Editor

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ಮೇ 31ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿ

ಸಮಗ್ರ ನ್ಯೂಸ್: ಭಾರೀ ಮಳೆ ಕಾರಣದಿಂದ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಅಮರ್ ಜಾಲು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ನಿವಾಸಿ ವಿಜೇಶ್ ಜೈನ್ (27) ಮೃತ ಸಹಾಯಕ ಪವರ್ ಮ್ಯಾನ್. ವಿಜೇಶ್ ಅವರು HT ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಮೃತ ವಿಜೇಶ್ ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ದಂಪತಿಯ ಎರಡನೇ ಮಗ.

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿ Read More »

ಮಂಗಳೂರು: ಮನೆ ಮೇಲೆ ಧರೆ ಕುಸಿದ ಪ್ರಕರಣ| ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಸಮಗ್ರ ನ್ಯೂಸ್:;ಮನೆ ಮೇಲೆ ಧರೆ ಕುಸಿದು ಬಿದ್ದು ಜನರು ಸಿಲುಕಿದ್ದ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿದೆ. ತಾಯಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದ್ದು, ಆದರೆ ಇಬ್ಬರು ಮಕ್ಕಳು ಕೂಡಾ ಅಸುನೀಗಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು ಮೂವರ ರಕ್ಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಶುಕ್ರವಾರ (ಮೇ 30) ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಬಿದ್ದಿತ್ತು. ತೋಟದ ನಡುವಿರುವ ಮನೆಯ

ಮಂಗಳೂರು: ಮನೆ ಮೇಲೆ ಧರೆ ಕುಸಿದ ಪ್ರಕರಣ| ಮೃತರ ಸಂಖ್ಯೆ ಮೂರಕ್ಕೆ ಏರಿಕೆ Read More »

ಮಂಗಳೂರು: ಧರೆ ಕುಸಿದು ಮಹಿಳೆ ಮತ್ತು ಬಾಲಕಿ ಸಾವು

ಸಮಗ್ರ ನ್ಯೂಸ್: ಮಂಗಳೂರು ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದೇರಳಕಟ್ಟೆಯ ಮೊಂಟೆದಪದವು ಎಂಬಲ್ಲಿ ಫಾತಿಮಾ ಎಂಬ 7 ವರ್ಷದ ಬಾಲಕಿ ಹಾಗೂ ಮಹಿಳೆ ವ್ಯಾಪಕ ಮಳೆಯಿಂದ ಭೂಕುಸಿತ ಉಂಟಾಗಿ ಮೃತಪಟ್ಟಿದ್ದಾರೆ. ಜೋಕಟ್ಟೆ ಗ್ರಾಮ ಪಂಚಾಯತ್ ಹತ್ತಿರ ಭೂಕುಸಿತ ಉಂಟಾಗಿದ್ದು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ

ಮಂಗಳೂರು: ಧರೆ ಕುಸಿದು ಮಹಿಳೆ ಮತ್ತು ಬಾಲಕಿ ಸಾವು Read More »

ಹೆಂಡತಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಹೆಂಡತಿ ಕಾಟಕ್ಕೆ ಬೇಸತ್ತು ಡೆತ್​ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ. ತನ್ನದೇ ಕಂಪ್ಯೂಟರ್ ಶಾಪ್​​ನಲ್ಲಿ ವೈಯರ್​ದಿಂದ ನೇಣು ಬಿಗಿದುಕೊಂಡು ಸುನೀಲ್ ಮೂಲಿಮನಿ (33) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ತನ್ನ ಸಾವಿಗೆ ಹೆಂಡತಿ ಕಾರಣ ಅಂತಾ ಡೆತ್ ನೋಟ್ ಬರೆದಿಟ್ಟಿದ್ದಾರೆ. ಸದ್ಯ ಉದ್ಯಮಬಾಗ ಠಾಣೆಯಲ್ಲಿ 108 ಸೆಕ್ಷನ್ ಅಡಿಯಲ್ಲಿ ಕೇಸ್​​ ದಾಖಲಾಗಿದೆ. ನಾಲ್ಕು ವರ್ಷದ ಹಿಂದೆ ಪೂಜಾ ಎಂಬುವವರನ್ನು ಸುನೀಲ್​ ಮದುವೆಯಾಗಿದ್ದರು. ಮೂರು ವರ್ಷದ

ಹೆಂಡತಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ Read More »

ಹಿರಿಯ ಸಾಹಿತಿ ಹೆಚ್.ಎಸ್ ವೆಂಕಟೇಶ ಮೂರ್ತಿ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್‌ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ.80 ವರ್ಷ ವಯಸ್ಸಿನ ಎಚ್‌ಎಸ್‌ವಿ ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಚ್.ಎಸ್.

ಹಿರಿಯ ಸಾಹಿತಿ ಹೆಚ್.ಎಸ್ ವೆಂಕಟೇಶ ಮೂರ್ತಿ ಇನ್ನಿಲ್ಲ Read More »

ಭಾರೀ ಮಳೆ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್; ಭಾರೀ ಮಳೆಯ ಹಿನ್ನೆಲೆ ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮೇ.30ರ ಇಂದು ರಜೆ ಘೋಷಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮಕ್ಕಳು ಸೇರಿದಂತೆ ಜನ ಸಾಮಾನ್ಯರು ನದಿ, ಹಳ್ಳ ಕೊಳ್ಳ ಸಮುದ್ರ ತೀರದತ್ತ ಹೋಗದಂತೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ಭಾರೀ ಮಳೆ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಜೈಶ್ ಎ ಮೊಹಮ್ಮದ್ ಸಂಘಟನೆ ಹೆಸರಲ್ಲಿ ಪುತ್ತೂರಿನ ಹಿಂದೂ ಮುಖಂಡನಿಗೆ ಕೊಲೆ ಬೆದರಿಕೆ

ಸಮಗ್ರ ನ್ಯೂಸ್: ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಬಾಷೆಯಲ್ಲಿ ವಾಟ್ಸ್‌ಅಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರಿಗೆ ಈ ಬೆದರಿಕೆ ಬಂದಿದ್ದು, ಬೆದರಿಕೆ ಆಡಿಯೋದಲ್ಲಿ ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ, ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ, ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ, ಆದರೆ

ಜೈಶ್ ಎ ಮೊಹಮ್ಮದ್ ಸಂಘಟನೆ ಹೆಸರಲ್ಲಿ ಪುತ್ತೂರಿನ ಹಿಂದೂ ಮುಖಂಡನಿಗೆ ಕೊಲೆ ಬೆದರಿಕೆ Read More »

ಐಪಿಎಲ್ ಕ್ರಿಕೆಟ್| ಫೈನಲ್ ಗೆ ಲಗ್ಗೆ‌ ಇಟ್ಟ ಆರ್ ಸಿಬಿ

ಸಮಗ್ರ ನ್ಯೂಸ್: ಐಪಿಎಲ್‌ ಪಂದ್ಯಾವಳಿಯ ಗುರುವಾರ ನಡೆದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಅವರದ್ದೇ ನೆಲದಲ್ಲಿ ಸೋಲುಣಿಸಿ ಅತ್ಯಮೋಘ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಬಿಗಿ ದಾಳಿಗೆ ನಲುಗಿದ ಪಂಜಾಬ್‌ ಕಿಂಗ್ಸ್‌ 101 ರನ್ ಗಳ ಸಣ್ಣ ಮೊತ್ತಕ್ಕೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಆರ್ ಸಿಬಿ 10 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 106

ಐಪಿಎಲ್ ಕ್ರಿಕೆಟ್| ಫೈನಲ್ ಗೆ ಲಗ್ಗೆ‌ ಇಟ್ಟ ಆರ್ ಸಿಬಿ Read More »

ಮಂಗಳೂರಿನಲ್ಲಿ ಸರಣಿ ಹತ್ಯೆ| ಹಿರಿಯ ಪೊಲೀಸ್ ಅಧಿಕಾರಿಗಳ ಎತ್ತಂಗಡಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ನಡೆದ‌ ಸರಣಿ ಹತ್ಯೆ ಹಿನ್ನಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ರನ್ನು ವರ್ಗಾವಣೆಗೊಳಿಸಿದ್ದು ಅವರ ಸ್ಥಾನಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಿಸಲಾಗಿದೆ. ದ.ಕ ಜಿಲ್ಲಾ ಎಸ್ ಪಿ ಯತೀಶ್ ರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಎಸ್ ಪಿಯಾಗಿ ಅರುಣ್ ಅವರನ್ನು ನೇಮಿಸಲಾಗಿದೆ. ಉಡುಪಿ ನೂತನ ಕಮಿಷನರ್ ಆಗಿ ಹರಿರಾಮ್ ಶಂಕರ್ ರನ್ನು ನೇಮಿಸಿ ಆದೇಶಿಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಪೊಲೀಸ್

ಮಂಗಳೂರಿನಲ್ಲಿ ಸರಣಿ ಹತ್ಯೆ| ಹಿರಿಯ ಪೊಲೀಸ್ ಅಧಿಕಾರಿಗಳ ಎತ್ತಂಗಡಿ Read More »