Editor

ಭಾರೀ ಮಳೆ ಹಿನ್ನಲೆ| ಜೂ.12ರಂದು ಉಡುಪಿ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಕರವಾಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುರುವಾರ (ಜೂ.12) ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಈ ಎರಡು ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಿದೆ. ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಗೆ ರೆಡ್ […]

ಭಾರೀ ಮಳೆ ಹಿನ್ನಲೆ| ಜೂ.12ರಂದು ಉಡುಪಿ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ Read More »

ಉಡುಪಿ ಬಳಿಕ ದ.ಕ ದಲ್ಲಿ ಕೋಳಿ ಅಂಕ‌ದ ವಿರುದ್ಧ ತೊಡೆ ತಟ್ಟಿದ ಎಸ್.ಪಿ ಅರುಣ್| ಕಡಬದಲ್ಲಿ ಮೂವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಕೋಳಿ ಅಂಕ ನಡೆಸದಂತೆ ಸಂಪೂರ್ಣ ತಡೆ ಒಡ್ಡಿದ ಎಸ್ಪಿ ಅರುಣ್ ಕುಮಾರ್ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೋಳಿ ಅಂಕ ನಡೆಯದಂತೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಭಿನಂದನ್ ರವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು,

ಉಡುಪಿ ಬಳಿಕ ದ.ಕ ದಲ್ಲಿ ಕೋಳಿ ಅಂಕ‌ದ ವಿರುದ್ಧ ತೊಡೆ ತಟ್ಟಿದ ಎಸ್.ಪಿ ಅರುಣ್| ಕಡಬದಲ್ಲಿ ಮೂವರು ಪೊಲೀಸ್ ವಶಕ್ಕೆ Read More »

ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು

ಸಮಗ್ರ ನ್ಯೂಸ್: ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಇದೀಗ ಜಾಮೀನು ಮಂಜೂರು ಮಾಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ಇದೀಗ ತೆಲಂಗಾಣ ಹೈಕೋರ್ಟ್‌ ತಡೆ ನೀಡಿದೆ. ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿರುವ

ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು Read More »

ಮೈಸೂರು: ಲವ್, ಸೆಕ್ಸ್ ಆ್ಯಂಡ್ ದೋಖಾ| ಪಂಜ ಮೂಲದ ವೈದ್ಯನ ವಿರುದ್ಧ ದೂರು

ಸಮಗ್ರ ನ್ಯೂಸ್: ವಿವಾಹವಾಗುವುದಾಗಿ ನಂಬಿಸಿ ಸರಸವಾಡಿದ ಆರೋಪದ ಮೇಲೆ‌ ಸುಳ್ಯ ತಾಲೂಕಿನ ‌ಪಂಜ ಮೂಲದ ವೈದ್ಯರೊಬ್ಬರ ವಿರುದ್ಧ ಮೈಸೂರಿನ ಯುವತಿಯೊಬ್ಬರು ದೂರು ದಾಖಲಿಸಿರುವ ಘಟನೆ ನಡೆದಿದೆ. ಯುವತಿ ವೈದ್ಯರಿಗೆ ಫೇಸ್ಬುಕ್‌ ಮೂಲಕ ಪರಿಚಯವಾಗಿದ್ದು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ನಂತರ ರಿಜಿಸ್ಟರ್ಡ್‌ ವಿವಾಹವಾಗಿದ್ದು, ಇದೀಗ ಪತ್ನಿಯಾಗಿ ಸ್ವೀಕರಿಸಲು ನಿರಾಕರಿಸಿ ವಂಚನೆ ಮಾಡಿದ್ದಾರೆ ಎನ್ನುವ ಆರೋಪದ ಮೇರೆಗೆ ದೂರು ದಾಖಲು ಮಾಡಲಾಗಿದೆ. ಪಂಜ ಮೂಲದ ಡಾ.ಆದರ್ಶ್‌ ಅವರು ಫೇಸ್ಬುಕ್‌ ಮೂಲಕ ತನ್ನನ್ನು ಪರಿಚಯಿಸಿ, ವಿವಾಹದ ಭರವಸೆ ನೀಡಿ

ಮೈಸೂರು: ಲವ್, ಸೆಕ್ಸ್ ಆ್ಯಂಡ್ ದೋಖಾ| ಪಂಜ ಮೂಲದ ವೈದ್ಯನ ವಿರುದ್ಧ ದೂರು Read More »

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪ| ಕಾಂಗ್ರೆಸ್ ಸಂಸದ ಇ ತುಕರಾಂ ಹಾಗೂ ಶಾಸಕರಿಗೆ ಇಡಿ‌ ಶಾಕ್

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಇಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿದೆ. ವಾಲ್ಮೀಕಿ ನಿಗಮದ ಅನುದಾನವನ್ನು ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಹಂಚಲಾಗಿದೆ ಎನ್ನಲಾಗಿದೆ. ಈ ಹಣವನ್ನು ಬಳ್ಳಾರಿ

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪ| ಕಾಂಗ್ರೆಸ್ ಸಂಸದ ಇ ತುಕರಾಂ ಹಾಗೂ ಶಾಸಕರಿಗೆ ಇಡಿ‌ ಶಾಕ್ Read More »

ಮಂಡ್ಯ: ಮದೀನಾ ಹೊಟೇಲ್ ನಲ್ಲಿ ಬೌಬೌ ಬಿರಿಯಾನಿ| ಮಾಂಸದೊಂದಿಗೆ ಸಿಕ್ಕಿಬಿದ್ದ ಹೊಟೇಲ್ ಮಾಲೀಕ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿರುವ ಮದೀನಾ ಎನ್ನುವ ಹೋಟೆಲ್‌ ಮಾಲೀಕನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮದೀನಾ ಹೋಟೆಲ್ ಮಾಲೀಕ ಆಜಾದ್ ಬಿರಿಯಾನಿಗೆ ನಾಯಿ ಮಾಂಸವನ್ನು ಬೆರೆಸುವ ಆರೋಪ ಕೇಳಿಬಂದಿದೆ. ಹೋಟೆಲ್ ಮಾಲೀಕ ಆಜಾದ್ ಬಿರಿಯಾನಿಗೆ ನಾಯಿ ಮಾಂಸವನ್ನು ಬೆರೆಸಿ ಗ್ರಾಹಕರಿಗೆ ಬಡಿಸುತ್ತಿದ್ದ ಎನ್ನಲಾಗಿದೆ. ಬಿರಿಯಾನಿ ತಿಂದ ಕೆಲ ಗ್ರಾಹಕರಿಗೆ ಮಾಂಸದ ರುಚಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ನಾಯಿ ಮಾಂಸ ಇರಬಹುದು ಎನ್ನುವ ಶಂಕೆ ವ್ಯಕ್ತಪಡಿಸಿದ್ದಾರೆ. ಅನುಮಾನಗೊಂಡ ಕೆಲ ಗ್ರಾಹಕರು ಒಟ್ಟಾಗಿ

ಮಂಡ್ಯ: ಮದೀನಾ ಹೊಟೇಲ್ ನಲ್ಲಿ ಬೌಬೌ ಬಿರಿಯಾನಿ| ಮಾಂಸದೊಂದಿಗೆ ಸಿಕ್ಕಿಬಿದ್ದ ಹೊಟೇಲ್ ಮಾಲೀಕ Read More »

ಬಂಟ್ವಾಳ: ಅಡಿಕೆ ವ್ಯಾಪಾರಿಯಿಂದ ಕೃಷಿಕರಿಗೆ ಪಂಗನಾಮ

ಸಮಗ್ರ ನ್ಯೂಸ್: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ‌ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ‌ನಗರ ಪೋಲೀಸ್ ಠಾಣೆಯ ಮುಂದೆ ಜಮಾಯಿಸಿದ್ದು, ವಂಚನೆಗೆ ಒಳಗಾದ ಕೃಷಿಕರು ಹಣ ನೀಡದೆ ವಂಚಿಸಿದ ವ್ಯಕ್ತಿಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. ಸ್ಥಳೀಯ ಕೃಷಿಕ ಮಹಿಳೆಯೊಬ್ಬರು ತಮ್ಮ ಬ್ಯಾಂಕ್ ಸಾಲದ ಮೊತ್ತ ಪಾವತಿಯ ‌ಹಿನ್ನಲೆಯಲ್ಲಿ ವ್ಯಾಪಾರಿಯ ಬಳಿ ಹಣಕ್ಕಾಗಿ ಹೋದಾಗ ಆತ ಪರಾರಿಯಾಗಿರುವುದು

ಬಂಟ್ವಾಳ: ಅಡಿಕೆ ವ್ಯಾಪಾರಿಯಿಂದ ಕೃಷಿಕರಿಗೆ ಪಂಗನಾಮ Read More »

ಚಿಕ್ಕಮಗಳೂರು: ಸುಹಾಸ್ ಶೆಟ್ಟಿ ಮನೆಗೆ ಮೂಡಿಗೆರೆ ಹಿಂದೂ ಕಾರ್ಯಕರ್ತರ ಬೇಟಿ

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿನ ಕೊಟ್ಟೆಗೆಹಾರದ ಹಿಂದೂ ಕಾರ್ಯಕರ್ತರು ಮಂಗಳೂರಿನಲ್ಲಿ ಹತ್ಯೆಯಾದ ಸಹಾಸ್ ಶೆಟ್ಟಿ ಮನೆಗೆ ಜೂ.10 ರಂದು ಬೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಮೂಡಿಗೆರೆ ಪಟ್ಟಣ ಪಂಚಾಯಿತಿ ಸದಸ್ಯ ಅನುಕುಮಾರ್ ಮಾತನಾಡಿ’ ಸುಹಾಸ್ ಶೆಟ್ಟಿ ಹತ್ಯೆಯ ಪ್ರಕರಣ ಎನ್.ಐ.ಎ ಗೆ ವಹಿಸಿರುವುದು ಸ್ವಾಗತಾರ್ಹ ಕಾರ್ಯವಾಗಿದೆ. ಹಿಂದೂ ಕಾರ್ಯಕರ್ತೆಯಾಗುತ್ತಿರುವುದು ಬೇಸರದ ಸಂಗತಿಯಾಗಿದೆ.ಮಂಗಳೂರು ಭಾಗದಲ್ಲಿ ಇಂತಹ ದುಷ್ಕೃತ್ಯಗಳು ನಿಲ್ಲಬೇಕು. ಕೋಮು ಸೌಹಾರ್ದತೆಯು ಜಿಲ್ಲೆಯಲ್ಲಿ ನೆಲೆಸಬೇಕು’ಎಂದರು. ಮುಖಂಡ ಸಂಜಯ್ ಗೌಡ ಮಾತನಾಡಿ’ ಸುಹಾಸ್ ಶೆಟ್ಟಿ ದಕ್ಷ ಮುಖಂಡರಾಗಿದ್ದರು.ಅವರ ಸಾವು

ಚಿಕ್ಕಮಗಳೂರು: ಸುಹಾಸ್ ಶೆಟ್ಟಿ ಮನೆಗೆ ಮೂಡಿಗೆರೆ ಹಿಂದೂ ಕಾರ್ಯಕರ್ತರ ಬೇಟಿ Read More »

ರಾಜ್ಯಾದ್ಯಂತ ಭಾರೀ ಮಳೆ‌ ಮನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಮೂರು ದಿನ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯು ಮತ್ತೆ ಅಬ್ಬರಿಸುವ ಲಕ್ಷಣಗಳಿದ್ದು, ಜೂನ್‌ 11 ರಿಂದ ಜೂನ್‌14ರ ವರೆಗೆ ಕರಾವಳಿ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈ ಜಿಲ್ಲೆಗಳಿಗೆ ಜೂನ್‌ 12 ರಿಂದ 14ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂ.12 ರಿಂದ 15ರವರೆಗೆ ‘ರೆಡ್ ಅಲರ್ಟ್’

ರಾಜ್ಯಾದ್ಯಂತ ಭಾರೀ ಮಳೆ‌ ಮನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಮೂರು ದಿನ ರೆಡ್ ಅಲರ್ಟ್ Read More »

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ‌ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಜೂನ್‌ 10ರಂದು ಹವಾಮಾನ ಇಲಾಖೆ ರಾಜ್ಯಕ್ಕೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಜೂನ್‌ 10ರಂದು ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಹಾಗೆಯೇ ಜೂನ್‌ 11ರಂದು ಕರಾವಳಿ ಜಿಲ್ಲೆಗಳು,

ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ‌ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ Read More »