Editor

ಸುಪ್ರೀಂಕೋರ್ಟ್ ‌ನ‌ ಹಿರಿಯ ವಕೀಲ ಫಾಲಿ‌ ಎಸ್. ನಾರಿಮನ್ ವಿಧಿವಶ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ (95)ಅವರು ಬುಧವಾರ(ಫೆ.21) ಬೆಳಗ್ಗೆ ದೆಹಲಿಯ ತಮ್ಮ ಸ್ವಗೃಹದಲ್ಲಿ ನಿಧನರಾದರು. 1950ರಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ವಕೀಲಿಕೆ ಆರಂಭಿಸಿದ್ದ ಅವರು, 70 ವರ್ಷಕ್ಕೂ ಹೆಚ್ಚಿನ ಕಾಲ ವಕೀಲ ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ದೇಶದ ಪ್ರಮುಖ ವಕೀಲರಲ್ಲಿ ಓರ್ವರಾಗಿದ್ದ ನಾರಿಮನ್ ಅವರು, 1972ರಲ್ಲಿ ದೇಶದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿಯೂ ಕಾರ್ಯನಿರ್ವಹಿಸಿದ್ದರು. 1991–2010ರ ವರೆಗೆ ಭಾರತದ ಬಾರ್ ಒಕ್ಕೂಟದ ಅಧ್ಯಕ್ಷರಾಗಿದ್ದ ನಾರಿಮನ್, 1989–2005ರವರೆಗೆ ಪ್ಯಾರಿಸ್ ನಲ್ಲಿ

ಸುಪ್ರೀಂಕೋರ್ಟ್ ‌ನ‌ ಹಿರಿಯ ವಕೀಲ ಫಾಲಿ‌ ಎಸ್. ನಾರಿಮನ್ ವಿಧಿವಶ Read More »

ವಿರಾಟ್ ಕೊಹ್ಲಿ ದಂಪತಿಗೆ ಗಂಡುಮಗು ಜನನ

ಸಮಗ್ರ ನ್ಯೂಸ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂದೆಯಾಗಿದ್ದು, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ವಾಮಿಕಾಳ ಪುಟ್ಟ ಸಹೋದರ ಈ ಲೋಕಕ್ಕೆ ಬಂದಿದ್ದಾನೆ” ಎಂದು ನಟಿ ಅನುಷ್ಕಾ ಶರ್ಮಾ ಹೇಳಿದ್ದಾರೆ. ತಮ್ಮ ಮಗುವಿನ ಹೆಸರನ್ನು ಅಕಾಯ್ ಎಂದು ಬಹಿರಂಗಪಡಿಸಿದ್ದಾರೆ. “ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಾವು ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಕೋರುತ್ತೇವೆ. ಈ ಸಮಯದಲ್ಲಿ ದಯವಿಟ್ಟು ನಮ್ಮ ಗೌಪ್ಯತೆಯನ್ನ ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ”

ವಿರಾಟ್ ಕೊಹ್ಲಿ ದಂಪತಿಗೆ ಗಂಡುಮಗು ಜನನ Read More »

ಉದ್ಯೋಗ ಕೊಡಿಸೋದಾಗಿ ನಂಬಿಸಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್

ಸಮಗ್ರ ನ್ಯೂಸ್: ಇತ್ತೀಚೆಗೆ ನಿರುದ್ಯೋಗಿ‌ಗಳು ಹೆಚ್ಚು. ಕೆಲಸಕ್ಕಾಗಿ ಹುಡುಕಾಟ ನಡೆಸುವ ಯುವಕರನ್ನೇ ಟಾರ್ಗೆಟ್ ಮಾಡಿ ಉದ್ಯೋಗ ಕೊಡಿಸೋದಾಗಿ ಹೇಳಿ ವಂಚನೆ ಮಾಡುವ ಘಟನೆ ನಡೆಯುತ್ತಿರುತ್ತದೆ. ಇದೇ ವಿಚಾರವಾಗಿ ದಂಪತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಹಾಗೂ ಮಧು ಜೋಡಿ, ಕೆಲಸಕ್ಕಾಗಿ ಅಲೆಯುವ ಯುವಕರನ್ನು ಹುಡುಕಿ ಸರ್ಕಾರಿ ನೌಕರಿ ಕೊಡಿಸೋದಾಗಿ ಕಾಗೆ ಹಾರಿಸುತ್ತಿದ್ದರು. ನಮಗೆ ದೊಡ್ಡ ದೊಡ್ಡ ರಾಜಕಾರಣಿಗಳ ಪರಿಚಯ ಇದೆ. ಅಲ್ಲದೆ ವಿವಿಧ‌ ಇಲಾಖೆಯ ಮುಖ್ಯಸ್ಥರು ಪರಿಚಯ ಇದ್ದಾರೆ. ಖಾಲಿ‌ ಇರುವ ಸರ್ಕಾರಿ‌ ಕೆಲಸ ಕೊಡಿಸೋದಾಗಿ‌ ಹೇಳಿ

ಉದ್ಯೋಗ ಕೊಡಿಸೋದಾಗಿ ನಂಬಿಸಿ ವಂಚನೆ: ಖತರ್ನಾಕ್ ದಂಪತಿ ಅರೆಸ್ಟ್ Read More »

ಅಕ್ರಮ ಆಮದು ಪರಿಣಾಮ| ಅಡಿಕೆ ಬೆಲೆಯಲ್ಲಿ ಭಾರೀ ಕುಸಿತ

ಸಮಗ್ರ ನ್ಯೂಸ್: ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಮತ್ತೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಭೀತಿ ಎದುರಾಗಿದೆ. ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಕರಾವಳಿ ಮಾರುಕಟ್ಟೆಗಳಿಗೆ ಆಗಮಿಸುತ್ತಿರುವುದು ಈ ಭೀತಿಗೆ ಕಾರಣವಾಗಿದೆ. ಅತ್ಯಂತ ಹೆಚ್ಚು ಗುಣಮಟ್ಟದ ಅಡಿಕೆ ಬೆಳೆಯುವ ಪ್ರದೇಶವಾದ ಕರಾವಳಿ ಭಾಗದ ಅಡಿಕೆಗೆ ಉತ್ತರ ಭಾರತದ ಹಲವೆಡೆ ಭಾರೀ ಬೇಡಿಕೆಯಿದೆ. ಈ ಬೇಡಿಕೆಗಳಿಗೆ ಅನುಗುಣವಾಗಿ ಕರಾವಳಿ ಭಾಗದ ಕೃಷಿಕರು ಅಡಿಕೆ ಬೆಳೆಯನ್ನು ಬೆಳೆಯುತ್ತಿದ್ದು, ಕೊರೊನಾ ಲಾಕ್ ಡೌನ್ ಬಳಿಕ ಅಡಿಕೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಧಾರಣೆ

ಅಕ್ರಮ ಆಮದು ಪರಿಣಾಮ| ಅಡಿಕೆ ಬೆಲೆಯಲ್ಲಿ ಭಾರೀ ಕುಸಿತ Read More »

ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ತಾಯಿ ಮಕ್ಕಳು| ಮಗು ಮೃತ್ಯು

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ರಸ್ತೆ ದಾಟುತ್ತಿದ್ದ ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದವರ ಮೇಲೆ ಆಂಧ್ರ ಸಾರಿಗೆ ಬಸ್ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದು. ಮತ್ತಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮತ್ತೊಂದು ಮಗು ಹಾಗೂ ತಾಯಿ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಹೊಸಕೋಟೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ತಾಯಿ ಮಕ್ಕಳು| ಮಗು ಮೃತ್ಯು Read More »

ಗಡಿಭಾಗದಲ್ಲಿನ ಆನೆದಾಳಿಗೆ ಕೇರಳದಿಂದ ಪರಿಹಾರ ತರಿಸಲು ಸಾಧ್ಯವೇ? – ಡಿ.ವಿ ಸದಾನಂದ ಗೌಡ ಪ್ರಶ್ನೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೇರಳ ಗಡಿ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡುತ್ತಿದ್ದು, ಇದಕ್ಕೆ ಕೇರಳ ಸರಕಾರದಿಂದ ಪರಿಹಾರ ತರಿಸಬಹುದೇ ಎಂದು ಕಾಂಗ್ರೆಸ್‌ ಅನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಕೇರಳ ಗಡಿ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡಿ ಸಾವಿರಾರು ಎಕರೆ ಕೃಷಿ ನಾಶ ಮಾಡುತ್ತಿವೆ. ಈ ಆನೆಗಳು ಕೇರಳ ಭಾಗದಿಂದ ಬರುತ್ತಿರುವುದರಿಂದ ಪರಿಹಾರವನ್ನು ಕೇರಳ ಸರಕಾರದಿಂದ ತರಿಸಿ

ಗಡಿಭಾಗದಲ್ಲಿನ ಆನೆದಾಳಿಗೆ ಕೇರಳದಿಂದ ಪರಿಹಾರ ತರಿಸಲು ಸಾಧ್ಯವೇ? – ಡಿ.ವಿ ಸದಾನಂದ ಗೌಡ ಪ್ರಶ್ನೆ Read More »

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ: ರಿಯಾಝ್ ಫರಂಗಿಪೇಟೆ

ಸಮಗ್ರ ನ್ಯೂಸ್: ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆದ ಎಸ್ ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆಯವರು ಪಕ್ಷದ ಕಾರ್ಯಕರ್ತರುಗಳಿಗೆ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದರಾಗಲು ಕರೆ ನೀಡಿ ಮಾತನಾಡಿದರು. ಕಳೆದ ಒಂದು ವರ್ಷಗಳಿಂದ ಸ್ಥಳೀಯ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಪಕ್ಷವು ಬಲಿಷ್ಠವಾಗುತ್ತಿದೆ, ಹಲವಾರು ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದು ಸೋಶಿಯಲ್ ಧಮಾಕರೆಟಿಕ್ ಪಾರ್ಟಿ

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ: ರಿಯಾಝ್ ಫರಂಗಿಪೇಟೆ Read More »

ದರ್ಶನ್, ಉಮಾಪತಿ ನಡುವೆ ಕಾಟೇರ ಟೈಟಲ್ ವಾರ್

ಸಮಗ್ರ ನ್ಯೂಸ್: ಚಾಲೆಂಜಿಗ್ ಸ್ಟಾರ್ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಗೌಡ ನಡುವೆ ಟಗ್ ಅಫ್ ವಾರ್ ಜೋರಾಗಿದೆ. ‘ಕಾಟೇರ’ ಸಿನಿಮಾದ ಮೂಲಕ ನಟ ದರ್ಶನ್ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಚಿತ್ರದ 50ನೇ ದಿನದ ಸೆಲೆಬ್ರೇಷನ್​ ಅನ್ನು ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಮಾಡಲಾಗಿದೆ. ಈ ವೇಳೆ ದರ್ಶನ್​ ಅವರು ವೇದಿಕೆ ಮೇಲೆ ಉಮಾಪತಿಗೆ ತಿರುಗೇಟು ನೀಡಿದ್ದಾರೆ. ‘ಕಾಟೇರ’ ಸಿನಿಮಾದ ಟೈಟಲ್​ ನೀಡಿದ್ದೇ ತಾವು ಎಂದು ಈ ಮೊದಲು ಉಮಾಪತಿ ಶ್ರೀನಿವಾಸ್​ ಗೌಡ ಅವರು ಹೇಳಿದ್ದರು. ಅದಕ್ಕೆ

ದರ್ಶನ್, ಉಮಾಪತಿ ನಡುವೆ ಕಾಟೇರ ಟೈಟಲ್ ವಾರ್ Read More »

ಪ್ರಾಜೆಕ್ಟ್ ಸೈಂಟಿಸ್ಟ್ ಜಾಬ್ ಗೆ ಹೈರಿಂಗ್! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ನ್ಯಾಷನಲ್ ಸೆಂಟರ್ ಫಾರ್ ಪೋಲಾರ್ & ಓಷನ್ ರಿಸರ್ಚ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 25 ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಪ್ರಾಜೆಕ್ಟ್ ಸೈಂಟಿಸ್ಟ್ -I- 18ಪ್ರಾಜೆಕ್ಟ್ ಸೈಂಟಿಸ್ಟ್-II – 7 ವಿದ್ಯಾರ್ಹತೆ:ನ್ಯಾಷನಲ್ ಸೆಂಟರ್ ಫಾರ್ ಪೋಲಾರ್ & ಓಷನ್ ರಿಸರ್ಚ್

ಪ್ರಾಜೆಕ್ಟ್ ಸೈಂಟಿಸ್ಟ್ ಜಾಬ್ ಗೆ ಹೈರಿಂಗ್! ಈಗಲೇ ಅಪ್ಲೈ ಮಾಡಿ Read More »

ಬೆಂಗಳೂರು: ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು

ಸಮಗ್ರ ನ್ಯೂಸ್: ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 1,506ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು. ಬೆಂಗಳೂರು ನಗರದ ಸರಕಾರಿ ಕಲಾ ಕಾಲೇಜು ಮುಂಭಾಗದಲ್ಲಿ ಪುಟ್ಟಣ್ಣ ಬೆಂಬಲಿಗರ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್ ಸೋತು ಮುಖಭಂಗ ಅನುಭವಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 19,152 ಮತದಾರರಿದ್ದು, ಈ ಉಪ ಚುನಾವಣೆಯಲ್ಲಿ 16,544 ಮಂದಿ ತಮ್ಮ ಮತವನ್ನು ಚಲಾಯಿಸಿದ್ದಾರೆ.

ಬೆಂಗಳೂರು: ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು Read More »