೆ ಸಾಮೂಹಿಕವಾಗಿ ಉಗಿದು ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಶಕ್ತಿ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಉಡುಪಿಯ ಅಜ್ಜರಕಾಡಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಎಂ.ಜಿ. ಹೆಗಡೆಯವರ ವಿರುದ್ಧ ಕಾರ್ಯಕರ್ತರು ಈ ರೀತಿಯಾಗಿ ಆಕ್ರೋಶ

ಉಡುಪಿ: ಹೆಗಡೆ ಭಾವಚಿತ್ರವಿಟ್ಟು ಬೀಡ ಉಗಿದ ಬಿಜೆಪಿ ಕಾರ್ಯಕರ್ತರು Read More »

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸಮಗ್ರ ನ್ಯೂಸ್ :ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯದ ವಿಚಾರಣೆ ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಣಂಬೂರು ಠಾಣಾ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತ ಆರೋಪಿಯನ್ನು ಹ್ಯಾರಿಸ್ ಅಲಿಯಾಸ್ ಚಂದು ಹ್ಯಾರಿಸ್ ಎಂದು ಗುರುತಿಸಲಾಗಿದೆ. ಪಣಂಬೂರು ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಮಂಜುನಾಥ ಗೌಡ ನೇತೃತ್ವದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಚಿದಾನಂದ, ಹೆಡ್ ಕಾನ್‍ಸ್ಟೆಬಲ್ ಲಕ್ಷ್ಮೀಶ ಮತ್ತು ಕಾನ್‍ಸ್ಟೆಬಲ್‍ಗಳಾದ ಶಶಿಕುಮಾರ್, ಪ್ರವೀಣ್, ಮಹೇಶ್ ಮತ್ತು ಶ್ರೀದೇವಿ ಬಂಧನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಮಂಗಳೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್ :ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹವನ್ನು ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ. ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. ಈತನ ಮೃತದೇಹ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದು, ಕುತ್ತಿಗೆಯಲ್ಲಿ ಚೈನ್, ಒಳ ಉಡುಪು ಆಧಾರದಲ್ಲಿ ಲಿಖಿತ್ ಎಂದು ಗುರುತಿಸಲಾಗಿದೆ. ಲಿಖಿತ್ ಅವರ ಮೃತದೇಹವನ್ನು ಉಪ್ಪಳದ ಮೀನುಗಾರರು ದಡಕ್ಕೆ ತಲುಪಿಸಿದ್ದಾರೆ. ಬಳಿಕ ಸ್ಥಳೀಯ ಪೊಲೀಸರು ಮಂಗಲ್ಪಾಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ ಸಂಬಂಧಪಟ್ಟ ಪಣಂಬೂರು

ಮಂಗಳೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ Read More »

ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳುವ ಪಾದಯಾತ್ರಿಗಳಿಗೆ ಸೂಚನೆ

ಸಮಗ್ರ ನ್ಯೂಸ್ :ನಾಡಿನಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ರಾಜ್ಯದ ಪ್ರಮುಖ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಕಾರ್ಯಕ್ರಮಗಳು ನಡೆಯಲಿದ್ದು, ಸಾಮಾನ್ಯವಾಗಿ ಶಿವರಾತ್ರಿಯ ಸಮಯದಲ್ಲಿ ದಕ್ಷಿಣ ಕನ್ನಡ ಪ್ರಮುಖ ದೇವಾಲಯಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತಾಧಿಗಳು ಪಾದಯಾತ್ರೆಯ ಮೂಲಕ ದೇವರ ದರ್ಶನವನ್ನು ಪಡೆಯುತ್ತಾರೆ. ಎಂದಿನಂತೆ ಈ ವರ್ಷವೂ ಕೂಡ ನೂರಾರು ಭಕ್ತರು ಧರ್ಮಸ್ಥಳ ಹಾಗೂ ಸುಬ್ರಮಣ್ಯದತ್ತ ಹೆಜ್ಜೆ ಹಾಕುತ್ತಿದ್ದು, ಮಹಾ ಶಿವರಾತ್ರಿಯ ದಿನ ದೇವಾಲಯಗಳನ್ನು

ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳುವ ಪಾದಯಾತ್ರಿಗಳಿಗೆ ಸೂಚನೆ Read More »

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ: ಸಿಎಂ

ಸಮಗ್ರ ನ್ಯೂಸ್ :ರಾಜ್ಯದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಬುಧವಾರ ಮಾತನಾಡಿದ ಸಿಎಂ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂಬತ್ತು ತಿಂಗಳಷ್ಟೇ ಆಗಿದ್ದು, ಮಂಗನ ಕಾಯಿಲೆ ತಡೆಗೆ ಲಸಿಕೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮಂಗನ ಕಾಯಿಲೆಯಿಂದ ಸಾವನ್ನಪ್ಪಿದವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ: ಸಿಎಂ Read More »

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ| ಬಾಂಬರ್ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿರುವ ಶಂಕೆ

ಸಮಗ್ರ ನ್ಯೂಸ್ :ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭಿಸಿದ್ದು, ಬೆಂಗಳೂರಿನ ಸುಜಾತ ಸರ್ಕಲ್‍ನಲ್ಲಿ ಬಾಂಬರ್ ಬಸ್ ಹತ್ತಿ ತುಮಕೂರಿನಲ್ಲಿ ಇಳಿದಿದ್ದಾನೆ. ತುಮಕೂರಿನಿಂದ ಬಳ್ಳಾರಿಗೆ ಬಸ್‍ನಲ್ಲಿ ಬಂದು ನಂತರ ಮಂತ್ರಾಲಯ- ಗೋಕರ್ಣ ಬಸ್ ಹತ್ತಿ ಭಟ್ಕಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳ ಬಳ್ಳಾರಿ ಮತ್ತು ತುಮಕೂರು ಬಸ್ ನಿಲ್ದಾಣಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದೆ. ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್‍ಐಎ ತಂಡ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ| ಬಾಂಬರ್ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿರುವ ಶಂಕೆ Read More »