Editor

ರಾಜ್ಯದ ಬಜೆಟ್ ಅಧಿವೇಶನ/ ಇಂದು ಅಧಿಕೃತ ತೆರೆ

ಸಮಗ್ರ ನ್ಯೂಸ್: ರಾಜ್ಯದ ಬಜೆಟ್ ಅಧಿವೇಶನ ಕಳೆದ 15 ದಿನಗಳಿಂದ ನಡೆಯುತ್ತಿದ್ದು, ಇಂದು ಅಧಿಕೃತವಾಗಿ ಮುಕ್ತಾಯಗೊಳ್ಳಲಿದೆ. ಕಳೆದ ಶುಕ್ರವಾರ ಕೊನೆಗೊಳ್ಳಬೇಕಿದ್ದ ಬಜೆಟ್ ಅಧಿವೇಶನವನ್ನು ನಾಲೈದು ದಿನ ವಿಸ್ತರಿಸಲಾಗಿತ್ತು. ಇಂದು ಸಂಸತ್ತು ಮತ್ತು ವಿಧಾನ ಪರಿಷತ್ತಿನಲ್ಲಿ ಬಜೆಟ್ ಮೇಲಿನ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಅವರು ಸರ್ಕಾರದ ಪರವಾಗಿ ಉತ್ತರ ನೀಡಲಿದ್ದಾರೆ. 2024-2025 ರ ಬಜೆಟ್ ಅನ್ನು ಆಯವ್ಯಯ ವಿಧೇಯಕಕ್ಕೆ ಸದನದಲ್ಲಿ ಅಂಗೀಕಾರ ಪಡೆಯಲಿದ್ದಾರೆ. ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಾಹಾಕಾರ ಶುರುವಾಗಿದೆ. ಆದರೆ, ಸರ್ಕಾರ ನೀರಿನ

ರಾಜ್ಯದ ಬಜೆಟ್ ಅಧಿವೇಶನ/ ಇಂದು ಅಧಿಕೃತ ತೆರೆ Read More »

ವಿವಾದಗಳ ಮೇಲೆ ಸಿಲುಕಿರುವ ಚಾಲೆಂಜಿಂಗ್ ಸ್ಟಾರ್| ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು

ಸಮಗ್ರ ನ್ಯೂಸ್: ನಟ ದರ್ಶನ್ ವಿವಾದಗಳ ಮೇಲೆ ವಿವಾದ ರೀತಿಯಲ್ಲಿ ಸುದ್ದಿಯಲ್ಲಿದ್ದಾರೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ವಿರುದ್ಧ ಆಡಿದ ಮಾತುಗಳು ದರ್ಶನ್​ ಅವರಿಗೆ ಸಂಕಷ್ಟ ತಂದೊಡ್ಡಿವೆ. ಈಗಾಗಲೇ ದರ್ಶನ್ ವಿರುದ್ದ ನಾಲ್ಕು ದೂರುಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ಈಗ ರೇಣುಕಮ್ಮ ಎಂಬುವರು 37ನೇ ACMM ಕೋರ್ಟ್ ನಲ್ಲಿ ಖಾಸಗಿ ದೂರನ್ನು ದರ್ಶನ್ ವಿರುದ್ಧ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 295(A), 509, 298, 504 ಅಡಿ ಕೇಸ್ ನಮೂದಿಸುವಂತೆ ಖಾಸಗಿ ದೂರನ್ನು ರೇಣುಕಮ್ಮ ದಾಖಲಿಸಿದ್ದಾರೆ. IPC 295(A), ಉದ್ದೇಶ

ವಿವಾದಗಳ ಮೇಲೆ ಸಿಲುಕಿರುವ ಚಾಲೆಂಜಿಂಗ್ ಸ್ಟಾರ್| ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು Read More »

ಜಾರ್ಖಂಡ್‌ನಲ್ಲಿ ಭೀಕರ ರೈಲು ದುರಂತ| 12 ಮಂದಿ ಸಾವು

ಸಮಗ್ರ ನ್ಯೂಸ್: ಜಾರ್ಖಂಡ್‌ನ ಜಮ್ತಾರ ಜಿಲ್ಲೆಯಲ್ಲಿ ನಿನ್ನೆ ಸಂಜೆ ಭೀಕರ ರೈಲು ದುರಂತ ಸಂಭವಿಸಿದೆ. ಈ ದುರಂತದಲ್ಲಿ ಸ್ಥಳದಲ್ಲೇ 12 ಮಂದಿ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ. ರೈಲ್ವೆ ಪೊಲೀಸರು ಹಾಗೂ ಸಿಬ್ಬಂದಿಯೂ ಕೂಡಲೇ ಜನರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯನಡೆದಿದೆ ಎಂದು ತಿಳಿದುಬಂದಿದೆ. ಭಾಗಲ್ಪುರಕ್ಕೆ ತೆರಳುತ್ತಿದ್ದ ಆಂಗ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಹರಡಿದೆ. ಇದರಿಂದಾಗಿ ರೈಲಿನಲ್ಲಿದ್ದ ಪ್ರಯಾಣಿಕರು ಗಲಿಬಿಲಿಗೊಂಡಿದ್ದಾರೆ. ಅಷ್ಟೇ ಅಲ್ಲ, ಆತಂಕದಲ್ಲಿ ನಿಧಾನವಾಗಿ ಚಲಿಸುತ್ತಿದ್ದ

ಜಾರ್ಖಂಡ್‌ನಲ್ಲಿ ಭೀಕರ ರೈಲು ದುರಂತ| 12 ಮಂದಿ ಸಾವು Read More »

ಕುಡಿದ ಮತ್ತಲ್ಲಿ ಸಿಕ್ಕ ಸಿಕ್ಕವರಿಗೆ ಕಚ್ಚಿದ ಯುವಕ

ಸಮಗ್ರ ನ್ಯೂಸ್: ಕುಡಿದ ಮತ್ತಲ್ಲಿ ಏನೇನೆಲ್ಲ ಮಾಡ್ತಾರೆ ಅನ್ನೋದಕ್ಕೆ ಇಲ್ಲೊಂದು ಸಾಕ್ಷಿ ಇದೆ ನೋಡಿ, ಮೂವರು ಪೊಲೀಸ್​ ಸಿಬ್ಬಂದಿ ಸೇರಿದಂತೆ ಸಿಕ್ಕ ಸಿಕ್ಕವರಿಗೆ ಮನಬಂದಂತೆ ಯುವಕ ಕಚ್ಚಿದಾನೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಂ.ಜಿ ರಸ್ತೆಯಲ್ಲಿ ನಡೆದಿದೆ. ಮಹೇಶ್​​ ಎನ್ನುವ ಯುವಕನಿಂದ ಕೃತ್ಯವೆಸಗಲಾಗಿದೆ. ಶೇಖರ್​​, ಪೆಂಚಲಯ್ಯ, ಅಶ್ವತ್ಥ್​ ಎಂಬ ಪೊಲೀಸ್​ ಸಿಬ್ಬಂದಿಗೆ ಗಾಯಗಳಾಗಿವೆ. ಗಾಯ ಮಾಡಿದ ವ್ಯಕ್ತಿಯನ್ನು ಹಿಡಿದು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರ ಮನವಿಗೂ ಸ್ಪಂದಿಸದೆ ಯುವಕ ರಂಪಾಟ ಮಾತ್ರ ಜೋರಾಗಿತ್ತು.

ಕುಡಿದ ಮತ್ತಲ್ಲಿ ಸಿಕ್ಕ ಸಿಕ್ಕವರಿಗೆ ಕಚ್ಚಿದ ಯುವಕ Read More »

ಮೆಟ್ರೋದಲ್ಲಿ ರೈತನಿಗೆ ಅವಮಾನ: ಮಾನವ ಹಕ್ಕುಗಳ ಆಯೋಗದಿಂದ BMRCLಗೆ ನೋಟಿಸ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಮೆಟ್ರೋ ಅಂದ್ರೆ ಎಲ್ಲರಿಗೂ ಖುಷಿ, ಒಂದು ಸಲನಾದ್ರು ಮೆಟ್ರೋದಲ್ಲಿ ಪ್ರಯಾಣಿಸಬೇಕು ಎಂಬುದು ಜನರ ಆಸೆಯಾಗಿರುತ್ತದೆ. ಆದ್ರೆ ಇದೇ ಮೆಟ್ರೊದಲ್ಲಿ ಅಮಾನವೀಯ ಘಟನೆಯೊಂದು ನಡೆದು ಹೋಗಿದೆ.ಹೌದು ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ರೈತನೊರ್ವನಿಗೆ ಅವಮಾನ ಮಾಡಲಾಗಿದೆ. ಫೆಬ್ರವರಿ 26 ರಂದು ಬಟ್ಟೆ ಕೊಳೆಯಿದೆ ಎಂಬ ಕಾರಣಕ್ಕೆ ಬಡ ರೈತನ ಮೇಲೆ‌ ಮೇಟ್ರೋ ಸಿಬ್ಬಂದಿ ದುರಹಂಕಾರದ‌ ವರ್ತನೆ ಮೆರೆದಿದ್ದರು. ಇದನ್ನು ಸಹ ಪ್ರಯಾಣಿಕ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಅಷ್ಟೇ ಅಲ್ಲ, ರೈತನನ್ನು ಒಳಗೆ ಬಿಡದ ಸಿಬ್ಬಂದಿ

ಮೆಟ್ರೋದಲ್ಲಿ ರೈತನಿಗೆ ಅವಮಾನ: ಮಾನವ ಹಕ್ಕುಗಳ ಆಯೋಗದಿಂದ BMRCLಗೆ ನೋಟಿಸ್ Read More »

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ರಚನೆಗೆ ಸಿದ್ದತೆ| ಮಾ.11ರಂದು ಮತದಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ರಚನೆಗೆ ಮಾ.11ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಫೆ.26ರಿಂದ ಪ್ರಾರಂಭಗೊಂಡಿದ್ದು, ನಾಮಪತ್ರ ಸಲ್ಲಿಸಲು ಮಾ. 3 ಅಂತಿಮ ದಿನವಾಗಿದೆ. ಮಾ.4ರಂದು ನಾಮಪತ್ರ ಪರಿಶೀಲನೆ, ಮಾ.5ರಂದು ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ. ಅದೇ ದಿನ ರಿಟರ್ನಿಂಗ್‌ ಅಧಿಕಾರಿಯವರು ಅಭ್ಯರ್ಥಿಗಳಿಗೆ ಚಿಹ್ನೆಯನ್ನು ನೀಡಲಿದ್ದಾರೆ. ಮಾ.11ರಂದು ಮಂಗಳೂರಿನ ಕೋಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ರಚನೆಗೆ ಸಿದ್ದತೆ| ಮಾ.11ರಂದು ಮತದಾನ Read More »

ರಾಜ್ಯಸಭಾ ಚುನಾವಣೆಯಲ್ಲಿ ಸೋಲು/ ರಾಜೀನಾಮೆ ನೀಡುತ್ತಾರಾ ಹಿಮಾಚಲ ಪ್ರದೇಶ ಮುಖ್ಯಮಂತ್ರಿ?

ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಹೆಚ್ಚಾಗಿದ್ದು, ಸಿಎಂ ಸುಖೀಂದರ್ ಸಿಂಗ್ ಸುಖು ರಾಜೀನಾಮೆ ನೀಡಿದ್ದಾರೆ ಎಂಬ ರಾಜಕೀಯ ಪಡಸಾಲೆಯಲ್ಲಿ ಮಾತುಗಳು ಕೇಳಿಬರುತ್ತಿದೆ. ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದು, ವಿಶ್ವಾಸಮತ ಸಾಬೀತುಪಡಿಸಲೂ ವಿಫಲವಾಗಬಹುದು ಎಂಬ ಸಾಧ್ಯತೆ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಮೊದಲೇ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಪರಿಸ್ಥಿತಿಯ ಉಸ್ತುವಾರಿ ವಹಿಸಲು ಬುಧವಾರ ಶಿಮ್ಲಾಕ್ಕೆ ಧಾವಿಸಿದ ಕಾಂಗ್ರೆಸ್ ವೀಕ್ಷಕರಾದ ಭೂಪಿಂದರ್ ಸಿಂಗ್ ಹೂಡಾ ಮತ್ತು

ರಾಜ್ಯಸಭಾ ಚುನಾವಣೆಯಲ್ಲಿ ಸೋಲು/ ರಾಜೀನಾಮೆ ನೀಡುತ್ತಾರಾ ಹಿಮಾಚಲ ಪ್ರದೇಶ ಮುಖ್ಯಮಂತ್ರಿ? Read More »

ಪಿಎಂ ಕಿಸಾನ್ ಸಮ್ಮಾನ್ ನಿಧಿ/ 16 ನೇ ಕಂತನ್ನು ಬಿಡುಗಡೆ ಮಾಡಿದ ಮೋದಿ

ಸಮಗ್ರ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ ನಿಧಿಯ 16 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಬಿಡುಗಡೆ ಮಾಡಿದರು. ಒಟ್ಟು 21,000 ಕೋಟಿ ರೂಗೂ ಹೆಚ್ಚಿನ ಮೊತ್ತವನ್ನು, 9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಪ್ರಧಾನಿ ಮೋದಿ ರಿಮೋಟ್ ಬಟನ್ ಒತ್ತುವ ಮೂಲಕ ರವಾನೆ ಮಾಡಿದ್ದಾರೆ. ಈ ಮೂಲಕ ಫಲಾನುಭವಿಗಳ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. ಪಿಎಂ ಕಿಸಾನ್ ಯೋಜನೆಯು 2019ರಲ್ಲಿ ಆರಂಭವಾಗಿದ್ದು, ಇಲ್ಲಿಯವರೆಗೆ 16 ಕಂತುಗಳನ್ನು ರೈತರ

ಪಿಎಂ ಕಿಸಾನ್ ಸಮ್ಮಾನ್ ನಿಧಿ/ 16 ನೇ ಕಂತನ್ನು ಬಿಡುಗಡೆ ಮಾಡಿದ ಮೋದಿ Read More »

“ಪಾಕಿಸ್ತಾನ್ ಜಿಂದಾಬಾದ್ ಅಲ್ಲ ನಾಸಿರ್ ಸಾಬ್ ಜಿಂದಾಬಾದ್ ಎಂದು ಘೋಷಣೆ ಮಾಡಿದ್ದು”| ಎಎನ್ಐ ಪತ್ರಕರ್ತ ಎಂ‌. ಮಧು ಎಕ್ಸ್ ನಲ್ಲಿ ಸ್ಪಷ್ಟನೆ

ಸಮಗ್ರ ನ್ಯೂಸ್: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ನಾಸೀರ್ ಹುಸೇನ್ ಅವರು ಗೆದ್ದ ಸಂದರ್ಭದಲ್ಲಿ ಬೆಂಬಲಿಗರ ಗುಂಪಿನಿಂದ ಕೂಗಿದ್ದು “ನಾಸೀರ್ ಸಾಬ್ ಝಿಂದಾಬಾದ್” ಎಂದು, “ಪಾಕಿಸ್ತಾನ್ ಝಿಂದಾಬಾದ್ ಎಂದಲ್ಲ” ಎಂದು ಎಎನ್ಐ ಸುದ್ಧಿ ಸಂಸ್ಥೆಯ ಪತ್ರಕರ್ತ ಎಂ.ಮಧು ತನ್ನ ಎಕ್ಸ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭಾ ಚುನಾವಣೆ ಫಲಿತಾಂಶ ನಂತರದ ಸುದ್ದಿಗಾಗಿ ಸ್ಥಳದಲ್ಲಿದ್ದ ಎಎನ್ಐ ಸುದ್ದಿಸಂಸ್ಥೆಯ ಪತ್ರಕರ್ತ ಎಂ.ಮಧು, “ಕನ್ನಡದ ಮಾಧ್ಯಮಗಳು ಇದನ್ನು ತಿರುಚಿ ಸುದ್ದಿ ಮಾಡಿವೆ. ಇದು ಉದ್ದೇಶಪೂರ್ವಕ ಪ್ರಮಾದ” ಎಂದು ವಿಷಾದಿಸಿದ್ದಾರೆ. ಈ ಕುರಿತು ಅವರು

“ಪಾಕಿಸ್ತಾನ್ ಜಿಂದಾಬಾದ್ ಅಲ್ಲ ನಾಸಿರ್ ಸಾಬ್ ಜಿಂದಾಬಾದ್ ಎಂದು ಘೋಷಣೆ ಮಾಡಿದ್ದು”| ಎಎನ್ಐ ಪತ್ರಕರ್ತ ಎಂ‌. ಮಧು ಎಕ್ಸ್ ನಲ್ಲಿ ಸ್ಪಷ್ಟನೆ Read More »

ನಾಳೆ ಜಾತಿಗಣತಿ ವರದಿ ಸಲ್ಲಿಕೆ/ ವರದಿ ಸಲ್ಲಿಕೆ ಬಳಿಕ ಸಚಿವ ಸಂಪುಟದಲ್ಲಿ ಚರ್ಚೆ

ಸಮಗ್ರ ನ್ಯೂಸ್: ಜಾತಿಗಣತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನಾಳೆ ಸಲ್ಲಿಕೆ ಮಾಡುವುದಾಗಿ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ತಿಳಿಸಿದ್ದಾರೆ. ಜಾತಿಗಣತಿ ವರದಿ ಸಲ್ಲಿಕೆಗೆ ನಾಳೆ ಕೊನೆ ದಿನವಾಗಿದ್ದು, ಸರ್ಕಾರದ ಸೂಚನೆಯಂತೆ ವರದಿ ಸಿದ್ದವಾಗಿದೆ. ನಾಳೆ ವರದಿ ಸಲ್ಲಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ. ಜಾತಿಗಣತಿ ವರದಿಯಲ್ಲಿ ಏನಿದೆ ಎಂಬುದು ಬಳಿಕ ಗೊತ್ತಾಗಲಿದೆ. ವರದಿ ಬಿಡುಗಡೆಯಾದ ಬಳಿಕ ಸಾರ್ವಜನಿಕವಾಗಿ ಚರ್ಚೆಯಾದರೆ ಉತ್ತಮ. ಸರ್ಕಾರಕ್ಕೆ ವರದಿ ಸಲ್ಲಿಕೆ ಬಳಿಕ ಸಚಿವ ಸಂಪುಟದಲ್ಲಿ ಚರ್ಚೆಯಾಗಲಿದೆ. ಬಳಿಕ ಈ ಬಗ್ಗೆ ರಾಜ್ಯ

ನಾಳೆ ಜಾತಿಗಣತಿ ವರದಿ ಸಲ್ಲಿಕೆ/ ವರದಿ ಸಲ್ಲಿಕೆ ಬಳಿಕ ಸಚಿವ ಸಂಪುಟದಲ್ಲಿ ಚರ್ಚೆ Read More »