Editor

ಗಡಿಪಾರು ‌ಆದೇಶ ಪ್ರಶ್ನಿಸಿ ಮೇಲ್ಮನವಿ| ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂನಲ್ಲೂ ಹಿನ್ನಡೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಸೌಜಸ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹಿನ್ನಡೆಯಾಗಿದೆ. ಪುತ್ತೂರು ವಿಭಾಗಾಧಿಕಾರಿ ಅವರ ಆದೇಶವನ್ನು ಎತ್ತಿಹಿಡಿರುವ ಸುಪ್ರೀಂ ಕೋರ್ಟ್ ಮಹೇಶ್ ಶೆಟ್ಟಿ ಅವರ ಮೇಲ್ಮನವಿಯನ್ನು ವಜಾಗೊಳಿಸಿದೆ. ಪುತ್ತೂರು ಉಪವಿಭಾಗಾಧಿಕಾರಿಗಳು 2026ರ ಮಾರ್ಚ್ 13ರಂದು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು […]

ಗಡಿಪಾರು ‌ಆದೇಶ ಪ್ರಶ್ನಿಸಿ ಮೇಲ್ಮನವಿ| ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂನಲ್ಲೂ ಹಿನ್ನಡೆ Read More »

ತಿರುಪತಿಯ ಮೊದಲ ಆರತಿ‌ ಕರ್ನಾಟಕದವರಿಗೂ ಲಭ್ಯ – ಸಿಎಂ

ಸಮಗ್ರ ನ್ಯೂಸ್: ವಿಶ್ವಪ್ರಸಿದ್ಧ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಪ್ರತಿದಿನ ನಡೆಯುವ ಅತ್ಯಂತ ಪವಿತ್ರವಾದ ಮೊದಲ ಆರತಿಯನ್ನು ಪಡೆದುಕೊಳ್ಳಲು ಕರ್ನಾಟಕದ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗಕ್ಕೆ ಮುಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಶಿಷ್ಟಾಚಾರದ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ. ಬೆಂಗಳೂರಿನ ಬನಶಂಕರಿ 6ನೇ ಹಂತದ ಲಿಂಗಧೀರನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀಷಣ್ಮುಖ ಸುಬ್ರಮಣ್ಯ ದೇವಸ್ಥಾನದ ಶೀಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಈ ಮಹತ್ವದ ನಿರ್ಧಾರವನ್ನು ಸಾರ್ವಜನಿಕವಾಗಿ ಹಂಚಿಕೊಂಡರು. ತಿರುಪತಿ ದೇವಸ್ಥಾನದ ಇತಿಹಾಸ

ತಿರುಪತಿಯ ಮೊದಲ ಆರತಿ‌ ಕರ್ನಾಟಕದವರಿಗೂ ಲಭ್ಯ – ಸಿಎಂ Read More »

ದುರ್ಬಲಗೊಂಡ ಮುಂಗಾರು| ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಯ ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆ ಪ್ರಕಾರ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯೂ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದುರ್ಬಲಗೊಂಡ ಮುಂಗಾರು| ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸಾಧ್ಯತೆ Read More »

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಕಾರ್ಮೋಡ| ಹಾರ್ಮೋಜ್ ಜಲಸಂಧಿ ಬಂದ್

ಸಮಗ್ರ ನ್ಯೂಸ್: ಹೊರ್ಮುಜ್ ಜಲಸಂಧಿ ದಾಟುತ್ತಿದ್ದ ಹಡಗಿನ ಮೇಲೆ ಇರಾನ್‌ ನಡೆಸಿದ ದಾಳಿಗೆ ಪ್ರತಿಯಾಗಿ ಅಮೆರಿಕ ಸೇನೆಯು ಭಾನುವಾರ ಬೆಳಿಗ್ಗೆ ಇರಾನ್‌ನ ಹಲವು ಸ್ಥಳಗಳ ಮೇಲೆ ಭಾರಿ ವಾಯುದಾಳಿ ನಡೆಸಿದೆ. ಈ ದಾಳಿಗೆ ಇರಾನ್‌ ಸೇನೆ ತಿರುಗೇಟು ನೀಡಿದ್ದು, ಬಹರೇನ್, ಕುವೈತ್‌, ಕತಾರ್‌ ಮತ್ತು ಒಮಾನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳತ್ತ ಕ್ಷಿಪಣಿಗಳನ್ನು ಹಾರಿಸಿದೆ. ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣ ಬಂದ್‌ ಮಾಡಿರುವುದಾಗಿ ಇರಾನ್‌ ಸೇನೆ ಘೋಷಿಸಿದೆ. ‘ಈ ಘಟನೆಯ (ಅಮೆರಿಕದ ದಾಳಿ) ನಂತರ, ಮುಂದಿನ ಸೂಚನೆ ಬರುವವರೆಗೆ ಮತ್ತು

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಕಾರ್ಮೋಡ| ಹಾರ್ಮೋಜ್ ಜಲಸಂಧಿ ಬಂದ್ Read More »

ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ

ಸಮಗ್ರ ನ್ಯೂಸ್: ರಾಯಚೂರು ನಗರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಸೈಯದ್ ಯಾಸೀನ್ (74) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸೈಯದ್ ಯಾಸೀನ್ ಅವರು ಪತ್ನಿ, ನಾಲ್ಕು ಜನ ಗಂಡು ಮಕ್ಕಳು ಹಾಗೂ ಅಪಾರ ಬಂಧು – ಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಸೈಯದ್ ಯಾಸೀನ್ ಅವರು ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫ‌ರ್ ಷರೀಫ ಅವರ ಅಳಿಯರಾಗಿದ್ದು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಆರು ಸಲ ಸ್ಪರ್ಧಿಸಿದ್ದರು, ರಾಯಚೂರು

ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 12ರಿಂದ 18, 2026ರ ವರೆಗೆ ಎಲ್ಲಾ ರಾಶಿಗಳ ಆರೋಗ್ಯ, ಆರ್ಥಿಕತೆ, ಪ್ರವಾಸ, ವಿದ್ಯಾಭ್ಯಾಸ, ಸಹವಾಸ ಮತ್ತು ಖರ್ಚು ವೆಚ್ಚಗಳನ್ನು ತಿಳಿದರೆ ಇಡುವ ಹೆಜ್ಜೆ ದೃಢವಾಗಿರಲಿದೆ. ಧೈರ್ಯದಿಂದ ಮುಂದಡಿ ಇಡಲೂ ಸಾಧ್ಯ. ಈ ವಾರದಲ್ಲಿ ಯಾರಿಗೆ ಲಾಭ? ಯಾವ‌ ರಾಶಿಯವರಿಗೆ ಶುಭ? ತಿಳಿಯೋಣ… ಮೇಷ:ಈ ವಾರದಲ್ಲಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳು ಕಂಡುಬರಲಿವೆ. ರಾಶ್ಯಾಧಿಪತಿಯ ಬಲವು ಚೆನ್ನಾಗಿದ್ದು, ಹಳೆಯ ಬಾಕಿ ವಸೂಲಾಗಲಿದೆ. ಆದರೆ, ಆತುರದ ನಿರ್ಧಾರಗಳು ಉದ್ಯೋಗದಲ್ಲಿ ಸಣ್ಣಪುಟ್ಟ ಗೊಂದಲಗಳಿಗೆ ಕಾರಣವಾಗಬಹುದು. ವ್ಯಾಪಾರಸ್ಥರಿಗೆ ಮಧ್ಯಮ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತಿಬ್ಬರು ಶಂಕಿತರು ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಕಳೆದ ನಾಲ್ಕು ವರ್ಷಗಳಿಂದ ಕಾನೂನಿನ ಕಣ್ಣಿಗೆ ಮಣ್ಣೆರಚಿ ನಾಪತ್ತೆಯಾಗಿದ್ದ ಇಬ್ಬರು ಪ್ರಮುಖ ಶಂಕಿತರನ್ನು ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಸೆರೆಹಿಡಿಯಲಾಗಿದೆ. ಬಂಧಿತರಾದ ಅಬ್ದುಲ್ ನಾಸೀರ್ ಹಾಗೂ ನೌಷದ್ ಎಂಬುವವರನ್ನು ಮುಂದಿನ ಕಾನೂನು ಪ್ರಕ್ರಿಯೆಗಳಿಗಾಗಿ ತನಿಖಾ ತಂಡ ಸದ್ಯ ಬೆಂಗಳೂರಿಗೆ ಕರೆತರುತ್ತಿದೆ. ನಿಷೇಧಿತ ಸಂಘಟನೆಯಾದ ಪಿಎಫ್‌ಐಗೆ ಸೇರಿದ ದುಷ್ಕರ್ಮಿಗಳು 2022ರ ಜುಲೈ 26ರಂದು ಸುಳ್ಯದ ಬೆಳ್ಳಾರೆಯಲ್ಲಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತಿಬ್ಬರು ಶಂಕಿತರು ಎನ್ಐಎ ವಶಕ್ಕೆ Read More »

ನರಿಮೊಗರು ಘಟನೆಗೆ ಬಿಜೆಪಿಯಿಂದ ಕೋಮುಬಣ್ಣ ಯತ್ನ – ಅಶೋಕ್ ಕುಮಾರ್

ಸಮಗ್ರ ನ್ಯೂಸ್: “ಪುತ್ತೂರಿನ ನರಿಮೊಗರಿನಲ್ಲಿ ನಡೆದ ಸಣ್ಣ ಮಿಸ್‌ಅಂಡರ್‌ಸ್ಟ್ಯಾಂಡಿಂಗ್ ಘಟನೆಯನ್ನು ಇಟ್ಟುಕೊಂಡು ರಾಜಕೀಯ ವಲಯದಲ್ಲಿ ಅದಕ್ಕೆ ಕೋಮು ಬಣ್ಣ ಹಚ್ಚುವ ಕೆಲಸ ನಡೆಯುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಹೆಣಗಳ ಮೇಲೆ ರಾಜಕೀಯ ಮಾಡುವುದೇ ಬಿಜೆಪಿಯವರ ಮುಖ್ಯ ಉದ್ದೇಶವಾಗಿದೆ” ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಿಂದ ಮರಳಿದ ತಕ್ಷಣ ನರಿಮೊಗರು ಘಟನೆಯ ಬಗ್ಗೆ ಶನಿವಾರ ಬೆಳಿಗ್ಗೆ ದೂರು ಮತ್ತು ಪ್ರತಿ ದೂರು ನೀಡಿರುವ ಎರಡೂ ಕುಟುಂಬಗಳ ಮನೆಗೆ ಖುದ್ದಾಗಿ ಭೇಟಿ ನೀಡಿ

ನರಿಮೊಗರು ಘಟನೆಗೆ ಬಿಜೆಪಿಯಿಂದ ಕೋಮುಬಣ್ಣ ಯತ್ನ – ಅಶೋಕ್ ಕುಮಾರ್ Read More »

ಪುತ್ರಶೋಕದಲ್ಲೇ ಕೊನೆಯುಸಿರೆಳೆದ ಗಾನ ಕೋಗಿಲೆ| ನೋವಿನಿಂದಲೇ ಕಳೆಯಿತು ಎಸ್.ಜಾನಕಿಯವರ ಕೊನೆ ದಿನಗಳು

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಕೋಟ್ಯಂತರ ಸಂಗೀತ ಪ್ರೇಮಿಗಳನ್ನು ತಮ್ಮ ಮಾಧುರ್ಯಭರಿತ ಕಂಠದಿಂದ ರಂಜಿಸಿದ್ದ ಗಾನಕೋಗಿಲೆ ಎಸ್. ಜಾನಕಿ ಶನಿವಾರ ವಯೋಸಹಜ ಕಾಯಿಲೆಯಿಂದ ಸಾವು ಕಂಡಿದ್ದಾರೆ. ಆರು ದಶಕಗಳ ಕಾಲ ಸಂಗೀತ ಸಾಮ್ರಾಜ್ಯದ ಮಹಾರಾಜ್ಞಿಯಾಗಿ ಮೆರೆದ ಜಾನಕಿ ಅಮ್ಮನವರ ಕೊನೆಯ ದಿನಗಳ ಬದುಕು ಮಾತ್ರ ಅತ್ಯಂತ ನೋವಿನಿಂದ ಕೂಡಿತ್ತು. ತಮ್ಮ 88ರ ಇಳಿವಯಸ್ಸಿನಲ್ಲಿ ಇದ್ದೊಬ್ಬ ಏಕೈಕ ಮಗ ಮುರಳಿ ಕೃಷ್ಣ (65) ಅವರನ್ನು ಕಳೆದುಕೊಂಡ ದುಃಖದಲ್ಲೇ ಜಾನಕಿ ಅಮ್ಮ ಕೊನೆಯ ದಿನಗಳನ್ನು ಕಳೆದಿದ್ದರು. ಮಗನ ಹಠಾತ್ ಸಾವು

ಪುತ್ರಶೋಕದಲ್ಲೇ ಕೊನೆಯುಸಿರೆಳೆದ ಗಾನ ಕೋಗಿಲೆ| ನೋವಿನಿಂದಲೇ ಕಳೆಯಿತು ಎಸ್.ಜಾನಕಿಯವರ ಕೊನೆ ದಿನಗಳು Read More »

ಸ್ವರ ನಿಲ್ಲಿಸಿದ ಗಾನಕೋಗಿಲೆ| ಮೇರು ಗಾಯಕಿ ಎಸ್.ಜಾನಕಿ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಹಿನ್ನೆಲೆ ಗಾಯಕಿ ಗಾನ ಕೋಗಿಲೆ ಖ್ಯಾತಿಯ ಎಸ್. ಜಾನಕಿ(88) ವಿಧಿವಶರಾಗಿದ್ದಾರೆ. ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಎಸ್ .ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಅವರು 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ, 1957ರಿಂದಲೂ ಚಿತ್ರಗಳಿಗೆ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಲ್ಲಿ ಅವರು ಹಾಡಿದ್ದಾರೆ. ಹಲವು ವರ್ಷಗಳಿಂದ ಅವರು ಮೈಸೂರಿನಲ್ಲಿಯೇ ನೆಲೆಸಿದ್ದರು. 20ಕ್ಕೂ ಹೆಚ್ಚು

ಸ್ವರ ನಿಲ್ಲಿಸಿದ ಗಾನಕೋಗಿಲೆ| ಮೇರು ಗಾಯಕಿ ಎಸ್.ಜಾನಕಿ ಇನ್ನಿಲ್ಲ Read More »