Editor

ಮಹಾರಾಷ್ಟ್ರದಲ್ಲಿ ಪ್ರಸಾದ ಸೇವಿಸಿ 300 ಕ್ಕೂ ಹೆಚ್ಚು ಜನರು ಅಸ್ವಸ್ಥ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಪ್ರಸಾದ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 300 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಲೋನಾರ್‌ನ ಸೋಮಥಾನ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮವಾದ ಹರಿಣಂ ಸಪ್ತಾಹದ ಕೊನೆಯ ದಿನದಂದು ರಾತ್ರಿ ಈ ಘಟನೆ ನಡೆದಿದೆ ಎಂದು ಬುಲ್ಧಾನ ಜಿಲ್ಲಾಧಿಕಾರಿ ಕಿರಣ್ ಪಾಟೀಲ್ ತಿಳಿಸಿದರು. ಹಾಸಿಗೆಗಳ ಕೊರತೆಯಿಂದಾಗಿ ಆಸ್ಪತ್ರೆಯ ಹೊರಗೆ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು, ಸಲೈನ್ ಬಾಟಲಿಗಳನ್ನು ಮರಗಳಿಗೆ ಕೊಕ್ಕೆಯಿಂದ ನೇತುಹಾಕಲಾಗಿದೆ. ಸೋಮಠಾಣಾ ಮತ್ತು ಖಾಪರಖೇಡ್

ಮಹಾರಾಷ್ಟ್ರದಲ್ಲಿ ಪ್ರಸಾದ ಸೇವಿಸಿ 300 ಕ್ಕೂ ಹೆಚ್ಚು ಜನರು ಅಸ್ವಸ್ಥ Read More »

ಇಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ

ಸಮಗ್ರ ನ್ಯೂಸ್: ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕೆಲವು ಕಾರ್ಯಕ್ರಮಗಳಿಗೆ ಚಾಲನೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ಹೊರಟು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗಾವಿಯಿಂದ ಹೊರಟು ಮಧ್ಯಾಹ್ನ 2.40ಕ್ಕೆ ಶಿವಮೊಗ್ಗ ತಲುಪಲಿದ್ದಾರೆ. ಮಧ್ಯಾಹ್ನ 3.15ಕ್ಕೆ ಶಿವಮೊಗ್ಗದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ಶಿವಮೊಗ್ಗದಿಂದ ಬೆಂಗಳೂರಿಗೆ

ಇಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ Read More »

ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್| ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ

ಸಮಗ್ರ ನ್ಯೂಸ್: ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಅಂಗವಾಗಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತು. ಆದರೆ ಘಟಿಕೋತ್ಸವ ದಿನದಂದು ಎಸ್.ಸೋಮನಾಥ್ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬುಧವಾರ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ. ಜಿಎಸ್​ಎಲ್​ವಿ ಮಾರ್ಕ್ 3 ಲಾಂಚರ್ ರೂಪಿಸುವಲ್ಲಿ ಸೋಮನಾಥ್ ಮುಖ್ಯಪಾತ್ರ ವಹಿಸಿದ್ದರು. ತಮ್ಮ ವೃತ್ತಿ ಜೀವನದ ಆರಂಭದ ದಿನಗಳಲ್ಲಿ ಪಿಎಸ್​ಎಲ್​ವಿ (Polar Satellite Launch Vehicle – PSLV) ಉಡಾವಣಾ ವಾಹನ ರೂಪಿಸುವ ತಂಡದಲ್ಲಿ

ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್| ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ Read More »

ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ: ಒಂದೇ ಹೋಟೆಲ್​ನಲ್ಲಿ ನಡೆಯಿತು ಕಾಂಗ್ರೆಸ್​ನ 2 ಪ್ರತ್ಯೇಕ ಸಭೆ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿವೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದ ಕಾಂಗ್ರೆಸ್​​ಗೆ ಇದೀಗ ಮೊದಲು ರಾಜ್ಯಸಭೆಯಲ್ಲಿ ಗೆಲ್ಲುವ ಟಾಸ್ಕ್​ ಇದೆ. ನಾಲ್ಕು ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ 5ನೇ ಅಭ್ಯರ್ಥಿ ಕಣದಲ್ಲಿರುವುದರಿಂದ ಆಡಳಿತರೂಢ ಕಾಂಗ್ರೆಸ್​​ಗೆ ಭಯ ಶುರುವಾಗಿದೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್​ವೊಂದರಲ್ಲಿ ಕಾಂಗ್ರೆಸ್​ನ ಎರಡು ಪ್ರತ್ಯೇಕ ಸಭೆಗಳು ನಡೆದಿದ್ದು, ಇದು ಕುತೂಹಲಕ್ಕೆ ಕಾರಣವಾಗಿದೆ. ಒಂದೇ ಹೋಟೆಲ್​ನಲ್ಲಿ ಒಂದು ಕಡೆ ಹಳೇ ಮೈಸೂರು ಭಾಗದ ಕಾಂಗ್ರೆಸ್​​ನ ಒಕ್ಕಲಿಗ ನಾಯಕರ ಸಭೆ ನಡೆದಿದ್ದರೆ,

ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ: ಒಂದೇ ಹೋಟೆಲ್​ನಲ್ಲಿ ನಡೆಯಿತು ಕಾಂಗ್ರೆಸ್​ನ 2 ಪ್ರತ್ಯೇಕ ಸಭೆ Read More »

ಸಿಗರೇಟ್‍ಗಳ ಮತ್ತು ಇತರೆ ತಂಬಾಕು ಉತ್ಪನ್ನಗಳ ತಿದ್ದುಪಡಿ ವಿಧೇಯಕ/ ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ

ಸಮಗ್ರ ನ್ಯೂಸ್: ಸಿಗರೇಟ್‍ಗಳ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಮಸೂದೆಯಿಂದ ಶಾಲೆಗಳಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ ಮತ್ತು ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ.ಗೆ ಏರಿಕೆ ಮಾಡಲಾಗಿದೆ

ಸಿಗರೇಟ್‍ಗಳ ಮತ್ತು ಇತರೆ ತಂಬಾಕು ಉತ್ಪನ್ನಗಳ ತಿದ್ದುಪಡಿ ವಿಧೇಯಕ/ ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ Read More »

ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆ ಫೈನಲ್/ ಕಾಂಗ್ರೆಸ್‍ಗೆ ಸಿಕ್ಕಿತು 17 ಸೀಟು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದ್ದು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಅಂತಿಮ ಹಂತಕ್ಕೆ ತಲುಪಿದೆ. ಅಖಿಲೇಶ್ ಯಾದವ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಡುವಿನ ಮಾತುಕತೆ ಯಶಸ್ವಿಯಾಗಿದ್ದು, ಕಾಂಗ್ರೆಸ್ 17, ಅಖಿಲೇಶ್ ಯಾದವ್ ಅವರ ಎಸ್‍ಪಿ, ಇತರರು 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆ ಫೈನಲ್/ ಕಾಂಗ್ರೆಸ್‍ಗೆ ಸಿಕ್ಕಿತು 17 ಸೀಟು Read More »

ವಾಹನ ಸವಾರರೇ ಎಚ್ಚರ/ ಭಾರತದಲ್ಲಿ ಈ 32 ಫಾಸ್ಟಾಗ್‍ಗಳಿಗೆ ಮಾತ್ರ ಅಧಿಕೃತ ಮಾನ್ಯತೆ

ಸಮಗ್ರ ನ್ಯೂಸ್: ನೋಂದಾಯಿತ ಬ್ಯಾಂಕ್‍ಗಳ ಅಧಿಕೃತ ಫಾಸ್ಟ್ರಾಗ್ ಪಟ್ಟಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಿಡುಡೆ ಮಾಡಿದ್ದು, ಭಾರತದಲ್ಲಿ ಒಟ್ಟು 32 ಬ್ಯಾಂಕ್‍ಗಳ ಫಾಸ್ಟ್ರಾಗ್‍ಗೆ ಮಾತ್ರ ಸರ್ಕಾರದ ಅಧಿಕೃತ ಮಾನ್ಯತೆ ಇದೆ. ಈ ಪಟ್ಟಿಯಲ್ಲಿ ಇಲ್ಲದೆ ಇರುವ ಬ್ಯಾಂಕ್‍ಗಳ ಫಾಸ್ಟ್ರಾಗ್ ಬಳಸುತ್ತಿದ್ದರೆ, ಮಾರ್ಚ್ 15ರ ಬಳಿಕ ಕಾರ್ಯನಿರ್ವಹಿಸುವುದಿಲ್ಲ. ಟೋಲ್‍ಗಳ ಶುಲ್ಕ ನಿರ್ವಹಣೆಯ ಹೊಣೆ ಹೊತ್ತಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಂಗಸಂಸ್ಥೆಯಾದ ಇಂಡಿಯನ್ ಹೈವೇಸ್ ಮ್ಯಾನೇಜ್‍ಮೆಂಟ್ ಕಂಪನಿ ಲಿ. (ಐಎಚ್‍ಎಂಸಿಎಲ್) ಇತ್ತೀಚೆಗೆ ಈ ಪಟ್ಟಿ ಬಿಡುಗಡೆ ಮಾಡಿದೆ. ಈ

ವಾಹನ ಸವಾರರೇ ಎಚ್ಚರ/ ಭಾರತದಲ್ಲಿ ಈ 32 ಫಾಸ್ಟಾಗ್‍ಗಳಿಗೆ ಮಾತ್ರ ಅಧಿಕೃತ ಮಾನ್ಯತೆ Read More »

ಚರ್ಚೆಗೆ ನಾವು ಸಿದ್ಧ/ ರೈತರಿಗೆ ಆಹ್ವಾನ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಕೃಷಿ ಸಚಿವ ಅರ್ಜುನ್ ಮುಂಡಾ ಎಲ್ಲಾ ವಿಷಯಗಳ ಬಗ್ಗೆ ಐದನೇ ಸುತ್ತಿನ ಚರ್ಚೆಗೆ ಪ್ರತಿಭಟನಾನಿರತ ರೈತರನ್ನು ಬುಧವಾರ ಆಹ್ವಾನಿಸಿದ್ದಾರೆ. ರೈತರ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ. ನಾವು ಮಾತುಕತೆಯ ಮೂಲಕ ಮಾತ್ರ ಪರಿಹಾರವನ್ನು ಕಂಡುಕೊಳ್ಳಬಹುದು. ನಾನು ಅವರನ್ನು ಚರ್ಚೆಗೆ ಆಹ್ವಾನಿಸಿದ್ದೇನೆ ಮತ್ತು ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು. ‘ದಿಲ್ಲಿ ಚಲೋ’ ಆಂದೋಲನದ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮನ್ಸೂರ್ ಮೋರ್ಚಾದ ರೈತ ಮುಖಂಡರು

ಚರ್ಚೆಗೆ ನಾವು ಸಿದ್ಧ/ ರೈತರಿಗೆ ಆಹ್ವಾನ ನೀಡಿದ ಕೇಂದ್ರ ಸರ್ಕಾರ Read More »

ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರ/ ಮುಜುರಾಯಿ ಇಲಾಖೆಗೆ ಕೊಡಬೇಕು ದ್ವಿಗುಣ ಆದಾಯ

ಸಮಗ್ರ ನ್ಯೂಸ್: ವಿಧಾನಸಭೆಯಲ್ಲಿ ಇಂದು ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರವಾಗಿದೆ. ದೇವಸ್ಥಾನಗಳು ಕೊಡುತ್ತಿದ್ದ ಆದಾಯವನ್ನು ಸರ್ಕಾರ ದ್ವಿಗುಣಗೊಳಿಸಿದ್ದು, ಮುಜರಾಯಿ ಇಲಾಖೆಗೆ ದೇವಾಲಯಗಳು ಕೊಡುತ್ತಿದ್ದ ಆದಾಯ ಕೂಡ ದ್ವಿಗುಣಗೊಳಿಸಲಾಗಿದೆ. 10 ಲಕ್ಷದಿಂದ ಒಂದು ಕೋಟಿ ರೂಪಾಯಿ ಆದಾಯ ಹೊಂದಿರುವ ದೇಗುಲಗಳು ಶೇ. 5 ರಷ್ಟು ಹಣ ಸಲ್ಲಿಸಬೇಕು. ಒಂದು ಕೋಟಿಗೂ ಅಧಿಕ ಆದಾಯ ಮೀರಿದ ದೇವಸ್ಥಾನಗಳು ಶೇಕಡ 10 ರಷ್ಟು ಹಣ ಸಲ್ಲಿಸಬೇಕು. ಅರ್ಚಕರು, ದೇಗುಲ ಸಿಬ್ಬಂದಿ ಮೃತಪಟ್ಟಾಗ 5 ಲಕ್ಷ ರೂ.

ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರ/ ಮುಜುರಾಯಿ ಇಲಾಖೆಗೆ ಕೊಡಬೇಕು ದ್ವಿಗುಣ ಆದಾಯ Read More »

ದ್ವಿತೀಯ ಪಿಯುಸಿ ಪರೀಕ್ಷೆ/ ಉಚಿತ ಸೇವೆ ನೀಡಲಿದೆ ಬಿಎಂಟಿಸಿ

ಸಮಗ್ರ ನ್ಯೂಸ್: ಬೆಂಗಳೂರಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸೇವೆ ನೀಡುವ ಶುಭ ಸುದ್ದಿಯನ್ನು ಬಿಬಿಎಂಟಿಸಿ ನೀಡಿದೆ. ಪರೀಕ್ಷೆಗಳು ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ ವೋಲ್ಲೋ ಬಸ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹದು. ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದ್ದು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ

ದ್ವಿತೀಯ ಪಿಯುಸಿ ಪರೀಕ್ಷೆ/ ಉಚಿತ ಸೇವೆ ನೀಡಲಿದೆ ಬಿಎಂಟಿಸಿ Read More »