Editor

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗು: ರಾಜ್ಯದಾದ್ಯಂತ ಇಂದು ಪ್ರತಿಭಟನೆ

ಸಮಗ್ರ ನ್ಯೂಸ್: ನಿನ್ನೆ ರಾಜ್ಯಸಭಾ ಚುನಾವಣೆ ಫಲಿತಾಂಶ ಬಂದಿದ್ದು, ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡಿದ್ದರು ಇದೇ ಸಂಧರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಈ ಕುರಿತು ಆಕ್ರೋಶ ವ್ಯಕ್ತವಾಗಿದ್ದು, ಹಲವು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ರಾಷ್ಟ್ರದ್ರೋಹಿ ಇದು ಪಾಕಿಸ್ತಾನದ ಪರ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಇಂದು(ಫೆ.28) ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗು: ರಾಜ್ಯದಾದ್ಯಂತ ಇಂದು ಪ್ರತಿಭಟನೆ Read More »

ಮೈಸೂರು ಕೊಡಗು ರೈಲು ಮಾರ್ಗ ನಿರ್ಮಿಸಲು ಭೂ ಸ್ವಾಧೀನಕ್ಕೆ|ಸಂಸದ ಪ್ರತಾಪ್ ಸಿಂಹ ಮನವಿ

ಸಮಗ್ರ ನ್ಯೂಸ್: ಮೈಸೂರು ಕೊಡಗು ರೈಲು ಮಾರ್ಗವನ್ನು ಶೀಘ್ರದಲ್ಲಿ ನಿರ್ಮಾಣ ಮಾಡಲಿದ್ದೇವೆ. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದಷ್ಟು ಬೇಗ ಭೂಸ್ವಾಧೀನ ಮಾಡಿ ಉಚಿತವಾಗಿ ಒದಗಿಸಿಕೊಡಬೇಕು. ಉಸ್ವಾಧೀನ ಬೇಗ ಆದರೆ ಮೈಸೂರು ಕೊಡಗು ರೈಲು ಯೋಜನೆ ತ್ವರಿತವಾಗಿ ಸಾಕಾರಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಮೈಸೂರು ಕೊಡಗು ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿಕೊಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಮೈಸೂರು ವಿಭಾಗದ ರೈಲ್ವೆ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ

ಮೈಸೂರು ಕೊಡಗು ರೈಲು ಮಾರ್ಗ ನಿರ್ಮಿಸಲು ಭೂ ಸ್ವಾಧೀನಕ್ಕೆ|ಸಂಸದ ಪ್ರತಾಪ್ ಸಿಂಹ ಮನವಿ Read More »

ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಿರಂತರ ಯೋಗ ಕೇಂದ್ರ ದ.ಕ. ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ

ಸಮಗ್ರ ನ್ಯೂಸ್: ಶಿವಮೊಗ್ಗ ವರ್ಷಿಣಿ ಯೋಗ ಶಿಕ್ಷಣ ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಸಹಯೋಗದೊಂದಿಗೆ ಕರ್ನಾಟಕ ರತ್ನ ಡಾ|ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ 6ನೇ ವರ್ಷದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ವಾಸವಿ ಪಬ್ಲಿಕ್ ಶಾಲೆ ಕೋಟೆ ರಸ್ತೆ ಶಿವಮೊಗ್ಗ ದಲ್ಲಿ ಫೆ. 25ರಂದು ನಡೆಯಿತು. 7 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸುಭಿಕ್ಷಾ ಬಾಲಾಡಿ ಪ್ರಥಮ ಸ್ಥಾನ, ತ್ರಿಷಾಲಿ ನೇರ್ಪು ತೃತೀಯ ಸ್ಥಾನ08 ರಿಂದ 10 ವರ್ಷದ

ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಿರಂತರ ಯೋಗ ಕೇಂದ್ರ ದ.ಕ. ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ Read More »

ಬೈಕ್ ಚಲಾಯಿಸಿದ ಅಪ್ರಾಪ್ತ ತಮ್ಮ|25 ಸಾವಿರ ರೂ. ದಂಡ ಪಾವತಿಸಿದ ಅಣ್ಣ!

ಸಮಗ್ರ ನ್ಯೂಸ್: ಅಪ್ರಾಪ್ತ ಮಗನಿಗೆ ಬೈಕ್ ಚಲಾಯಿಸಲು ಕೊಟ್ಟ ತಪ್ಪಿಗೆ ಮಾತೆಯೊಬ್ಬರಿಗೆ ರೂ. 16000 ದಂಡ ವಿಧಿಸಿ ನ್ಯಾಯಾಲಯದ ಕಲಾಪ ಮುಗಿಯುವವರೆಗೆ ಹಾಸನ ಜಿಲ್ಲೆ ಬೇಲೂರು ನ್ಯಾಯಾಲಯಕಳೆದ ವಾರ ತೀರ್ಪು ನೀಡಿತ್ತು. ಇದೀಗ ಅದೇ ರೀತಿಯ ಮತ್ತೊಂದು ಪ್ರಕರಣ ವರದಿಯಾಗಿದೆ. ಇಲ್ಲಿ ಅಪ್ರಾಪ್ತ ತಮ್ಮನಿಗೆ ಬೈಕ್ ಚಲಾಯಿಸಲು ಕೊಟ್ಟ ಅಣ್ಣ ಬರೋಬರಿ ರೂ. 25000 ದಂಡ ತೆತ್ತಿದ್ದಾನೆ. ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ್ದ ಅಣ್ಣನಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಜೆಎಂಎಫ್​ಸಿ ಕೋರ್ಟ್ 25 ಸಾವಿರ ರೂ. ದಂಡ

ಬೈಕ್ ಚಲಾಯಿಸಿದ ಅಪ್ರಾಪ್ತ ತಮ್ಮ|25 ಸಾವಿರ ರೂ. ದಂಡ ಪಾವತಿಸಿದ ಅಣ್ಣ! Read More »

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ

ಸಮಗ್ರ ನ್ಯೂಸ್: ಇಂದು ಸಂಜೆ ರಾಜ್ಯಸಭಾ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿಯೇ ದೇಶದ್ರೋಹದ ಘೋಷಣೆ ಮೊಳಗಿದೆ. ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆ ಕೂಗಿದ್ದಾರೆ. ನಾಸೀರ್‌ ಹುಸೇನ್‌ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್‌ ಜಿಂದಾಬಾದ್‌, ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾನೆ. ಇದೇ ವೇಳೆ ಪಕ್ಕದಲ್ಲಿದ್ದ ಕೆಲವರು ಆತನ ಬಾಯಿಮುಚ್ಚಿಸಿದ್ದಾರೆ. ಇದೀಗ ಪಾಕಿಸ್ತಾನ್ ಜಿಂದಾಬಾದ್​ ಎಂದು ಘೋಷಣೆ ಕೂಗಿರುವ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ Read More »

ಜಮಾತ್-ಎ-ಇಸ್ಲಾಮಿ ಮೇಲೆ ಮುಂದಿನ 5 ವರ್ಷಗಳವರೆಗೆ ನಿಷೇಧ/ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಸಮಗ್ರ ನ್ಯೂಸ್: ಮುಂದಿನ 5 ವರ್ಷಗಳವರೆಗೆ ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಈ ಕುರಿತು ಅಮಿತ್ ಶಾ ಟ್ವಿಟ್ ಮಾಡಿದ್ದು, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ವಿರುದ್ಧ ಶೂನ್ಯ ಸಹಿಷ್ಣುತೆಯ ಪ್ರಧಾನಿ ನರೇಂದ್ರ ಮೋದಿಯವರ ನೀತಿಯನ್ನು ಅನುಸರಿಸಿ ಸರ್ಕಾರವು ಜಮ್ಮು ಕಾಶ್ಮೀರದ ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನ ಐದು ವರ್ಷಗಳವರೆಗೆ ವಿಸ್ತರಿಸಿದೆ ಎಂದು ತಿಳಿಸಿದ್ದಾರೆ. ರಾಷ್ಟ್ರದ ಭದ್ರತೆ, ಸಮಗ್ರತೆ ಮತ್ತು ಸಾರ್ವಭೌಮತ್ವದ ವಿರುದ್ಧ ಸಂಘಟನೆಯು ತನ್ನ ಚಟುವಟಿಕೆಗಳನ್ನು ಮುಂದುವರಿಸುತ್ತಿರುವುದು ಕಂಡುಬಂದಿದೆ.

ಜಮಾತ್-ಎ-ಇಸ್ಲಾಮಿ ಮೇಲೆ ಮುಂದಿನ 5 ವರ್ಷಗಳವರೆಗೆ ನಿಷೇಧ/ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ Read More »

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ

ಸಮಗ್ರ ನ್ಯೂಸ್: ಟೀಮ್ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ದೀರ್ಘಕಾಲದ ಗಾಯದಿಂದಾಗಿ ಶಮಿ ಲಂಡನ್‍ನಲ್ಲಿ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮುಂಬರುವ ಐಪಿಎಲ್ 2024 ಮತ್ತು ಟಿ20 ವಿಶ್ವಕಪ್ 2024 ಸೇರಿದಂತೆ ಹಲವಾರು ಟೂರ್ನಿಗಳಿಂದ ಹೊರಗುಳಿಯಲಿದ್ದಾರೆ. ‘ನಾನು ಯಶಸ್ವಿಯಾಗಿ ಪಾದದ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಲು ಒಂದಷ್ಟು ಸಮಯ ಬೇಕಾಗುತ್ತದೆ. ಆದರೆ, ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸವಿದೆ’ ಎಂದು ಪೋಟೋಗಳ ಸಮೇತ

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ Read More »

ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಘಟನೆ/ ಕರ್ನಾಟಕದ ಹಣ ಬೇಡ ಎಂದು ಮೃತರ ಕುಟುಂಬ

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಕರ್ನಾಟಕದಿಂದ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದು, ಇದು ಹಲವು ವಿವಾದಗಳಿಗೆ ಕಾರಣವಾಗಿತ್ತು. ಆದರೆ ಇದೀಗ ಕರ್ನಾಟಕದ ಹಣ ಬೇಡ ಎಂದು ಮೃತರ ಕುಟುಂಬ ಹೇಳಿದೆ. ಕೇರಳದಲ್ಲಿ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟರೆ ಕರ್ನಾಟದಿಂದ ಏಕೆ ಹಣ ನೀಡಬೇಕು ಎಂದು ಚರ್ಚೆಗಳಾಗಿದ್ದವು. ನಮ್ಮ ರಾಜ್ಯದಲ್ಲಿ ಆನೆ ತುಳಿತದ ಸಾವಿಗೆ ಐದು ಲಕ್ಷ ನೀಡಲು ಕಷ್ಟಪಡುವ ಸರ್ಕಾರ ಹಿರಿಯ ನಾಯಕರನ್ನು ಮೆಚ್ಚಿಸಲು ಈ

ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಘಟನೆ/ ಕರ್ನಾಟಕದ ಹಣ ಬೇಡ ಎಂದು ಮೃತರ ಕುಟುಂಬ Read More »

ದ್ವೇಷ ಭಾಷಣ/ ಅಣ್ಣಾಮಲೈಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.ಸುಪ್ರೀಂ ಕೋರ್ಟ್‍ನಲ್ಲಿ, ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ಹಿಂದೆ ಕ್ರಿಶ್ಚಿಯನ್ ಮಿಷನರಿಗಳಿಗೆ ಸೇರಿದ ಎನ್‍ಜಿಒಗಳ ಕೈವಾಡ ಇದೆ ಎಂದು ಅಣ್ಣಾಮಲೈ ಸಂದರ್ಶನವೊಂದರಲ್ಲಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಅಣ್ಣಾಮಲೈ ವಿರುದ್ಧ ಸೇಲಂ ಮೂಲದ ಸಾಮಾಜಿಕ ಕಾರ್ಯಕರ್ತ ವಿ. ಪಿಯೂಷ್ ಅವರು ಈ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ವಜಾ ಮಾಡುವಂತೆ

ದ್ವೇಷ ಭಾಷಣ/ ಅಣ್ಣಾಮಲೈಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್ Read More »

ಸುಳ್ಳು ಜಾಹೀರಾತು/ ಪತಂಜಲಿ ಕಂಪನಿಗೆ ಶಾಕ್ ನೀಡಿದ ಸುಪ್ರೀಂ

ಸಮಗ್ರ ನ್ಯೂಸ್: ಬಾಬಾ ರಾಮ್‍ದೇವ್ ಮಾಲೀಕತ್ವದ ಪತಂಜಲಿ ಆರ್ಯುವೇದ ಕಂಪನಿಯ ಸುಳ್ಳು ಜಾಹೀರಾತಿನ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದು, ಪತಂಜಲಿ ಕಂಪನಿಯ ಜಾಹೀರಾತುಗಳಿಂದ ಇಡೀ ದೇಶವನ್ನೇ ಅವರು ದಾರಿ ತಪ್ಪಿಸುತ್ತಿದ್ದಾರೆ . ಇದು ನಿಜಕ್ಕೂ ದುರಾದೃಷ್ಟದ ಸಂಗತಿ. ಕೇಂದ್ರ ಸರ್ಕಾರ ಈ ಕುರಿತಾಗಿ ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ. ಇದರ ಜೊತೆಗೆ, ಸುಳ್ಳು ಮಾಹಿತಿ ನೀಡುವ ಔಷಧಗಳ, ಎಲೆಕ್ಟ್ರಾನಿಕ್

ಸುಳ್ಳು ಜಾಹೀರಾತು/ ಪತಂಜಲಿ ಕಂಪನಿಗೆ ಶಾಕ್ ನೀಡಿದ ಸುಪ್ರೀಂ Read More »