Editor

ಬಿರುಸುಗೊಂಡ ಮುಂಗಾರು| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತಷ್ಟು ಚುರುಕುಗೊಂಡಿದ್ದು, ವರುಣನ ಅಬ್ಬರ ಜೋರಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದ್ದು, ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಜುಲೈ 2ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಜೂನ್ 30ರಂದು ಪ್ರಮುಖವಾಗಿ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, […]

ಬಿರುಸುಗೊಂಡ ಮುಂಗಾರು| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜೂನ್ 29 ರಿಂದ ಜುಲೈ 5ರ ವರೆಗಿನ ವಾರದಲ್ಲಿ ಗ್ರಹಗತಿಗಳ ಬದಲಾವಣೆಯೊಂದಿಗೆ ಎಲ್ಲಾ 12 ರಾಶಿಗಳ ಜೀವನದಲ್ಲಿ ಮಹತ್ವದ ಏರಿಳಿತಗಳನ್ನು ತರಲಿದೆ. ಈ ವಾರ ಯಾರಿಗೆ ಅದೃಷ್ಟ ಒಲಿಯಲಿದೆ? ಯಾರು ಜಾಗರೂಕರಾಗಿರಬೇಕು? ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ. ಮೇಷ ರಾಶಿ:ವಾರದ ಆರಂಭವು ಸಂತೋಷ ಮತ್ತು ಸಕಾರಾತ್ಮಕತೆಯಿಂದ ಕೂಡಿರಲಿದೆ. ಒಡಹುಟ್ಟಿದವರು ಮತ್ತು ಸ್ನೇಹಿತರೊಂದಿಗಿನ ಭಿನ್ನಾಭಿಪ್ರಾಯಗಳು ಬಗೆಹರಿಯಲಿವೆ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿ ಸುಧಾರಣೆ ಕಂಡುಬರಲಿದ್ದು, ಹಿರಿಯ ಅಧಿಕಾರಿಗಳ ಬೆಂಬಲ ಸಿಗಲಿದೆ. ಈ ವಾರದಲ್ಲಿ ಇತರರ ಅಭಿಪ್ರಾಯಗಳ ಮೇಲೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪ್ರಾನ್ಸ್ ನಲ್ಲಿ ನಾಗರಿಕ ವಿಮಾನ ಪತನ| ಕನಿಷ್ಟ 11 ಮಂದಿ‌ ಸಾವು

ಸಮಗ್ರ ನ್ಯೂಸ್: ಈಶಾನ್ಯ ಫ್ರಾನ್ಸ್‌ನಲ್ಲಿ ನಾಗರಿಕ ವಿಮಾನ ಅಪಘಾತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಭಾನುವಾರ ಈಶಾನ್ಯ ಫ್ರಾನ್ಸ್‌ನ ನ್ಯಾನ್ಸಿ ಬಳಿಯ ಟೊಂಬ್ಲೇನ್ ಪಟ್ಟಣದಲ್ಲಿ ನಾಗರಿಕ ವಿಮಾನ ಅಪಘಾತಕ್ಕೀಡಾಗಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಸ್ಕೈಡೈವಿಂಗ್ ಪ್ರವಾಸದಲ್ಲಿದ್ದ ಜನರ ಗುಂಪೊಂದು ವಿಮಾನದಲ್ಲಿತ್ತು. ಟೊಂಬ್ಲೇನ್‌ನಲ್ಲಿರುವ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಕ್ಕೆ ಬರದಂತೆ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ ಎಂದು ಫ್ರೆಂಚ್ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಪೂರ್ವ ಫ್ರೆಂಚ್ ಪಟ್ಟಣವಾದ ಟೊಂಬ್ಲೇನ್ ಬಳಿ ಭಾನುವಾರ ನಾಗರಿಕ ವಿಮಾನ ಅಪಘಾತಕ್ಕೀಡಾಗಿದ್ದು,

ಪ್ರಾನ್ಸ್ ನಲ್ಲಿ ನಾಗರಿಕ ವಿಮಾನ ಪತನ| ಕನಿಷ್ಟ 11 ಮಂದಿ‌ ಸಾವು Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಖಾಸಗಿ ಶಿಕ್ಷಣ ಸಂಸ್ಥೆಗೆ ಸರ್ಕಾರದ ಅನುದಾನ ಬಳಕೆ| ಕಡಬ ಕಾಂಗ್ರೆಸ್ ನಿಂದ ಗಂಭೀರ ಆರೋಪ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ರಾಜ್ಯ ಸರ್ಕಾರದಿಂದ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ 25 ಕೋಟಿ ರೂಪಾಯಿ ಅನುದಾನದ ಹಂಚಿಕೆಯಲ್ಲಿ ಅಕ್ರಮ ಹಾಗೂ ರಾಜಕೀಯ ಪಕ್ಷಪಾತ ನಡೆದಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಕಡಬದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ, ಸುಳ್ಯ ಶಾಸಕರ ವಿವೇಚನಾ ಅನುದಾನವನ್ನು ಕ್ಷೇತ್ರದ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಖಾಸಗಿ ಶಿಕ್ಷಣ ಸಂಸ್ಥೆಗೆ ಸರ್ಕಾರದ ಅನುದಾನ ಬಳಕೆ| ಕಡಬ ಕಾಂಗ್ರೆಸ್ ನಿಂದ ಗಂಭೀರ ಆರೋಪ Read More »

ಅಯೋಧ್ಯೆ: ರಾಮಮಂದಿರದಲ್ಲಿ ಬರೋಬ್ಬರಿ 70 ಬಾರಿ‌ ಹುಂಡಿ ಕಳ್ಳತನ| 7.5 ಕೋಟಿ ಎಗರಿಸಿದ ಕಳ್ಳರ ಗ್ಯಾಂಗ್

ಸಮಗ್ರ ನ್ಯೂಸ್: ದೇಶದ ಕೋಟ್ಯಂತರ ಹಿಂದೂಗಳ ಭಕ್ತಿಯ ಕೇಂದ್ರವಾಗಿರುವ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬೆಚ್ಚಿಬೀಳಿಸುವ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಹಲವು ತಿಂಗಳುಗಳಿಂದ ಸಂಘಟಿತ ತಂಡವೊಂದು ( ಹಣ ಎಣಿಸುವ ಗ್ಯಾಂಗ್)‌ ರಾಮಮಂದಿರದ ಹುಂಡಿಯಿಂದ ಹಣ ಕಳವು ಮಾಡುತ್ತಿದ್ದು, ಸುಮಾರು ₹7.5 ಕೋಟಿ ಎಗರಿಸಿರುವ ಆರೋಪ ಎದುರಾಗಿದೆ. ಪ್ರಕರಣದ ತನಿಖೆ ವೇಳೆ ಆರೋಪಿಗಳು ಅತ್ಯಂತ ವ್ಯವಸ್ಥಿತವಾಗಿ ಕಳ್ಳತನ ನಡೆಸಿರುವುದು ಬಹಿರಂಗವಾಗಿದೆ. ದೇವಸ್ಥಾನದ ಭದ್ರತಾ ವ್ಯವಸ್ಥೆಯನ್ನು ಚಾಣಾಕ್ಷತನದಿಂದ ಬಳಸಿಕೊಂಡು, ಸಿಸಿಟಿವಿ ಕ್ಯಾಮೆರಾಗಳ ಕಣ್ತಪ್ಪಿಸಿ ಹಲವು ಬಾರಿ ಹಣ

ಅಯೋಧ್ಯೆ: ರಾಮಮಂದಿರದಲ್ಲಿ ಬರೋಬ್ಬರಿ 70 ಬಾರಿ‌ ಹುಂಡಿ ಕಳ್ಳತನ| 7.5 ಕೋಟಿ ಎಗರಿಸಿದ ಕಳ್ಳರ ಗ್ಯಾಂಗ್ Read More »

ಕ್ರಿಕೆಟ್ ಶಿಶುಗಳ ಮುಂದೆ ಮಂಡಿಯೂರಿದ ಭಾರತ| ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಸೋಲು

ಸಮಗ್ರ ನ್ಯೂಸ್: ಟೀಮ್ ಇಂಡಿಯಾ ಐರ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಎರಡು ಟಿ ಟ್ವೆಂಟಿ ಪಂದ್ಯಗಳನ್ನು ಆಡುತ್ತಿದೆ. ನಿನ್ನೆ ( ಜೂನ್ 26 ) ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಐರ್ಲೆಂಡ್ ಭಾರತವನ್ನು ಮಣಿಸಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಪಂದ್ಯವನ್ನು ಗೆದ್ದ ಐತಿಹಾಸಿಕ ದಾಖಲೆ ಬರೆದಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆರಿಸಿಕೊಂಡು ಐರ್ಲೆಂಡ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು.

ಕ್ರಿಕೆಟ್ ಶಿಶುಗಳ ಮುಂದೆ ಮಂಡಿಯೂರಿದ ಭಾರತ| ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಸೋಲು Read More »

ಕರಾವಳಿ ಪ್ರದೇಶದಲ್ಲಿ ಬಿಸಿಲು ಮಳೆ‌ ಜೊತೆಯಾಟ| ಜೂನ್ ಅಂತ್ಯಕ್ಕೆ ಮಳೆ‌ ಹೆಚ್ಚಾಗುವ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನದ ವೈವಿಧ್ಯಮಯ ಆಟ ಮುಂದುವರಿದಿದ್ದು, ಶುಕ್ರವಾರದಂದು ದಿನವಿಡೀ ಮೋಡ ಕವಿದ ಹಾಗೂ ಬಿಸಿಲಿನ ಮಿಶ್ರ ವಾತಾವರಣ ಕಂಡುಬಂದಿದೆ. ಬೆಳಗ್ಗಿನ ಜಾವ ಸುರಿದ ದಿಢೀರ್ ಮಳೆ ಸಾರ್ವಜನಿಕರಲ್ಲಿ ಮುಂಗಾರಿನ ಚುರುಕಿನ ಮುನ್ಸೂಚನೆ ನೀಡಿದರೂ, ಮಧ್ಯಾಹ್ನದ ವೇಳೆಗೆ ಬಿಸಿಲಿನ ಬೇಗೆ ಹೆಚ್ಚಾಗಿತ್ತು. ಶುಕ್ರವಾರ ಬೆಳಗ್ಗೆ ಕರಾವಳಿಯ ಪ್ರಮುಖ ಗ್ರಾಮೀಣ ಹಾಗೂ ಘಟ್ಟ ಪ್ರದೇಶಗಳಾದ ಬೆಳ್ತಂಗಡಿ, ಸುಳ್ಯ, ಧರ್ಮಸ್ಥಳ ಮತ್ತು ಚಾರ್ಮಾಡಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಕೊಂಚ ವೇಗ ಸಿಕ್ಕಂತಾಗಿದೆ.

ಕರಾವಳಿ ಪ್ರದೇಶದಲ್ಲಿ ಬಿಸಿಲು ಮಳೆ‌ ಜೊತೆಯಾಟ| ಜೂನ್ ಅಂತ್ಯಕ್ಕೆ ಮಳೆ‌ ಹೆಚ್ಚಾಗುವ ಸಾಧ್ಯತೆ Read More »

ಮೈಸೂರು ದಸರಾದಲ್ಲಿ ಕಂಬಳ ನಡೆಸಲು ಆಹ್ವಾನ| ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಅಶೋಕ್ ರೈ

ಸಮಗ್ರ ನ್ಯೂಸ್: ಈ ಬಾರಿಯ ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಬೇಕು ಮತ್ತು ಇದಕ್ಕೆ ಬೇಕಾದ ಸಿದ್ದತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಕಳೆದ ವಾರ ಬೆಂಗಳೂರು ಕಂಬಳದ ರುವಾರಿ ಪುತ್ತೂರು ಶಾಸಕ ಅಶೋಕ್ ರೈಗೆ ಸೂಚನೆ ನೀಡಿದ್ದು , ಶುಕ್ರವಾರ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಕಂಬಳ ನಡೆಸುವ ಮೂಲಕ ತುಳುನಾಡಿನ ಜನಪದ ಕ್ರೀಡೆಯನ್ನು ಕನ್ನಡಿಗರಿಗೆ ವೀಕ್ಷಣೆಗೆ ಅವಕಾಶ ಮಾಡುವುದರ ಜೊತೆ ವಿಶ್ವದೆಲ್ಲಡೆ ಕಂಬಳವನ್ನು ಪರಿಚಯಿಸುವ ಕೆಲಸವನ್ನು

ಮೈಸೂರು ದಸರಾದಲ್ಲಿ ಕಂಬಳ ನಡೆಸಲು ಆಹ್ವಾನ| ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಅಶೋಕ್ ರೈ Read More »

ರಾಜ್ಯಾದ್ಯಂತ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಜಾರಿ| ಶನಿವಾರ ಮುಂಜಾನೆ 8.30ಕ್ಕೆ ತರಗತಿ ಆರಂಭ

ಸಮಗ್ರ ನ್ಯೂಸ್: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಶನಿವಾರದ ತರಗತಿಗಳ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆ ತರಲಾಗಿದ್ದು, ಇಡೀ ಕರ್ನಾಟಕದಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಏಕರೂಪದ ಹೊಸ ಸಮಯವನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಹೊಸ ಆದೇಶದ ಪ್ರಕಾರ, ಇನ್ಮುಂದೆ ಶನಿವಾರದ ದಿನದಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 12:30 ರವರೆಗೆ ತರಗತಿಗಳು ನಡೆಯಲಿವೆ. ಈ ಹಿಂದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಶನಿವಾರದ ಶಾಲಾ ಅವಧಿಯಲ್ಲಿ

ರಾಜ್ಯಾದ್ಯಂತ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಜಾರಿ| ಶನಿವಾರ ಮುಂಜಾನೆ 8.30ಕ್ಕೆ ತರಗತಿ ಆರಂಭ Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಆರೆಂಟ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 29 ರವರೆಗೆ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಇರಲಿದ್ದು, ಜೂನ್ 29 ರಿಂದ ಜುಲೈ 1 ರವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಆರೆಂಟ್ ಅಲರ್ಟ್ Read More »