Editor

ಲೈವ್ ನಲ್ಲಿ ಕುಳಿತಿದ್ದ ವೇಳೆ ಶೂಟ್ಔಟ್… ಮಾರಿಸ್ ಎಂಬಾತನಿಂದ ಗುಂಡಿನ ದಾಳಿ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಫೇಸ್‌ಬುಕ್‌ ಲೈವ್ ನಲ್ಲಿ ಇರುವಾಗಲೇ ಶೂಟ್ಔಟ್ ನಡೆದಿದೆ. ದಹಿಸರ್ ಪ್ರದೇಶದ MHB ಕಾಲೋನಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದು. ಉದ್ದವ್ ಠಾಕ್ರೆ ಬಣದ ಶಿವಸೇನಾ ನಾಯಕನ ಪುತ್ರನ ಅಭಿಷೇಕ್ ಘೋಸಲ್ಕರ್ ಮೇಲೆ 5 ಬಾರಿ ಫೈರಿಂಗ್ ಮಾಡಿ ಗುಂಡಿನ ದಾಳಿ ಮಾಡಿದ ವ್ಯಕ್ತಿ ತಾನೂ ಶೂಟ್ ಮಾಡಿಕೊಂಡು ಸಾವಿಗೀಡಾಗಿದ್ದಾನೆ. ಇಬ್ಬರ ಮದ್ಯ ಹಳೆ ದ್ವೇಷವಿತ್ತು. ಆದರೆ ಇತ್ತೀಚೆಗೆ ಸಂಧಾನವು ನಡೆದಿತ್ತು. ಅಭಿಷೇಕ್ ಜೊತೆ ವೆಬ್ ಕಾಸ್ಟ್ ವೇಳೆ ಮಾರಿಸ್ ಈ ಫೈರಿಂಗ್

ಲೈವ್ ನಲ್ಲಿ ಕುಳಿತಿದ್ದ ವೇಳೆ ಶೂಟ್ಔಟ್… ಮಾರಿಸ್ ಎಂಬಾತನಿಂದ ಗುಂಡಿನ ದಾಳಿ Read More »

ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ನಿರ್ಮಲಾ ಸೀತಾರಾಮನ್| ಬ್ಲ್ಯಾಕ್ ಪೇಪರ್ ಮಂಡಿಸಲು ಮುಂದಾದ ಕಾಂಗ್ರೆಸ್| ಆಡಳಿತ ವಿಪಕ್ಷಗಳ ನಡುವೆ ಪೇಪರ್ ಫೈಟ್

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ವೇತ ಪತ್ರ ಮಂಡಿಸಿದ್ದಾರೆ. 2004ರಿಂದ 2014ರವರೆಗೆ 10 ವರ್ಷ ಯುಪಿಎ ಅಧಿಕಾರದಲ್ಲಿತ್ತು. ಇದಾದ ನಂತರ 2014ರಿಂದ 2024, ಇಲ್ಲಿವರೆಗೆ 10 ವರ್ಷ ಎನ್​ಡಿಎ ಆಡಳಿತ ಇದೆ. ಈ ಎರಡೂ ಆಡಳಿತದಲ್ಲಿ ಆರ್ಥಿಕ ನಿರ್ವಹಣೆ ಹೇಗಿತ್ತು, ಆರ್ಥಿಕ ಪರಿಸ್ಥಿತಿ ಹೇಗಿತ್ತು ಎಂದು ವಿವರಿಸಿ ಸರ್ಕಾರ ಶ್ವೇತಪತ್ರ ಹೊರಡಿಸಿದೆ. ಇನ್ನು ಕಾಂಗ್ರೆಸ್‌ ಅಧಿಕಾರಾವಧಿಯ 10 ವರ್ಷಗಳಲ್ಲಿನ ಆರ್ಥಿಕ ಸ್ಥಿತಿಗತಿ ಕುರಿತು ಕೇಂದ್ರದ ಬಿಜೆಪಿ ಸರ್ಕಾರ ಶ್ವೇತ ಪತ್ರ

ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ನಿರ್ಮಲಾ ಸೀತಾರಾಮನ್| ಬ್ಲ್ಯಾಕ್ ಪೇಪರ್ ಮಂಡಿಸಲು ಮುಂದಾದ ಕಾಂಗ್ರೆಸ್| ಆಡಳಿತ ವಿಪಕ್ಷಗಳ ನಡುವೆ ಪೇಪರ್ ಫೈಟ್ Read More »

ಬೆಳ್ಳಾರೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು| ಚಾಲಕ ಪವಾಡಸದೃಶ ಪಾರು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬೆಳ್ಳಾರೆ – ಸುಬ್ರಹ್ಮಣ್ಯ ಹೆದ್ದಾರಿಯ ಪಾಜಪಳ್ಳ ಬಳಿ ಸಂಭವಿಸಿದೆ. ಬೆಳ್ಳಾರೆಯಿಂದ ನಿಂತಿಕಲ್ಲಿಗೆ ತೆರಳುತ್ತಿದ್ದ ಆಲ್ಟೋ ಕಾರು (KA19P9807) ಪಾಜಪಳ್ಳ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಾಲ್ಕು ಪಲ್ಟಿಯಾಗಿ ಪಕ್ಕದ ಚರಂಡಿಗೆ ಉರುಳಿದೆ. ಇದರಿಂದ ವಿದ್ಯುತ್ ಕಂಬಗಳು ಮುರಿದಿದ್ದು ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಚಾಲಕನ ಅತಿವೇಗದ ಅಜಾಗರೂಕತೆಯ ಚಾಲನೆಯೇ ಅವಘಡಕ್ಕೆ

ಬೆಳ್ಳಾರೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು| ಚಾಲಕ ಪವಾಡಸದೃಶ ಪಾರು Read More »

ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ| ಭಕ್ತಿ ಸಂಭ್ರಮದ ಬ್ರಹ್ಮ ರಥೋತ್ಸವ

ಸಮಗ್ರ ನ್ಯೂಸ್: ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗುತ್ತಿದ್ದು, ಮಂಗಳವಾರ ರಾತ್ರಿ ಶ್ರೀ ದೇವರ ಬ್ರಹ್ಮ ರಥೋತ್ಸವ ನೆರದ ಭಕ್ತರ ಸಮ್ಮುಖದಲ್ಲಿ ಜರುಗಿತು. ಈ ವೇಳೆ ಶ್ರೀ ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ ಜರುಗಿತು. ಪೂರ್ವ ಸಂಪ್ರದಾಯದಂತೆ ವಿವಿಧ ವೈದಿಕ ‌, ಧಾರ್ಮಿಕ ಕಾರ್ಯಕ್ರಮಗಳು ನಡೆದು ರಥೋತ್ಸವ ಜರುಗಿತು.

ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ| ಭಕ್ತಿ ಸಂಭ್ರಮದ ಬ್ರಹ್ಮ ರಥೋತ್ಸವ Read More »

ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಸಮಗ್ರ ನ್ಯೂಸ್: ಸುಳ್ಯದ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದಿನಿಂದ (ಫೆ.8) ಫೆ.10 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ. 8ರಂದು ಪೂರ್ವಾಹ್ನ ಗಂಟೆ 8-30ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಪೂರ್ವಾಹ್ನ ಗಂಟೆ 10ಕ್ಕೆ ಉಗ್ರಾಣ ತುಂಬುವುದು, ಪೂರ್ವಾಹ್ನ ಗಂಟೆ 12-30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ 7.30 ರಿಂದ ರಂಗಪೂಜೆಗಳು ನಡೆಯಲಿದೆ. ಫೆ.9ರಂದು ಪೂರ್ವಾಹ್ನ 9ಗಂಟೆಯಿಂದ ಶತರುದ್ರಾಭಿಷೇಕ, ಅಶ್ವಥನಾರಾಯಣ ಪೂಜೆ, 108 ಕಾಯಿ

ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಆರೋಪ| ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ| ಶಾಸಕ ಸುನಿಲ್ ಕುಮಾರ್ ಗೆ ಕಗ್ಗಂಟಾಗುತ್ತಾ ಪ್ರಕರಣ

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಅವ್ಯವಹಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಾರ್ಕಳ ತಾಲ್ಲೂಕಿನ ಬೈಲೂರಿನ ಎರ್ಲಪಾಡಿ ಗ್ರಾಮದ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಕೋರಿ ಸಿಎಂ ಸಿದ್ದರಾಮಯ್ಯಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಪತ್ರ ಬರೆದಿದ್ದರು. ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಆರೋಪ| ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ| ಶಾಸಕ ಸುನಿಲ್ ಕುಮಾರ್ ಗೆ ಕಗ್ಗಂಟಾಗುತ್ತಾ ಪ್ರಕರಣ Read More »

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಲವ್ವಿಡವ್ವಿ|ಮನನೊಂದು ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ತಾನು ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಕಣ್ಣಾರೆ ನೋಡಿದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಮೃತನ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಗನ ಅತ್ಮಹತ್ಯೆಗೆ ಯುವತಿಯೇ ಪ್ರಚೋದನೆ ನೀಡಿದ್ದಾಳೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ. ದಿವ್ಯಾ ಎಂಬಾಕೆಗೆ ಈ ಹಿಂದೆ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿತ್ತು. ಬಳಿಕ ಆಕೆ ವಿಚ್ಚೇದನ ಪಡೆದಿದ್ದಳು. ವಿಚ್ಚೇದನ ಪಡೆದ ಸ್ವಲ್ಪ ದಿನದಲ್ಲೇ

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಲವ್ವಿಡವ್ವಿ|ಮನನೊಂದು ಯುವಕ ಆತ್ಮಹತ್ಯೆ Read More »

ವಿಟ್ಲ: ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ದರೋಡೆ| ಕೋಟ್ಯಾಂತರ ರೂ. ನಗದು, ಚಿನ್ನಾಭರಣ ದೋಚಿದ ಕಳ್ಳರು

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ವಿಟ್ಲ ಕರ್ಣಾಟಕ ಬ್ಯಾಂಕಿನ ಅಡ್ಯನಡ್ಕ ಶಾಖೆಯಲ್ಲಿ ಗುರುವಾರ ಭಾರೀ ಕಳ್ಳತನ ನಡೆದಿದ್ದು, ಕೋಟ್ಯಾಂತರ ರೂ. ಮೌಲ್ಯದ ನಗ- ನಗದನ್ನು ದೋಚಿದ ಘಟನೆ ನಡೆದಿದೆ. ಸುಮಾರು 2 -3 ಕೋಟಿ ರೂ. ನಗದು ಮತ್ತು ಬಂಗಾರ ಕಳ್ಳರ ಪಾಲಾಗಿದೆ. ಕೃತ್ಯವು ಫೆ. 7ರ ಬುಧವಾರ ರಾತ್ರಿ 2.30 ರಿಂದ ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕರ್ಣಾಟಕ ಬ್ಯಾಂಕಿನ ಅಡ್ಯನಡ್ಕ ಶಾಖೆಯು ಕಲ್ಲಡ್ಕ ಕಾಂಞಂಗಾಡ್‌ ಅಂತಾರಾಜ್ಯ ಹೆದ್ದಾರಿಯ ಅಂಚಿನಲ್ಲಿದೆ.

ವಿಟ್ಲ: ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ದರೋಡೆ| ಕೋಟ್ಯಾಂತರ ರೂ. ನಗದು, ಚಿನ್ನಾಭರಣ ದೋಚಿದ ಕಳ್ಳರು Read More »

ಕೊಪ್ಪಳದ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫೀವರ್ ಕಾಟ|ದೇವಸ್ಥಾನದಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್: ಕೊಪ್ಪಳದ ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫೀವರ್ ಕಾಟ ಜೋರಾಗಿದ್ದು, ವ್ಯಾಪಕವಾಗಿ ಹರಡಿದೆ, ಜ್ವರ ಮತ್ತು ಮೈಕೈ ನೋವಿನಿಂದ ಜನರು ನರಳಾಡುತ್ತಿದ್ದಾರೆ. ಸ್ಥಳಕ್ಕೆ ಕುಷ್ಟಗಿ ತಹಶೀಲ್ದಾರ್ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ದೇವಸ್ಥಾನದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಎಲ್ಲಾ ರೋಗಿಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸುತ್ತೇವೆ ಎಂದು ತಹಶೀಲ್ದಾರ್ ಹೇಳಿದ್ದಾರೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್​ತಂಗಡಿ, ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮಕ್ಕೆ ಭೇಟಿ ಕೊಡಲು ಜಿಲ್ಲಾಧಿಕಾರಿ

ಕೊಪ್ಪಳದ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫೀವರ್ ಕಾಟ|ದೇವಸ್ಥಾನದಲ್ಲಿ ಚಿಕಿತ್ಸೆ Read More »

ಕೆರಗೋಡು ಹನುಮಧ್ವಜ ತೆರವು ವಿವಾದ/ ನಾಳೆ ಬಂದ್ ಆಗುತ್ತಾ ಮಂಡ್ಯ?

ಸಮಗ್ರ ನ್ಯೂಸ್: ಕೆರೆಗೋಡು ಹನುಮಧ್ವಜ ತೆರವು ವಿವಾದ ಹಾಗೆಯೇ ಮುಂದುವರಿದಿದ್ದು, ಫೆ. 9ಕ್ಕೆ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀರಾಮ ಭಜನಾ ಮಂಡಳಿ ಮಂಡ್ಯ ಜಿಲ್ಲೆ ಹಾಗೂ ಕೆರೆಗೋಡು ಬಂದ್‍ಗೆ ಕರೆ ನೀಡಿದೆ. ಜಿಲ್ಲಾಡಳಿತ ಬಂದ್ ಮಾಡದಂತೆ ಮನವಿ ಮಾಡಿದರೂ ಕೂಡ ಮಣೆ ಹಾಕದ ಹಿಂದೂಪರ ಸಂಘಟನೆಗಳಿಗೆ, ಬಜರಂಗಸೇನೆ ಸೇರಿ ಹಲವು ಸಂಘಟನೆಗಳಿಂದ ಬಂದ್ ಗೆ ಬೆಂಬಲ ಸೂಚಿಸಲಾಗಿದೆ. ಫೆ. 7ರಂದು ಕರೆ ನೀಡಲಾಗಿದ್ದ ಬಂದ್ ಅನ್ನು ಮಂಡ್ಯ ಜಿಲ್ಲಾಡಳಿತದ ಮನವಿ ಮೇರೆಗೆ ಸಮಾನ ಮನಸ್ಕರ

ಕೆರಗೋಡು ಹನುಮಧ್ವಜ ತೆರವು ವಿವಾದ/ ನಾಳೆ ಬಂದ್ ಆಗುತ್ತಾ ಮಂಡ್ಯ? Read More »