Editor

ಸುಬ್ರಹ್ಮಣ್ಯ: ಮತದಾರರ ಭೇಟಿಗೆ ಹಗ್ಗದ ಸಹಾಯದಿಂದ ಹೊಳೆ ದಾಟಿದ ಬಿಎಲ್ಒ!!

ಸಮಗ್ರ ನ್ಯೂಸ್: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ನಿಯೋಜನೆ ಗೊಂಡಿರುವ ಬೂತ್ ಮಟ್ಟದ ಅಧಿಕಾರಿಗಳು ಹಗ್ಗಕ್ಕೆ ಕಟ್ಟಿರುವ ಪರಿಕರದ ಸಹಾಯದಿಂದ ಹೊಳೆ ದಾಟಿ ಮತದಾರರ ಎಸ್‌ಐಆರ್‌ ಪ್ರಕ್ರಿಯೆಗೆ ನೆರವಾದರು.ಸುಳ್ಯ ವಿಧಾನಸಭಾ ವ್ಯಾಪ್ತಿಯ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಬಾಣೂರು ಕಟ್ಟೆಮನೆ ಸಮೀಪ ಹೊಳೆಯ ಆಚೆ ಮೂರು ಮನೆಗಳಿವೆ. ಅಲ್ಲಿಗೆ ನೇರ ರಸ್ತೆ ಸಂಪರ್ಕವಿಲ್ಲ. ರಸ್ತೆ ಮಾರ್ಗವಾಗಿ ತೆರಳಬೇಕಾದರೆ ಬಾಳುಗೋಡು ಮಾರ್ಗವಾಗಿ ಸುತ್ತು ಬಳಸಿ ಹೋಗಬೇಕಾಗುತ್ತದೆ. ಈ ಕಾರಣ ಬಿಳಿನೆಲೆಬೈಲು ಸರ್ಕಾರಿ ಶಾಲೆಯ ಶಿಕ್ಷಕರಾಗಿರುವ […]

ಸುಬ್ರಹ್ಮಣ್ಯ: ಮತದಾರರ ಭೇಟಿಗೆ ಹಗ್ಗದ ಸಹಾಯದಿಂದ ಹೊಳೆ ದಾಟಿದ ಬಿಎಲ್ಒ!! Read More »

ಧರ್ಮಸ್ಥಳ ‌ಬುರುಡೆ ಪ್ರಕರಣ| ಎಸ್ಐಟಿ‌ಯಿಂದ 7005 ಪುಟಗಳ ಅಂತಿಮ‌ ವರದಿ ಸಲ್ಲಿಕೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ‘ಬುರುಡೆ ಷಡ್ಯಂತ್ರ’ದ (ಮೊಕದ್ದಮೆ ಸಂಖ್ಯೆ: 39/2025) ತನಿಖೆಯನ್ನು ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ (SIT), ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಬರೋಬ್ಬರಿ 7,005 ಪುಟಗಳ ಬೃಹತ್ ಅಂತಿಮ ವರದಿಯನ್ನು ಹಸ್ತಾಂತರಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡವು ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ಹಾಜರಾಗಿ, ಒಟ್ಟು 12 ಕಡತಗಳಲ್ಲಡಗಿರುವ ಸಮಗ್ರ ತನಿಖಾ

ಧರ್ಮಸ್ಥಳ ‌ಬುರುಡೆ ಪ್ರಕರಣ| ಎಸ್ಐಟಿ‌ಯಿಂದ 7005 ಪುಟಗಳ ಅಂತಿಮ‌ ವರದಿ ಸಲ್ಲಿಕೆ Read More »

ಕಣ್ಮರೆಯಾದ ಮುಂಗಾರು ಮಳೆ| ಕರಾವಳಿ, ಉತ್ತರ ಕರ್ನಾಟಕಕ್ಕೆ ಬಿಸಿಗಾಳಿ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಹೆಚ್ಚಿನ ಭಾಗದಲ್ಲಿ ನಾಲ್ಕೈದು ದಿನದಿಂದ ಮುಂಗಾರು ಮಳೆಯಾಗಿ ಬಿಸಿಲ ವಾತಾವರಣ ಶುರುವಾಗಿದೆ. ಎರಡು ದಿನದಿಂದ ಬಿಸಿಲ ಪ್ರಮಾಣ ಏರಿಕೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಗಾಳಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುನ್ಸೂಚನೆ ನೀಡಿದೆ. ಮುಂದಿನ 24

ಕಣ್ಮರೆಯಾದ ಮುಂಗಾರು ಮಳೆ| ಕರಾವಳಿ, ಉತ್ತರ ಕರ್ನಾಟಕಕ್ಕೆ ಬಿಸಿಗಾಳಿ ಮುನ್ಸೂಚನೆ Read More »

ಮತದಾರರ ಪಟ್ಟಿ ಪರಿಷ್ಕರಣೆ| ಜು.29ರೊಳಗೆ ಎಸ್ಐಆರ್ ಫಾರಂ ಹಿಂತಿರುಗಿಸಲು ಡಿಸಿ ಮನವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ನಡೆಯುತ್ತಿರುವ ಎನ್‌ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತಲುಪಿಸಿರುವ ಎಸ್‌ಐಆರ್ (SIR) ಅರ್ಜಿಗಳನ್ನು ಮತದಾರರು ಜುಲೈ 29 ರ ಒಳಗಾಗಿ ಸರಿಯಾಗಿ ಭರ್ತಿ ಮಾಡಿ ಹಿಂತಿರುಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ಅರ್ಹ ಮತದಾರರ ಹಕ್ಕನ್ನು ರಕ್ಷಿಸುವ ಈ ಪ್ರಕ್ರಿಯೆಯಲ್ಲಿ ನಾಗರಿಕರು ಆಡಳಿತದೊಂದಿಗೆ ಕೈಜೋಡಿಸುವುದು ಅನಿವಾರ್ಯವಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ| ಜು.29ರೊಳಗೆ ಎಸ್ಐಆರ್ ಫಾರಂ ಹಿಂತಿರುಗಿಸಲು ಡಿಸಿ ಮನವಿ Read More »

ತಿರುಪತಿಯಲ್ಲಿ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ| ಕರ್ನಾಟಕ ಸಿಎಂ ಪತ್ರಕ್ಕೆ ಮಂಗಳಾರತಿ

ಸಮಗ್ರ ನ್ಯೂಸ್: ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಮಂಗಳಾರತಿ ಪ್ರೋಟೋಕಾಲ್ ಬದಲಾವಣೆ ಹಾಗೂ ವಿಐಪಿ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ಟಿಟಿಡಿ ಮಂಡಳಿ ಆಕ್ಷೇಪಣೆ ವ್ಯಕ್ತಪಡಿಸಿದೆ. ತಿರುಪತಿ ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುವ ಟಿಟಿಡಿ ಮಂಡಳಿಯ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಅತ್ಯಂತ ಪವಿತ್ರವಾದ ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿರುವ ತಿರುಪತಿಯನ್ನು ರಾಜಕೀಯ ಕ್ಷೇತ್ರವನ್ನಾಗಿ ಮಾಡಬೇಡಿ. ಆರತಿಯ ಪ್ರಸ್ತುತ ಪ್ರೋಟೋಕಾಲ್‌ಗಳನ್ನು ನಿಮಗಾಗಿ ಬದಲಾಯಿಸಲಾಗುವುದಿಲ್ಲ,’ ಎಂದು ಹೇಳುವ ಮೂಲಕ ಕರ್ನಾಟಕದ ಸಿಎಂ

ತಿರುಪತಿಯಲ್ಲಿ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ| ಕರ್ನಾಟಕ ಸಿಎಂ ಪತ್ರಕ್ಕೆ ಮಂಗಳಾರತಿ Read More »

ಮಂಗಳೂರಿನಲ್ಲಿ ಮತ್ತೆ 11 ಮಂದಿ ಬಾಂಗ್ಲಾ ವಲಸಿಗರು ಪತ್ತೆ

ಸಮಗ್ರ ನ್ಯೂಸ್: ಕಡಲ‌ ನಗರಿ ಮಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಉರ್ವಾ ಸಮೀಪದ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ದಾಳಿ ನಡೆಸಿ ನಾಲ್ವರು ಅಪ್ರಾಪ್ತರು ಸೇರಿದಂತೆ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಸುರತ್ಕಲ್‌ನಲ್ಲಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಈ ದಾಳಿ ನಡೆದಿದ್ದು, ಇದರೊಂದಿಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಲ್ಲಿ ಬಂಧಿತರಾದ ಅಕ್ರಮ ವಲಸಿಗರ ಒಟ್ಟು ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಬಂಧಿತ ಆರೋಪಿಗಳು ಪಶ್ಚಿಮ ಬಂಗಾಳದ ನಕಲಿ

ಮಂಗಳೂರಿನಲ್ಲಿ ಮತ್ತೆ 11 ಮಂದಿ ಬಾಂಗ್ಲಾ ವಲಸಿಗರು ಪತ್ತೆ Read More »

ಅಮೇರಿಕಾ – ಇರಾನ್ ನಡುವೆ ಸಂಘರ್ಷ| ಕಚ್ಚಾ ತೈಲ ದರ ದಿಢೀರ್ ಏರಿಕೆ

ಸಮಗ್ರ ನ್ಯೂಸ್: ಜಾಗತಿಕ ಇಂಧನ ಸಾಗಣೆಯ ಅತ್ಯಂತ ಪ್ರಮುಖ ಕೊಂಡಿಯಾಗಿರುವ ಹಾರ್ಮುಜ್ ಜಲಸಂಧಿಯ ಮೇಲೆ ಹಿಡಿತ ಸಾಧಿಸುವ ಜಿದ್ದಾಜಿದ್ದಿನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸೇನಾ ಸಂಘರ್ಷ ತಾರಕಕ್ಕೇರಿದೆ. ವಿರುದ್ಧ ಪರಸ್ಪರ ಭೀಕರ ದಾಳಿಗಳು ತೀವ್ರಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸೋಮವಾರ ಶೇಕಡಾ 4 ಕ್ಕಿಂತಲೂ ಹೆಚ್ಚು ಜಿಗಿತ ಕಂಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯ ಪ್ರಮುಖ ಸೂಚ್ಯಂಕವಾದ ಬ್ರೆಂಟ್ ಕಚ್ಚಾ ತೈಲದ ಸೆಪ್ಟೆಂಬರ್ ಡೆಲಿವರಿ ಭವಿಷ್ಯದ ವಹಿವಾಟು ದರವು ಸೋಮವಾರ ಮುಂಜಾನೆ (ಜಿಎಂಟಿ 03:00

ಅಮೇರಿಕಾ – ಇರಾನ್ ನಡುವೆ ಸಂಘರ್ಷ| ಕಚ್ಚಾ ತೈಲ ದರ ದಿಢೀರ್ ಏರಿಕೆ Read More »

ಮೌನವಾದ ಮುಂಗಾರು| ಇನ್ಯಾವಾಗ ಮಳೆ? ಇಲ್ಲಿದೆ ಮಾಹಿತಿ…

ಸಮಗ್ರ ನ್ಯೂಸ್: ದೇಶದಲ್ಲಿ ಕೆಲವು ದಿನಗಳ ಹಿಂದಷ್ಟೇ ಚುರುಕು ಪಡೆದಿದ್ದ ಮುಂಗಾರು ಮಾರುತಗಳು ಎಲ್‌ನಿನೊ ಪ್ರಭಾವದಿಂದ ಮತ್ತೆ ದುರ್ಬಲಗೊಂಡಿದ್ದು, ಶುಷ್ಕ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ರಾಜ್ಯದಲ್ಲೂ ಕೆಲವು ದಿನಗಳಿಂದ ಬಿಸಿಲ ಝಳ ಏರುತ್ತಿದ್ದು, ಉತ್ತಮ ಮಳೆಯಾದ ಪ್ರದೇಶಗಳಲ್ಲಿ ಬಿತ್ತನೆ ಮಾಡಿದ್ದ ರೈತರಲ್ಲಿ ಆತಂಕ ಮನೆ ಮಾಡಿದೆ. ನೈರುತ್ಯ ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು, ಮೂರ್ನಾಲ್ಕು ದಿನಗಳಲ್ಲಿ ಮಧ್ಯ, ಪಶ್ಚಿಮ ಮತ್ತು ವಾಯುವ್ಯ ಭಾರತದ ಬಹುತೇಕ ಭಾಗಗಳಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ

ಮೌನವಾದ ಮುಂಗಾರು| ಇನ್ಯಾವಾಗ ಮಳೆ? ಇಲ್ಲಿದೆ ಮಾಹಿತಿ… Read More »

ಕೊಲ್ಲೂರಿಗೆ ಹೆಣ್ಣಾನೆ ಇದ್ರೆ ದಾನ ಮಾಡಿ| ಕೇರಳಕ್ಕೆ ಪತ್ರ ಬರೆದ ಸಿಎಂ ಡಿಕೆಶಿ

ಸಮಗ್ರ ನ್ಯೂಸ್: ಐತಿಹಾಸಿಕ ಮತ್ತು ಧಾರ್ಮಿಕ ಹಿನ್ನೆಲೆಯುಳ್ಳ ಕರ್ನಾಟಕದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಧಾರ್ಮಿಕ ವಿಧಿವಿಧಾನಗಳಿಗಾಗಿ ಹೆಣ್ಣು ಸಾಕಾನೆಯೊಂದನ್ನು ದಾನವಾಗಿ ನೀಡುವಂತೆ ಕರ್ನಾಟಕ ಸರ್ಕಾರವು ಕೇರಳ ಸರ್ಕಾರಕ್ಕೆ ಅಧಿಕೃತ ವಿನಂತಿ ಮಾಡಿದೆ. ನೆರೆರಾಜ್ಯಗಳಿಗೆ ಸಾಕಾನೆಗಳನ್ನು ದಾನ ಮಾಡುವ ಅಥವಾ ವರ್ಗಾವಣೆ ಮಾಡುವಂತೆ ಕೇರಳ ಅರಣ್ಯ ಇಲಾಖೆಯ ಮೇಲೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಈ

ಕೊಲ್ಲೂರಿಗೆ ಹೆಣ್ಣಾನೆ ಇದ್ರೆ ದಾನ ಮಾಡಿ| ಕೇರಳಕ್ಕೆ ಪತ್ರ ಬರೆದ ಸಿಎಂ ಡಿಕೆಶಿ Read More »

ನೇಪಾಳದಲ್ಲಿ ಬೆಳಗಾವಿಯ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಂದ ರೂಂಮೇಟ್

ಸಮಗ್ರ ನ್ಯೂಸ್: ಉದ್ಯೋಗಕ್ಕಾಗಿ ನೇಪಾಳದಲ್ಲಿ ನೆಲೆಸಿದ್ದ ಕರ್ನಾಟಕದ ಬೆಳಗಾವಿ ಮೂಲದ 25 ವರ್ಷದ ಯುವಕನೊಬ್ಬನನ್ನು ತನ್ನ ರೂಂಮೇಟ್‌ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಕೊಲೆಯಾಗಿರುವ ಯುವಕ ಭಾರತೀಯ ಮೂಲದವನಾಗಿದ್ದು, ಕರ್ನಾಟಕದ ಬೆಳಗಾವಿ ಜಿಲ್ಲೆಯ ಖಾನಾಪುರ ನಿವಾಸಿ 25 ವರ್ಷದ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ ಎಂದು ಗುರುತಿಸಲಾಗಿದೆ. ಈತ ನೇಪಾಳದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡಲೆಂದು ಅಲ್ಲಿಗೆ ಕೇವಲ 25 ದಿನಗಳ ಹಿಂದೆಯೇ ತೆರಳಿದ್ದಾನೆ ಎಂದು ತಿಳಿದುಬಂದಿದೆ.

ನೇಪಾಳದಲ್ಲಿ ಬೆಳಗಾವಿಯ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಂದ ರೂಂಮೇಟ್ Read More »