Editor

ಮುಯ್ಯಿಗೆ ಮುಯ್ಯಿ ಟಾರ್ಗೆಟ್ ಗೆ ಬಲಿಯಾಗಲಿದೆಯಾ ಕರಾವಳಿ| ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುಮಾಡಿದ ಟಾರ್ಗೆಟ್ ಬಾಯ್ ಪೇಜ್

ಸಮಗ್ರ ನ್ಯೂಸ್: ಶಾಂತವಾಗಿದ್ದ ದಕ್ಷಿಣಕನ್ನಡ ಜಿಲ್ಲೆ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಸೇಡಿಗೆ ಸಹ ಸೇಡಿನಂತೆ ಟಾರ್ಗೆಟ್ ಬಾಯ್ ಪೇಜ್ ಮೂಲಕ ಮತ್ತೆ ಟಾರ್ಗೆಟ್ ಮಾಡಿದ್ದಾರೆ. ಇನ್ಸ್ಟಾ ಗ್ರಾಮ್ ಪೇಜ್ ಮೂಲಕ ರಿವೇಂಜ್ ಬೆದರಿಕೆ ಹಾಕಿದ್ದು ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಫೋಟೋ ಹಾಕಿ ರಿವೇಂಜ್ ಪೋಸ್ಟ್ ಮಾಡಿದ್ದಾರೆ. ಭರತ್ ಕುಮ್ಡೇಲು ಎಸ್ ಡಿ ಪಿ ಐ ಕಾರ್ಯಕರ್ತ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದು ಕಳೆದ ಕೆಲ ತಿಂಗಳುಗಳಿಂದ ಭರತ್ ಕುಮ್ಡೇಲು ಮೇಲೆ ನಿರಂತರ ಬೆದರಿಕೆ […]

ಮುಯ್ಯಿಗೆ ಮುಯ್ಯಿ ಟಾರ್ಗೆಟ್ ಗೆ ಬಲಿಯಾಗಲಿದೆಯಾ ಕರಾವಳಿ| ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುಮಾಡಿದ ಟಾರ್ಗೆಟ್ ಬಾಯ್ ಪೇಜ್ Read More »

ರಾಜ್ಯದಲ್ಲಿ ನಾಲಾಯಕ್ ಗೃಹಸಚಿವ, ದ.ಕ ಜಿಲ್ಲೆಗೆ ಅತಿಥಿ ಉಸ್ತುವಾರಿ ಸಚಿವ| ಇಬ್ಬರಿಗೂ ಪೊಲೀಸ್ ಇಲಾಖೆ ಮೇಲೆ ನಿಯಂತ್ರಣವೇ ಇಲ್ಲ – ಅಶ್ರಫ್ ಕಲ್ಲೇಗ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಒಬ್ಬ ನಾಲಾಯಕ್ ಗೃಹಸಚಿವರಿದ್ದು, ಅವರಿಗೆ ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣವೇ ಇಲ್ಲ ಎಂದು ಮುಸ್ಲಿಂ ಯುವಜನ ಒಕ್ಕೂಟದ ಅಶ್ರಫ್ ಕಲ್ಲೇಗ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಬಂಟ್ವಾಳದಲ್ಲಿ ರಹೀಂ‌ ಕೊಲೆ ಪ್ರಕರಣದಲ್ಲಿ ಸರಕಾರ ಮತ್ತು ಪೋಲೀಸ್ ಇಲಾಖೆ ವೈಫಲ್ಯವಿದ್ದು, ರಾಜ್ಯದಲ್ಲಿ ಒಬ್ಬ ನಾಲಾಯಕ್ ಗೃಹಸಚಿವರಿದ್ದಾರೆ ಆದರೆ ಅವರಿಗೆ ಪೋಲೀಸ್ ಇಲಾಖೆಯ ಮೇಲೆ ನಿಯಂತ್ರಣವೇ ಇಲ್ಲ. ಇನ್ನೊಬ್ಬರು ಅತಿಥಿ ಉಸ್ತುವಾರಿ ಸಚಿವರು, ಅವರು ಜಿಲ್ಲೆಗೆ ಅತಿಥಿ ಉಪನ್ಯಾಸಕರ ರೀತಿಯಲ್ಲಿ ಜಿಲ್ಲೆಗೆ ಆಗಮಿಸುತ್ತಾರೆ. ರೌಡಿಶೀಟರ್ ಸುಹಾಸ್

ರಾಜ್ಯದಲ್ಲಿ ನಾಲಾಯಕ್ ಗೃಹಸಚಿವ, ದ.ಕ ಜಿಲ್ಲೆಗೆ ಅತಿಥಿ ಉಸ್ತುವಾರಿ ಸಚಿವ| ಇಬ್ಬರಿಗೂ ಪೊಲೀಸ್ ಇಲಾಖೆ ಮೇಲೆ ನಿಯಂತ್ರಣವೇ ಇಲ್ಲ – ಅಶ್ರಫ್ ಕಲ್ಲೇಗ Read More »

ಅಬ್ದುಲ್ ರಹೀಂ‌‌ ಕೊಲೆ ಪ್ರಕರಣ| ಮೂವರನ್ನು ವಶಕ್ಕೆ ಪಡೆದ ಖಾಕಿ ಪಡೆ

ಸಮಗ್ರ ನ್ಯೂಸ್: ಬಂಟ್ವಾಳದ ಕೊಳ್ತಮಜಲು ಮಸೀದಿಯ ಕಾರ್ಯದರ್ಶಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಅಬ್ದುಲ್ ರಹೀಂ‌‌ ಕೊಲೆ ಪ್ರಕರಣ| ಮೂವರನ್ನು ವಶಕ್ಕೆ ಪಡೆದ ಖಾಕಿ ಪಡೆ Read More »

ಮೇ.29ರಿಂದ ಉಪ್ಪಿನಂಗಡಿ, ಮಾಣಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ| ಜೂ.2ರಿಂದ ಕಲ್ಲಡ್ಕ ಪ್ಲೈಓವರ್ ಸಂಚಾರಕ್ಕೆ ಅನುವುಗೊಳಿಸಲು ಸಂಸದ ಚೌಟ ಸೂಚನೆ

ಸಮಗ್ರ ನ್ಯೂಸ್: ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್‌-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್‌ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಮೇ. 29 ರಂದು ಹೆದ್ದಾರಿ ಪ್ರಾಧಿಕಾರವು ಮಾಣಿ ಬಳಿಯ ವೆಹಿಕಲ್ ಅಂಡರ್ ಪಾಸ್(ವಿಯುಪಿ) ಹಾಗೂ ಉಪ್ಪಿನಂಗಡಿ ಬಳಿಯ ವೆಹಿಕಲ್

ಮೇ.29ರಿಂದ ಉಪ್ಪಿನಂಗಡಿ, ಮಾಣಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ| ಜೂ.2ರಿಂದ ಕಲ್ಲಡ್ಕ ಪ್ಲೈಓವರ್ ಸಂಚಾರಕ್ಕೆ ಅನುವುಗೊಳಿಸಲು ಸಂಸದ ಚೌಟ ಸೂಚನೆ Read More »

‘ಕನ್ನಡ ಹುಟ್ಟಿದ್ದು ತಮಿಳಿನಿಂದ’| ಕನ್ನಡಿಗರನ್ನು ಕೆಣಕಿದ ನಟ ಕಮಲ್ ಹಾಸನ್

ಸಮಗ್ರ ನ್ಯೂಸ್: “ನಿಮ್ಮ ಕನ್ನಡ ನಮ್ಮ ತಮಿಳಿನಿಂದ ಹುಟ್ಟಿದ್ದು’ ಎಂಬ ಬಹುಭಾಷಾ ನಟ ಕಮಲ್‌ ಹಾಸನ್‌ ಹೇಳಿಕೆ ಈಗ ಭಾರೀ ವಿವಾದವೆಬ್ಬಿಸಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗೆ ಚೆನ್ನೈಯಲ್ಲಿ ನಡೆದ ತಮ್ಮ “ಥಗ್‌ ಲೈಫ್’ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರ ಸಮ್ಮುಖದಲ್ಲೇ ಕಮಲ್‌ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಡಾ| ರಾಜ್‌ಕುಮಾರ್‌ ಕುಟುಂಬದ ಬಗ್ಗೆ, ಕನ್ನಡಿಗರ ಪ್ರೀತಿಯ ಬಗ್ಗೆ, ಅಭಿಮಾನದ ಬಗ್ಗೆ ಮಾತನಾಡಿದ ಕಮಲ್‌

‘ಕನ್ನಡ ಹುಟ್ಟಿದ್ದು ತಮಿಳಿನಿಂದ’| ಕನ್ನಡಿಗರನ್ನು ಕೆಣಕಿದ ನಟ ಕಮಲ್ ಹಾಸನ್ Read More »

ವಿಜಯಪುರ: ವಾಮಾಚಾರ ನಡೆಸಿ ಬ್ಯಾಂಕ್ ದರೋಡೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿರುವ ರಾಷ್ಟ್ರೀಕೃತ ಕೆನರಾ ಬ್ಯಾಂಕ್​ನಲ್ಲಿ ಕಳ್ಳತನವಾಗಿದೆ. ಬ್ಯಾಂಕ್ ಬಾಗಲಿನ ಬೀಗ ಮುರಿದು, ಕಿಟಕಿಯ ಬಾರ್​ಗಳನ್ನು ಕಟ್ ಮಾಡಿ ಒಳಗೆ ನುಗ್ಗಿದ ಕಳ್ಳರು ಮೊದಲು ವಾಮಾಚಾರ ಮಾಡಿದ್ದಾರೆ. ಬಳಿಕ, ಬ್ಯಾಂಕ್​ನಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿದ್ದಾರೆ. ಇಷ್ಟೇ ಅಲ್ಲದೇ, ಬ್ಯಾಂಕ್​ನಲ್ಲಿ ಸಿಸಿ ಕ್ಯಾಮೆರಾಗಳ ಹಾರ್ಡ್​ ಡ್ರೈವ್​ ಕೂಡ ಕದ್ದು ಪರಾರಿಯಾಗಿದ್ದಾರೆ. ಕಳ್ಳರ ಈ ಚಾಲಾಕಿತನ ಪೊಲೀಸರ ನಿದ್ದೆಗೆಡಸಿದೆ. ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು, ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕ ಹಾಗೂ

ವಿಜಯಪುರ: ವಾಮಾಚಾರ ನಡೆಸಿ ಬ್ಯಾಂಕ್ ದರೋಡೆ Read More »

ಸಬ್ ರಿಜಿಸ್ಟ್ರಾರ್ ಕಚೇರಿಗೆ ಮಂಗಳವಾರ ರಜೆ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಮಂಗಳವಾರ ‘ಸಬ್ ರಿಜಿಸ್ಟ್ರಾರ್’ ಕಚೇರಿಗೆ ರಜೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಅಧಿಸೂಚನೆ ಪತ್ರದಲ್ಲಿ ಸೂಚಿಸಿರುವಂತೆ ರಾಜ್ಯದ ಪ್ರತಿಯೊಂದು ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯಲ್ಲಿನ ಉಪನೋಂದಣಿ ಕಛೇರಿಗಳು ಸದರಿಯ ಆಧಾರದ ಮೇಲೆ 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳ ರಜಾದಿನಗಳಂದು ಕರ್ತವ್ಯ ನಿರ್ವಹಿಸುವ ಒಂದು ಉಪನೋಂದಣಿ ಕಛೇರಿಗೆ ಮಂಗಳವಾರದ ದಿನವನ್ನು ರಜಾ ದಿನವೆಂದು ಘೋಷಿಸಿ ಆದೇಶಿಸಲಾಗಿದೆ. ಸೂಚಿಸಿರುವಂತೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳು ದಿನಾಂಕ:01-06-2025 ರಿಂದ 28-12-2025 ರ

ಸಬ್ ರಿಜಿಸ್ಟ್ರಾರ್ ಕಚೇರಿಗೆ ಮಂಗಳವಾರ ರಜೆ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರಹಿಮಾನ್ ಶವಯಾತ್ರೆ| ಬಿ.ಸಿ ರೋಡ್ ನಗರದಲ್ಲಿ ಸ್ವಯಂಪ್ರೇರಿತ ಬಂದ್

ಸಮಗ್ರ ನ್ಯೂಸ್: ಬಂಟ್ವಾಳದ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಖಂಡಿಸಿ ಬಿ.ಸಿ ರೋಡ್ ನಲ್ಲಿ ಸ್ವಯಂಪ್ರೇರಿತ ಬಂದ್ ಮಾಡಲಾಗಿದೆ. ಮುಸ್ಲಿಮ್ ಸಮುದಾಯದ ಹಲವರು ಬಿ.ಸಿ ರೋಡ್, ಫರಂಗಿಪೇಟೆ ಸೇರಿದಂತೆ ಹಲವು ಕಡೆ ತಮ್ಮ ವ್ಯಾಪಾರ, ವಹಿವಾಟನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತವಾಗಿ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ದೇರಳಕಟ್ಟೆ ಯೆನೆಪೊಯ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿಯೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದು ಇಂದು ಮುಂಜಾನೆ ಕುತ್ತಾರ್ ಮದನಿ ನಗರದ ಮಸೀದಿಯಲ್ಲಿ

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರಹಿಮಾನ್ ಶವಯಾತ್ರೆ| ಬಿ.ಸಿ ರೋಡ್ ನಗರದಲ್ಲಿ ಸ್ವಯಂಪ್ರೇರಿತ ಬಂದ್ Read More »

ಅರೆಸ್ಟ್ ಆಗಿದ್ದ ಶರಣ್ ಪಂಪ್ವೆಲ್ ಗೆ ಜಾಮೀನು; ಬಿಡುಗಡೆ

ಸಮಗ್ರ ನ್ಯೂಸ್: ನಿನ್ನೆ(ಮೇ.27) ಸಂಜೆ ಅರೆಸ್ಟ್ ಆಗಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ದಿನ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಮತ್ತು ನಿನ್ನೆ ನಡೆದ ಕೊಲೆ ಹಿನ್ನೆಲೆ ಉಂಟಾದ ಮುಸ್ಲಿಂ ಮುಖಂಡರ ಆಕ್ರೋಶ ಹಿನ್ನೆಲೆಯಲ್ಲಿ ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದರು. ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಶರಣ್ ಪಂಪ್‌ವೆಲ್ ಬಂಧನ

ಅರೆಸ್ಟ್ ಆಗಿದ್ದ ಶರಣ್ ಪಂಪ್ವೆಲ್ ಗೆ ಜಾಮೀನು; ಬಿಡುಗಡೆ Read More »

ಮಾಣಿಲ: ಉಚಿತ ಪುಸ್ತಕ ‌ವಿತರಣೆ ಮತ್ತು ಸನ್ಮಾನ

ಸಮಗ್ರ ನ್ಯೂಸ್: ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಮೇ.27 ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾತೃಭೂಮಿ ಯುವ ವೇದಿಕೆಯ ಅಧ್ಯಕ್ಷರಾದ ಜಿತೇಶ್ ಕುಮಾರ್ ದಂಡೆಪ್ಪಾಡಿ ಅವರು ವಹಿಸಿದರು. ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಹತ್ತನೇ ತರಗತಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮವನ್ನು ಗಣ್ಯರ ಸಮ್ಮುಖದಲ್ಲಿ ನಡೆಯಿತು. ಸನ್ಮಾನ ಸಮಾರಂಭವನ್ನು ಉದ್ಘಾಟಿಸಿದ ಸಾಮಾಜಿಕ ಕಾರ್ಯಕರ್ತರು,

ಮಾಣಿಲ: ಉಚಿತ ಪುಸ್ತಕ ‌ವಿತರಣೆ ಮತ್ತು ಸನ್ಮಾನ Read More »