Editor

ಜಗದೀಪ್‌ ಧನಕರ್‌ ರಾಜೀನಾಮೆ| ಸದ್ಯದಲ್ಲೇ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ

ಸಮಗ್ರ ನ್ಯೂಸ್‌: ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ ಕರ್ ಅವರು ರಾಜೀನಾಮೆ ನೀಡಿರುವುದರಿಂದ, ಅವರ ಉತ್ತರಾಧಿಕಾರಿಯನ್ನು ನೇಮಿಸುವ ಚುನಾವಣೆಯನ್ನು ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಆದಷ್ಟು ಬೇಗ ನಡೆಸಬೇಕಾಗುತ್ತದೆ. ಸಂವಿಧಾನದ 68 ನೇ ವಿಧಿಯ ಷರತ್ತು 2 ರ ಪ್ರಕಾರ, ಉಪ ರಾಷ್ಟ್ರಪತಿ ಹುದ್ದೆಯಲ್ಲಿನ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಆ ಹುದ್ದೆಯಲ್ಲಿದ್ದವರು ಮರಣ ಹೊಂದಿದ್ದರೆ, ರಾಜೀನಾಮೆ ನೀಡಿದ್ದರೆ, ಪದಚ್ಯುತಗೊಳಿಸುವಿಕೆ ಅಥವಾ ಇನ್ಯಾವುದೇ ಕಾರಣದಿಂದಾಗಿ ತೆರವಾಗಿದ್ದರೆ ಚುನಾವಣೆಯನ್ನು ಆ ಹುದ್ದೆ ಖಾಲಿಯಾದ ನಂತರ ಆದಷ್ಟು ಬೇಗ ನಡೆಸಬೇಕಾಗುತ್ತದೆ. […]

ಜಗದೀಪ್‌ ಧನಕರ್‌ ರಾಜೀನಾಮೆ| ಸದ್ಯದಲ್ಲೇ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ Read More »

ನರ್ಸ್ ನಿಮಿಷ ಪ್ರಿಯಾ ಗಲ್ಲು ಶಿಕ್ಷೆ‌ ರದ್ದು| ಶೀಘ್ರದಲ್ಲೇ ಭಾರತಕ್ಕೆ ವಾಪಾಸ್

ಸಮಗ್ರ ನ್ಯೂಸ್: ಯೆಮೆನ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯೆಮೆನ್ ಗಲ್ಲು ಶಿಕ್ಷೆ ರದ್ದುಗೊಳಿಸಿದೆ.ಹಾಗೂ ಶೀಘ್ರವೇ ಅವರನ್ನ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿದೆ. ಯೆಮೆನ್ನಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಕ್ರಿಶ್ಚಿಯನ್ ಧರ್ಮಪ್ರಚಾರಕ ಕೆಎ ಪಾಲ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಕೆಎ ಪಾಲ್ ಪ್ರಧಾನಿ ಮೋದಿಗೂ ಧನ್ಯವಾದ ಹೇಳಿದ್ದಾರೆ. ಯೆಮೆನ್ ರಾಜಧಾನಿ ಸನಾದಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ

ನರ್ಸ್ ನಿಮಿಷ ಪ್ರಿಯಾ ಗಲ್ಲು ಶಿಕ್ಷೆ‌ ರದ್ದು| ಶೀಘ್ರದಲ್ಲೇ ಭಾರತಕ್ಕೆ ವಾಪಾಸ್ Read More »

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ| ಎಸ್ಐಟಿ ತಂಡದಿಂದ ಇಬ್ಬರು ಅಧಿಕಾರಿಗಳು ಹೊರಕ್ಕೆ?

ಸಮಗ್ರ ನ್ಯೂಸ್: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರ ನಿರ್ಧರಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. SIT ತಂಡ ರಚಿಸಿ ಅರ್ಧ ದಿನ ಕಳೆಯುವಷ್ಟರಲ್ಲೇ ಆರಂಭಿಕ ವಿಘ್ನ ಎದುರಾಗಿದೆ. ವಿಶೇಷ ತನಿಖಾ ತಂಡದ ನಾಲ್ವರಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳು ಹಿಂದಕ್ಕೆ ಸರಿದಿದ್ದಾರೆ ಅನ್ನೋ ಮಾಹಿತಿ‌ ಉನ್ನತ ಮೂಲಗಳಿಂದ ತಿಳಿದುಬಂದಿದೆ. ತನಿಖೆಯಿಂದ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ| ಎಸ್ಐಟಿ ತಂಡದಿಂದ ಇಬ್ಬರು ಅಧಿಕಾರಿಗಳು ಹೊರಕ್ಕೆ? Read More »

ಧರ್ಮಸ್ಥಳ‌ ಶವ ಹೂತಿಟ್ಟ ಪ್ರಕರಣ| ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತಲು ನಡೆದಿವೆ ಎನ್ನಲಾದ ನೂರಾರು ಕೊಲೆ, ಅಸಹಜ ಸಾವು, ಅತ್ಯಾಚಾರ ಶಂಕೆ ಹಾಗೂ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಎಸ್​​​ಐಟಿ ರಚನೆ ಮಾಡಿದೆ. ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್​ ಅಧಿಕಾರಗಳು ಈ ವಿಶೇಷ ತನಿಖಾ ತಂಡದಲ್ಲಿದ್ದಾರೆ. ಈ ತಂಡದಲ್ಲಿ ಅನುಚೇತ್, ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್​​​​​​ ಪ್ರಕರಣದ ಬಗ್ಗೆ ಎಸ್​​​​ಐಟಿ ತನಿಖೆ ಶುರು

ಧರ್ಮಸ್ಥಳ‌ ಶವ ಹೂತಿಟ್ಟ ಪ್ರಕರಣ| ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ರಾಶಿ, ನಕ್ಷತ್ರಗಳ ಬದಲಾವಣೆ ದ್ವಾದಶರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ಅದ್ರಲ್ಲೂ ಸೂರ್ಯ ಹಾಗೂ ಶುಕ್ರನ ಬದಲಾವಣೆ ಕೆಲವು ರಾಶಿಗೆ ಶುಭ, ಕೆಲವು ರಾಶಿಗೆ ಅಶುಭ ಫಲವನ್ನು ನೀಡುತ್ತದೆ. ಹಾಗಾದ್ರೆ ಈ ವಾರದ ರಾಶಿಗಳ ಭವಿಷ್ಯ ಹೇಗಿದೆ ಅನ್ನೋದನ್ನು ತಿಳಿಯೋಣಾ. ಮೇಷರಾಶಿ: ಸೂರ್ಯನ ಸಂಚಾರವು ದಕ್ಷಿಣಾಯಣ ಪಥಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಹಬ್ಬ-ಹರಿದಿನಗಳ ಆಚರಣೆ ಆರಂಭವಾಗಿ ವೈಕುಂಠ ಏಕಾದಶಿಯಂದು ಸಮಾಪ್ತವಾಗುತ್ತದೆ. ಈ ಸಂಚಾರದಲ್ಲಿ ಮನುಷ್ಯನು ಸಂಕಷ್ಟಗಳ ಸಂಕೋಲೆಗಳಿಂದ ಬಿಡಿಸಿಕೊಂಡು ಧೈರ್ಯ, ಸ್ಥೈರ್ಯ, ದ್ರವ್ಯ, ಧನ ಎಲ್ಲವನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ| ಮಂಗಳೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಮುನ್ಸೂಚನೆಯಂತೆ ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್‌ ಆದೇಶಿಸಿದ್ದಾರೆ. ಮಂಗಳೂರು ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸುರತ್ಕಲ್ ಮುಕ್ಕ ನಂದಿನಿ ನದಿ ಸೇತುವೆಯವರೆಗೆ ಹಾಗೂ ಪೂರ್ವದಲ್ಲಿ ವಳಚ್ಚಿಲ್, ಅಡ್ಡೂರು ಸೇತುವೆ, ಎಡಪದವು,

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ| ಮಂಗಳೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ Read More »

ಬೆಳಗಾವಿ ಮೂಲದ ಯುವಕ ಪಾಣತ್ತೂರಿನಿಂದ ನಾಪತ್ತೆ| ನೀರಿನಲ್ಲಿ‌ ಕೊಚ್ಚಿ ಹೋಗಿರುವ ಶಂಕೆ

ಸಮಗ್ರ ನ್ಯೂಸ್: ಕರ್ನಾಟಕದ ಗಡಿಭಾಗ ಕೇರಳದ‌ ಪಾಣತ್ತೂರಿನ‌ ಮಂಞನಡ್ಕ ಎಂಬಲ್ಲಿ ಪ್ಲಾಂಟೇಷನ್ ನಲ್ಲಿ ‌ಹಿಟಾಚಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಜು.17ರಂದು ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು‌ ಕೇರಳ ಸರಕಾರದ ಅಧಿನಕ್ಕೊಳಪಡುವ ಗೇರು ಬೀಜದ ಪ್ಲಾಂಟೇಷನ್ ನಲ್ಲಿ ಹಿಟಾಚಿಯಲ್ಲಿ ಹೆಲ್ಪರ್ ಕೆಲಸ ಮಾಡುತ್ತಿದ್ದ 19 ವರ್ಷ ಪ್ರಾಯದ ಯುವಕ ಅನಿಲ್ ಎಂದು ಗುರುತಿಸಲಾಗಿದೆ. ಹಿಟಾಚಿ ಚಾಲಕನಾದ ಅನಿಲ್ ನೊಂದಿಗೆ ಮಧ್ಯಾಹ್ನ ಊಟ ತರುವಂತೆ ಪಾಣತ್ತೂರು ಕಡೆಗೆ ತನ್ನ ಬೈಕಿನಲ್ಲಿ ಕಳುಹಿಸಿದ್ದರು. ಆದರೆ ಅದೇ

ಬೆಳಗಾವಿ ಮೂಲದ ಯುವಕ ಪಾಣತ್ತೂರಿನಿಂದ ನಾಪತ್ತೆ| ನೀರಿನಲ್ಲಿ‌ ಕೊಚ್ಚಿ ಹೋಗಿರುವ ಶಂಕೆ Read More »

ಧರ್ಮಸ್ಥಳ ಸರಣಿ ಹತ್ಯೆ‌,‌ ಅಂತ್ಯಸಂಸ್ಕಾರ ಪ್ರಕರಣ| ಸದ್ಯಕ್ಕೆ‌ ಎಸ್ಐಟಿ ರಚನೆ ಮಾಡಲ್ಲ ಎಂದ ಸಿಎಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಸರಣಿ ಹತ್ಯೆ, ಸಾಮೂಹಿಕ ಅಂತ್ಯಸಂಸ್ಕಾರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಈ ವಿಚಾರವಾಗಿ ಎಸ್‌ಐಟಿ ರಚನೆ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಜುಲೈ 12ರಂದು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳ ಪ್ರಕಾರ, ಒಂದು ತಲೆಬುರುಡೆ ದೊರೆತಿದ್ದು, ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆಯ ಬಗ್ಗೆ ಕುಟುಂಬದವರ

ಧರ್ಮಸ್ಥಳ ಸರಣಿ ಹತ್ಯೆ‌,‌ ಅಂತ್ಯಸಂಸ್ಕಾರ ಪ್ರಕರಣ| ಸದ್ಯಕ್ಕೆ‌ ಎಸ್ಐಟಿ ರಚನೆ ಮಾಡಲ್ಲ ಎಂದ ಸಿಎಂ Read More »

ದೇಶದ ಸ್ವಚ್ಛನಗರಗಳ ಪಟ್ಟಿ‌ ಬಿಡುಗಡೆ| ಸತತ 8ನೇ ಬಾರಿಗೆ ಪಟ್ಟ‌ ತನ್ನದಾಗಿಸಿಕೊಂಡ ಇಂದೋರ್|ಸಾಂಸ್ಕೃತಿಕ ರಾಜಧಾನ ಮೈಸೂರಿಗೆ 3ನೇ ಸ್ಥಾನ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಇಂದೋರ್ ನಗರವು 2024-25ನೇ ಸಾಲಿನ ಸ್ವಚ್ಛ ಸರ್ವೇಕ್ಷಣ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಸತತ 8ನೇ ಬಾರಿಗೆ ದೇಶದ ‘ಅತ್ಯಂತ ಸ್ವಚ್ಛ ನಗರ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಸರ್ಕಾರವು ವಾರ್ಷಿಕವಾಗಿ ನಡೆಸುವ ಸ್ವಚ್ಛತಾ ಸಮೀಕ್ಷೆಯಲ್ಲಿ ಇಂದೋರ್‌ ಪ್ರಥಮ, ಗುಜರಾತ್​​ನ ಸೂರತ್ ಎರಡನೇ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರದ ಮುಂಬೈ ಮೂರನೇ ಸ್ಥಾನ ಪಡೆದುಕೊಂಡಿದೆ. 3-10 ಲಕ್ಷ ಜನಸಂಖ್ಯೆಯ ವಿಭಾಗದಲ್ಲಿ, ನೋಯ್ಡಾ ಸ್ವಚ್ಛ ನಗರವಾಗಿ ಅಗ್ರಸ್ಥಾನ ಪಡೆದಿದ್ದು, ಚಂಡೀಗಢ ಎರಡನೇ ಸ್ಥಾನದಲ್ಲಿದೆ ಮತ್ತು

ದೇಶದ ಸ್ವಚ್ಛನಗರಗಳ ಪಟ್ಟಿ‌ ಬಿಡುಗಡೆ| ಸತತ 8ನೇ ಬಾರಿಗೆ ಪಟ್ಟ‌ ತನ್ನದಾಗಿಸಿಕೊಂಡ ಇಂದೋರ್|ಸಾಂಸ್ಕೃತಿಕ ರಾಜಧಾನ ಮೈಸೂರಿಗೆ 3ನೇ ಸ್ಥಾನ Read More »

ಬೆಳ್ತಂಗಡಿ: ಕಾಡಾನೆ ತಿವಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಆನೆ ತಿವಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಸೌತಡ್ಕದ ಗುಂಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಆನೆಯು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ. ಬೆಳ್ಳಂಬೆಳ್ಳಗೆ ಎರಡು ಆನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡುಬಂದಿದೆ. ಸ್ಥಳಕ್ಕೆ

ಬೆಳ್ತಂಗಡಿ: ಕಾಡಾನೆ ತಿವಿದು ವ್ಯಕ್ತಿ ಸಾವು Read More »