Editor

ಧಾರವಾಡದಲ್ಲಿ ಉದ್ಯೋಗವಕಾಶ! 40,000 ಸಂಬಳ ಕೊಡ್ತಾರೆ

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್- II ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 6, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಶೈಕ್ಷಣಿಕ ಅರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್​​ನಲ್ಲಿ ಪದವಿ,

ಧಾರವಾಡದಲ್ಲಿ ಉದ್ಯೋಗವಕಾಶ! 40,000 ಸಂಬಳ ಕೊಡ್ತಾರೆ Read More »

ಮಾಲ್ಡೀವ್ಸ್‍ಗೆ ಮತ್ತೆ ಸೆಡ್ಡು ಹೊಡೆದ ಭಾರತ/ ಮಿನಿಕಾಯ್‍ನಲ್ಲಿ ವಾಯುನೆಲೆ ಸ್ಥಾಪನೆ

ಸಮಗ್ರ ನ್ಯೂಸ್: ಮಾಲ್ಡೀವ್ಸ್‍ಗೆ ಸನಿಹದಲ್ಲೇ, ಲಕ್ಷದ್ವೀಪದ ದಕ್ಷಿಣ ಭಾಗದಲ್ಲಿರುವ ಕೊನೆಯ ದ್ವೀಪ ಪ್ರದೇಶ ಮಿನಿಕಾಯ್‍ನಲ್ಲಿ ಐಎನ್‍ಎಸ್ ಜಟಾಯು ಹೆಸರಿನ ನೌಕಾನೆಲೆಯೊಂದನ್ನು ಸ್ಥಾಪನೆ ಮಾಡುವ ಮೂಲಕ ದ್ವೀಪರಾಷ್ಟ್ರಕ್ಕೆ ಮತ್ತೆ ಸಡ್ಡು ಹೊಡೆಯಲು ಭಾರತ ಮಂದಾಗಿದೆ. ಮಾಲ್ಡೀವ್ಸ್‍ನಿಂದ ಉತ್ತರ ದಿಕ್ಕಿಗೆ ಉದ್ದೇಶಿತ ಸ್ಥಳ 130 ಕಿ.ಮೀ. ದೂರದಲ್ಲಿದೆ. ಅರಬ್ಬೀ ಸಮುದ್ರದಲ್ಲಿ ಜಟಾಯು ವಾಯುನೆಲೆಯಿಂದ ಭಾರತದ ಬಲ ಮತ್ತಷ್ಟು ವೃದ್ಧಿಯಾಗಲಿದ್ದು, ಹಡಗು ಕಳ್ಳರು ಹಾಗೂ ಮಾದಕ ವಸ್ತು ದಂಧೆ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಪುಷ್ಟಿ ಸಿಗಲಿದೆ. ಇದರ ಜತೆಗೆ ಭಾರತದ ಮುಖ್ಯ

ಮಾಲ್ಡೀವ್ಸ್‍ಗೆ ಮತ್ತೆ ಸೆಡ್ಡು ಹೊಡೆದ ಭಾರತ/ ಮಿನಿಕಾಯ್‍ನಲ್ಲಿ ವಾಯುನೆಲೆ ಸ್ಥಾಪನೆ Read More »

17ನೇ ಆವೃತ್ತಿ ಐಪಿಎಲ್/ ಕುತೂಹಲ ಹುಟ್ಟು ಹಾಕಿದ ಧೋನಿ ಫೇಸ್‍ಬುಕ್ ಪೋಸ್ಟ್

ಸಮಗ್ರ ನ್ಯೂಸ್: 17ನೇ ಆವೃತ್ತಿ ಐಪಿಎಲ್‍ಗೆ ದಿನಗಣನೆ ಆರಂಭವಾಗಿರುವಾಗಲೇ ಚೆನ್ನೈ ತಂಡದ ನಾಯಕ ಎಂ.ಎಸ್.ಧೋನಿ ಫೇಸ್‍ಬುಕ್‍ನಲ್ಲಿ ಮಾಡಿರುವ ಪೋಸ್ಟ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಾಮಾಜಿಕ ತಾಣಗಳಿಂದ ದೂರ ಉಳಿದಿರುವ ಧೋನಿ, ಹೊಸ ಸೀಸನ್ ಮತ್ತು ಹೊಸ ಪಾತ್ರಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ. ಐಪಿಎಲ್ ಅಥವಾ ಬೇರೆ ಯಾವುದರ ಬಗ್ಗೆಯೂ ಉಲ್ಲೇಖಿಸದ ಕಾರಣ ಅಭಿಮಾನಿಗಳಲ್ಲಿ ಪೋಸ್ಟ್ ಬಗ್ಗೆ ಕುತೂಹಲ ಹೆಚ್ಚಿಸಿದೆ. ಕಳೆದ ಆವೃತ್ತಿಯ ಬಳಿಕವೇ ಅವರು ನಿವೃತ್ತಿಯಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಚೆನ್ನೈ 5ನೇ

17ನೇ ಆವೃತ್ತಿ ಐಪಿಎಲ್/ ಕುತೂಹಲ ಹುಟ್ಟು ಹಾಕಿದ ಧೋನಿ ಫೇಸ್‍ಬುಕ್ ಪೋಸ್ಟ್ Read More »

ಪ್ರತಿಪಕ್ಷ ಸದಸ್ಯರು ಸಭಾತ್ಯಾಗ/ ಸದನದ ಒಳಗಿನಿಂದ ಬೀಗ ಹಾಕಿ ಎಂದು ಸ್ಪೀಕರ್‍ಗೆ ಬೀಗ- ಕೀಲಿ ನೀಡಿದ ಪಂಜಾಬ್ ಮುಖ್ಯಮಂತ್ರಿ

ಸಮಗ್ರ ನ್ಯೂಸ್: ಸದನದಲ್ಲಿ ಚರ್ಚೆ ನಡೆಯುವಾಗ ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿಬಿಡುತ್ತಾರೆ. ಹೀಗಾಗಿ ಯಾರೂ ಹೊರಗೆ ಹೋಗದಂತೆ ಸದನದ ಒಳಗಿನಿಂದ ಬೀಗ ಹಾಕಿ ಎಂದು ಸ್ಪೀಕರ್ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಬೀಗ- ಕೀಲಿ ನೀಡಿದ ಘಟನೆ ನಡೆದಿದೆ. ಮಾ.1ರಂದು ಪಂಜಾಬ್ ವಿಧಾನಸಭೆಯನ್ನು ಉದ್ದೇಶಿಸಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಭಾಷಣ ಮಾಡುವ ವೇಳೆ ಕಾಂಗ್ರೆಸ್ ಸದಸ್ಯರು, ರಾಜ್ಯಪಾಲರು ಪೂರ್ಣವಾಗಿ ಭಾಷಣ ಓದದೆ ಮಂಡಿಸಲಾಗಿದೆ ಎಂದು ಪ್ರತಿಭಟನೆ ನಡೆಸಿದ್ದರು. ವಿಪಕ್ಷಗಳ ಈ ವರ್ತನೆ ಬಗ್ಗೆ ಚರ್ಚೆ

ಪ್ರತಿಪಕ್ಷ ಸದಸ್ಯರು ಸಭಾತ್ಯಾಗ/ ಸದನದ ಒಳಗಿನಿಂದ ಬೀಗ ಹಾಕಿ ಎಂದು ಸ್ಪೀಕರ್‍ಗೆ ಬೀಗ- ಕೀಲಿ ನೀಡಿದ ಪಂಜಾಬ್ ಮುಖ್ಯಮಂತ್ರಿ Read More »

2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದ್ರೆ ಹಲವೆಡೆ ಬಾಂಬ್ ಬ್ಲಾಸ್ಟ್: ಸಿಎಂಗೆ ಬಂತು ಬೆದರಿಕೆ ಇ ಮೇಲ್

ಸಮಗ್ರ ನ್ಯೂಸ್: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಬೆನ್ನಲೆ ಇದೀಗ ಹೊಸ ಆತಂಕ ಸೃಷ್ಟಿಯಾಗಿದೆ. ಮಾರ್ಚ್ 2ನೇ ತಾರೀಕು ಮಧ್ಯಾಹ್ನ 2.48ಕ್ಕೆ ಬಂದ ಆ ಒಂದು ಇ ಮೇಲ್ ಎಲ್ಲರನ್ನೂ ಬೆಚ್ಚಿಬೀಳುಸುವಂತಿದೆ.ಹೌದು 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದ್ರೆ ಬಸ್ , ರೈಲು, ಬಸ್ ಸ್ಟಾಂಡ್ ಸೇರಿ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಇಮೇಲ್ ಮೂಲಕ ಬೆದರಿಕೆ ಹಾಕಿರುವುದು ಇದೀಗ ಬೆಳಕಿಗೆ ಬಂದಿದೆ. ಸಿಎಂ, ಗೃಹ ಮಂತ್ರಿ, ಡಿಸಿಎಂ, ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೆ

2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದ್ರೆ ಹಲವೆಡೆ ಬಾಂಬ್ ಬ್ಲಾಸ್ಟ್: ಸಿಎಂಗೆ ಬಂತು ಬೆದರಿಕೆ ಇ ಮೇಲ್ Read More »

ಲೋಕಸಮರ ಹೊಸ್ತಿಲಲ್ಲಿ ಡಿಕೆಶಿಗೆ ಬಿಗ್ ರಿಲೀಫ್.. ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್​ಗೆ ಸುಪ್ರೀಂ ಕೋರ್ಟ್​ ಇಂದು ಬಿಗ್ ರಿಲೀಫ್ ನೀಡಿದೆ. ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ.2017

ಲೋಕಸಮರ ಹೊಸ್ತಿಲಲ್ಲಿ ಡಿಕೆಶಿಗೆ ಬಿಗ್ ರಿಲೀಫ್.. ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು Read More »

ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಹಾಕಿದವನು ಅರೆಸ್ಟ್

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಹಾಕಿದ ಮೊಹಮ್ಮದ್ ರಸೂಲ್ ಕಡ್ದಾರೆನನ್ನು (45) ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರದ ರಂಗಂಪೇಟೆ ನಿವಾಸಿಯಾಗಿರುವ ರಸೂಲ್ ಕಡ್ದಾರೆ ಹೈದರಾಬಾದ್​ನಲ್ಲಿ ಕೂಲಿ ಮಾಡುತ್ತಿದ್ದನು. ಕೈಯಲ್ಲಿ ತಲ್ವಾರ್ ಹಿಡಿದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ “ಕಾಂಗ್ರೆಸ್ ಹೀಗೆಲ್ಲ ಆಡಳಿತ ಮಾಡಿಲ್ಲ. ನರೇಂದ್ರ ಮೋದಿ ಪ್ರಧಾನಿ ಆಗದ್ದೇನೆ ಎಂದು ನಾಟಕ ಮಾಡುತ್ತಿದ್ದಿಯಾ?

ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಹಾಕಿದವನು ಅರೆಸ್ಟ್ Read More »

ಅಟ್ಟಾಡಿಸಿಕೊಂಡು ಬಂದ ಆನೆ… ರೈತನೊಬ್ಬ ಗ್ರೇಟ್ ಎಸ್ಕೇಪ್

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯಲ್ಲಿ ಒಂಟಿ ಸಲಗಗಳ ಹಾವಳಿ ಹೆಚ್ಚಾಗಿದ್ದು, ಹಾಡ ಹಗಲೇ ರೈತರ ಕೃಷಿ ಜಮೀನಿನ ಬಳಿ ಒಂಟಿ ಸಲಗ ಭೀಮನ ಸಂಚಾರ ಹೆಚ್ಚಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ಈ ಭಯಾನಕ ಘಟನೆಯೊಂದು ನಡೆದಿದ್ದು ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು ಕೂದಲೆಳೆ ಅಂತರದಲ್ಲಿ ಕೂಲಿ ಕಾರ್ಮಿಕ ಪಾರಾಗಿದ್ದಾನೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಮರ್ಕಹಳ್ಳಿಯಲ್ಲಿ ಒಂಟಿ ಸಲಗ ಸಂಚಾರ ಮಾಡುತ್ತಿದೆ. ಕೃಷಿ ಚಟುವಟಿಕೆಗೆ ಹಾಗು ಜಾನುವಾರು

ಅಟ್ಟಾಡಿಸಿಕೊಂಡು ಬಂದ ಆನೆ… ರೈತನೊಬ್ಬ ಗ್ರೇಟ್ ಎಸ್ಕೇಪ್ Read More »

ಕಡಬ: ಬೈಕ್- ಮಿನಿಗೂಡ್ಸ್ ವಾಹನ ನಡುವೆ ಡಿಕ್ಕಿ| ಕಾಲೇಜು ವಿದ್ಯಾರ್ಥಿ ದುರ್ಮರಣ

ಸಮಗ್ರ ನ್ಯೂಸ್: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20) ಎಂದು ಗುರುತಿಸಲಾಗಿದೆ. ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ

ಕಡಬ: ಬೈಕ್- ಮಿನಿಗೂಡ್ಸ್ ವಾಹನ ನಡುವೆ ಡಿಕ್ಕಿ| ಕಾಲೇಜು ವಿದ್ಯಾರ್ಥಿ ದುರ್ಮರಣ Read More »

ಸುಳ್ಯ: ಬೆಳ್ಳಂಬೆಳಗ್ಗೆ ಮನೆಮೇಲೆ ಎನ್ಐಎ ದಾಳಿ; ಪರಿಶೀಲನೆ

ಸಮಗ್ರ ನ್ಯೂಸ್: ಎನ್ಐಎ ಅಧಿಕಾರಿಗಳ ತಂಡವೊಂದು ಬೆಳ್ಳಂಬೆಳಗ್ಗೆ ಮನೆಯೊಂದರ ಮೇಲೆಲ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಎನ್ಐಎ ಅಧಿಕಾರಿಗಳ ತಂಡವು ಇಲ್ಲಿನ ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬೆಳ್ಳಾರೆ ಮಾತ್ರವಲ್ಲದೇ, ದೇಶದ 7 ಕಡೆ ಏಕಕಾಲದಲ್ಲಿ NIA

ಸುಳ್ಯ: ಬೆಳ್ಳಂಬೆಳಗ್ಗೆ ಮನೆಮೇಲೆ ಎನ್ಐಎ ದಾಳಿ; ಪರಿಶೀಲನೆ Read More »