Editor

ಕಾರಿಗೆ ಡಿಕ್ಕಿ ಹೊಡೆದ ಗೂಡ್ಸ್ ಆಟೋ| ಚಾಲಕನ ಜೊತೆ ವಾಗ್ವಾದ ಮಾಡಿದ ರಾಹುಲ್ ದ್ರಾವಿಡ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್, ಮಂಗಳವಾರ ಸಂಜೆ ಬೆಂಗಳೂರಿನ ರಸ್ತೆಯೊಂದರಲ್ಲಿ ತಮ್ಮ ಕಾರಿಗೆ ಡಿಕ್ಕಿ ಹೊಡೆದ ಆಟೋ ಚಾಲಕನೊಂದಿಗೆ ವಾಗ್ವಾದದಲ್ಲಿ ತೊಡಗಿದ್ದು, ಇದರ ವಿಡಿಯೋ ವೈರಲ್‌ ಆಗಿದೆ. ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಾಹುಲ್ ದ್ರಾವಿಡ್ ಅವರ ಕಾರು ಮತ್ತು ಗೂಡ್ಸ್ ಆಟೋ ನಡುವೆ ಸಣ್ಣ ಅಪಘಾತ ಸಂಭವಿಸಿತ್ತು. ಟ್ರಾಫಿಕ್‌ನಲ್ಲಿ ಸಿಲುಕಿದ್ದಾಗ ಆಟೋ ರಿಕ್ಷಾ ಹಿಂಬದಿಯಿಂದ ದ್ರಾವಿಡ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ದ್ರಾವಿಡ್, […]

ಕಾರಿಗೆ ಡಿಕ್ಕಿ ಹೊಡೆದ ಗೂಡ್ಸ್ ಆಟೋ| ಚಾಲಕನ ಜೊತೆ ವಾಗ್ವಾದ ಮಾಡಿದ ರಾಹುಲ್ ದ್ರಾವಿಡ್ Read More »

ಪುತ್ತೂರು: ಮನೆ ನೆಲಸಮ‌ ಮಾಡಿದ್ದು ನಾವಲ್ಲ – ಅಶೋಕ್ ರೈ

ಸಮಗ್ರ ನ್ಯೂಸ್: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆ ನೆಲಸಮ ಘಟನೆಗೆ ಸಂಬಂಧಿಸಿದಂತೆ ನೆಲಸಮವಾದ ಪ್ರದೇಶಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಮನೆ ನೆಲಸಮ ಮಾಡಿರುವುದರ ಹಿಂದೆ ದೇವಸ್ಥಾನದ ಆಡಳಿತ ಮಂಡಳಿ ಇಲ್ಲ, ಯಾರೋ ಭಕ್ತರುಮಾಡಿರುವ ಸಾಧ್ಯತೆಯಿದೆ, ಈ ಹಿಂದೆ ನನಗೆ ಹಲವು ಭಕ್ತರು ಮನೆಗಳನ್ನು ತೆರವುಗೊಳಿಸುವಂತೆ ಒತ್ತಡ ಹಾಕಿದ್ದರು. ಆದರೆ ಮಾತುಕತೆಯ ಮೂಲಕವೇ ಮನೆ ತೆರವುಗೊಳಿಸುವ ಉದ್ದೇಶ ನನ್ನಲ್ಲಿತ್ತು,

ಪುತ್ತೂರು: ಮನೆ ನೆಲಸಮ‌ ಮಾಡಿದ್ದು ನಾವಲ್ಲ – ಅಶೋಕ್ ರೈ Read More »

ಬಸ್ – ಬೈಕ್ ನಡುವೆ ಭೀಕರ ಅಪಘಾತ| ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವು; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೂವರು ಪುಟಾಣಿ ಮಕ್ಕಳ ಸಹಿತ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ಸುರಪುರ ತಾಲೂಕಿನ ತಿಂಥಣಿ ಬಳಿ ಮಧ್ಯಾಹ್ನ ಸಂಭವಿಸಿದೆ. ತಿಂಥಣಿ ಗ್ರಾಮದ ಕಮಾನ್ ಬಳಿ ಶ್ರೀರಂಗಪಟ್ಟಣ- ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಲಿಂಗಸೂಗೂರು ಕಡೆಯಿಂದ ಚಿಂಚೋಳಿ ಕಡೆಗೆ ಹೊರಟಿದ್ದ ಖಾಸಗಿ ಬಸ್ಸೊಂದು ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಲ್ಲಿ ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ

ಬಸ್ – ಬೈಕ್ ನಡುವೆ ಭೀಕರ ಅಪಘಾತ| ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವು; ಇಬ್ಬರು ಗಂಭೀರ Read More »

ಪ್ರಯಾಗದಲ್ಲಿ‌‌ ಪುಣ್ಯ ಸ್ನಾನ ಮಾಡಿದ‌ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಇಂದು ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಪ್ರಯಾಗ್‌ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಪವಿತ್ರ ಗಂಗಾ ಜಲಕ್ಕೆ ಅರ್ಥ್ಯ ಬಿಟ್ಟು ಸುತ್ತು ಬಂದು, ನೀರಿನ ಮಧ್ಯೆ ನಿಂತು ರುದ್ರಾಕ್ಷಿ ಮಾಲೆ ಹಿಡಿದುಕೊಂಡು ಧ್ಯಾನ ಮಾಡಿದರು. ಜ. 13 ರಿಂದ ಪ್ರಾರಂಭವಾದ ಮಹಾ ಕುಂಭಮೇಳವು ಫೆ. 26 ಮಹಾಶಿವರಾತ್ರಿಯವರೆಗೆ 44 ದಿನ ನಡೆಯಲಿದೆ. ಇದು ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೇಳವಾಗಿದ್ದು. ಪ್ರಪಂಚದಾದ್ಯಂತ ಭಕ್ತರನ್ನು

ಪ್ರಯಾಗದಲ್ಲಿ‌‌ ಪುಣ್ಯ ಸ್ನಾನ ಮಾಡಿದ‌ ಪ್ರಧಾನಿ ಮೋದಿ Read More »

ರಾಜ್ಯದಲ್ಲಿ‌ ಪೌತಿ ಖಾತೆ ಅಭಿಯಾನ| ಮನೆ ಬಾಗಿಲಿಗೇ ಬಂದು ನೋಂದಣಿ ಪ್ರಕ್ರಿಯೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಜಮೀನುಗಳ ಖಾತೆಗಳು ಇನ್ನೂ ನಿಧನ ಹೊಂದಿದವರ ಹೆಸರಿನಲ್ಲೇ ಇರುವ ಕಾರಣ, ಪೌತಿ ಖಾತೆ ಅಭಿಯಾನದ ಮೂಲಕ ವಾರಸುದಾರರ ಹೆಸರಿಗೆ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಕಂದಾಯ ಇಲಾಖೆ ಮುಂದಾಗಿದೆ. ಮಂಗಳವಾರ ನಗರದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಈ ಹಿಂದೆ ಪೌತಿ ಖಾತೆ ಅಭಿಯಾನ ರಾಜ್ಯದಲ್ಲಿ ನಡೆದಿತ್ತಾದರೂ ನಿರೀಕ್ಷಿತ ಮಟ್ಟದಲ್ಲಿ ಜಾರಿಗೆ ಬಂದಿಲ್ಲ. ಹೀಗಾಗಿ, ಮೃತರ ಹೆಸರಿನಲ್ಲಿ ಉಳಿದಿರುವ ಜಮೀನಿನ ದಾಖಲೆಗಳನ್ನು ವಾರಸುದಾರರಿಗೆ ವರ್ಗಾವಣೆ ಮಾಡುವ

ರಾಜ್ಯದಲ್ಲಿ‌ ಪೌತಿ ಖಾತೆ ಅಭಿಯಾನ| ಮನೆ ಬಾಗಿಲಿಗೇ ಬಂದು ನೋಂದಣಿ ಪ್ರಕ್ರಿಯೆ Read More »

ಗೃಹಲಕ್ಷ್ಮಿ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ

ಸಮಗ್ರ ನ್ಯೂಸ್: ಆಶಾ ಕಾರ್ಯಕರ್ತೆಯೊಬ್ಬರು ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು 24 ಸಾವಿರ ಹಣವನ್ನು ಶಾಲೆಗೆ ಅಭಿವೃದ್ದಿಗೆ ನೀಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐರಣಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ಅವರು ಸರ್ಕಾರ ಗೃಹಲಕ್ಷ್ಮಿ ಯೋಜನೆ ಹಣವನ್ನು ಉಳಿಸಿ 24,000 ಹಣವನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ದಿಗೆ ನೀಡಿದ್ದಾರೆ. ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಕಂಡು ಬಂತು. ದೂರದ ಶುದ್ದ ಘಟಕದಿಂದ ನೀರು ತರುತ್ತಿದ್ದರು. ಮಕ್ಕಳಿಗೆ

ಗೃಹಲಕ್ಷ್ಮಿ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ Read More »

ಕದ್ದ ಹಣದಲ್ಲಿ ಪ್ರೇಯಸಿಗೆ 3 ಕೋಟಿ ವೆಚ್ಚದ ಮನೆ ನಿರ್ಮಿಸಿಕೊಟ್ಟ ಕಳ್ಳ

ಸಮಗ್ರ ನ್ಯೂಸ್: ಹಲವು ರಾಜ್ಯಗಳಲ್ಲಿ 150ಕ್ಕೂ ಹೆಚ್ಚು ಮನೆಗಳ್ಳತನ ನಡೆಸಿ, ಕದ್ದ ಹಣ ಹಾಗೂ ಚಿನ್ನಾಭರಣದಿಂದಲೇ ಪ್ರೇಯಸಿಗೆ ₹3 ಕೋಟಿ ವೆಚ್ಚದಲ್ಲಿ ಐಷಾರಾಮಿ ಮನೆ ನಿರ್ಮಿಸಿಕೊಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂತರ ರಾಜ್ಯ ಕಳ್ಳ, ಮಹಾರಾಷ್ಟ್ರದ ಸೊಲ್ಲಾಪುರದ ನಿವಾಸಿ ಪಂಚಾಕ್ಷರಿ ಸಂಗಯ್ಯಸ್ವಾಮಿ(37) ಎಂಬಾತನನ್ನು ಮಡಿವಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಕೋಲ್ಕತ್ತಾದಲ್ಲಿ ಪ್ರೇಯಸಿಗೆ ಮನೆ ನಿರ್ಮಿಸಿರುವ ವಿಷಯ ತನಿಖೆ ವೇಳೆ ಗೊತ್ತಾಗಿದೆ. ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿಯಿಂದ 181 ಗ್ರಾಂ ಚಿನ್ನದ ಗಟ್ಟಿ, 33

ಕದ್ದ ಹಣದಲ್ಲಿ ಪ್ರೇಯಸಿಗೆ 3 ಕೋಟಿ ವೆಚ್ಚದ ಮನೆ ನಿರ್ಮಿಸಿಕೊಟ್ಟ ಕಳ್ಳ Read More »

ಮಹಾಕುಂಭದಲ್ಲಿಂದು ಪ್ರಧಾನಿ ಮೋದಿ ಪುಣ್ಯ ಸ್ನಾನ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪುಣ್ಯಸ್ನಾನ ಮಾಡಲಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಮುಳುಗೇಳುವ ಸಲುವಾಗಿ ಮೋದಿ ಇಂದು ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ. ಮಹಾಕುಂಭಮೇಳಕ್ಕೆ ಆಗಮಿಸುವವರಿಗೆ ಕಲ್ಪಿಸಿರುವ ವ್ಯವಸ್ಥೆಗಳನ್ನು ಪರಿಶೀಲಿಸಲಿರುವ ಪ್ರಧಾನಿ ಬಳಿಕ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರಧಾನಿ ಜೊತೆಗಿರುತ್ತಾರೆ. ಕೆಲವು ಪ್ರಮುಖ ಅಖಾಡಗಳ ಸಾಧು ಸಂತರೊಂದಿಗೂ ಮೋದಿ ಸಂವಾದನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಯಾಗ್‌ರಾಜ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಮೋದಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ

ಮಹಾಕುಂಭದಲ್ಲಿಂದು ಪ್ರಧಾನಿ ಮೋದಿ ಪುಣ್ಯ ಸ್ನಾನ Read More »

ಪುತ್ತೂರು: ಭೀಕರ ರಸ್ತೆ ಅಪಘಾತ| ಖಾಸಗಿ ವಾಹಿನಿಯ ಛಾಯಾಗ್ರಾಹಕ ದುರ್ಮರಣ

ಸಮಗ್ರ ನ್ಯೂಸ್: ಪುತ್ತೂರಿನ ಹೊರವಲಯ ಮುರ ಎಂಬಲ್ಲಿ ನಿನ್ನೆ (ಫೆ 4) ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಚೇತನ್‌ ಕೆಮ್ಮಿಂಜೆ ಮೃತಪಟ್ಟವರು ಎಂದು ವರದಿಯಾಗಿದೆ. ಇವರು ಖಾಸಗಿ ವಾಹಿನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಬೈಕ್‌ ಹಾಗೂ ಆಟೋ ರಿಕ್ಷಾ ಮಧ್ಯೆ ಈ ಅಪಘಾತ ಸಂಭವಿಸಿದೆ. ಬೈಕ್‌ ನಲ್ಲಿ ಚೇತನ್‌ ಜತೆಗೆ ಇನ್ನೋರ್ವ ಬಾಲಕ ಕೂಡ ಇದ್ದ ಎಂದು ತಿಳಿದು ಬಂದಿದೆ. ಚೇತನ್‌

ಪುತ್ತೂರು: ಭೀಕರ ರಸ್ತೆ ಅಪಘಾತ| ಖಾಸಗಿ ವಾಹಿನಿಯ ಛಾಯಾಗ್ರಾಹಕ ದುರ್ಮರಣ Read More »

ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಹಾಲುಮಡ್ಡಿ ಮರ; ಸವಾರ ಗಂಭೀರ

ಸಮಗ್ರ ನ್ಯೂಸ್. ಚಲಿಸುತ್ತಿದ್ದ ಬೈಕ್ ಮೇಲೆ ಹಾಲು ಮಡ್ಡಿ (ಧೂಪ) ಮರ ಬಿದ್ದು ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ(ಫೆ.4) ಸಂಜೆ ನಡೆದಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಅದಾದ ಬಳಿಕ ಸಾರ್ವಜನಿಕರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಒತ್ತಾಯಿಸಿದ್ದರು. ಇದೀಗ ಮತ್ತೆ ಅಂತಹುದೇ ಘಟನೆ

ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಹಾಲುಮಡ್ಡಿ ಮರ; ಸವಾರ ಗಂಭೀರ Read More »