Editor

ಪತ್ನಿಯಿಂದಲೇ ಹತ್ಯೆಗೀಡಾದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್

ಸಮಗ್ರ ನ್ಯೂಸ್: ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಮೊದಲಿಗೆ ಪತ್ನಿಯೇ ಓಂ ಪ್ರಕಾಶ್ ಸಾವಿನ ಕುರಿತು ಮಾಹಿತಿ ನೀಡಿದ್ದರು. ಆದರೆ ಇದೀಗ ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಕೊಡಲೇ ಅವರ […]

ಪತ್ನಿಯಿಂದಲೇ ಹತ್ಯೆಗೀಡಾದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ‌ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಏಪ್ರಿಲ್ 20, 21 ರಂದು ಆಲಿಕಲ್ಲು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಏಪ್ರಿಲ್ 24

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ‌ಭಾರೀ ಮಳೆ ಸಾಧ್ಯತೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಏಪ್ರಿಲ್‌ ತಿಂಗಳ ನಾಲ್ಕನೇ ವಾರ 20-04-2025ರಿಂದ 26-04-2025ರವರೆಗೆ ಇರಲಿದೆ. ಶುಕ್ರನು ಉಚ್ಚ ರಾಶಿಯಲ್ಲಿ ಇದ್ದು, ಅನೇಕ ಸುಖಭೋಗಗಳೂ ಸಿಗಲಿದೆ. ಅದರಿಂದ ತೊಂದರೆಯೂ ಆಗಬಹುದು. ಶುಕ್ರದಶೆ ನಿಮಗೆ ಅನುಕೂಲ ಹಾಗೂ ಪ್ರತಿಕೂಲಗಳು ಇರಲಿದ್ದು ದೈವಾನುಕೂಲವು ಪ್ರತಿಕೂಲವನ್ನು ದೂರಮಾಡುವುದು.‌ ಹಾಗಾದರೆ ಈ ವಾರದಲ್ಲಿ ಯಾವ ರಾಶಿಯವರಿಗೆ ಶುಭ, ಯಾರಿಗೆ ಲಾಭ? ಸಮಸ್ಯೆಗಳಿಗೆ ಪರಿಹಾರವೇನು? ನೋಡೋಣ… ಮೇಷ ರಾಶಿ:ರಾಶಿ ಚಕ್ರದ ಮೊದಲನೇ ರಾಶಿಯವರಿಗೆ ಈ ವಾರ ಶುಭ. ಆರ್ಥಿಕ ಅನುಕೂಲತೆಗಿಂತ ನಿಮಗೆ ಉಪಯೋಗಕ್ಕೆ ಬರುವ ಅನೇಕ ವಸ್ತುಗಳು ಅನ್ಯರ

ದ್ವಾದಶ ರಾಶಿಗಳ ವಾರಭವಿಷ್ಯ Read More »

ವಿಮಾನಕ್ಕೆ ಡಿಕ್ಕಿ ಹೊಡೆದ ಟಿಟಿ‌ ವಾಹನ| ಬೆಂಗಳೂರಿನಲ್ಲಿ ತಪ್ಪಿದ ಭಾರೀ‌ ದುರಂತ

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದೆ.ಇಂಜಿನ್ ರಿಪೇರಿಯಿಂದಾಗಿ ವಿಮಾನ ಕೆಟ್ಟು ನಿಂತಿತ್ತು. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರೀ ದುರಂತ ತಪ್ಪಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಬ್ಬಸಕ್ಕೆ ಟಿಟಿ ವಾಹನದ ಟಾಪ್ ನಚ್ಚುಗುಜ್ಜಾಗಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ಟಿಟಿ ಚಾಲಕ ಪಾರಾಗಿದ್ದಾರೆ. ಕೆಲವು ದಿನಗಳಿಂದ ಇಂಡಿಗೋ ವಿಮಾನ ಕೆಟ್ಟ ನಿಂತಿತ್ತು. ಚಾಲಕನ ಅಜಾಗರೂಕತೆಯಿಂದ

ವಿಮಾನಕ್ಕೆ ಡಿಕ್ಕಿ ಹೊಡೆದ ಟಿಟಿ‌ ವಾಹನ| ಬೆಂಗಳೂರಿನಲ್ಲಿ ತಪ್ಪಿದ ಭಾರೀ‌ ದುರಂತ Read More »

ರಿಕ್ಕಿ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ FIR

ಸಮಗ್ರ ನ್ಯೂಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಫೈರಿಂಗ್ ನಡೆಯುವ ಸಂದರ್ಭದಲ್ಲಿ ಬಸವರಾಜ್​​ ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ

ರಿಕ್ಕಿ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ FIR Read More »

ಬಿಜೆಪಿಗೆ ಮಾಜಿ ಶಾಸಕ‌ ಎ.ಟಿ ರಾಮಸ್ವಾಮಿ ರಾಜೀನಾಮೆ

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದು ರಾಜೀನಾಮೆ ವಿಚಾರ ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ರಾಮಸ್ವಾಮಿ ಅವರು ಜೆಡಿಎಸ್‌ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದೀಗ ದಿಢೀರನೆ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರ ಸಂಚಲನ ಸೃಷ್ಟಿಸಿದೆ. ಬಿವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ

ಬಿಜೆಪಿಗೆ ಮಾಜಿ ಶಾಸಕ‌ ಎ.ಟಿ ರಾಮಸ್ವಾಮಿ ರಾಜೀನಾಮೆ Read More »

ಮೂಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಕುಸಿದ ರಥದ ಮೇಲ್ಭಾಗ

ಸಮಗ್ರ ನ್ಯೂಸ್: ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಭಾಗ ಕುಸಿದು ಬಿದ್ದಿದೆ ಈ ಸಂದರ್ಭದಲ್ಲಿ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ಮಾಹಿತಿ ದೊರೆತಿದೆ. ಈ ಘಟನೆಯು ಭಕ್ತ ಸಮೂಹದಲ್ಲಿ ಭಾರೀ ಆತಂಕಕ್ಕೆ ಕಾರಣವಾಯಿತು. ಬಳಿಕ ದೇವರ ಉತ್ಸವವನ್ನು ಚಂದ್ರ

ಮೂಲ್ಕಿ: ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಕುಸಿದ ರಥದ ಮೇಲ್ಭಾಗ Read More »

ಮುತ್ತಪ್ಪ‌ ರೈ ಪುತ್ರ‌ ರಿಕ್ಕಿ ರೈ ಮೇಲೆ‌ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಸಮಗ್ರ ನ್ಯೂಸ್: ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ. ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ.

ಮುತ್ತಪ್ಪ‌ ರೈ ಪುತ್ರ‌ ರಿಕ್ಕಿ ರೈ ಮೇಲೆ‌ ದುಷ್ಕರ್ಮಿಗಳಿಂದ ಗುಂಡಿನ ದಾಳಿ Read More »

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ| ಅಧಿಕಾರಿಯ ಸಸ್ಪೆಂಡ್ ಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಸಮಗ್ರ ನ್ಯೂಸ್: ವಿವಿಧ ವೃತ್ತಿಪರ ಕೋರ್ಸ್​​ಗಳಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರವು ಬುಧವಾರ ಹಾಗೂ ಗುರುವಾರ ಯುಜಿಸಿಇಟಿ-25 ಪರೀಕ್ಷೆಯನ್ನು ನಡೆಸಿದ್ದು, ಈ ವೇಳೆ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕತ್ತರಿ ಹಾಕಿದ ಪ್ರಕರಣವು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಹಿನ್ನೆಲೆಯಲ್ಲಿ ಬ್ರಾಹ್ಮಣ ಸಚಿವರು, ಶಾಸಕರಿಂದಲೂ ತೀವ್ರ ಖಂಡನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಪರೀಕ್ಷಾ ಕೇಂದ್ರದ ಅಧಿಕಾರಿಯನ್ನು ತಕ್ಷಣವೇ ಅಮಾನತು ಮಾಡುವಂತೆ

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ| ಅಧಿಕಾರಿಯ ಸಸ್ಪೆಂಡ್ ಗೆ ಸಚಿವ ಮಧು ಬಂಗಾರಪ್ಪ ಸೂಚನೆ Read More »

ಪೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಸಮಗ್ರ ನ್ಯೂಸ್: ಫೇಸ್ ಬುಕ್ ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ನಡೆದಿದೆ. ಪ್ರವೀಣ್ ಗೌಡ ಬೇಲೂರು ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ತನಗೆ ಹಲವರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹಾಗೂ ತನಗೆ ಕಿರುಕುಳ ನೀಡುತ್ತಿರುವವರ ಹೆಸರನ್ನು ರೆಕಾರ್ಡ್ ಮಾಡಿಟ್ಟು ಪ್ರವೀಣ್ ಗೌಡ ಸಾವಿಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್.ವಿ.ಎಂ.ಸ್ಕೂಲ್ ಬಳಿ ಪ್ರವೀಣ್ ನೇಣಿಗೆ ಕೊರಳೊಡ್ಡಿದ್ದಾರೆ. ಸಾವಿಗೂ ಮುನ್ನ

ಪೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ Read More »