Editor

ಬಂಟ್ವಾಳ: ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹೀಂ ಮತ್ತು ಸಹಾಯಕ ಶಾಫಿ ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಹಲ್ಲೆಗೀಡಾದ ರಹೀಂ ಗಂಭೀರವಾಗಿ ಗಾಯಗೊಂಡಿದ್ದು ಅವರ ಸ್ಥಿತಿ ಚಿಂತಾಜನಕವಾಗಿದ್ದು, ಶಾಫಿ ಅವರ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ತಿಳಿದುಬಂದಿದೆ. […]

ಬಂಟ್ವಾಳ: ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿ Read More »

ಬಿಜೆಪಿಯಿಂದ ಶಾಸಕ ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಛಾಟನೆ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಗ್ ಶಾಕ್ ಎದುರಾಗಿದ್ದು, 6 ವರ್ಷಬಿಜೆಪಿಯಿಂದ ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿಯಲ್ಲಿರುವ ಎಸ್ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅಂತರ ಕಾಯ್ದುಕೊಂಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇಬ್ಬರೂ ಶಾಸಕರು ಮೂಲವಾಗಿ ಕಾಂಗ್ರೆಸ್‌ ಪಕ್ಷದವರಾಗಿದ್ದು, ಕಳೆದ ಅವಧಿಯಲ್ಲಿ ಕುಮಾರಸ್ವಾಮಿ ಸರ್ಕಾರವನ್ನು ಕೆಡವಿ

ಬಿಜೆಪಿಯಿಂದ ಶಾಸಕ ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಛಾಟನೆ Read More »

ಹೊರ ಮಾರುಕಟ್ಟೆಯಲ್ಲಿ 500ರ ಗಡಿ ದಾಟಿದ ಹೊಸ ಅಡಿಕೆ ಧಾರಣೆ

ಸಮಗ್ರ ನ್ಯೂಸ್: ಭಾರೀ ಮಳೆಯಿಂದ ಕೃಷಿ ಹಾನಿಯ ಆತಂಕದಲ್ಲಿರುವ ಮಧ್ಯೆಯೇ ಅಡಿಕೆ ಬೆಳೆಗಾರರ ಪಾಲಿಗೆ ಸಿಹಿ ಸುದ್ದಿ ಬಂದಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ. 500 ಗಡಿ ದಾಟಿ ಮುಂದಡಿ ಇಟ್ಟಿದೆ. ಇದರೊಂದಿಗೆ ಹೊಸ, ಸಿಂಗಲ್‌ ಚೋಲ್‌, ಡಬ್ಬಲ್‌ ಚೋಲ್‌ ಮೂರು ವಿಧದ ಅಡಿಕೆ ಧಾರಣೆಯು 500 ಗಡಿ ದಾಟಿ ದಾಖಲೆ ಬರೆದಿದೆ. ಹೊಸ ಅಡಿಕೆ ಧಾರಣೆ 500 ಗಡಿ ತಲುಪುವ ನಿರೀಕ್ಷೆಯ ಬಗ್ಗೆ ಮಾರುಕಟ್ಟೆ ಮೂಲಗಳು ತಿಳಿಸಿದ್ದವು. ಇಳುವರಿ ಕುಸಿತ ಮತ್ತು ಹವಾಮಾನ

ಹೊರ ಮಾರುಕಟ್ಟೆಯಲ್ಲಿ 500ರ ಗಡಿ ದಾಟಿದ ಹೊಸ ಅಡಿಕೆ ಧಾರಣೆ Read More »

ಹುಲಿ ದಾಳಿಗೆ ನವವಿವಾಹಿತ ಬಲಿ

ಸಮಗ್ರ ನ್ಯೂಸ್: 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಆದಿವಾಸಿ ಯುವಕನ ಮೇಲೆ ದಾಳಿ ನಡೆಸಿದ ಹುಲಿಯು ಆತನನ್ನು ಕೊಂದು ಹಾಕಿದ ಘಟನೆ ನಾಗರಹೊಳೆ ಉದ್ಯಾನದಂಚಿನ ಗುರುಪುರ ಗ್ರಾ.ಪಂ. ವ್ಯಾಪ್ತಿಯ ಸೊಳ್ಳೆಪುರದಲ್ಲಿ ಸಂಭವಿಸಿದೆ. ಹುಣಸೂರು ತಾಲೂಕಿನ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ 5ನೇ ಬ್ಲಾಕ್‌ನ ಕೃಷ್ಣ-ನಾಗವೇಣಿ ದಂಪತಿಯ ಪುತ್ರ ಹರೀಶ್‌ (29) ಮೃತಪಟ್ಟವರು. ಹರೀಶ್‌ ತಂದೆಯೊಂದಿಗೆ ಬೆಳಗ್ಗೆ ಜಮೀನು ಬಳಿಯ ಅರಣ್ಯ ಪ್ರದೇಶದಲ್ಲಿ ಮೇಕೆ ಮೇಯಿಸಲು ತೆರಳಿದ್ದಾನೆ. ತಂದೆ ಕೃಷ್ಣ ಅರಣ್ಯದ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಮೇಕೆ

ಹುಲಿ ದಾಳಿಗೆ ನವವಿವಾಹಿತ ಬಲಿ Read More »

ಹೆಚ್ಚುತ್ತಿರುವ ಕೋವಿಡ್ ಪ್ರಕರಣ| ಜ್ವರ, ಶೀತದ ಲಕ್ಷಗಳಿದ್ದರೆ ವಿದ್ಯಾರ್ಥಿಗಳಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ‌ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜ್ವರ, ಶೀತ ಕಂಡುಬಂದ ಮಕ್ಕಳಿಗೆ ರಜೆ ನೀಡಲು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹೆಚ್ಚುತ್ತಿರುವ ಕೋವಿಡ್ ಪ್ರಕರಣ| ಜ್ವರ, ಶೀತದ ಲಕ್ಷಗಳಿದ್ದರೆ ವಿದ್ಯಾರ್ಥಿಗಳಿಗೆ ರಜೆ Read More »

ಸಂಚಾರ ಪೊಲೀಸರಿಂದ ತಪಾಸಣೆ ವೇಳೆ ಬೈಕ್ ನಿಂದ ಮಗು ಬಿದ್ದು ಸಾವನ್ನಪ್ಪಿದ ಪ್ರಕರಣ| ಮೂವರು ಎಎಸ್ಐ ಗಳ ಅಮಾನತುಗೊಳಿಸಿ ಆದೇಶ

ಸಮಗ್ರ ನ್ಯೂಸ್: ಮಂಡ್ಯದಲ್ಲಿ ಸಂಚಾರ ಪೊಲೀಸರು ಬೈಕ್‌ ಅಡ್ಡಗಟ್ಟಿದ ಪರಿಣಾಮ ಅಪಘಾತ ಸಂಭವಿಸಿ, ಮೂರು ವರ್ಷದ ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಎಎಸ್‌ಐಗಳಾದ ನಾಗರಾಜು, ಜಯರಾಮು ಮತ್ತು ಗುರುದೇವ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ನಗರದ ಸ್ವರ್ಣಸಂದ್ರದ ಸಮೀಪ ಹೆದ್ದಾರಿಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಮಗು ಸಾವಿಗೀಡಾಗಿದೆ. ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಸಂಚಾರ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಹಿಂಬದಿಯಿಂದ

ಸಂಚಾರ ಪೊಲೀಸರಿಂದ ತಪಾಸಣೆ ವೇಳೆ ಬೈಕ್ ನಿಂದ ಮಗು ಬಿದ್ದು ಸಾವನ್ನಪ್ಪಿದ ಪ್ರಕರಣ| ಮೂವರು ಎಎಸ್ಐ ಗಳ ಅಮಾನತುಗೊಳಿಸಿ ಆದೇಶ Read More »

ಕೊಲ್ಲಂ‌‌‌ ಕಡಲತೀರದಲ್ಲಿ ಲೈಬೀರಿಯಾ ಸರಕು ಹಡಗಿನ ಕಂಟೇನರ್ ಗಳು ಪತ್ತೆ| ಹತ್ತಿರ ಸುಳಿಯದಂತೆ ನಾಗರಿಕರಿಗೆ ಸೂಚನೆ

ಸಮಗ್ರ ನ್ಯೂಸ್: ಕೇರಳ ಕರಾವಳಿಯಲ್ಲಿ ರವಿವಾರ ಮುಳುಗಿದ ಲೈಬೀರಿಯ ಸರಕು ಹಡಗಿನ ಕಂಟೈನರ್‌ಗಳು ಸೋಮವಾರ ಬೆಳಿಗ್ಗೆ ಕೊಲ್ಲಂ ಕರಾವಳಿಯ ವಿವಿಧ ಭಾಗಗಳಲ್ಲಿ ದಡಕ್ಕೆ ಬಂದು ಸೇರಿದೆ. ಘಟನೆ ಬಳಿಕ ಸಂಭಾವ್ಯ ತೈಲ ಸೋರಿಕೆ ಅಥವಾ ರಾಸಾಯನಿಕ ಸೋರಿಕೆ ಭೀತಿಯ ಹಿನ್ನೆಲೆ ರಾಜ್ಯವು ತುರ್ತು ಪರಿಸ್ಥಿತಿಯನ್ನು ಘೋಷಿಸಿತ್ತು. ಈವರೆಗೆ ಕೊಲ್ಲಂ ಕರಾವಳಿಯಲ್ಲಿ ಎಂಟು ಕಂಟೇನರ್‌ಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಮೊದಲ ಕಂಟೇನರ್ ಮಧ್ಯರಾತ್ರಿಯ ಸುಮಾರಿಗೆ ಕರುಣಗಪ್ಪಳ್ಳಿಯ ಚೆರಿಯಾಝಿಕಲ್‌ನಲ್ಲಿ ಪತ್ತೆಯಾಗಿದೆ. ಬಳಿಕ ಚವರದ ಪರಿಮಳಂ ಬೀಚ್, ಶಕ್ತಿಕುಲಂಗರ ಮತ್ತು ಮಾದಮ್ಮ

ಕೊಲ್ಲಂ‌‌‌ ಕಡಲತೀರದಲ್ಲಿ ಲೈಬೀರಿಯಾ ಸರಕು ಹಡಗಿನ ಕಂಟೇನರ್ ಗಳು ಪತ್ತೆ| ಹತ್ತಿರ ಸುಳಿಯದಂತೆ ನಾಗರಿಕರಿಗೆ ಸೂಚನೆ Read More »

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರು| ಇನ್ನೆರಡು ದಿನವು ವರುಣಾರ್ಭಟ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆಯ ಮಳೆಯ ಅಬ್ಬರ ಮುಂದುವರಿದಿದೆ. ಕೆಲವೆಡೆ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನವಿಡೀ ಧಾರಾಕಾರ ಮಳೆಯಾಗಿದೆ. ಗಾಳಿಯೂ ಜೋರಾಗಿತ್ತು. ಪಶ್ಚಿಮ ಘಟ್ಟ ಹಾಗೂ ಘಟ್ಟದ ಮೇಲ್ಭಾಗದಲ್ಲೂ ಭಾರಿ ಮಳೆಯಾಗಿದ್ದರಿಂದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಕ್ಷೇತ್ರಕ್ಕೆ ಭೇಟಿ ನೀಡಿರುವ ಭಕ್ತರು ಸ್ನಾನಘಟ್ಟದ ಬಳಿ ನದಿಯ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಾಗಮಂಡಲದಲ್ಲಿ 22.50 ಸೆಂ.ಮೀ ಮಳೆ ಸುರಿದಿದ್ದು, ಕಾವೇರಿ ನದಿ

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರು| ಇನ್ನೆರಡು ದಿನವು ವರುಣಾರ್ಭಟ ಸಾಧ್ಯತೆ Read More »

ಪ್ರಜ್ವಲ್ ರೇವಣ್ಣ ಬಳಿ ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರ ಪೋಟೋಗಳಿತ್ತು| ಕೋರ್ಟ್ ನಲ್ಲಿ ಸಾಕ್ಷ್ಯ ನುಡಿದ ಡ್ರೈವರ್ ಕಾರ್ತಿಕ್

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕಾರಿನ ಚಾಲಕ ಕಾರ್ತಿಕ್‌ ಸೋಮವಾರ(ಮೇ.26) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿ 2000ಕ್ಕೂ ಹೆಚ್ಚು ಮಹಿಳೆಯರ ಛಾಯಾಚಿತ್ರಗಳು ಮತ್ತು ಸುಮಾರು 40-50 ವೀಡಿಯೊಗಳು ಇದ್ದವು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ವಲ್‌ ರೇವಣ್ಣ ತನ್ನ ಮೊಬೈಲ್‌ ಫೋನ್‌ ಅನ್ನು ಕಾರಿನಲ್ಲಿಯೇ ಬಿಟ್ಟು ಜಯನಗರದ ಗೆಳತಿ ಮನೆಯೊಳಗೆ ಹೋಗಿದ್ದ. ನನಗೆ

ಪ್ರಜ್ವಲ್ ರೇವಣ್ಣ ಬಳಿ ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರ ಪೋಟೋಗಳಿತ್ತು| ಕೋರ್ಟ್ ನಲ್ಲಿ ಸಾಕ್ಷ್ಯ ನುಡಿದ ಡ್ರೈವರ್ ಕಾರ್ತಿಕ್ Read More »

‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ಇನ್ನಿಲ್ಲ!! ವಿಚಿತ್ರ ಸೋಂಕಿನಿಂದ ಬಳಲುತ್ತಿದ್ದ ನಟ

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯಲ್ಲಿ ನಟಿಸಿ ಹೆಸರುವಾಸಿ ಆಗಿದ್ದ ನಟ ಶ್ರೀಧರ್ ನಾಯಕ್‌ ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರಿಗೆ ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಅವರು ಗುರುತೇ ಸಿಗದಷ್ಟು ಬದಲಾಗಿ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಕಳೆಬರಹವನ್ನು ಇಡಲಾಗಿದೆ. ಅವರಿಗೆ 47 ವರ್ಷ

‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ಇನ್ನಿಲ್ಲ!! ವಿಚಿತ್ರ ಸೋಂಕಿನಿಂದ ಬಳಲುತ್ತಿದ್ದ ನಟ Read More »