Editor

ಮಂಗಳೂರು: ಮಹಾಮಳೆಗೆ ಬಲಿಯಾದವರಿಗೆ ತಲಾ ೬ ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಸುರಿದ ಮಹಾಮಳೆಗೆ ಒಂದೇ ದಿನ ಐವರು ಬಲಿಯಾಗಿದ್ದಾರೆ. ಇದೀಗ ಐವರ ಕುಟುಂಬಸ್ಥರಿಗೂ ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು 6 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಗೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಭೂಕುಸಿತದಿಂದ ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಅಲ್ಲದೇ ನೇರಳಕಟ್ಟೆ ಬಳಿ ಭಾರಿ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿತ್ತು. ಈ ವೇಳೆ […]

ಮಂಗಳೂರು: ಮಹಾಮಳೆಗೆ ಬಲಿಯಾದವರಿಗೆ ತಲಾ ೬ ಲಕ್ಷ ಪರಿಹಾರ ಘೋಷಣೆ Read More »

ಮಿಸೆಸ್ ಇಂಡಿಯಾ ಮಂಗಳೂರು ಸ್ಪರ್ಧೆಯಲ್ಲಿ ತಶ್ಮಾ ಚೇತನ್ ಗೆ ಕಿರೀಟ

ಸಮಗ್ರ ನ್ಯೂಸ್: ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್, ಪಾತ್ ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಲೇಡಿಸ್ ಸಲೂನ್ ಸಹಯೋಗದಲ್ಲಿ ಎಡ್ಜ್ 9 ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 6ನೇ ಆವೃತ್ತಿಯ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನ ಉಳಾಯಿಬೆಟ್ಟು ಪೆರ್ಮಂಕಿಯ ಆಸ್ಕರ್ ಕ್ಲಬ್‌ನಲ್ಲಿ ನಡೆಯಿತು. ಮಿಸೆಸ್ ವಿಭಾಗದಲ್ಲಿ ತಶ್ಮಾ ಚೇತನ್ ಗೆಲುವನ್ನು ಸಾಧಿಸಿದ್ದು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಕಿರೀಟ ತಮ್ಮದಾಗಿಸಿಕೊಂಡರು. ಐಸಿರಿ ರೈ ಪ್ರಥಮ ರನ್ನರ್ ಅಪ್, ಶಕುಂತಲಾ

ಮಿಸೆಸ್ ಇಂಡಿಯಾ ಮಂಗಳೂರು ಸ್ಪರ್ಧೆಯಲ್ಲಿ ತಶ್ಮಾ ಚೇತನ್ ಗೆ ಕಿರೀಟ Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ಮೇ 31ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿ

ಸಮಗ್ರ ನ್ಯೂಸ್: ಭಾರೀ ಮಳೆ ಕಾರಣದಿಂದ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಅಮರ್ ಜಾಲು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ನಿವಾಸಿ ವಿಜೇಶ್ ಜೈನ್ (27) ಮೃತ ಸಹಾಯಕ ಪವರ್ ಮ್ಯಾನ್. ವಿಜೇಶ್ ಅವರು HT ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಮೃತ ವಿಜೇಶ್ ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ದಂಪತಿಯ ಎರಡನೇ ಮಗ.

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿ Read More »

ಮಂಗಳೂರು: ಮನೆ ಮೇಲೆ ಧರೆ ಕುಸಿದ ಪ್ರಕರಣ| ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಸಮಗ್ರ ನ್ಯೂಸ್:;ಮನೆ ಮೇಲೆ ಧರೆ ಕುಸಿದು ಬಿದ್ದು ಜನರು ಸಿಲುಕಿದ್ದ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿದೆ. ತಾಯಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದ್ದು, ಆದರೆ ಇಬ್ಬರು ಮಕ್ಕಳು ಕೂಡಾ ಅಸುನೀಗಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು ಮೂವರ ರಕ್ಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಶುಕ್ರವಾರ (ಮೇ 30) ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಬಿದ್ದಿತ್ತು. ತೋಟದ ನಡುವಿರುವ ಮನೆಯ

ಮಂಗಳೂರು: ಮನೆ ಮೇಲೆ ಧರೆ ಕುಸಿದ ಪ್ರಕರಣ| ಮೃತರ ಸಂಖ್ಯೆ ಮೂರಕ್ಕೆ ಏರಿಕೆ Read More »

ಮಂಗಳೂರು: ಧರೆ ಕುಸಿದು ಮಹಿಳೆ ಮತ್ತು ಬಾಲಕಿ ಸಾವು

ಸಮಗ್ರ ನ್ಯೂಸ್: ಮಂಗಳೂರು ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದೇರಳಕಟ್ಟೆಯ ಮೊಂಟೆದಪದವು ಎಂಬಲ್ಲಿ ಫಾತಿಮಾ ಎಂಬ 7 ವರ್ಷದ ಬಾಲಕಿ ಹಾಗೂ ಮಹಿಳೆ ವ್ಯಾಪಕ ಮಳೆಯಿಂದ ಭೂಕುಸಿತ ಉಂಟಾಗಿ ಮೃತಪಟ್ಟಿದ್ದಾರೆ. ಜೋಕಟ್ಟೆ ಗ್ರಾಮ ಪಂಚಾಯತ್ ಹತ್ತಿರ ಭೂಕುಸಿತ ಉಂಟಾಗಿದ್ದು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ

ಮಂಗಳೂರು: ಧರೆ ಕುಸಿದು ಮಹಿಳೆ ಮತ್ತು ಬಾಲಕಿ ಸಾವು Read More »

ಹೆಂಡತಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಹೆಂಡತಿ ಕಾಟಕ್ಕೆ ಬೇಸತ್ತು ಡೆತ್​ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ. ತನ್ನದೇ ಕಂಪ್ಯೂಟರ್ ಶಾಪ್​​ನಲ್ಲಿ ವೈಯರ್​ದಿಂದ ನೇಣು ಬಿಗಿದುಕೊಂಡು ಸುನೀಲ್ ಮೂಲಿಮನಿ (33) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ತನ್ನ ಸಾವಿಗೆ ಹೆಂಡತಿ ಕಾರಣ ಅಂತಾ ಡೆತ್ ನೋಟ್ ಬರೆದಿಟ್ಟಿದ್ದಾರೆ. ಸದ್ಯ ಉದ್ಯಮಬಾಗ ಠಾಣೆಯಲ್ಲಿ 108 ಸೆಕ್ಷನ್ ಅಡಿಯಲ್ಲಿ ಕೇಸ್​​ ದಾಖಲಾಗಿದೆ. ನಾಲ್ಕು ವರ್ಷದ ಹಿಂದೆ ಪೂಜಾ ಎಂಬುವವರನ್ನು ಸುನೀಲ್​ ಮದುವೆಯಾಗಿದ್ದರು. ಮೂರು ವರ್ಷದ

ಹೆಂಡತಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ Read More »

ಹಿರಿಯ ಸಾಹಿತಿ ಹೆಚ್.ಎಸ್ ವೆಂಕಟೇಶ ಮೂರ್ತಿ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್‌ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ.80 ವರ್ಷ ವಯಸ್ಸಿನ ಎಚ್‌ಎಸ್‌ವಿ ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಚ್.ಎಸ್.

ಹಿರಿಯ ಸಾಹಿತಿ ಹೆಚ್.ಎಸ್ ವೆಂಕಟೇಶ ಮೂರ್ತಿ ಇನ್ನಿಲ್ಲ Read More »

ಭಾರೀ ಮಳೆ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್; ಭಾರೀ ಮಳೆಯ ಹಿನ್ನೆಲೆ ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮೇ.30ರ ಇಂದು ರಜೆ ಘೋಷಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮಕ್ಕಳು ಸೇರಿದಂತೆ ಜನ ಸಾಮಾನ್ಯರು ನದಿ, ಹಳ್ಳ ಕೊಳ್ಳ ಸಮುದ್ರ ತೀರದತ್ತ ಹೋಗದಂತೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ಭಾರೀ ಮಳೆ ಹಿನ್ನಲೆ| ದ.ಕ ಮತ್ತು ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಜೈಶ್ ಎ ಮೊಹಮ್ಮದ್ ಸಂಘಟನೆ ಹೆಸರಲ್ಲಿ ಪುತ್ತೂರಿನ ಹಿಂದೂ ಮುಖಂಡನಿಗೆ ಕೊಲೆ ಬೆದರಿಕೆ

ಸಮಗ್ರ ನ್ಯೂಸ್: ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಬಾಷೆಯಲ್ಲಿ ವಾಟ್ಸ್‌ಅಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರಿಗೆ ಈ ಬೆದರಿಕೆ ಬಂದಿದ್ದು, ಬೆದರಿಕೆ ಆಡಿಯೋದಲ್ಲಿ ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ, ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ, ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ, ಆದರೆ

ಜೈಶ್ ಎ ಮೊಹಮ್ಮದ್ ಸಂಘಟನೆ ಹೆಸರಲ್ಲಿ ಪುತ್ತೂರಿನ ಹಿಂದೂ ಮುಖಂಡನಿಗೆ ಕೊಲೆ ಬೆದರಿಕೆ Read More »