Editor

ಕರಾವಳಿ ಸೇರಿದಂತೆ ‌ರಾಜ್ಯದಾದ್ಯಂತ ಜೂ.27ರವರೆಗೆ ಭಾರೀ ಮಳೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳು ಸೇರಿ ಇತರೆಡೆ ಮತ್ತೆ ವರುಣ ಆರ್ಭಟಿಸುವ ಲಕ್ಷಣ ಕಂಡು ಬಂದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 25ರಿಂದ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಈ 3 ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ ಕರಾವಳಿ ಜಿಲ್ಲೆಗಳ ಸಮೀಪದಲ್ಲಿರುವ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಒಳನಾಡಿದ ಬೆಳಗಾವಿ ಜಿಲ್ಲೆಗಳಲ್ಲೂ ಬುಧವಾರ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. […]

ಕರಾವಳಿ ಸೇರಿದಂತೆ ‌ರಾಜ್ಯದಾದ್ಯಂತ ಜೂ.27ರವರೆಗೆ ಭಾರೀ ಮಳೆ Read More »

ಬಿಟ್ಟುಬಿಡದೆ ಸುರಿಯುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ (Monsoon Rain) ಅಬ್ಬರ ಮುಂದುವರಿದಿದ್ದು, ಅನಾಹುತಗಳನ್ನೇ ಸೃಷ್ಟಿಸಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಮತ್ತು ಇನ್ನು ಕೆಲವು ಜಿಲ್ಲೆಗಳ ಹಲವು ತಾಲೂಕು ವ್ಯಾಪ್ತಿಗಳಲ್ಲಿ ಶಾಲಾ ಕಾಲೇಜುಗಳಿಗೆ ಇಂದು (ಜೂನ್ 25) ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಲ್ಕು ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಳಿಯಾಳ, ದಾಂಡೇಲಿ, ಜೋಯಿಡಾ ಮತ್ತು ಯಲ್ಲಾಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ

ಬಿಟ್ಟುಬಿಡದೆ ಸುರಿಯುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ Read More »

12 ದಿನಗಳ ಬಳಿಕ ಕದನ ವಿರಾಮ ಘೋಷಿಸಿದ ಇರಾನ್

ಸಮಗ್ರ ನ್ಯೂಸ್: ಇಸ್ರೇಲ್ ವಿರುದ್ಧ ಇರಾನ್ ಕದನ ವಿರಾಮ ಘೋಷಿಸಿದ್ದು, ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಬೆನ್ನಲ್ಲೇ ಇರಾನ್ ಸಹ ಯುದ್ಧ ವಿರಾಮ ಘೋಷಿಸಿದೆ. ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್-ಇಸ್ರೇಲ್ ನಡುವೆ ಕದನ ವಿರಾಮ ಘೋಷಿಸಿದ್ದಾರೆ. 12 ದಿನಗಳ ಯುದ್ಧ ಮುಗಿದಿದ್ದು, ಇರಾನ್ ಮತ್ತು ಇಸ್ರೇಲ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಇಸ್ರೇಲ್‌ನ

12 ದಿನಗಳ ಬಳಿಕ ಕದನ ವಿರಾಮ ಘೋಷಿಸಿದ ಇರಾನ್ Read More »

ಸೌಜನ್ಯ ಹೆಸರಲ್ಲಿ ಹೆಲ್ಪ್ ಲೈನ್ ತೆರೆದು‌ ಲಕ್ಷಾಂತರ ರೂ. ವಂಚಿಸಿದ ಮಹಿಳೆ

ಸಮಗ್ರ ನ್ಯೂಸ್: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್​ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ‌ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್​ ಎಂಬ ಫೇಸ್​ಬುಕ್​ ಪೇಜ್​​ನಲ್ಲಿ ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್​

ಸೌಜನ್ಯ ಹೆಸರಲ್ಲಿ ಹೆಲ್ಪ್ ಲೈನ್ ತೆರೆದು‌ ಲಕ್ಷಾಂತರ ರೂ. ವಂಚಿಸಿದ ಮಹಿಳೆ Read More »

ಅಮೆರಿಕಾ ವಾಯುನೆಲೆ ಮೇಲೆ ಇರಾನ್ ಭೀಕರ ದಾಳಿ

ಸಮಗ್ರ ನ್ಯೂಸ್: ಇರಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ಮಾಡಿದ ನಂತರ ಇರಾನ್ ಅಧ್ಯಕ್ಷ ಖಮೇನಿ ಕೆರಳಿದ್ದಾರೆ. ಅಮೆರಿಕದ ಮೇಲೆ ದಾಳಿಗೆ ಪ್ಲಾನ್ ಮಾಡಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಸಿರಿಯಾದಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯ ಮೇಲೆ ಇರಾನ್ ದಾಳಿ ಮಾಡಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ಮಾಡಿವೆ. ಇರಾನ್ ದಾಳಿಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.ಆಪರೇಷನ್ ಮಿಡ್‍ನೈಟ್ ಹ್ಯಾಮರ್ ಹೆಸರಲ್ಲಿ ಇರಾನ್‍ನ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ಫೋರ್ಡೊ, ನಟಾಂಜ್ ಮತ್ತು

ಅಮೆರಿಕಾ ವಾಯುನೆಲೆ ಮೇಲೆ ಇರಾನ್ ಭೀಕರ ದಾಳಿ Read More »

ಮಂಗಳೂರು: ಹಲವು ಅತ್ಯಾಚಾರ , ಕೊಲೆ ಪ್ರಕರಣಗಳ ಹೆಣ ಹೂತಿದ್ದೆ|ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗ್ತಿದೆ ಗ್ರಾಮವೊಂದರ ಸ್ಟೋರಿ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಹಲವು ವಿಶೇಷ ಕಾರಣಕ್ಕೆ ಸುದ್ದಿಯಲ್ಲಿದ್ದು, ಇಲ್ಲೊಬ್ಬ ವ್ಯಕ್ತಿ ಬರೆದಿರುವ ಪತ್ರ ಇದೀಗ ಎಲ್ಲೆಡೆ ಹೊಸ ಚರ್ಚೆ ಹುಟ್ಟುಹಾಕಿದೆ. ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರವೊಂದರ ಆಸುಪಾಸಿನಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕಲು ಮೃತದೇಹಗಳನ್ನು ಹೂಳಲಾಗಿದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಶರಣಾಗುವುದಾಗಿ ತಿಳಿಸಿರುವ ಪತ್ರವೊಂದು ವೈರಲ್ ಆಗಿದೆ. ವಕೀಲರ ಪತ್ರದ ಮೂಲಕ ಈ ವಿಷಯ ತಿಳಿದುಬಂದಿದ್ದು, ಪೊಲೀಸರು ವಕೀಲರನ್ನು ಸಂಪರ್ಕಿಸಿದ್ದಾರೆ. ಈ ಬೆಳವಣಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಇನ್ನೂ

ಮಂಗಳೂರು: ಹಲವು ಅತ್ಯಾಚಾರ , ಕೊಲೆ ಪ್ರಕರಣಗಳ ಹೆಣ ಹೂತಿದ್ದೆ|ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗ್ತಿದೆ ಗ್ರಾಮವೊಂದರ ಸ್ಟೋರಿ!! Read More »

ಮಂಗಳೂರು: ಇಂಡಿಯನ್ ಆಯಿಲ್ ಟ್ಯಾಂಕರ್ ಚಾಲಕರ ದಿಢೀರ್ ಪ್ರತಿಭಟನೆ| ಮನವಿಗೆ ಸ್ಪಂದಿಸಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಮಂಗಳೂರಿನ ಕೂಳೂರಿನಲ್ಲಿರುವ ಇಂಡಿಯನ್‌ ಆಯಿಲ್‌ ಪೆಟ್ರೋಲಿಯಂ ಟರ್ಮಿನಲ್ ನಲ್ಲಿ ಟ್ಯಾಂಕರ್ ಚಾಲಕರು ವಿವಿಧ ‌ಬೇಡೇರಿಕೆ‌ ಈಡೇರಿಸುವಂತೆ ದಿಢೀರ್ ಪ್ರತಿಭಟನೆ‌ ನಡೆಸಿದ್ದಾಗಿ ತಿಳಿದುಬಂದಿದೆ. ಪೆಟ್ರೋಲಿಯಂ ಉತ್ಪನ್ನಗಳ ಲೋಡಿಂಗ್ ‌ನಲ್ಲಿ‌ ಆಗುತ್ತಿರುವ ಅಸಮರ್ಪಕ ನಿರ್ವಹಣೆ, ಅಧಿಕಾರಿಗಳ ವಿವಿಧ ನಿಯಮಗಳ ಕುರಿತು ಲೋಡಿಂಗ್ ಗೆ ಟ್ಯಾಂಕರ್ ಗಳನ್ನು ಕಳುಹಿಸದೇ ಚಾಲಕರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಟರ್ಮಿನಲ್ ನ ಹಿರಿಯ ಅಧಿಕಾರಿಗಳು ಚಾಲಕರ ಬೇಡಿಕೆಗಳನ್ನು ‌ಜೂ.26ರ ಒಳಗಾಗಿ ಸರಿಪಡಿಸುವ ಭರವಸೆ ನೀಡಿದ್ದಾಗಿ ತಿಳಿದುಬಂದಿದ್ದು, ಬಳಿಕ‌ ಚಾಲಕರು ಪ್ರತಿಭಟನೆ ಹಿಂತೆಗೆದುಕೊಂಡಿದ್ದಾರೆ.

ಮಂಗಳೂರು: ಇಂಡಿಯನ್ ಆಯಿಲ್ ಟ್ಯಾಂಕರ್ ಚಾಲಕರ ದಿಢೀರ್ ಪ್ರತಿಭಟನೆ| ಮನವಿಗೆ ಸ್ಪಂದಿಸಿದ ಅಧಿಕಾರಿಗಳು Read More »

ಹವಾಮಾನ ವರದಿ |ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ 

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 1 ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಒಂದು ವಾರ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವಡೆ ಜೂ.23ರಿಂದ ಜೂ.29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಜೂ.23ರಿಂದ ಜೂ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸ ಲಾಗಿದೆ. ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ,

ಹವಾಮಾನ ವರದಿ |ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ  Read More »

ಮಂಗಳೂರು: ಎರಡೆರಡು ಬಾರಿ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದಿದ್ದ ಗಣಿ ಇಲಾಖೆ ಡಿಡಿ ಸಸ್ಪೆಂಡ್

ಸಮಗ್ರ ನ್ಯೂಸ್: ಕಚೇರಿಯಲ್ಲಿ ದರ್ಬಾರ್ ಮಾಡುತ್ತಿದ್ದ ಅಧಿಕಾರಿಯನ್ನು ಕೊನೆಗೂ ಅಮಾನತು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಡಿಡಿ ಕೃಷ್ಣವೇಣಿ ಅನ್ನು ಇಲಾಖೆ ತನಿಖೆ ಬಾಕಿ ಇರಿಸಿ ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ ಮಂಜುನಾಥ್ ಭಾನುವಾರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್​​ ಶನಿವಾರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವ ಮೂಲಕ ಕೃಷ್ಣವೇಣಿಯನ್ನು ಸೇವೆಯಿಂದ ಅಮಾನತುಗೊಳಿಸಿ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಡಿಡಿ ಕೃಷ್ಣವೇಣಿ ಅವರ ಮೇಲೆ

ಮಂಗಳೂರು: ಎರಡೆರಡು ಬಾರಿ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದಿದ್ದ ಗಣಿ ಇಲಾಖೆ ಡಿಡಿ ಸಸ್ಪೆಂಡ್ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ

ಯೋಗದಿಂದ ಶಾರೀರಿಕ, ಮಾನಸಿಕತೆ ಸದೃಡತೆಗೊಳ್ಳುತ್ತದೆ. ಇದು ಮನುಷ್ಯನ ಶಾರೀರಿಕ ಮತ್ತು ಮಾನಸಿಕತೆ ಕೊಂಡಿಯಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಸುಳ್ಯ ಕೆ. ವಿ ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಇದರ ಸಹಯೋಗದಲ್ಲಿ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು.ಆಯುರ್ವೇದ ಕಾಲೇಜಿನ ವೈದ್ಯೆ ಡಾ.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆಯೋಗ ಶಾರೀರಿಕ ,ಮಾನಸಿಕ ಸದೃಡತೆಯ ಕೊಂಡಿ : ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ Read More »