Editor

ಮೋದಿ ಎರಡು ಸಾವಿರ ದೇಣಿಗೆ/ ರಾಷ್ಟ್ರ ಅಭಿವೃದ್ಧಿ ದೃಷ್ಟಿಯಿಂದ ಪಕ್ಷಕ್ಕೆ ದೇಣಿಗೆ ನೀಡುವಂತೆ ಕರೆ

ಸಮಗ್ರ ನ್ಯೂಸ್: ನಮೊ ಆ್ಯಪ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪಕ್ಷಕ್ಕೆ 2 ಸಾವಿರ ರು. ದೇಣಿಗೆ ನೀಡಿದ್ದು, ಇತರರು ಸಹ ರಾಷ್ಟ್ರ ಅಭಿವೃದ್ಧಿ ದೃಷ್ಟಿಯಿಂದ ಪಕ್ಷಕ್ಕೆ ದೇಣಿಗೆ ನೀಡುವಂತೆ ಕರೆ ನೀಡಿದ್ದಾರೆ. ವಿಕಸಿತ ಭಾರತ ನಿರ್ಮಿಸಲು ಬಿಜೆಪಿಗೆ ನಾನು 2 ಸಾವಿರ ರು. ದೇಣಿಗೆ ನೀಡಿದ್ದೇನೆ ಎಂದು ತಿಳಿಸಲು ಹರ್ಷವಾಗುತ್ತಿದೆ. ನೀವು ಸಹ ದೇಣಿಗೆ ನೀಡಿ ರಾಷ್ಟ್ರದ ಬೆಳವಣಿಗೆಯಲ್ಲಿ ಪಾಲ್ಗೊಳ್ಳಿ ಎಂದು ರಸೀತಿಯನ್ನೂ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‍ಗಳನ್ನು

ಮೋದಿ ಎರಡು ಸಾವಿರ ದೇಣಿಗೆ/ ರಾಷ್ಟ್ರ ಅಭಿವೃದ್ಧಿ ದೃಷ್ಟಿಯಿಂದ ಪಕ್ಷಕ್ಕೆ ದೇಣಿಗೆ ನೀಡುವಂತೆ ಕರೆ Read More »

ರೈತ ಪ್ರತಿಭಟನೆ/ ಮಾರ್ಚ್ 10ರಂದು ರೈಲು ತಡೆ

ಸಮಗ್ರ ನ್ಯೂಸ್: ಸಾವಿರಾರು ರೈತರು ಪಂಜಾಬ್ ಹಾಗೂ ಹರಿಯಾಣ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುತ್ತಿದ್ದು, ಮಾರ್ಚ್ 10ರಂದು ದೇಶಾದ್ಯಂತ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ರೈತರ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಿದ್ದೇವೆ. ನಾವು ಪಂಜಾಬ್ ಹಾಗೂ ಹರಿಯಾಣದಿಂದ ಶಾಂತಿಯುತವಾಗಿಯೇ ದೆಹಲಿ ಪ್ರವೇಶಿಸುತ್ತೇವೆ. ಮಾರ್ಚ್ 6ರಂದು ದೇಶದ ಎಲ್ಲ ಪ್ರದೇಶಗಳಿಂದ ರೈತರು ದೆಹಲಿಗೆ ಆಗಮಿಸುತ್ತಾರೆ. ಮಾರ್ಚ್ 10ರಂದು ದೇಶಾದ್ಯಂತ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4

ರೈತ ಪ್ರತಿಭಟನೆ/ ಮಾರ್ಚ್ 10ರಂದು ರೈಲು ತಡೆ Read More »

ಕಡಬ: ಪ.ಪೂ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ| ಮೂವರು ವಿದ್ಯಾರ್ಥಿನಿಯರು ಗಂಭೀರ

ಸಮಗ್ರ ನ್ಯೂಸ್: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಮುಸುಕು ಧರಿಸಿದ್ದು, ಓರ್ವ ಆರೋಪಿಯನ್ನು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಅಭಿದ್ ಎಂಬಾತನನ್ನು ಬಂಧಿಸಲಾಗಿದೆ. ಈತ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ. ಮೂವರು ವಿದ್ಯಾರ್ಥಿನಿಯರು

ಕಡಬ: ಪ.ಪೂ ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ| ಮೂವರು ವಿದ್ಯಾರ್ಥಿನಿಯರು ಗಂಭೀರ Read More »

ಲೋಕಸಭಾ ಚುನಾವಣಾ ಪೂರ್ವ ತಯಾರಿ/ 10 ದಿನಗಳಲ್ಲಿ 12 ರಾಜ್ಯಗಳಲ್ಲಿ 29 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದ್ದು, ಇದರ ಭಾಗವಾಗಿ 10 ದಿನಗಳಲ್ಲಿ 12 ರಾಜ್ಯಗಳಿಗೆ ಭೇಟಿ ನೀಡಿ 29 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ, ಜಮ್ಮು-ಕಾಶ್ಮೀರ, ಅಸ್ಸಾಂ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ, ದೆಹಲಿಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಮಾ.04 ರಂದು ತೆಲಂಗಾಣದ ಆದಿಲಾಬಾದ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಈ ಬಳಿಕ ತಮಿಳುನಾಡಿನ

ಲೋಕಸಭಾ ಚುನಾವಣಾ ಪೂರ್ವ ತಯಾರಿ/ 10 ದಿನಗಳಲ್ಲಿ 12 ರಾಜ್ಯಗಳಲ್ಲಿ 29 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ Read More »

ಪಲ್ಸ್ ಪೋಲಿಯೋ ವಿತರಣಾ ಅಭಿಯಾನ/ 60.41 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಡ್ರಾಪ್ಸ್

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ವಿತರಣಾ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರಕಿದ್ದು, ಐದು ವರ್ಷದೊಳಗಿನ 60.41 ಲಕ್ಷ ಮಕ್ಕಳಿಗೆ ಎರಡು ಹನಿ ಪೋಲಿಯೋ ಡ್ರಾಪ್ಸ್ ಹಾಕಲಾಗಿದೆ. 62.84 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಇಲಾಖೆ ಹೊಂದಿತ್ತು. ಇದರಲ್ಲಿ ಶೇ.96ರಷ್ಟು ಗುರಿ ತಲುಪಿದ್ದು, ಉಳಿದ ಮಕ್ಕಳಿಗಾಗಿ ಮನೆ ಮನೆಗೆ ತೆರಳಿ ಲಸಿಕೆ ಹನಿ ಹಾಕಲಾಗುತ್ತದೆ. ಬರೀ ಅಂಗನವಾಡಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅಷ್ಟೇ ಅಲ್ಲದೆ ಬಸ್ ನಿಲ್ದಾಣ, ಮೆಟ್ರೋ, ರೈಲ್ವೆ

ಪಲ್ಸ್ ಪೋಲಿಯೋ ವಿತರಣಾ ಅಭಿಯಾನ/ 60.41 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಡ್ರಾಪ್ಸ್ Read More »

ಯಾರನ್ನಾದರೂ ‘ಹೇ…ಡಾರ್ಲಿಂಗ್’ ಎಂದು ಕರೆಯುತ್ತೀರಾ? ಹಾಗಿದ್ರೆ ಜೈಲು ಕಂಬಿ ಎಣಿಸ್ತೀರಿ ಜೋಕೆ!!

ಸಮಗ್ರ ನ್ಯೂಸ್: ಇನ್ನು ಮುಂದೆ ನೀವು ಯಾರನ್ನಾದರೂ ‘ಹೇ ಡಾರ್ಲಿಂಗ್​​​’ಎಂದು ಕರೆದರೆ ಅವರು ನಿಮ್ಮ ಮೇಲೆ ಕೇಸು ದಾಖಲಿಸಿದರೆ ನೀವು ತಿಂಗಳುಗಟ್ಟಲೆ ಜೈಲು ಕಂಬಿ ಎಣಿಸಬೇಕಾದಿತು. ಡಾರ್ಲಿಂಗ್ ಎಂಬ ಪದವನ್ನು ಇನ್ನು ಮುಂದೆ ಬಳಸುವಂತಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಜೆ ಸೇನ್ ಗುಪ್ತಾ ಅವರ ಪೀಠವು ‘ಡಾರ್ಲಿಂಗ್’ ಪದವು ಲೈಂಗಿಕ ಅರ್ಥವನ್ನು ಹೊಂದಿದೆ ಮತ್ತು ಸೆಕ್ಷನ್ 354A (1) (4) ಅಡಿಯಲ್ಲಿ ಆಕ್ಷೇಪಾರ್ಹ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ

ಯಾರನ್ನಾದರೂ ‘ಹೇ…ಡಾರ್ಲಿಂಗ್’ ಎಂದು ಕರೆಯುತ್ತೀರಾ? ಹಾಗಿದ್ರೆ ಜೈಲು ಕಂಬಿ ಎಣಿಸ್ತೀರಿ ಜೋಕೆ!! Read More »

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ ಎರಡು ವಾರ ಭರ್ಜರಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮಳೆ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಮುಂದಿನ 2 ವಾರ ಭರ್ಜರಿ ಮಳೆ ಮುನ್ಸೂಚನೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಪ್ರಕಾರ ಕರ್ನಾಟಕದಲ್ಲಿ ಮುಂದಿನ ಕೆಲ ದಿನದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ ತಿಂಗಳ ಮೊದಲ 10 ದಿನ ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಚಿಕ್ಕಮಗಳೂರು, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ ವರೆಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಲಿದೆ. ಈಗಾಗಲೇ ಟ್ಯಾಂಕರ್

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ ಎರಡು ವಾರ ಭರ್ಜರಿ ಮಳೆ ಸಾಧ್ಯತೆ Read More »

ಚಿಕನ್ ಬೆಲೆಯಲ್ಲಿ ದಿಢೀರ್ ಏರಿಕೆ| ಕಂಗಾಲಾದ ಗ್ರಾಹಕ

ಸಮಗ್ರ ನ್ಯೂಸ್: ಮಾಂಸ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿಕನ್ ಬೆಲೆ ಧಿಡೀರ್ ಆಗಿ ಏರಿಕೆಯಾಗುತ್ತಿದೆ. ತಾಪಮಾನ ಏರಿಕೆ ಹಿನ್ನೆಲೆ ಬಿಸಿಲ ತಾಪಕ್ಕೆ ಕೋಳಿ ಬೆಳವಣಿಗೆ ಕುಂಠಿತವಾಗುತ್ತಿದ್ದು, ಕೋಳಿಗಳ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಹೀಗಾಗಿ ಕೋಳಿ ಮಾಂಸ ಉತ್ಪಾದನೆ ಕುಸಿದಿದ್ದು, ಚಿಕನ್ ದರ ಧಿಡೀರ್ ಏರಿಕೆಯಾಗಿದೆ. ಒಂದು ವಾರದ ಹಿಂದೆ 180 ರೂಪಾಯಿ ಇದ್ದ ಒಂದು ಕೆಜಿ ಕೋಳಿ ಮಾಂಸದ ಬೆಲೆ 250 ರೂಪಾಯಿಗೆ ತಲುಪಿದೆ.ಕೆಲವು ಕಡೆ 240 ರೂಗೆ ಮಾರಾಟವಾಗುತ್ತಿದೆ. ಈ ಮೂಲಕ ಚಿಕನ್ ಪ್ರಿಯರಿಗೆ

ಚಿಕನ್ ಬೆಲೆಯಲ್ಲಿ ದಿಢೀರ್ ಏರಿಕೆ| ಕಂಗಾಲಾದ ಗ್ರಾಹಕ Read More »

ಕುಕ್ಕೆ ಸುಬ್ರಹ್ಮಣ್ಯ: ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು

ಸಮಗ್ರ ನ್ಯೂಸ್: ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವಾಗ ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ನಡೆದಿದೆ. ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಎಂಬವರು ಮಾ.3 ರಾತ್ರಿ ಗಂಟೆ 9 ರ ಆಸುಪಾಸು ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯೆ

ಕುಕ್ಕೆ ಸುಬ್ರಹ್ಮಣ್ಯ: ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು Read More »

ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ

ಸಮಗ್ರ ನ್ಯೂಸ್: ಅಕ್ರಮವಾಗಿ ಮಣ್ಣನ್ನು ಸಾಗಿಸುತ್ತಿದ್ದರು, ಈ ವಿಚಾರವಾಗಿ ತಹಶೀಲ್ದಾರ್ ಪ್ರಶ್ನಿಸಿದ್ದಾರೆ. ಅದಕ್ಕೆ ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಭೀಮಸಂದ್ರ ಬಳಿ ನಡೆದಿದೆ. ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಆರೋಪ ಕೇಳಿಬಂದಿದೆ. ನಿಲ್ಲಿಸು ಎಂದಿದ್ದಕ್ಕೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆಂದು ಹಾರೋಹಳ್ಳಿ ಠಾಣೆಯಲ್ಲಿ ವಿಜಯಣ್ಣ ದೂರು ದಾಖಲಿಸಿದ್ದಾರೆ. ಚೇಸ್ ಮಾಡಿ ಆರೋಪಿಯನ್ನು ಹಿಡಿದಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ Read More »