Editor

ಖಾಸಗಿ ಬಸ್ – ಕಾರು ನಡುವೆ ಡಿಕ್ಕಿ| 6 ಮಂದಿ ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ವಿಜಯಪುರ ನಗರ ಸಮೀಪದ ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‌ಎಚ್- 50) ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ದಾರುಣವಾಗಿ ಸಾವಿಗೀಡಾಗಿದ್ದಾರೆ. ಮಹಿಂದ್ರಾ ಸ್ಕಾರ್ಪಿಯೋದಲ್ಲಿ ಇದ್ದ ತೆಲಂಗಾಣದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋಸ್ನಾ, ಮಹೀಂದ್ರಾ ಸ್ಕಾರ್ಪಿಯೋ ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ವಿಆರ್‌ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ […]

ಖಾಸಗಿ ಬಸ್ – ಕಾರು ನಡುವೆ ಡಿಕ್ಕಿ| 6 ಮಂದಿ ಸ್ಥಳದಲ್ಲೇ ದುರ್ಮರಣ Read More »

ಕನ್ನಡ ಮಾತನಾಡುವುದಿಲ್ಲ ಎಂದ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲೇ ಕ್ಷಮೆ ಕೇಳಿದ್ಲು| ಏನಿದು ಸ್ಟೋರಿ…?

ಸಮಗ್ರ ನ್ಯೂಸ್: ನಾನು ಮಾತನಾಡುವುದು ಹಿಂದಿಯಲ್ಲಿ ಮಾತ್ರ. ಕನ್ನಡದಲ್ಲಿ ಮಾತನಾಡುವುದಿಲ್ಲ. ಕನ್ನಡದಲ್ಲಿ ಮಾತನಾಡಬೇಕೆಂದು ಎಲ್ಲಿದೆ ನಿಯಮ? ಇದು ಕರುನಾಡ ರಾಜಧಾನಿ ಬೆಂಗಳೂರಿನ ಹೊರವಲಯದ ಚಂದಾಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರೊಬ್ಬರು ಕನ್ನಡಿಗ ಗ್ರಾಹಕರ ಮೇಲೆ ತೋರಿದ ದರ್ಪ. ಬ್ಯಾಂಕ್ ಗ್ರಾಹಕರೊಬ್ಬರು ಕನ್ನಡದಲ್ಲಿ ಮಾತನಾಡಿ ಎಂದು ಕೋರಿದ್ದಕ್ಕೆ ಉತ್ತರ ಭಾರತ ಮೂಲದ ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್ ಪ್ರಿಯಾಂಕಾಸಿಂಗ್ ಕನ್ನಡ ಮಾತನಾಡುವುದಿಲ್ಲ. ಏನು ಮಾಡುತ್ತಿರೋ ಮಾಡಿ ಎಂದು ಮೆರೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ

ಕನ್ನಡ ಮಾತನಾಡುವುದಿಲ್ಲ ಎಂದ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲೇ ಕ್ಷಮೆ ಕೇಳಿದ್ಲು| ಏನಿದು ಸ್ಟೋರಿ…? Read More »

ಗೃಹಸಚಿವ ಪರಮೇಶ್ವರ್ ಗೆ ಶಾಕ್ ನೀಡಿದ ಇಡಿ| ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ‌ ಮೇಲೆ‌ ದಾಳಿ

ಸಮಗ್ರ ನ್ಯೂಸ್: ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ

ಗೃಹಸಚಿವ ಪರಮೇಶ್ವರ್ ಗೆ ಶಾಕ್ ನೀಡಿದ ಇಡಿ| ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ‌ ಮೇಲೆ‌ ದಾಳಿ Read More »

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ ಹೊಸ ಅಲೆ| 8 ಪ್ರಕರಣಗಳು ಪತ್ತೆ

ಸಮಗ್ರ ನ್ಯೂಸ್: ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್,

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ ಹೊಸ ಅಲೆ| 8 ಪ್ರಕರಣಗಳು ಪತ್ತೆ Read More »

ಬೆಳ್ತಂಗಡಿ: ಆಕಾಂಕ್ಷ ಆತ್ಮಹತ್ಯೆ ಪ್ರಕರಣ| ಆರೋಪಿ ಬಿಜಿಲ್ ಮ್ಯಾಥ್ಯೂ ಬಂಧನ

ಸಮಗ್ರ ನ್ಯೂಸ್: ಆಕಾಂಕ್ಷ ಎಸ್‌. ನಾಯರ್ ಅವರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಕೇರಳ ಮೂಲದ ಪ್ರೊಫೆಸರ್ ಬಿಜಿಲ್ ಸಿ. ಮ್ಯಾಥ್ಯೂ ಅವರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆಕಾಂಕ್ಷ ಅವರ ಮೃತದೇಹ ಬುಧವಾರ ಧರ್ಮಸ್ಥಳ ತಲುಪಲಿದ್ದು, ಬೊಳಿಯಾರ್ ನ ಅವರ ಮನೆಯ ಬಳಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಿದ ಸಿವಿಲ್ ಸರ್ಕಾರಿ ಆಸ್ಪತ್ರೆ ವೈದ್ಯರು, ಶವವನ್ನು ಮನೆಯವರಿಗೆ ಹಸ್ತಾಂತರಿಸಿದ್ದಾರೆ. ದೆಹಲಿ

ಬೆಳ್ತಂಗಡಿ: ಆಕಾಂಕ್ಷ ಆತ್ಮಹತ್ಯೆ ಪ್ರಕರಣ| ಆರೋಪಿ ಬಿಜಿಲ್ ಮ್ಯಾಥ್ಯೂ ಬಂಧನ Read More »

ಕರಾವಳಿಯಲ್ಲಿ ಜೂ.1ರಿಂದ ಎರಡು ತಿಂಗಳು ಸಮುದ್ರ ಮೀನುಗಾರಿಕೆ ನಿಷೇಧ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ತೀರದಲ್ಲಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ರೀತಿಯ ಯಾಂತ್ರೀಕೃತ ದೋಣಿಗಳ ಮೂಲಕ ಹಾಗೂ 10 ಹಾರ್ಸ್ ಪವರ್ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ನಡೆಸುವ ಮೀನುಗಾರಿಕಾ ಚಟುವಟಿಕೆಯನ್ನು ಜೂನ್‌ 1ರಿಂದ ಜುಲೈ 31ರವರೆಗೆ ನಿಷೇಧಿಸಲಾಗಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರ್ ಇಂಜಿನ್ ಹಾಗೂ ನಾಡದೋಣಿಗಳ ಮೂಲಕ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಮೀನುಗಾರಿಕೆ ನಿಷೇಧಿಸಿರುವ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ

ಕರಾವಳಿಯಲ್ಲಿ ಜೂ.1ರಿಂದ ಎರಡು ತಿಂಗಳು ಸಮುದ್ರ ಮೀನುಗಾರಿಕೆ ನಿಷೇಧ Read More »

ಚುನಾವಣಾ ವೇಳೆ ಕೊಟ್ಟಿದ್ದ ಭರವಸೆಗಳನ್ನು ಎರಡು ವರ್ಷದಲ್ಲಿ ಈಡೇರಿಸಿದ್ದೇವೆ – ಸಿಎಂ

ಸಮಗ್ರ ನ್ಯೂಸ್: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಹೊಸದಾದ 30

ಚುನಾವಣಾ ವೇಳೆ ಕೊಟ್ಟಿದ್ದ ಭರವಸೆಗಳನ್ನು ಎರಡು ವರ್ಷದಲ್ಲಿ ಈಡೇರಿಸಿದ್ದೇವೆ – ಸಿಎಂ Read More »

ಕನ್ನಡದ ಹಿರಿಯ ಸಾಹಿತಿ ಬಾನು ಮುಷ್ತಾಕ್ ರ ”ಹಾರ್ಟ್ ಲ್ಯಾಂಪ್” ಕೃತಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಹಿರಿಯ ಸಾಹಿತಿ ಬಾನು ಮುಷ್ತಾಕ್‌ ಅವರ ಸಣ್ಣ ಕಥಾ ಸಂಕಲನ ‘ಹಾರ್ಟ್ ಲ್ಯಾಂಪ್’ ಕೃತಿಯು 2025ರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದಿತ ಕಾದಂಬರಿ ವಿಭಾಗದ ಅಡಿಯಲ್ಲಿ ಈ ಗೌರವಕ್ಕೆ ಭಾಜನವಾಗಿದ್ದು, ಈ ಪ್ರಶಸ್ತಿಯನ್ನು ಪಡೆದ ಮೊದಲ ಸಣ್ಣ ಕಥೆಯಾಗಿದೆ. ಮುಷ್ತಾಕ್ ಅವರ ಹಾರ್ಟ್​ ಲ್ಯಾಂಪ್​ ಕೃತಿಯು ದಕ್ಷಿಣ ಭಾರತದ ಪಿತೃಪ್ರಧಾನ ಸಮುದಾಯಗಳಲ್ಲಿನ ಮಹಿಳೆಯರ ಜೀವನವನ್ನು ನಿರೂಪಿಸುವ 12 ಕಥೆಗಳನ್ನು ಹೊಂದಿದೆ. ತೀರ್ಪುಗಾರರ ಅಧ್ಯಕ್ಷರಾದ ಮ್ಯಾಕ್ಸ್ ಪೋರ್ಟರ್ ಅವರು ಈ

ಕನ್ನಡದ ಹಿರಿಯ ಸಾಹಿತಿ ಬಾನು ಮುಷ್ತಾಕ್ ರ ”ಹಾರ್ಟ್ ಲ್ಯಾಂಪ್” ಕೃತಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ Read More »

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ| ನಟಿ ರನ್ಯಾ ರಾವ್ ಗೆ ಜಾಮೀನು

ಸಮಗ್ರ ನ್ಯೂಸ್: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದುಬೈನಿಂದ 12 ಕೋಟಿ ಮೌಲ್ಯದ 14 ಕೆ.ಜಿ ಚಿನ್ನ ಕಳ್ಳ ಸಾಗಣೆ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳಿಂದ ಅರಸ್ಟ್ ಆಗಿದ್ದ ನಟಿ ರನ್ಯಾರಾವ್‌ ಸೇರಿ ಮೂವರು ಆರೋಪಿಗಳಿಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮಾರ್ಚ್ 3ರಂದು ಬೆಂಗಳೂರಿಗೆ ಆಗಮಿಸಿದ್ದ ರನ್ಯಾರಾವ್​ರನ್ನು ಕಂದಾಯ ಗುಪ್ತಚರ ಅಧಿಕಾರಿಗಳು (ಡಿಆರ್‌ಐ)

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ| ನಟಿ ರನ್ಯಾ ರಾವ್ ಗೆ ಜಾಮೀನು Read More »

ಮಳೆ‌ ಅವಾಂತರಕ್ಕೆ ಮಣಿಪಾಲದಲ್ಲಿ‌ ನದಿಯಂತಾದ ರಸ್ತೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಪ್ರಮುಖ ಶೈಕ್ಷಣಿಕ ಮತ್ತು ಆರೋಗ್ಯದ ಹಬ್ ಆಗಿರುವ ಮಣಿಪಾಲದಲ್ಲಿ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆಯುದ್ದಕ್ಕೂ ಕೃತಕ ಪ್ರವಾಹ ನಿರ್ಮಾಣವಾಗಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿಯ ರಸ್ತೆ ಸಂಪೂರ್ಣವಾಗಿ ಮುಳುಗಿ, ನದಿಯಂತೆ ನೀರು ಹರಿದಿದ್ದು, ನೀರಿನ ಜೊತೆಗೆ ಕಲ್ಲು ಮಣ್ಣುಗಳು ರಸ್ತೆ ಮೇಲೆ ಹರಿದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ. ಉಡುಪಿಯ ಪ್ರಮುಖ ರಸ್ತೆಯಾಗಿರುವ ಇಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ

ಮಳೆ‌ ಅವಾಂತರಕ್ಕೆ ಮಣಿಪಾಲದಲ್ಲಿ‌ ನದಿಯಂತಾದ ರಸ್ತೆ Read More »