ಬೆಳ್ತಂಗಡಿ: ಕಾಡಿನಲ್ಲಿ ಪತ್ತೆಯಾದ ಮಗುವಿನ ತಂದೆ – ತಾಯಿಗೆ ವಿವಾಹ| ಕಾನೂನಾತ್ಮಕವಾಗಿ ಮಗುವನ್ನು ವಾಪಾಸು ಪಡೆಯಲು ನಿರ್ಧಾರ
ಸಮಗ್ರ ನ್ಯೂಸ್: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಕೊಡೋಳುಕೆರೆ ಎಂಬಲ್ಲಿ ಮಾರ್ಚ್ 22ರಂದು ಕಾಡಿನಲ್ಲಿ ಪತ್ತೆಯಾಗಿದ್ದ ಶಿಶುವಿನ ತಂದೆ-ತಾಯಿ ವಿವಾಹವಾಗಿದ್ದಾರೆ. ಕಾಡಿನಲ್ಲಿ ಪತ್ತೆಯಾದ ಶಿಶುವು ಬೆಳಾಲು ಗ್ರಾಮದ ಮಾಯ ಪ್ರದೇಶದ ನಿವಾಸಿ ರಂಜಿತ್ ಗೌಡ (27) ಹಾಗೂ ಧರ್ಮಸ್ಥಳ ಬಳಿಯ ಪಾಂಗಾಳ ನಿವಾಸಿ ಸುಶ್ಮಿತಾ ಅವರಿಗೆ ಸೇರಿದ್ದು ಎಂಬುದನ್ನು ಪೊಲೀಸರು ಪತ್ತೆಹಚ್ಚಿದ್ದರು. ಎರಡೂ ಕುಟುಂಬಗಳ ಪ್ರಮುಖರ ಸಮ್ಮುಖದಲ್ಲಿ ನಡ ಗ್ರಾಮದ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಅವರ ವಿವಾಹ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ […]










