Editor

ತಲೆಮರೆಸಿಕೊಂಡ ನಟಿ ಜಯಪ್ರದಾ/ ಅರೆಸ್ಟ್ ಮಾಡುವಂತೆ ಸೂಚಿಸಿದ ನ್ಯಾಯಾಲಯ

ಸಮಗ್ರ ನ್ಯೂಸ್: ವಿಚಾರಣೆಗೆ ಹಾಜರಾಗದೆ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ತಲೆಮರೆಸಿಕೊಂಡಿದ್ದಾರೆ ಎಂದು ನ್ಯಾಯಾಲಯ ಘೋಷಿಸಿದ್ದು, ಅವರನ್ನು ಅರೆಸ್ಟ್ ಮಾಡುವಂತೆ ಪೋಲಿಸರಿಗೆ ಸೂಚನೆ ನೀಡಿದೆ. 2019ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಮಪುರದಲ್ಲಿ ಪ್ರಕರಣ ದಾಖಲಾಗಿದ್ದು, ಇದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಸಮನ್ಸ್ ನೀಡಿದ ಹೊರತಾಗಿಯೂ ಜಯಪ್ರದಾ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ, ನ್ಯಾಯಾಲಯ ಈ ಆದೇಶ ಹೊರಡಿಸಿದೆ. ನ್ಯಾಯಾಲಯದಿಂದ ಜಯಪ್ರದಾ ಅವರಿಗೆ ಹಲವು ಬಾರಿ ಸಮನ್ಸ್ ಜಾರಿಯಾಗಿತ್ತು.

ತಲೆಮರೆಸಿಕೊಂಡ ನಟಿ ಜಯಪ್ರದಾ/ ಅರೆಸ್ಟ್ ಮಾಡುವಂತೆ ಸೂಚಿಸಿದ ನ್ಯಾಯಾಲಯ Read More »

ಪ್ಯಾಸೆಂಜರ್ ರೈಲುಗಳ ದರ ಇಳಿಕೆ

ಸಮಗ್ರ ನ್ಯೂಸ್: ಕೋವಿಡ್ ವೇಳೆ ಏರಿಕೆ ಮಾಡಲಾಗಿದ್ದ ಪ್ಯಾಸೆಂಜರ್ ರೈಲುಗಳ ಕನಿಷ್ಠ ದರವನ್ನು ಭಾರತೀಯ ರೈಲ್ವೆ ಮಂಗಳವಾರದಿಂದ ಇಳಿಕೆ ಮಾಡಿದ್ದು, ಸಾಮಾನ್ಯ ರೈಲಿನ ಸೆಕೆಂಡ್ ಕ್ಲಾಸ್ ಕನಿಷ್ಠ ಟಿಕೆಟ್ ದರದಲ್ಲಿ ಶೇ.50ರಷ್ಟು ಕಡಿಮೆಯಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಹಲವು ಪ್ಯಾಸೆಂಜರ್ ರೈಲುಗಳ ಹೆಸರನ್ನು ಲಾಕ್‍ಡೌನ್ ತೆರವಾದ ನಂತರ ಎಕ್ಸ್‍ಪ್ರೆಸ್ ಸ್ಪೆಷಲ್ ಅಥವಾ ಮೆಮು/ಡೆಮು ಎಕ್ಸ್‍ಪ್ರೆಸ್ ಎಂದು ಬದಲಾವಣೆ ಮಾಡಿ, ಕನಿಷ್ಠ ಟಿಕೆಟ್ ದರವನ್ನು 10 ರು.ನಿಂದ 30 ರು.ವರೆಗೆ ಏರಿಕೆ ಮಾಡಲಾಗಿತ್ತು. ಆದರೆ ರೈಲ್ವೆಯ ಈ

ಪ್ಯಾಸೆಂಜರ್ ರೈಲುಗಳ ದರ ಇಳಿಕೆ Read More »

ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್| ವಿದ್ಯುತ್ ದರ ಇಳಿಕೆ ಮಾಡಿ KERC ಆದೇಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದು, ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC)ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಲೋಕಸಭೆ ಚುನಾವಣೆ ಬೆನ್ನಲ್ಲೇ ಗ್ರಾಹಕರಿಗೆ ಬಂಪರ್​ ಕೊಡುಗೆ ನೀಡಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದರಂತೆ ವಾಣಿಜ್ಯ ಬಳಕೆದಾರರಿಗೂ ಗುಡ್ ನ್ಯೂಸ್ ನೀಡಿದೆ. ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ

ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್| ವಿದ್ಯುತ್ ದರ ಇಳಿಕೆ ಮಾಡಿ KERC ಆದೇಶ Read More »

ಡ್ರೈವರ್ & ಟೆಕ್ನಿಷಿಯನ್ ಹುದ್ದೆಗೆ ಆಹ್ವಾನ, ನಾಳೆಯೇ ಲಾಸ್ಟ್ ಡೇಟ್!

ಸಮಗ್ರ ಉದ್ಯೋಗ: CSIR ನಾಲ್ಕನೇ ಪ್ಯಾರಾಡೈಂ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಒಟ್ಟು 17 ಡ್ರೈವರ್, ಟೆಕ್ನಿಕಲ್ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 29, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ಟೆಕ್ನಿಕಲ್ ಅಸಿಸ್ಟೆಂಟ್- 15ಟೆಕ್ನಿಷಿಯನ್- 1ಡ್ರೈವರ್- 1 ವಿದ್ಯಾರ್ಹತೆ:ಟೆಕ್ನಿಕಲ್ ಅಸಿಸ್ಟೆಂಟ್- ಡಿಪ್ಲೊಮಾ, ಬಿ.ಎಸ್ಸಿ, ಬಿಸಿಎಟೆಕ್ನಿಷಿಯನ್- 10ನೇ ತರಗತಿಡ್ರೈವರ್- 10ನೇ ತರಗತಿ

ಡ್ರೈವರ್ & ಟೆಕ್ನಿಷಿಯನ್ ಹುದ್ದೆಗೆ ಆಹ್ವಾನ, ನಾಳೆಯೇ ಲಾಸ್ಟ್ ಡೇಟ್! Read More »

ರಾಜ್ಯಸಭಾ ಚುನಾವಣೆ/ ಬಿಜೆಪಿಯದ್ದೇ ಸಿಂಹಪಾಲು

ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆ ಮುಕ್ತಾಯಗೊಂಡಿದ್ದು ಒಟ್ಟು 56 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಒಟ್ಟು ಫಲಿತಾಂಶದಲ್ಲಿ ಬಿಜೆಪಿಗೆ ಸಿಂಹಪಾಲು ಪ್ರಾಪ್ತಿಯಾಗಿದ್ದು 30 ಸೀಟಲ್ಲಿ ಗೆದ್ದಿದೆ. 56ರಲ್ಲಿ 41 ಮಂದಿ ಅವಿರೋಧ ಆಯ್ಕೆ ಆಗಿದ್ದರೆ, ಮಿಕ್ಕ 15ಕ್ಕೆ ಮತದಾನ ನಡೆದಿತ್ತು. ಇದರಲ್ಲಿ ಕರ್ನಾಟಕದ 4, ಉತ್ತರ ಪ್ರದೇಶದ 10 ಹಾಗೂ ಹಿಮಾಚಲ ಪ್ರದೇಶದ 1 ಸ್ಥಾನ ಇದ್ದವು. ಮತದಾನ ನಡೆದ 15 ಸ್ಥಾನದ ಪೈಕಿ ಬಿಜೆಪಿಗೆ 10, ಕಾಂಗ್ರೆಸ್‍ಗೆ 3 ಹಾಗೂ ಎಸ್ಪಿಗೆ 2 ಸ್ಥಾನ ಬಂದಿವೆ. ಇನ್ನು

ರಾಜ್ಯಸಭಾ ಚುನಾವಣೆ/ ಬಿಜೆಪಿಯದ್ದೇ ಸಿಂಹಪಾಲು Read More »

ಮಾರ್ಚ್‍ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಮಾರ್ಚ್‍ನಲ್ಲಿ, ಲೋಕಸಭೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇನ್ನೊಬ್ಬ ಕೇಂದ್ರ ಸಚಿವ ಶಂತನು ಠಾಕೂರ್ ಅವರು ಈ ತಿಂಗಳ ಆರಂಭದಲ್ಲಿ, 2019ರಲ್ಲೇ ಸಂಸತ್ತು ಅಂಗೀಕರಿಸಿದ್ದ ಸಿಎಎ ಕಾಯ್ದೆಯನ್ನು ಚುನಾವಣೆಗೂ ಮುನ್ನ ಜಾರಿಗೆ ತರಲಾಗುವುದು ಎಂದಿದ್ದರು. ಇದರ ಪ್ರಕಾರ 2014ರ ಡಿ.31ರಂದು ಅಥವಾ

ಮಾರ್ಚ್‍ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ Read More »

ಟ್ರಕ್ ಹಾಗೂ ಟಾಟಾ ಎಸ್ ನಡುವೆ ಡಿಕ್ಕಿ|ನಾಲ್ವರು ಸಾವು

ಸಮಗ್ರ ನ್ಯೂಸ್:ಇಂದು ಮುಂಜಾನೆ ಹೊತ್ತಲ್ಲಿ ಬೀದರ್​ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಳಗ್ಗೆ ಸುಮಾರು 4.30 ಹೊತ್ತಿಗೆ ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಈ ಘಟನೆ ನಡೆದಿದ್ದು ಐದು ಜನರಿಗೆ ಗಾಯಗಳಾಗಿದ್ದು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ. ಟಾಟಾ

ಟ್ರಕ್ ಹಾಗೂ ಟಾಟಾ ಎಸ್ ನಡುವೆ ಡಿಕ್ಕಿ|ನಾಲ್ವರು ಸಾವು Read More »

ಸುಳ್ಯದ ಇಬ್ಬರು ಮಹಿಳೆಯರಿಗೆ ರಾಷ್ಟ್ರಪತಿ ಭೇಟಿ ಭಾಗ್ಯ| ಮಾ.1ರಂದು ಹಳ್ಳಿಯಿಂದ ದಿಲ್ಲಿಗೆ ಪಯಣ

ಸಮಗ್ರ ನ್ಯೂಸ್: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯೋಜನೆಯ ‘ಸಂಜೀವಿನೀ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿರುವ ಯೋಜನೆಯಡಿ ಸುಳ್ಯ ತಾಲೂಕಿನ ಇಬ್ಬರಿಗೆ ರಾಷ್ಟ್ರಪತಿ ಭೇಟಿಯ ಭಾಗ್ಯ ಲಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕದಿಂದ ಒಟ್ಟು 35 ಮಂದಿ ದೆಹಲಿಗೆ ತೆರಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಕೊರಗ ಸಮುದಾಯಕ್ಕೆ ಸೇರಿದ ಬೆಂಡೋಡಿಯ ಮೀನಾಕ್ಷಿ ಹಾಗೂ ವನಿತಾ ರಾಷ್ಟ್ರಪತಿ ಭೇಟಿ

ಸುಳ್ಯದ ಇಬ್ಬರು ಮಹಿಳೆಯರಿಗೆ ರಾಷ್ಟ್ರಪತಿ ಭೇಟಿ ಭಾಗ್ಯ| ಮಾ.1ರಂದು ಹಳ್ಳಿಯಿಂದ ದಿಲ್ಲಿಗೆ ಪಯಣ Read More »

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಎಸ್.ಎಸ್.ಎಲ್.ಸಿ. ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಬಳಿಕ ನಾಪತ್ತೆಯಾಗಿದ್ದರು. ಯಶ್ವಿತ್ ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ಅವರ ಶವ ಪತ್ತೆಯಾಗಿದೆ. ಇವರು ಸುರತ್ಕಲ್ ನ ವಿದ್ಯಾದಾಯಿನಿ ಶಾಲೆಯ ವಿದ್ಯಾರ್ಥಿಗಳು. ಇವರ ಮೃತದೇಹಗಳು ಹಳೆಯಂಗಡಿ ಸಮೀಪ ನದಿಯಲ್ಲಿ ಪತ್ತೆಯಾಗಿವೆ. ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ ಬಳಿಕ ನಾಪತ್ತೆಯಾಗಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪರೀಕ್ಷೆ ಮುಗಿದ ನಂತರ ಈಜಲು

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ Read More »

ನಾಡಗೀತೆ ವಿವಾದ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ವರ್ಗಾವಣೆ

ಸಮಗ್ರ ನ್ಯೂಸ್: ಇತ್ತೀಚೆಗೆ ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ವಿವಾದಾತ್ಮಕ ವಿಚಾವವೊಂದು ಹರಡಿತ್ತು. ಈ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇವರ ಜೊತೆಗೆ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮೂವರು ಐಎಎಸ್ ಅಧಿಕಾರಿಗಳನ್ನೂ ವರ್ಗಾವಣೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಮೂಲ ಸೌಕರ್ಯ ಇಲಾಖೆ ಕಾರ್ಯದರ್ಶಿ

ನಾಡಗೀತೆ ವಿವಾದ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ವರ್ಗಾವಣೆ Read More »