Editor

ಐಪಿಎಲ್ ಕ್ರಿಕೆಟ್| ಫೈನಲ್ ಗೆ ಲಗ್ಗೆ‌ ಇಟ್ಟ ಆರ್ ಸಿಬಿ

ಸಮಗ್ರ ನ್ಯೂಸ್: ಐಪಿಎಲ್‌ ಪಂದ್ಯಾವಳಿಯ ಗುರುವಾರ ನಡೆದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಅವರದ್ದೇ ನೆಲದಲ್ಲಿ ಸೋಲುಣಿಸಿ ಅತ್ಯಮೋಘ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಬಿಗಿ ದಾಳಿಗೆ ನಲುಗಿದ ಪಂಜಾಬ್‌ ಕಿಂಗ್ಸ್‌ 101 ರನ್ ಗಳ ಸಣ್ಣ ಮೊತ್ತಕ್ಕೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಆರ್ ಸಿಬಿ 10 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 106 […]

ಐಪಿಎಲ್ ಕ್ರಿಕೆಟ್| ಫೈನಲ್ ಗೆ ಲಗ್ಗೆ‌ ಇಟ್ಟ ಆರ್ ಸಿಬಿ Read More »

ಮಂಗಳೂರಿನಲ್ಲಿ ಸರಣಿ ಹತ್ಯೆ| ಹಿರಿಯ ಪೊಲೀಸ್ ಅಧಿಕಾರಿಗಳ ಎತ್ತಂಗಡಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ನಡೆದ‌ ಸರಣಿ ಹತ್ಯೆ ಹಿನ್ನಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ರನ್ನು ವರ್ಗಾವಣೆಗೊಳಿಸಿದ್ದು ಅವರ ಸ್ಥಾನಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಿಸಲಾಗಿದೆ. ದ.ಕ ಜಿಲ್ಲಾ ಎಸ್ ಪಿ ಯತೀಶ್ ರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಎಸ್ ಪಿಯಾಗಿ ಅರುಣ್ ಅವರನ್ನು ನೇಮಿಸಲಾಗಿದೆ. ಉಡುಪಿ ನೂತನ ಕಮಿಷನರ್ ಆಗಿ ಹರಿರಾಮ್ ಶಂಕರ್ ರನ್ನು ನೇಮಿಸಿ ಆದೇಶಿಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಪೊಲೀಸ್

ಮಂಗಳೂರಿನಲ್ಲಿ ಸರಣಿ ಹತ್ಯೆ| ಹಿರಿಯ ಪೊಲೀಸ್ ಅಧಿಕಾರಿಗಳ ಎತ್ತಂಗಡಿ Read More »

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಬಂಧಿತ ಆರೋಪಿಗಳ ವಿವರ ಬಹಿರಂಗಪಡಿಸಿದ ‌ಪೊಲೀಸರು

ಸಮಗ್ರ ನ್ಯೂಸ್: ಮೇ 27 ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೇ 29 ರಂದು(ಗುರುವಾರ) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ ಪೂಜಾರಿ(21),ಬಂಟ್ವಾಳದ ಅಮ್ಮುಂಜೆ ಗ್ರಾಮದ ಪ್ರಥ್ವಿರಾಜ್ ಜೋಗಿ (21) ಮತ್ತು ಅಮ್ಮುಂಜೆ ಗ್ರಾಮದ ಚಿಂತನ್ ಬೆಳ್ಚಡ (19) ಎಂದು ಗುರುತಿಸಲಾಗಿದೆ. ಮೂವರನ್ನು ಬಂಟ್ವಾಳದ ಕಳ್ಳಿಗೆ

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಬಂಧಿತ ಆರೋಪಿಗಳ ವಿವರ ಬಹಿರಂಗಪಡಿಸಿದ ‌ಪೊಲೀಸರು Read More »

ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾಗಳು ಬ್ಯಾನ್| ಸಚಿವ ಶಿವರಾಜ್ ತಂಗಡಗಿ ಪತ್ರ

ಸಮಗ್ರ ನ್ಯೂಸ್: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ನಿಷೇಧಿಸುವಂತೆ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಕನ್ನಡದ ಹಲವು ಚಿತ್ರಗಳಲ್ಲಿ ಕಮಲ್‌ ಹಾಸನ್‌ ಅವರು ನಟನೆ

ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾಗಳು ಬ್ಯಾನ್| ಸಚಿವ ಶಿವರಾಜ್ ತಂಗಡಗಿ ಪತ್ರ Read More »

ರಹಿಮಾನ್ ಕೊಲೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ- ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಸುಹಾಸ್‌ ಶೆಟ್ಟಿ ಒಬ್ಬ ರೌಡಿಶೀಟರ್‌ ಆಗಿದ್ದ. ಎರಡು ಕೊಲೆ ಆರೋಪದಲ್ಲಿ ಭಾಗಿಯಾಗಿದ್ದ. ಅಂಥವನ ಕೊಲೆಯಾಗಿದೆ. ಇದಕ್ಕೆ ಪ್ರತೀಕಾರ ಎಂಬಂತೆ ಬಂಟ್ವಾಳದಲ್ಲಿ ಅಬ್ದುಲ್‌ ರಹಿಮಾನ್‌ ಕೊಲೆಯಾಗಿದೆ, ಮತ್ತೋರ್ವನಿಗೆ ಗಾಯಗಳಾಗಿವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂತಹ ಪ್ರತೀಕಾರ ನಡೆದರೆ ಬದುಕುವುದು ಕಷ್ಟವಾಗುತ್ತದೆ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಬಂ ಧಿಸುತ್ತಾರೆ. ಪೊಲೀಸರ ತನಿಖೆಯ ಅನಂತರವೇ ಎಲ್ಲವೂ ತಿಳಿಯಲಿದೆ. ದ.ಕ. ಜಿಲ್ಲೆಯಲ್ಲಿ ಕೋಮುವಾದದ ಕೆಟ್ಟ ವಾತಾವರಣ

ರಹಿಮಾನ್ ಕೊಲೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ- ದಿನೇಶ್ ಗುಂಡೂರಾವ್ Read More »

ಚಿಕ್ಕಮಗಳೂರು: ಪ್ರೀತಿಸಿದ ಪತ್ನಿಯನ್ನು ಹತ್ಯೆಗೈದ ಪತಿ ಬಂಧನ

ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದು ಬಳಿಕ ನಾಪತ್ತೆಯಾಗಿದ್ದ ಆರೋಪಿ ಪತಿಯನ್ನು ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧಿಸಿದ್ದಾರೆ. ಅವಿನಾಶ್ (32) ಬಂಧಿತ ಆರೋಪಿಯಾಗಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿತ್ತು. 4 ವರ್ಷದ ಹಿಂದೆ ಅವಿನಾಶ್ ಮತ್ತು ಕೀರ್ತೀ ಪ್ರೀತಿಸಿ ಮದುವೆಯಾಗಿದ್ದರು ಆದರೆ ಬುಧವಾರ ಮಧ್ಯಾಹ್ನ ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು ಬಳಿಕ ಕೋಪಗೊಂಡ ಪತಿ ಚಾಕುವಿನಿಂದ ಹತ್ತು ಬಾರಿ ಇರಿದು ಸ್ಥಳದಿಂದ ಪರಾರಿಯಾಗಿದ್ದ, ಘಟನೆ ಸಂಬಂಧ

ಚಿಕ್ಕಮಗಳೂರು: ಪ್ರೀತಿಸಿದ ಪತ್ನಿಯನ್ನು ಹತ್ಯೆಗೈದ ಪತಿ ಬಂಧನ Read More »

ರಾಜ್ಯಾದ್ಯಂತ ಇಂದಿನಿಂದ ಶಾಲಾರಂಭ| ಮಕ್ಕಳ ಸ್ವಾಗತಕ್ಕೆ ತಯಾರಾಗಿದೆ ಶಾಲಾ ಶಿಕ್ಷಣ ಇಲಾಖೆ

ಸಮಗ್ರ ನ್ಯೂಸ್: ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪುನರಾರಂಭವಾಗುತ್ತಿದೆ. ಈ ಸಲುವಾಗಿ ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಇಂದುರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ

ರಾಜ್ಯಾದ್ಯಂತ ಇಂದಿನಿಂದ ಶಾಲಾರಂಭ| ಮಕ್ಕಳ ಸ್ವಾಗತಕ್ಕೆ ತಯಾರಾಗಿದೆ ಶಾಲಾ ಶಿಕ್ಷಣ ಇಲಾಖೆ Read More »

ಭಾರೀ ಮಳೆ ಹಿನ್ನಲೆ| ಕೊಡಗು ಜಿಲ್ಲೆಯ ಪಿಯುಸಿವರೆಗಿನ ತರಗತಿಗಳಿಗೆ ಮೇ.30ರವರೆಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ಪ್ರಮಾಣ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮೇ 29 ಮತ್ತು 30 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಅವಧಿಗೂ ಮುನ್ನ ಮಳೆ ಅತಿಯಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಜನರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ವಿಪತ್ತ ನಿರ್ವಹಣಾ ಪಡೆಯನ್ನು ಜಿಲ್ಲೆಗೆ ಕರೆಸಲಾಗಿದೆ.2018, 2019 ಮತ್ತು 2020 ರಲ್ಲಿ ಜಿಲ್ಲೆಯಲ್ಲಿ

ಭಾರೀ ಮಳೆ ಹಿನ್ನಲೆ| ಕೊಡಗು ಜಿಲ್ಲೆಯ ಪಿಯುಸಿವರೆಗಿನ ತರಗತಿಗಳಿಗೆ ಮೇ.30ರವರೆಗೆ ರಜೆ ಘೋಷಣೆ Read More »

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾದ ಪತ್ನಿಯನ್ನು ಮನಸೋ ಇಚ್ಛೆ ಇರಿದು ಕೊಂದ ಪತಿ| ಪರಾರಿಯಾದ ಪಾತಕಿಗಾಗಿ ಪೊಲೀಸರಿಂದ ಹುಡುಕಾಟ

ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಪತಿ ಮನಸೋ ಇಚ್ಛೆ ಇರಿದು ಹತ್ಯೆಗೈದಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಕೀರ್ತಿ (26) ಹತ್ಯೆಯಾದ ದುರ್ದೈವಿ. ಪತಿ ಅವಿನಾಶ್ (32) ಪತ್ನಿಯನ್ನು ಕೊಂದ ಆರೋಪಿ. 4 ವರ್ಷದ ಹಿಂದೆ ಅವಿನಾಶ್ ಮತ್ತು ಕೀರ್ತೀ ಪ್ರೀತಿಸಿ ಮದುವೆಯಾಗಿದ್ದರು ಆದರೆ ಇತ್ತೀಚಿಗೆ ಇಬ್ಬರ ನಡುವೆ ಜಗಳ ನಡೆಯುತಿತ್ತು ಅದರಂತೆ ಪತಿ ಪತ್ನಿ ನಡುವೆ ಜಗಳ ನಡೆದು ಕೋಪಗೊಂಡ ಪತಿ ಚಾಕುವಿನಿಂದ ಮನಸ್ಸೋ ಇಚ್ಛೆ 10

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾದ ಪತ್ನಿಯನ್ನು ಮನಸೋ ಇಚ್ಛೆ ಇರಿದು ಕೊಂದ ಪತಿ| ಪರಾರಿಯಾದ ಪಾತಕಿಗಾಗಿ ಪೊಲೀಸರಿಂದ ಹುಡುಕಾಟ Read More »

ಮಂಗಳೂರು: ಲಂಚ ಸ್ವೀಕಾರ ವೆಳೆ ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಇಲಾಖೆ ಉಪನಿರ್ದೇಶಕಿ

ಸಮಗ್ರ ನ್ಯೂಸ್: ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 28/10/2024 ರಂದು ಅರ್ಜಿ ಸಲ್ಲಿಸಿದ್ದು, ಇದಕ್ಕೆ ಉಳ್ಳಾಲ ತಹಶಿಲ್ದಾರರು 21/03/2025 ರಂದು ಪ್ರಮಾಣ ಪತ್ರ ನೀಡಿರುತ್ತಾರೆ. ಆದರೆ ಗಣಿ ಇಲಾಖೆಯಲ್ಲಿ ಅನುಮತಿ ಪತ್ರ ನೀಡಿರುವುದಿಲ್ಲ . ಈ ಬಗ್ಗೆ ವಿಚಾರಿಸಲು ಗಣಿ

ಮಂಗಳೂರು: ಲಂಚ ಸ್ವೀಕಾರ ವೆಳೆ ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಇಲಾಖೆ ಉಪನಿರ್ದೇಶಕಿ Read More »