Editor

ಜ್ಞಾನವಾಪಿ ದೇಗುಲದ ಮೇಲೆ ಕನ್ನಡದ ಅಕ್ಷರ|ಮಸೀದಿ ಅಲ್ಲ ಮಂದಿರ ಅನ್ನೋದಕ್ಕೆ ನೂರಾರು ಸಾಕ್ಷ್ಯ..!

ಸಮಗ್ರ ನ್ಯೂಸ್: ಉತ್ತರಪ್ರದೇಶದ ವಾರಣಾಸಿಯಲ್ಲಿ ಇರುವ ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಹಲವು ಪ್ರಾಚೀನ ಕಾಲದ ಶಾಸನಗಳು ಪತ್ತೆಯಾಗಿವೆ. ಅದರಲ್ಲಿ ಕನ್ನಡದ ಶಾಸನವೂ ಇದೆ ಎಂಬ ವಿಚಾರ ಎಎಸ್‌ಐ (ASI) ವರದಿಯಿಂದ ಬಹಿರಂಗವಾಗಿದೆ. ಕನ್ನಡ ಬರಹವಿರುವ ಪ್ರೂಫ್‌ ಕೂಡ ಎಎಸ್‌ಐ ವರದಿಯಲ್ಲಿದೆ. ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ವರದಿ ಈಚೆಗೆ ಬಹಿರಂಗವಾಗಿದೆ. ಮಸೀದಿ ಇರುವ ಜಾಗದಲ್ಲಿ ಸಿಕ್ಕ ಪ್ರಾಚೀನ ಶಾಸನದಲ್ಲಿ ‘ದೊಡ್ಡರಸಯ್ಯನ ನರಸಂಣನಭಿಂನಹ’ (ದೊಡ್ಡರಸಯ್ಯನ ನರಸಿಂಹನ ಭಿನ್ನಹ) ಎಂದು ಕನ್ನಡದಲ್ಲಿ

ಜ್ಞಾನವಾಪಿ ದೇಗುಲದ ಮೇಲೆ ಕನ್ನಡದ ಅಕ್ಷರ|ಮಸೀದಿ ಅಲ್ಲ ಮಂದಿರ ಅನ್ನೋದಕ್ಕೆ ನೂರಾರು ಸಾಕ್ಷ್ಯ..! Read More »

ಚಿಕ್ಕಮಗಳೂರಿಗೆ ಎಂಟ್ರಿಕೊಟ್ಟ 30 ಕಾಡಾನೆಗಳ ಹಿಂಡು

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಕಾಡಾನೆಗಳ ಹಿಂಡು ಬೀಡುಬಿಟ್ಟಿದೆ. ಚಿಕ್ಕಮಗಳೂರು ತಾಲೂಕಿನ ಕೆಆರ್ ಪೇಟೆ ಗ್ರಾಮದಲ್ಲಿ ಬರೊಬ್ಬರಿ 30 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಸ್ಥಳಕ್ಕೆ ಚಿಕ್ಕಮಗಳೂರು ಅರಣ್ಯ ಇಲಾಖೆಯ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಜನ ವಸತಿ ಪ್ರದೇಶದಿಂದ ಸ್ವಲ್ಪ ದೂರದಲ್ಲಿರುವುದರಿಂದ ಜನರು ಭಯಭೀತರಾಗಿದ್ದಾರೆ. ಇನ್ನು ಇದರ ಜೊತೆಯೇ ಹಂತಕ ಭೀಮ ಆನೆ ಸೇರಿಕೊಂಡಿದೆ. ಈಗಾಗಲೇ ಬೇಲೂರಿನಲ್ಲಿ ದಾಂಧಲೆ ಎಬ್ಬಿಸಿದ್ದ ಬೀಮ ಅಂಡ್ ಗ್ಯಾಂಗ್. ಬೇಲೂರು ಮಾರ್ಗವಾಗಿಯೇ KR ಪೇಟೆ ಗ್ರಾಮಕ್ಕೆ ಆಗಮಿಸಿದೆ.

ಚಿಕ್ಕಮಗಳೂರಿಗೆ ಎಂಟ್ರಿಕೊಟ್ಟ 30 ಕಾಡಾನೆಗಳ ಹಿಂಡು Read More »

ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ|28 ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಕ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ಬಿಜೆಪಿ ನೇಮಕ ಮಾಡಿದೆ. ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ ಅವರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ಮತ್ತು ಸುಧಾಕರ್ ರೆಡ್ಡಿ ಅವರನ್ನು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಈಗ ರಾಜ್ಯ ಬಿಜೆಪಿ ಘಟಕವು ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಉಸ್ತುವಾರಿಗಳನ್ನು ನೇಮಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆದ ರಾಜ್ಯ ಬಿಜೆಪಿ

ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ|28 ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಕ Read More »

ದೈವ ನರ್ತನ ಮುಗಿಸುತ್ತಿದ್ದಂತೆ ಹೃದಯಾಘಾತದಿಂದ ನರ್ತಕ ಸಾವು

ಸಮಗ್ರ ನ್ಯೂಸ್: ದೈವ ನರ್ತನ ಮುಗಿಸುತ್ತಿದ್ದಂತೆ ಖ್ಯಾತ ದೈವ ನರ್ತಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಂಗಳೂರು ತಾಲೂಕಿನ ಹಳೆಯಂಗಡಿ ಸಮೀಪ ನಡೆದಿದೆ. ಪದವಿನಂಗಡಿ ಗಂಧಕಾಡು ನಿವಾಸಿ ಅಶೋಕ್ ಬಂಗೇರ ಸಾವನ್ನಪ್ಪಿದ ದೈವ ನರ್ತಕ. ನಿನ್ನೆ ಹಳೆಯಂಗಡಿ ಸಮೀಪ ರಕ್ತೇಶ್ವರಿ ದೈವ ನೇಮ ಹಮ್ಮಿಕೊಳ್ಳಲಾಗಿತ್ತು. ದೈವ ನರ್ತನದ ವೇಳೆಯೇ ಇವರಿಗೆ ಎದೆನೋವು ಕಾಣಿಸಿಕೊಂಡಿದೆ. ಇನ್ನು ಎದೆನೋವು ತೀವ್ರವಾಗಿ ಕಾಣಿಸಿಕೊಂಡಿದ್ದರಿಂದ ದೈವ ನೇಮ ಅರ್ಧಕ್ಕೆ ನಿಲ್ಲಿಸಿದ ಅಶೋಕ ಬಂಗೇರಾ ಅವರು ದೈವ ವೇಷವನ್ನು ತೆಗೆದು ಆಸ್ಪತ್ರೆಗೆ ‌ತೆರಳಿದ್ದಾರೆ. ಆದರೆ, ಆಸ್ಪತ್ರೆಗೆ

ದೈವ ನರ್ತನ ಮುಗಿಸುತ್ತಿದ್ದಂತೆ ಹೃದಯಾಘಾತದಿಂದ ನರ್ತಕ ಸಾವು Read More »

ಸರಣಿ ರಜೆ ಹಿನ್ನಲೆ ಕುಮಾರಪರ್ವತ ಚಾರಣಕ್ಕೆ ಹರಿದುಬಂದ ಚಾರಣಿಗರ ದಂಡು !

ಸಮಗ್ರ ಸಮಾಚಾರ: ಸರಣಿ ರಜೆ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಸಮೀಪವಿರುವ ಕುಮಾರಪರ್ವತ ಚಾರಣಕ್ಕೆ ಶುಕ್ರವಾರ ಚಾರಣಿಗರ ದಂಡೇ ಹರಿದು ಬಂದಿದೆ. ಕುಮಾರ ಪರ್ವತ ಚಾರಣಕ್ಕೆ ವರ್ಷಂಪ್ರತಿ ಈ ಸಮಯದಲ್ಲಿ ಹೆಚ್ಚಿನ ಚಾರಣಿಗರು ಆಗಮಿಸುತ್ತಿರುತ್ತಾರೆ. ಶುಕ್ರವಾರದಿಂದ ರವಿವಾರದ ವರೆಗೆ ಸರಣಿ ರಜೆ ಇರುವುದರಿಂದ ಪ್ರಸ್ತುತ ಬಾರೀ ಸಂಖ್ಯೆಯ ಚಾರಣಿಗರು ಕುಮಾರ ಪರ್ವತ ಚಾರಣಕ್ಕೆ ಆಗಮಿಸಿದ್ದಾರೆ. ಸುಬ್ರಹ್ಮಣ್ಯದ ದೇವರಗದ್ದೆ ಬಳಿ ಪ್ರವೇಶ ಧ್ವಾರದ ಬಳಿ ಶುಕ್ರವಾರ ಬಾರೀ ದಟ್ಟನೆ ಕಂಡುಬಂತು. ಸಾಮನ್ಯ ರಜೆ ದಿನಗಳಿಂದಲೂ ಬಾರೀ ಹೆಚ್ಚಿನ ಚಾರಣಿಗರು ಆಗಮಿಸಿದ್ದರಿಂದ ದಟ್ಡಣೆ

ಸರಣಿ ರಜೆ ಹಿನ್ನಲೆ ಕುಮಾರಪರ್ವತ ಚಾರಣಕ್ಕೆ ಹರಿದುಬಂದ ಚಾರಣಿಗರ ದಂಡು ! Read More »

ಕೊಟ್ಟಿಗೆಹಾರ: ಎಣ್ಣೆ ಕುಡಿಯೋ ಆತುರದಲ್ಲಿ ಎಟಿಎಂನಲ್ಲಿ ಕಾರ್ಡ್ ಬಿಟ್ಟು ಹೋಗುತ್ತಿರುವ ಜನ…!

ಸಮಗ್ರ ನ್ಯೂಸ್: ಕೊಟ್ಟಿಗೆಹಾರ, ಮದ್ಯದ ಮತ್ತಲ್ಲಿ ಎಟಿಎಂನಲ್ಲಿ ಹಣ ತೆಗೆಯುವ ಜನರು ಕುಡಿಯೋ ಆತುರದಲ್ಲಿ ಎಟಿಎಂ ನಲ್ಲಿ ಕಾರ್ಡ್ ಬಿಟ್ಟು ಹೋಗುವ ಖಯಾಲಿ ಶುರು ಮಾಡಿಕೊಂಡಿದ್ದಾರೆ. ಕೈಗೆ ಹಣ ಬಂದ ತಕ್ಷಣ ಎಣ್ಣೆ ಕುಡಿಯೋ ಆತುರದಲ್ಲಿ ಎಟಿಎಂ ಮೆಷಿನ್ ನಲ್ಲೇ ಕಾರ್ಡ್ ಬಿಟ್ಟು ಹೋಗುತ್ತಿದ್ದಾರೆ‌. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿ ಕೇಂದ್ರದಲ್ಲಿ ಜ. 26ರಂದು ಒಂದೇ ದಿನ ಸುಮಾರು 14 ಕಾರ್ಡ್ ಬಿಟ್ಟು ಹೋಗಿದ್ದು, ಅದರಲ್ಲೂ ಸಂಜೆ ವೇಳೆಯೇ ಹೆಚ್ಚು ಕಾರ್ಡು ಬಿಟ್ಟು ಹೋಗಿದ್ದಾರೆ. ಬಣಕಲ್

ಕೊಟ್ಟಿಗೆಹಾರ: ಎಣ್ಣೆ ಕುಡಿಯೋ ಆತುರದಲ್ಲಿ ಎಟಿಎಂನಲ್ಲಿ ಕಾರ್ಡ್ ಬಿಟ್ಟು ಹೋಗುತ್ತಿರುವ ಜನ…! Read More »

ಜೂನಿಯರ್ ರಿಸರ್ಚ್ ಫೆಲೋ ಜಾಬ್ ಗೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ರೆಸ್ಯೂಮ್ ಕಳುಹಿಸಿ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-

ಜೂನಿಯರ್ ರಿಸರ್ಚ್ ಫೆಲೋ ಜಾಬ್ ಗೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ Read More »

OTT Films: ಅನಿಮಲ್ ಸೇರಿದಂತೆ ಹಿಟ್ ಫಿಲಂಗಳು ಬಂದೇ ಬಿಡ್ತು ಒಟಿಟಿ ಗೆ!

ಸಮಗ್ರ ನ್ಯೂಸ್: ಪ್ರತಿ ವಾರ ಕೆಲವು ಹೊಸ ಚಲನಚಿತ್ರಗಳು ಮತ್ತು ವೆಬ್ ಸರಣಿಗಳು ಥಿಯೇಟರ್‌ಗಳಲ್ಲಿ ಮತ್ತು OTT ನಲ್ಲಿ ಬರುತ್ತಿವೆ. ಕೆಲವು ಚಲನಚಿತ್ರಗಳು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ಒಂದು ವಾರದ ನಂತರ ಸ್ಟ್ರೀಮ್ ಆಗುತ್ತಿರುವಾಗ. ತಿಂಗಳಿಗೆ ಕೆಲವು ಚಲನಚಿತ್ರಗಳು ಡಿಜಿಟಲ್ ರೂಪದಲ್ಲಿ ಲಭ್ಯವಿವೆ. ಕರೋನಾದಿಂದಾಗಿ, ಜನರು ಇನ್ನೂ ಥಿಯೇಟರ್‌ಗಳಿಗಿಂತ ಮನೆಯಲ್ಲಿ OTT ವೀಕ್ಷಿಸಲು ಬಯಸುತ್ತಾರೆ. ಮತ್ತು ಚಿತ್ರಮಂದಿರಗಳಲ್ಲಿ ಪ್ರತಿ ವಾರ ಸುಮಾರು 50 ರಿಂದ 60 ಚಲನಚಿತ್ರಗಳು ಬಿಡುಗಡೆಯಾಗುತ್ತವೆ ಮತ್ತು ಪ್ರೇಕ್ಷಕರನ್ನು ರಂಜಿಸುತ್ತವೆ. ಇಂದಿನಿಂದ (ಜನವರಿ 26) ಪ್ರಸಿದ್ಧ

OTT Films: ಅನಿಮಲ್ ಸೇರಿದಂತೆ ಹಿಟ್ ಫಿಲಂಗಳು ಬಂದೇ ಬಿಡ್ತು ಒಟಿಟಿ ಗೆ! Read More »

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಎನ್.ಎಸ್.ಭೋಸರಾಜು ಚಾಲನೆ

ಸಮಗ್ರ ನ್ಯೂಸ್: ಆಕರ್ಷಣೀಯ ಹಾಗೂ ಗಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ ಅವರು ಇಂದು (ಜ. 26) ಚಾಲನೆ ನೀಡಿದರು. ರಾಜಾಸೀಟು ಉದ್ಯಾನವನದಲ್ಲಿ ನಿರ್ಮಾಣವಾಗಿರುವ ಇಗ್ಗುತಪ್ಪ ದೇವಾಲಯ ಸೇರಿದಂತೆ ಹಲವು ಫಲಪುಷ್ಪ ಪ್ರದರ್ಶನಗಳು ಆಕರ್ಷಣೀಯವಾಗಿದ್ದು, ನೋಡುಗರನ್ನು ಸೆಳೆಯುತ್ತಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಹೇಳಿದರು. ರಾಜಾಸೀಟನ್ನು

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಎನ್.ಎಸ್.ಭೋಸರಾಜು ಚಾಲನೆ Read More »

ಸುಳ್ಯ: ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.-ನಿವೃತ್ತ ಶಿಕ್ಷಕ ತೀರ್ಥರಾಮ ಅಡ್ಕಬಳೆ| ಜಯನಗರ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ

ಸಮಗ್ರ ನ್ಯೂಸ್ : ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.ಅದಕ್ಕಾಗಿ ಮಕ್ಕಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯ ಜ್ಞಾನದ ಜೊತೆಯಲ್ಲಿ ದೇಶಾಭಿಮಾನದ ಬೆಳಕನ್ನು ಈಗಿಂದಲೇ ಮೂಡಿಸಬೇಕೆಂದು ನಿವೃತ ಶಿಕ್ಷಕ ತೀರ್ಥರಾಮ ಅಡ್ಕಬಳೆ ಹೇಳಿದರು. ಅವರು ಸರಕಾರಿ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆ ಜಯನಗರದಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆಯಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಅವರು ದತ್ತಿ ನಿಧಿಯನ್ನು ಘೋಷಣೆ ಮಾಡಿ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ

ಸುಳ್ಯ: ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.-ನಿವೃತ್ತ ಶಿಕ್ಷಕ ತೀರ್ಥರಾಮ ಅಡ್ಕಬಳೆ| ಜಯನಗರ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ Read More »