Editor

ಸಂಚಾರ ಪೊಲೀಸರಿಂದ ತಪಾಸಣೆ ವೇಳೆ ಬೈಕ್ ನಿಂದ ಮಗು ಬಿದ್ದು ಸಾವನ್ನಪ್ಪಿದ ಪ್ರಕರಣ| ಮೂವರು ಎಎಸ್ಐ ಗಳ ಅಮಾನತುಗೊಳಿಸಿ ಆದೇಶ

ಸಮಗ್ರ ನ್ಯೂಸ್: ಮಂಡ್ಯದಲ್ಲಿ ಸಂಚಾರ ಪೊಲೀಸರು ಬೈಕ್‌ ಅಡ್ಡಗಟ್ಟಿದ ಪರಿಣಾಮ ಅಪಘಾತ ಸಂಭವಿಸಿ, ಮೂರು ವರ್ಷದ ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಎಎಸ್‌ಐಗಳಾದ ನಾಗರಾಜು, ಜಯರಾಮು ಮತ್ತು ಗುರುದೇವ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ನಗರದ ಸ್ವರ್ಣಸಂದ್ರದ ಸಮೀಪ ಹೆದ್ದಾರಿಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಮಗು ಸಾವಿಗೀಡಾಗಿದೆ. ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಸಂಚಾರ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಹಿಂಬದಿಯಿಂದ […]

ಸಂಚಾರ ಪೊಲೀಸರಿಂದ ತಪಾಸಣೆ ವೇಳೆ ಬೈಕ್ ನಿಂದ ಮಗು ಬಿದ್ದು ಸಾವನ್ನಪ್ಪಿದ ಪ್ರಕರಣ| ಮೂವರು ಎಎಸ್ಐ ಗಳ ಅಮಾನತುಗೊಳಿಸಿ ಆದೇಶ Read More »

ಕೊಲ್ಲಂ‌‌‌ ಕಡಲತೀರದಲ್ಲಿ ಲೈಬೀರಿಯಾ ಸರಕು ಹಡಗಿನ ಕಂಟೇನರ್ ಗಳು ಪತ್ತೆ| ಹತ್ತಿರ ಸುಳಿಯದಂತೆ ನಾಗರಿಕರಿಗೆ ಸೂಚನೆ

ಸಮಗ್ರ ನ್ಯೂಸ್: ಕೇರಳ ಕರಾವಳಿಯಲ್ಲಿ ರವಿವಾರ ಮುಳುಗಿದ ಲೈಬೀರಿಯ ಸರಕು ಹಡಗಿನ ಕಂಟೈನರ್‌ಗಳು ಸೋಮವಾರ ಬೆಳಿಗ್ಗೆ ಕೊಲ್ಲಂ ಕರಾವಳಿಯ ವಿವಿಧ ಭಾಗಗಳಲ್ಲಿ ದಡಕ್ಕೆ ಬಂದು ಸೇರಿದೆ. ಘಟನೆ ಬಳಿಕ ಸಂಭಾವ್ಯ ತೈಲ ಸೋರಿಕೆ ಅಥವಾ ರಾಸಾಯನಿಕ ಸೋರಿಕೆ ಭೀತಿಯ ಹಿನ್ನೆಲೆ ರಾಜ್ಯವು ತುರ್ತು ಪರಿಸ್ಥಿತಿಯನ್ನು ಘೋಷಿಸಿತ್ತು. ಈವರೆಗೆ ಕೊಲ್ಲಂ ಕರಾವಳಿಯಲ್ಲಿ ಎಂಟು ಕಂಟೇನರ್‌ಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಮೊದಲ ಕಂಟೇನರ್ ಮಧ್ಯರಾತ್ರಿಯ ಸುಮಾರಿಗೆ ಕರುಣಗಪ್ಪಳ್ಳಿಯ ಚೆರಿಯಾಝಿಕಲ್‌ನಲ್ಲಿ ಪತ್ತೆಯಾಗಿದೆ. ಬಳಿಕ ಚವರದ ಪರಿಮಳಂ ಬೀಚ್, ಶಕ್ತಿಕುಲಂಗರ ಮತ್ತು ಮಾದಮ್ಮ

ಕೊಲ್ಲಂ‌‌‌ ಕಡಲತೀರದಲ್ಲಿ ಲೈಬೀರಿಯಾ ಸರಕು ಹಡಗಿನ ಕಂಟೇನರ್ ಗಳು ಪತ್ತೆ| ಹತ್ತಿರ ಸುಳಿಯದಂತೆ ನಾಗರಿಕರಿಗೆ ಸೂಚನೆ Read More »

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರು| ಇನ್ನೆರಡು ದಿನವು ವರುಣಾರ್ಭಟ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆಯ ಮಳೆಯ ಅಬ್ಬರ ಮುಂದುವರಿದಿದೆ. ಕೆಲವೆಡೆ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನವಿಡೀ ಧಾರಾಕಾರ ಮಳೆಯಾಗಿದೆ. ಗಾಳಿಯೂ ಜೋರಾಗಿತ್ತು. ಪಶ್ಚಿಮ ಘಟ್ಟ ಹಾಗೂ ಘಟ್ಟದ ಮೇಲ್ಭಾಗದಲ್ಲೂ ಭಾರಿ ಮಳೆಯಾಗಿದ್ದರಿಂದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಕ್ಷೇತ್ರಕ್ಕೆ ಭೇಟಿ ನೀಡಿರುವ ಭಕ್ತರು ಸ್ನಾನಘಟ್ಟದ ಬಳಿ ನದಿಯ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಾಗಮಂಡಲದಲ್ಲಿ 22.50 ಸೆಂ.ಮೀ ಮಳೆ ಸುರಿದಿದ್ದು, ಕಾವೇರಿ ನದಿ

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರು| ಇನ್ನೆರಡು ದಿನವು ವರುಣಾರ್ಭಟ ಸಾಧ್ಯತೆ Read More »

ಪ್ರಜ್ವಲ್ ರೇವಣ್ಣ ಬಳಿ ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರ ಪೋಟೋಗಳಿತ್ತು| ಕೋರ್ಟ್ ನಲ್ಲಿ ಸಾಕ್ಷ್ಯ ನುಡಿದ ಡ್ರೈವರ್ ಕಾರ್ತಿಕ್

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕಾರಿನ ಚಾಲಕ ಕಾರ್ತಿಕ್‌ ಸೋಮವಾರ(ಮೇ.26) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿ 2000ಕ್ಕೂ ಹೆಚ್ಚು ಮಹಿಳೆಯರ ಛಾಯಾಚಿತ್ರಗಳು ಮತ್ತು ಸುಮಾರು 40-50 ವೀಡಿಯೊಗಳು ಇದ್ದವು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ವಲ್‌ ರೇವಣ್ಣ ತನ್ನ ಮೊಬೈಲ್‌ ಫೋನ್‌ ಅನ್ನು ಕಾರಿನಲ್ಲಿಯೇ ಬಿಟ್ಟು ಜಯನಗರದ ಗೆಳತಿ ಮನೆಯೊಳಗೆ ಹೋಗಿದ್ದ. ನನಗೆ

ಪ್ರಜ್ವಲ್ ರೇವಣ್ಣ ಬಳಿ ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರ ಪೋಟೋಗಳಿತ್ತು| ಕೋರ್ಟ್ ನಲ್ಲಿ ಸಾಕ್ಷ್ಯ ನುಡಿದ ಡ್ರೈವರ್ ಕಾರ್ತಿಕ್ Read More »

‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ಇನ್ನಿಲ್ಲ!! ವಿಚಿತ್ರ ಸೋಂಕಿನಿಂದ ಬಳಲುತ್ತಿದ್ದ ನಟ

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯಲ್ಲಿ ನಟಿಸಿ ಹೆಸರುವಾಸಿ ಆಗಿದ್ದ ನಟ ಶ್ರೀಧರ್ ನಾಯಕ್‌ ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರಿಗೆ ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಅವರು ಗುರುತೇ ಸಿಗದಷ್ಟು ಬದಲಾಗಿ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಕಳೆಬರಹವನ್ನು ಇಡಲಾಗಿದೆ. ಅವರಿಗೆ 47 ವರ್ಷ

‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ಇನ್ನಿಲ್ಲ!! ವಿಚಿತ್ರ ಸೋಂಕಿನಿಂದ ಬಳಲುತ್ತಿದ್ದ ನಟ Read More »

ರಿಪಬ್ಲಿಕ್ ಕನ್ನಡ ತೊರೆದ ಆ್ಯಂಕರ್ ಜಯಪ್ರಕಾಶ್ ಶೆಟ್ಟಿ

ಸಮಗ್ರ ನ್ಯೂಸ್: ರಾಜ್ಯದ ಪ್ರತಿಷ್ಠಿತ ನ್ಯೂಸ್ ಚಾನಲ್ ರಿಪಬ್ಲಿಕ್ ಕನ್ನಡದ ಸೀನಿಯರ್ ಆ್ಯಂಕರ್ ಹಾಗೂ ಪ್ರೋಗ್ರಾಂ ಹೆಡ್ ಜಯಪ್ರಕಾಶ್ ಶೆಟ್ಟಿ ಚಾನಲ್ ನಿಂದ ಹೊರನಡೆದಿದ್ದಾರೆ. ಚಾನಲ್ ಗೆ ನೂತನ ಸುದ್ದಿ ಸಂಪಾದಕರಾಗಿ ಹಿರಿಯ ಪತ್ರಕರ್ತೆ ಶೋಭಾ ಮಳವಳ್ಳಿ ನೇಮಕವಾದ ಬೆನ್ನಲ್ಲೇ ಜಯಪ್ರಕಾಶ್ ಶೆಟ್ಟಿ ಚಾನಲ್ ನಿಂದ ಹೊರಬಿದ್ದಿರುವುದು ತೀವ್ರ ಕುತೂಹಲ ಕೆರಳಿಸಿದೆ. ಚಾನಲ್ ನ ಆರಂಭದಿಂದಲೂ ತಮ್ಮ ಅಗ್ರೆಸಿವ್ ವರದಿಗಾರಿಕೆ ಹಾಗೂ ನಿರೂಪಣೆಯಿಂದ ಜನರ ಮನಗೆದ್ದಿದ್ದ ಜಯಪ್ರಕಾಶ್ ಶೆಟ್ಟಿ ಕಳೆದ ಕೆಲ ದಿನಗಳ ಹಿಂದೆ ಧರ್ಮಸ್ಥಳದ ಸೌಜನ್ಯ

ರಿಪಬ್ಲಿಕ್ ಕನ್ನಡ ತೊರೆದ ಆ್ಯಂಕರ್ ಜಯಪ್ರಕಾಶ್ ಶೆಟ್ಟಿ Read More »

ಮೇ.30ರವರೆಗೆ ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್| ಮೇ.27ರಿಂದ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ನಾಳೆಯಿಂದ(ಮೇ 27) ಮೇ 30ರವರೆಗೆ ರಾಜ್ಯದಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡಿನ ಆರು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಯಾದಗಿರಿ, ಬಾಗಲಕೋಟೆ, ಹಾಸನದಲ್ಲಿಯೂ ಮಳೆಯಾಗಲಿದ್ದು,

ಮೇ.30ರವರೆಗೆ ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್| ಮೇ.27ರಿಂದ ಭಾರೀ ಮಳೆ ಮುನ್ಸೂಚನೆ Read More »

ಕಡಬ: ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರ ದುರ್ಮರಣ

ಸಮಗ್ರ ನ್ಯೂಸ್: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೆಸ್ಟೇಷನ್ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ಸು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಎಂದು ಗುರುತಿಸಲಾಗಿದೆ. ಯುವಕ ಮರ್ಧಾಳದ ಪಾಲತ್ತಡ್ಕದಲ್ಲಿ ಫ್ಯಾಬ್ರಿಕೇಷನ್ ವೃತ್ತಿ ಮಾಡುತ್ತಿದ್ದು.ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದಾಗ ಹಳೆಸ್ಟೇಷನ್ ಬಳಿ ಸುಬ್ರಹ್ಮಣ್ಯ

ಕಡಬ: ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರ ದುರ್ಮರಣ Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ‌ ಹಿನ್ನಲೆ| ಅಂಗನವಾಡಿಯಿಂದ ಪಿಯುಸಿವರೆಗಿನ ಎಲ್ಲಾ ತರಗತಿಗಳಿಗೆ ೨ದಿನ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆ, ರೆಡ್‌ ಅಲರ್ಟ್‌ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಂದು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿತ್ತು. ಮುಂದುವರಿದಂತೆ ಇದೀಗ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸಿಬಿಎಸ್‌ಸಿ, ಪದವಿ ಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಸಾರ್ವಜನಿಕರು ಎಚ್ಚರ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ‌ ಹಿನ್ನಲೆ| ಅಂಗನವಾಡಿಯಿಂದ ಪಿಯುಸಿವರೆಗಿನ ಎಲ್ಲಾ ತರಗತಿಗಳಿಗೆ ೨ದಿನ ರಜೆ ಘೋಷಣೆ Read More »

ಎಡೆಬಿಡದೆ ಸುರಿಯುತ್ತಿರುವ ಜಡಿಮಳೆ| ಮಂಗಳೂರು ನಗರಕ್ಕೆ ಪ್ರವಾಹ ಭೀತಿ

ಸಮಗ್ರ ನ್ಯೂಸ್: ಎಡೆ ಬಿಡದೆ ಸುರಿದ ಭಾರೀ ರಣ ಮಳೆಗೆ ಮಂಗಳೂರಿನ ರಸ್ತೆಗಳಲ್ಲಿ ಜಲಪ್ರವಾಹ ಉಂಟಾಗಿದೆ. ಮಂಗಳೂರು ನಗರದ ಹಲವು ಜನ ವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು ರಾಜಕಾಲುವೆ ತುಂಬಿದ ಹಿನ್ನೆಲೆ ಮತ್ತೊಮ್ಮೆ ಪಂಪವೆಲ್ಲ್ ಜಲಾವೃತವಾಗಿದೆ. ರಸ್ತೆಗಳಲ್ಲಿ ನದಿಗಳ ಮಾದರಿಯಲ್ಲಿ ಮಳೆ ನೀರು ಭಾರೀ ಉಕ್ಕಿ ಬರುತ್ತಿದ್ದು ಮಂಗಳೂರಿನ ಕೊಡಿಯಾಲ್ ಬೈಲ್ ಭಗವತೀ ನಗರ ಬಳಿ ಅವಾಂತರ ಸೃಷ್ಟಿಯಾಗಿದೆ. ರಾಜಕಾಲುವೆ ಉಕ್ಕಿ ಹರಿದ ಪರಿಣಾಮ ರಸ್ತೆಯಲ್ಲಿ ಜಲ ಪ್ರವಾಹ ಉಂಟಾಗಿದ್ದು ಕಾರು, ಬೈಕ್ ಗಳು ಸಂಚರಿಸಲು

ಎಡೆಬಿಡದೆ ಸುರಿಯುತ್ತಿರುವ ಜಡಿಮಳೆ| ಮಂಗಳೂರು ನಗರಕ್ಕೆ ಪ್ರವಾಹ ಭೀತಿ Read More »