ಪಣಂಬೂರು ಬೀಚ್ ನಲ್ಲಿ ಮೂವರು ಯುವಕರು ನೀರುಪಾಲು
ಸಮಗ್ರ ನ್ಯೂಸ್: ಪಣಂಬೂರು ಬೀಚ್ ನಲ್ಲಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಮಿಲನ್(20), ಲಿಖಿತ್(18), ನಾಗರಾಜ್(24) ಮೃತ ಯುವಕರು. ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಮಿಲನ್, ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಲಿಖಿತ್, ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್ವೈಸರ್ ಆಗಿದ್ದ. ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ನಡೆದಿದ್ದು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಣಂಬೂರು ಬೀಚ್ ನಲ್ಲಿ ಮೂವರು ಯುವಕರು ನೀರುಪಾಲು Read More »










