Editor

ದೆಹಲಿ ವಿಧಾನಸಭಾ ಚುನಾವಣೆ| ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಸಮಗ್ರ ನ್ಯೂಸ್: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ. ಬಿಗಿ ಭದ್ರತೆಯ ನಡುವೆ 19 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ಇನ್ನು ಕಲ್ಕಾಜಿ ಕ್ಷೇತ್ರದ ಎಎಪಿ ಅಭ್ಯರ್ಥಿಯೂ ಆಗಿರುವ ದೆಹಲಿ ಸಿಎಂ ಅತಿಶಿಯವರು ಮಹಾರಾಣಿ ಬಾಗ್‌ನಲ್ಲಿರುವ ಮೀರಾಬಾಯಿ ಡಿಎಸ್‌ಇಯು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ. ಮತ ಎಣಿಕೆ ಕೇಂದ್ರದಲ್ಲೇ ತೀವ್ರ ಆತಂಕಕ್ಕೆ ಒಳಗಾಗಿರುವ ಅತಿಶಿಯವರು ಪದೇ ಪದೇ ಅಧಿಕಾರಿಗಳಿಂದ ಮಾಹಿತಿ […]

ದೆಹಲಿ ವಿಧಾನಸಭಾ ಚುನಾವಣೆ| ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ Read More »

ಅಪ್ರಾಪ್ತೆ ಮೇಲೆ ದೌರ್ಜನ್ಯ ಆರೋಪ| ಮಾಜಿ ಸಿಎಂ ಬಿಎಸ್ ವೈಗೆ ನಿರಾಳ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠವು ತೀರ್ಪು ಪ್ರಕಟಿಸಿದ್ದು, ನ್ಯಾ.ಎಂ ನಾಗಪ್ರಸನ್ನ ಅವರು ಬಿ ಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದರು. ವಿಚಾರಣೆ ಆರಂಭವಾದ ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ

ಅಪ್ರಾಪ್ತೆ ಮೇಲೆ ದೌರ್ಜನ್ಯ ಆರೋಪ| ಮಾಜಿ ಸಿಎಂ ಬಿಎಸ್ ವೈಗೆ ನಿರಾಳ Read More »

ನಟ ಸೋನುಸೂದ್ ಗೆ ಬಂಧನ ಭೀತಿ

ಸಮಗ್ರ ನ್ಯೂಸ್: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಪಂಜಾಬ್ನ ಲುಧಿಯಾನದ ಕ್ರಿಮಿನಲ್ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ. 10 ಲಕ್ಷ ರೂ.ಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹೇಳಲು ಕರೆಸಲಾಗಿದ್ದ ಸೂದ್ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಲುಧಿಯಾನದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ರಮಣ್ಪ್ರೀತ್ ಕೌರ್ ಈ ವಾರಂಟ್ ಹೊರಡಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಸೋನು ಸೂದ್ ಅವರಿಗೆ ಸಮನ್ಸ್ (ಗಳು) ಅಥವಾ ವಾರಂಟ್ (ಗಳು) ನೀಡಲಾಗಿದೆ, ಆದರೆ ಅವರು ಹಾಜರಾಗಲು ವಿಫಲರಾಗಿದ್ದಾರೆ

ನಟ ಸೋನುಸೂದ್ ಗೆ ಬಂಧನ ಭೀತಿ Read More »

ರಜೆ ನಿರಾಕರಿಸಿದ್ದಕ್ಕೆ ಮೇಲಾಧಿಕಾರಿಗಳಿಗೆ ಚಾಕುವಿನಿಂದ ಇರಿದ ಭೂಪ!!

ಸಮಗ್ರ ನ್ಯೂಸ್: ರಜೆಯನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡ ಸರ್ಕಾರಿ ನೌಕರನೊಬ್ಬ ತನ್ನ ಮೇಲಧಿಕಾರಿ ಸೇರಿದಂತೆ ನಾಲ್ವರಿಗೆ ಚಾಕು ಇರಿದಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದಲ್ಲಿ ನಿನ್ನೆ (ಫೆ.06) ನಡೆದಿದೆ. ಅಮಿತ್ ಕುಮಾರ್ ಸರ್ಕಾರ್ ಎಂಬಾತ ಕೋಲ್ಕತದ ನ್ಯೂ ಟೌನ್ ಟೆಕ್ನಿಕಲ್ ಬಿಲ್ಡಿಂಗ್‌ನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ. ರಜೆಯ ಅವಶ್ಯಕತೆ ಇದ್ದ ಕಾರಣ ಅಮಿತ್​ ಸರ್ಕಾರ್, ರಜೆ ನೀಡುವಂತೆ ಮಾಡಿದ್ದರು. ಆದರೆ, ಅವರ ಮೇಲಧಿಕಾರಿ ರಜೆ ಅರ್ಜಿಯನ್ನು ತಿರಸ್ಕರಿಸಿದರು. ಇದಾದ ಬಳಿಕ ನಿನ್ನೆ ಮಧ್ಯಾಹ್ನ 12 ಗಂಟೆ

ರಜೆ ನಿರಾಕರಿಸಿದ್ದಕ್ಕೆ ಮೇಲಾಧಿಕಾರಿಗಳಿಗೆ ಚಾಕುವಿನಿಂದ ಇರಿದ ಭೂಪ!! Read More »

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್|ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಣೆ

ಸಮಗ್ರ ನ್ಯೂಸ್: ಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ಸಿಕ್ಕಿದೆ. ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್‌ ಏಕಸದಸ್ಯ ಪೀಠ ಶುಕ್ರವಾರ (ಫೆ.07) ನಿರಾಕರಿಸಿದೆ. ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಪ್ರಕರಣದ ಮೂಲ ದೂರದಾರ ಹಾಗೂ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಜ. 27ರಂದು ಪೂರ್ಣಗೊಳಿಸಿ ಕಾದಿರಿಸಿರುವ ತೀರ್ಪನ್ನು

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್|ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಣೆ Read More »

ಧರ್ಮಸ್ಥಳ: ಡಿ. ವೀರೇಂದ್ರ ಹೆಗ್ಗಡೆ ಸಹೋದರನಿಗೆ ಬಿಗ್ ಶಾಕ್| 7.59 ಎಕ್ರೆ ಕೃಷಿ ಭೂಮಿ ಅನುದಾನ ರದ್ದುಗೊಳಿಸಿ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ರಾಜ್ಯಸಭಾ ಸಂಸದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ. ಹರ್ಷೇಂದ್ರ ಕುಮಾರ್ ಹೆಗಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೀಡಿದ್ದ 7.59 ಎಕರೆ ಕೃಷಿ ಭೂಮಿಯ ಅನುದಾನವನ್ನು ರದ್ದುಗೊಳಿಸಿ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯ ಆದೇಶ ಹೊರಡಿಸಿದೆ. ಮೈಸೂರು ಭೂ ಮಂಜೂರಾತಿ ನಿಯಮಗಳು, 1969 ರ ಅಡಿಯಲ್ಲಿ 1972 ರಲ್ಲಿ ಹರ್ಷೇಂದ್ರ ಅವರಿಗೆ ಭೂಮಿಯನ್ನು ನೀಡಲಾಗಿತ್ತು. ಆಗ ಸಲ್ಲಿಸಿದ ಅಫಿಡವಿಟ್‌ನಲ್ಲಿ, ವಾರ್ಷಿಕ 1,200 ರೂ. ಆದಾಯವಿರುವ ‘ಭೂರಹಿತ’

ಧರ್ಮಸ್ಥಳ: ಡಿ. ವೀರೇಂದ್ರ ಹೆಗ್ಗಡೆ ಸಹೋದರನಿಗೆ ಬಿಗ್ ಶಾಕ್| 7.59 ಎಕ್ರೆ ಕೃಷಿ ಭೂಮಿ ಅನುದಾನ ರದ್ದುಗೊಳಿಸಿ ಕೋರ್ಟ್ ಆದೇಶ Read More »

ಬೆಳ್ತಂಗಡಿ: ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾದ ದೆವ್ವ!!

ಸಮಗ್ರ ನ್ಯೂಸ್: ಕೆಲವರು ದೆವ್ವ, ಭೂತ ಇದ್ಯಾವುದನ್ನು ನಂಬಲ್ಲ. ಅದ್ಯಾವುದೂ ಭೂಮಿ ಮೇಲೆ ಇಲ್ಲ. ಸತ್ತ ಮೇಲೆ ಎಲ್ಲರೂ ಮಣ್ಣಲ್ಲಿ ಹೂತು ಹೋಗುತ್ತೇವೆ ಎನ್ನುತ್ತಾರೆ. ಇನ್ನು ಕೆಲವರು ದೆವ್ವಗಳು ಇವೆ ಎಂಬ ಬಲವಾದ ನಂಬಿಕೆಗಳನ್ನು ಹೊಂದಿರುತ್ತಾರೆ. ಕೆಲ ಅನುಭವವಗಳನ್ನೂ ವ್ಯಕ್ತಪಡಿಸುವುದು ಸಾಮಾನ್ಯ. ಸದ್ಯ ದ.ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದಲ್ಲಿ ಇಂಥಹುದ್ದೇ ಘಟನೆ ನಡೆದಿದೆ. ದೆವ್ವದ ಕಾಟಕ್ಕೆ ಇಡೀ ಕುಟುಂಬವೇ ಭಯದಲ್ಲೇ ಕಳೆದ ಮೂರು ತಿಂಗಳಿನಿಂದ ಜೀವನ ಸಾಗಿಸುತ್ತಿದ್ದು, ಆತಂಕದಲ್ಲಿ ಮುಳುಗಿದ್ದಾರೆ. ಮಾಲಾಡಿ ಗ್ರಾಮದ ಉಮೇಶ್

ಬೆಳ್ತಂಗಡಿ: ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾದ ದೆವ್ವ!! Read More »

ವಿಶ್ವದ ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿ ಬಿಡುಗಡೆ| ‘ವಿಶ್ವಗುರು’ವಿನ ದೇಶಕ್ಕೆ ಯಾವ ಸ್ಥಾನ ಗೊತ್ತಾ?

ಸಮಗ್ರ ನ್ಯೂಸ್: ಫೋರ್ಬ್ಸ್‌ ಸಂಸ್ಥೆಯಾಗಿ ವಿಶ್ವದ ಟಾಪ್‌ 10 ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಭಾರತ ಸ್ಥಾನ ಪಡೆದುಕೊಂಡಿಲ್ಲ. ಈ ಪಟ್ಟಿಯಲ್ಲಿ ಯುಎಸ್‌ಎ ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಚೀನಾ ಇದೆ ಹಾಗೂ ರಷ್ಯಾ ಮೂರನೇ ಸ್ಥಾನ ಪಡೆದುಕೊಂಡಿದೆ. ನಾಯಕತ್ವ, ಆರ್ಥಿಕ ಪ್ರಭಾವ, ರಾಜಕೀಯ ಶಕ್ತಿ, ಉತ್ತಮ ಅಂತರರಾಷ್ಟ್ರೀಯ ಮೈತ್ರಿಗಳು ಮತ್ತು ಮಿಲಿಟರಿ ಶಕ್ತಿ ಸೇರಿದಂತೆ ಹಲವಾರು ನಿರ್ಣಾಯಕ ಅಂಶಗಳ ಆಧಾರದ ಮೇಲೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಪಟ್ಟಿಯನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಕರ್ನಾಟಕ

ವಿಶ್ವದ ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿ ಬಿಡುಗಡೆ| ‘ವಿಶ್ವಗುರು’ವಿನ ದೇಶಕ್ಕೆ ಯಾವ ಸ್ಥಾನ ಗೊತ್ತಾ? Read More »

ಸುಳ್ಯ ಅಂಜಲಿ ಮಾಂಟೆಸ್ಸರಿ ಸ್ಕೂಲ್ ನ ವಾರ್ಷಿಕ ದಿನಾಚರಣೆ

ಅಂಜಲಿ ಮಾಂಟೆಸ್ಸರಿ ಸ್ಕೂಲ್ ನ ವಾರ್ಷಿಕ ದಿನಾಚರಣೆಯು ಫೆ.6 ರಂದು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಯ ಅಧ್ಯಕ್ಷರಾದ ಸದಾನಂದ ಮಾವಾಜಿ ಉದ್ಘಾಟಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶುಭಕರ ಬಿ. ಸಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಡೆನ್ ಶಿಕ್ಷಣ ಸಂಸ್ಥೆ ಬೆಂಗಳೂರು ಇದರ ನಿರ್ದೇಶಕರಾದ ಎನ್ ಆರ್ ಹರಿಕುಮಾರ್ ಹಾಗೂ ಗೌರವ ಅತಿಥಿಯಾಗಿ ಚಂದ್ರಶೇಖರ್ ಪೇರಲು ಮತ್ತು ಕೆ.ಟಿ ವಿಶ್ವನಾಥ ವಹಿಸಿದ್ದರು. ಕಾರ್ಯಕ್ರಮದ

ಸುಳ್ಯ ಅಂಜಲಿ ಮಾಂಟೆಸ್ಸರಿ ಸ್ಕೂಲ್ ನ ವಾರ್ಷಿಕ ದಿನಾಚರಣೆ Read More »

ಮಂಜೇಶ್ವರ: ಬಸ್ ನಲ್ಲಿ ಕಳ್ಳತನ ಮಾಡಿದ ಮೂವರು ಮಹಿಳೆಯರ ಬಂಧನ

ಸಮಗ್ರ ನ್ಯೂಸ್: ಬಸ್ಸಿನಲ್ಲಿ ಪ್ರಯಾಣಿಕರ ಹಣ ಹಾಗೂ ಮೊಬೈಲ್ ಫೋನ್ ಕಳವುಗೈದ ಆರೋಪದಲ್ಲಿ ಮೂವರು ಮಹಿಳೆಯರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಮಧ್ಯಾಹ್ನ ಕರ್ನಾಟಕ ಸಾರಿಗೆ ನಿಗಮದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕುಂಜತ್ತೂರಿನ ತಾರಾಮಣಿ ಎಂಬವರ ಮೊಬೈಲ್ ಫೋನ್, ಎಂಟು ಸಾವಿರ ರೂ.ನಗದು ಒಳಗೊಂಡ ಬ್ಯಾಗನ್ನು ಕಳವಾಗಿತ್ತು. ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ವಿವಿಧ ಸ್ಥಳ ಗಳಲ್ಲಿನ ಸಿಸಿಟಿವಿ ಕ್ಯಾಮರಾಗಳನ್ನು ಕೇಂದ್ರೀಕರಿಸಿ ನಡೆಸಿದ ತನಿಖೆಯಂತೆ ಪೊಲೀಸರು ಶಂಕಿತ

ಮಂಜೇಶ್ವರ: ಬಸ್ ನಲ್ಲಿ ಕಳ್ಳತನ ಮಾಡಿದ ಮೂವರು ಮಹಿಳೆಯರ ಬಂಧನ Read More »