Editor

ಇಂದು ಕೇಂದ್ರ ಮಧ್ಯಂತರ ಬಜೆಟ್ ಮಂಡನೆ| ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹಲವು ಘೋಷಣೆ ಸಾಧ್ಯತೆ

ಸಮಗ್ರ ನ್ಯೂಸ್: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಗೆ ಮುನ್ನ ಕೊನೆಯ ಆಯವ್ಯಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಮಧ್ಯಂತರ ಬಜೆಟ್ ಅನ್ನು ಮಧ್ಯಮ ವರ್ಗ, ರೈತರು, ಅಸಂಘಟಿತ ವಲಯದ ಕಾರ್ಮಿಕರಿಗೆ ಬಂಪರ್‌ ಘೋಷಣೆಯಾಗುವ ಸಾಧ್ಯತೆ ಇದೆ. 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಮೋದಿ ಸರ್ಕಾರ ಭರವಸೆ ನೀಡಿತ್ತು, ಅದು ಇನ್ನೂ ಈಡೇರಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಪಿಎಂ

ಇಂದು ಕೇಂದ್ರ ಮಧ್ಯಂತರ ಬಜೆಟ್ ಮಂಡನೆ| ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹಲವು ಘೋಷಣೆ ಸಾಧ್ಯತೆ Read More »

ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪಿ.ಎಸ್ ದಿನೇಶ್ ಕುಮಾರ್ ನೇಮಕ

ಸಮಗ್ರ ನ್ಯೂಸ್: ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಕನ್ನಡಿಗ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ನ್ಯಾಯಮೂರ್ತಿ ಕುಮಾರ್ ಅವರು ಈಗ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ನ್ಯಾಯಮೂರ್ತಿ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಜನವರಿ 19ರಂದು ಶಿಫಾರಸು ಮಾಡಿತ್ತು. ನ್ಯಾ.ಪಿ.ಎಸ್. ದಿನೇಶ್ ಕುಮಾರ್ ಫೆಬ್ರವರಿ

ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಪಿ.ಎಸ್ ದಿನೇಶ್ ಕುಮಾರ್ ನೇಮಕ Read More »

ಕೈತೊಳೆಯುವ ವೇಳೆ ನೀರಿನ ಟ್ಯಾಂಕ್ ಒಡೆದು ಮಹಿಳೆ ಸಾವು| ಕಾರ್ಕಳದ ನಂದಳಿಕೆಯಲ್ಲಿ ದುರ್ಘಟನೆ

ಸಮಗ್ರ ನ್ಯೂಸ್: ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಊಟ ಮುಗಿಸಿ ಕೈ ತೊಳೆಯುವ ಸಂದರ್ಭ ಪಕ್ಕದಲ್ಲಿದ್ದ ಹಳೆಯ ನೀರಿನ ಟ್ಯಾಂಕ್ ಒಡೆದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ನಂದಳಿಕೆ ಎಂಬಲ್ಲಿ ಬುಧವಾರ ನಡೆದಿದೆ. ಮೃತ ಮಹಿಳೆಯನ್ನು ಶ್ರೀಲತಾ (50) ಎಂದು ಗುರುತಿಸಲಾಗಿದೆ.ಘಟನೆಯಲ್ಲಿ ಮಹಿಳೆಯ ಮಗಳು ಪೂಜಾ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಮಹಮ್ಮಾಯಿ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಊಟ ಮಾಡಿದ ಬಳಿಕ ಕೈ ತೊಳೆಯುವ

ಕೈತೊಳೆಯುವ ವೇಳೆ ನೀರಿನ ಟ್ಯಾಂಕ್ ಒಡೆದು ಮಹಿಳೆ ಸಾವು| ಕಾರ್ಕಳದ ನಂದಳಿಕೆಯಲ್ಲಿ ದುರ್ಘಟನೆ Read More »

ಶ್ರೀರಾಮನ ಕಟೌಟ್​ ಬಿದ್ದು ಪಾದಚಾರಿಗೆ ಗಾಯ

ಸಮಗ್ರ ನ್ಯೂಸ್: ಶ್ರೀರಾಮನ ಕಟೌಟ್​ ಬಿದ್ದು ಪಾದಚಾರಿಗೆ ಗಾಯವಾದ ಘಟನೆ ಬೆಂಗಳೂರಿನ HAL ರಸ್ತೆಯಲ್ಲಿ ನಡೆದಿದೆ. ಶ್ರೀರಾಮ ಮಂದಿರ ಉದ್ಘಾಟನೆ ದಿನದಂದು ಹೆಚ್​ಎಎಲ್​ ವಿಮಾನ ನಿಲ್ದಾಣದ ಪಕ್ಕದಲ್ಲೆ ಶ್ರೀರಾಮನ ಬೃಹತ್ ಕಟೌಟ್ ಹಾಕಲಾಗಿತ್ತು. ಆದರೆ, ಕಾರ್ಯಕ್ರಮ ಮುಗಿದು 10 ದಿನಗಳಾದರೂ ಕಟೌಟ್ ತೆರವು ಗೊಳಿಸದ ಹಿನ್ನೆಲೆ ಪಾದಚಾರಿ ಮಾರ್ಗದಲ್ಲಿ ಸಾಗುತ್ತಿದ್ದವರ ಮೇಲೆ ಕಟೌಟ್ ಬಿದ್ದಿದೆ. ಇದರಿಂದ ಮೂರು ಜನ ಪಾದಚಾರಿಗಳಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಟೌಟ್ ಬಿದ್ದ ಸ್ಥಳದಲ್ಲೇ ಖಾಸಗಿ

ಶ್ರೀರಾಮನ ಕಟೌಟ್​ ಬಿದ್ದು ಪಾದಚಾರಿಗೆ ಗಾಯ Read More »

ರಸ್ತೆ ನಿರ್ಮಾಣ ವಿರೋಧಿಸಿ ಮೀನುಗಾರರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯ ಕಾಸರಕೋಡು ಮೀನುಗಾರರ ಬಂದರು ಬಳಿ ಹೈಡ್ರಾಮಾ ನಡೆದಿದ್ದು, ಹೊನ್ನಾವರ ತಾಲೂಕಿನ ಕಾಸರಕೋಡು ಬಳಿ ಚತುಷ್ಪಥ ರಸ್ತೆ ನಿರ್ಮಾಣ ವಿರೋಧಿಸಿ ಮೀನುಗಾರರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಎಎಸ್‌ಪಿ ಭೇಟಿ ನೀಡಿದ್ರೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಪ್ರತಿಭಟನೆ ಹತ್ತಿಕ್ಕಲು 200ಕ್ಕೂ ಹೆಚ್ಚು ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ. ಈ ವೇಳೆ ಮಹಿಳೆಯರು ಹಾಗೂ ಪುರುಷರಿಗೆ ಸೇರಿದಂತೆ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಹೊನ್ನಾವರ ಸಮೀಪ ನಿರ್ಮಾಣ ಆಗುತ್ತಿರುವ ಹೊಸ ಬಂದರಿಗೆ

ರಸ್ತೆ ನಿರ್ಮಾಣ ವಿರೋಧಿಸಿ ಮೀನುಗಾರರಿಂದ ಪ್ರತಿಭಟನೆ Read More »

ದೊಡ್ಮನೆಯಿಂದ ಹೊರ ಬಂದ ಬಳಿಕ ಕಿಚ್ಚ ಸುದೀಪ್ ಜೊತೆ ಪಾರ್ಟಿ

ಸಮಗ್ರ ನ್ಯೂಸ್: ಬಿಗ್ ಬಾಸ್​ ಶೋ ಮುಗಿದು ಮನೆಯಿಂದ ಹೊರಗೆ ಬಂದ ಬಳಿಕ ಸ್ಪರ್ಧಿಗಳೆಲ್ಲಾ ಒಂದೆಡೆ ಸೇರಿ ಪಾರ್ಟಿ ಮಾಡಿದ್ದಾರೆ. ಇವರೆಲ್ಲರ ಜೊತೆ ಸುದೀಪ್ ಕೂಡ ಸೇರಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಭಾಗ್ಯಶ್ರೀ, ಸಿರಿ, ನೀತು ವನಜಾಕ್ಷಿ, ಅವಿನಾಶ್​, ಮೈಕಲ್​ ಅಜಯ್​, ಪವಿ ಪೂವಪ್ಪ, ರಕ್ಷಕ್​ ಬುಲೆಟ್​, ತುಕಾಲಿ ಸಂತೋಷ್ ಎಲ್ಲರೂ ಕಿಚ್ಚ ಸುದೀಪ್ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ​ಈಶಾನಿ, ನಮ್ರತಾ, ವರ್ತೂರು ಸಂತೋಷ್​, ಕಾರ್ತಿಕ್ ಮಹೇಶ್​ ಹಾಗೂ ವಿನಯ್ ಕೂಡ ಪಾರ್ಟಿಯಲ್ಲಿ ಭಾಗಿಯಾಗಿದ್ರು.

ದೊಡ್ಮನೆಯಿಂದ ಹೊರ ಬಂದ ಬಳಿಕ ಕಿಚ್ಚ ಸುದೀಪ್ ಜೊತೆ ಪಾರ್ಟಿ Read More »

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ರಾಜೀನಾಮೆ| ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ನೇಮಕ

ಸಮಗ್ರ ನ್ಯೂಸ್: ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಬುಧವಾರ ಚಂಪೈ ಸೊರೆನ್ ಅವರನ್ನು ಜಾರ್ಖಂಡ್​​ನ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಜಾರ್ಖಂಡ್‌ನ ಹಾಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಇಡಿ ಬಂಧಿಸಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ. ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಇದನ್ನು ಅಂಗೀಕರಿಸಿದ್ದಾರೆ. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಇಡಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ರಾಂಚಿಯಲ್ಲಿ ವಿಚಾರಣೆ ನಡೆಸುತ್ತಿದೆ.

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ರಾಜೀನಾಮೆ| ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ನೇಮಕ Read More »

ರಾಜ್ಯಮಟ್ಟದ ಎಸ್ಎಸ್ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ. ಇಲ್ಲಿದೆ ವೇಳಾಪಟ್ಟಿ:26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ28 -02-2024 : ತೃತೀಯ ಭಾಷೆ- ಹಿಂದಿ,

ರಾಜ್ಯಮಟ್ಟದ ಎಸ್ಎಸ್ಎಲ್ ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ Read More »

ಕಡಬ: ಮಾರಕ‌ ಡೆಂಗ್ಯೂಗೆ ಯುವಕ ಬಲಿ

ಸಮಗ್ರ ನ್ಯೂಸ್: ಮಾರಕ ಡೆಂಗ್ಯೂ ಜ್ವರಕ್ಕೆ ಯುವಕನೊರ್ವ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ. ಮೃತನನ್ನು ಇಲ್ಲಿನ ನಿವಾಸಿ ಶಿಜು(31) ಎಂದು ಗುರುತಿಸಲಾಗಿದೆ. ಶಿಜು ರವಿವಾರದಂದು ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಕಡಬದ ಕ್ಲಿನಿಕ್ ವೊಂದರಲ್ಲಿ ಚಿಕಿತ್ಸೆ ಪಡೆದು ಜ್ವರ ಪರೀಕ್ಷೆ ಮಾಡಿದ್ದರು. ಈ ವೇಳೆ ಡೆಂಗ್ಯೂ ಜ್ವರ ಪತ್ತೆಯಾಗಿದೆ. ನಂತರ ಮನೆಗೆ ಬಂದ ಶಿಜು ಅವರಿಗೆ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ

ಕಡಬ: ಮಾರಕ‌ ಡೆಂಗ್ಯೂಗೆ ಯುವಕ ಬಲಿ Read More »

ಸಕ್ಕರೆ ನಾಡಿನ ಜನರೇ, ನಾವು ಮಾಡಿದ ತಪ್ಪನ್ನು ನೀವೂ ಮಾಡ್ಬೇಡಿ…| ಸಕ್ಕರೆ ನಾಡಿನ ಜನತೆಗೆ ಒಂದು ಸಿಹಿಯಾದ ಪತ್ರ!! – ಎಂ.ಜಿ ಹೆಗ್ಡೆ

ಸಮಗ್ರ ನ್ಯೂಸ್: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾನ್ ಹನುಮಾನ್ ಧ್ವಜ ತೆಗೆದ ವಿವಾದ ಈಗ ರಾಜ್ಯದಲ್ಲಿ ಸಕತ್ ಸುದ್ದಿಯಲ್ಲಿದೆ. ಧ್ವಜ ವಿವಾದ ರಾಜಕೀಯ ಸ್ವರೂಪ ಪಡೆದಿದ್ದು, ಇದನ್ನು ದೊಡ್ಡದು ಮಾಡಿರುವ ವಿರೋಧ ಪಕ್ಷಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿವೆ. ಇದರ ಬೆನ್ನಲ್ಲೇ ಸರ್ಕಾರ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯಿತಿ ಪಿಡಿಓ ಜೀವನ್‌.ಬಿ.ಎಂ ಅವರನ್ನು ಅಮಾನತು ಮಾಡಿದೆ. ಈ ಘಟನೆ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದಂತೆ ಮಂಡ್ಯವನ್ನು ಮಂಗಳೂರಿನಂತೆಯೇ ಕೋಮುವಾದದ ಪ್ರಯೋಗ ಸಾಲೆ ಮಾಡಲು ಪ್ರಯತ್ನ

ಸಕ್ಕರೆ ನಾಡಿನ ಜನರೇ, ನಾವು ಮಾಡಿದ ತಪ್ಪನ್ನು ನೀವೂ ಮಾಡ್ಬೇಡಿ…| ಸಕ್ಕರೆ ನಾಡಿನ ಜನತೆಗೆ ಒಂದು ಸಿಹಿಯಾದ ಪತ್ರ!! – ಎಂ.ಜಿ ಹೆಗ್ಡೆ Read More »