ಸಮಗ್ರ ಸಮಾಚಾರ

ವಿರಾಟ ದರ್ಶನಕ್ಕೆ ಕಕ್ಕಾಬಿಕ್ಕಿಯಾದ ಕೆಕೆಆರ್| ಆರ್ ಸಿಬಿಗೆ ಭರ್ಜರಿ ಜಯ

ಸಮಗ್ರ ನ್ಯೂಸ್: ಸತತ ಎರಡು ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ವಿರಾಟ್ ಕೊಹ್ಲಿ ಬುಧವಾರ ಶತಕ ಗಳಿಸಿ ತಮ್ಮ ಅಭಿಮಾನಿಗಳ ಮನಕ್ಕೆ ಮುದ ನೀಡಿದರು. ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 193 ರನ್‌ಗಳ ಗುರಿ ಬೆನ್ನಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 6 ವಿಕೆಟ್‌ಗಳಿಂದ ಗೆದ್ದಿತು. ವಿರಾಟ್ 60 ಎಸೆತಗಳಲ್ಲಿ 105 ರನ್ ಗಳಿಸಿದರು. ಅದರಲ್ಲಿ 11 ಬೌಂಡರಿಮತ್ತು 3 ಸಿಕ್ಸರ್‌ ಇದ್ದವು. ‘ಚೇಸ್‌ ಮಾಸ್ಟರ್‌’ ವಿರಾಟ್ ಮತ್ತು ಕನ್ನಡಿಗ ದೇವದತ್ತ ಪಡಿಕ್ಕಲ್ (37; 27ಎ) […]

ವಿರಾಟ ದರ್ಶನಕ್ಕೆ ಕಕ್ಕಾಬಿಕ್ಕಿಯಾದ ಕೆಕೆಆರ್| ಆರ್ ಸಿಬಿಗೆ ಭರ್ಜರಿ ಜಯ Read More »

ಬಿಜೆಪಿ ಸರ್ಕಾರದ ‌ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆದ ರಾಜ್ಯ ಸರ್ಕಾರ| ಸರ್ಕಾರಿ, ಶಾಲಾ ಕಾಲೇಜುಗಳಲ್ಲಿ ಹಿಜಾಬ್, ಜನಿವಾರ, ರುದ್ರಾಕ್ಷಿ‌ ಧರಿಸಲು ಅವಕಾಶ

ಸಮಗ್ರ ನ್ಯೂಸ್: 2022ರಲ್ಲಿ ಅಂದಿನ  ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧಕ್ಕೆ ಪೂರಕವಾಗಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಗ ಹಿಂಪಡೆದುಕೊಂಡಿದೆ. ಇಂದು (ಮೇ 13) ಹೊಸ ವಸ್ತ್ರಸಂಹಿತೆ ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಹೊಸ ಆದೇಶದ ಪ್ರಕಾರ, ಶಾಲಾ-ಕಾಲೇಜುಗಳು ನಿಗದಿಪಡಿಸಿದ ಸಮವಸ್ತ್ರಕ್ಕೆ ಪೂರಕವಾಗಿ ಮತ್ತು ಅದಕ್ಕೆ ಹೊಂದಿಕೊಳ್ಳುವಂತೆ ಸೀಮಿತ ಸಾಂಪ್ರದಾಯಿಕ ಸಂಕೇತಗಳನ್ನು ಧರಿಸಲು ಅನುಮತಿ ನೀಡಲಾಗಿದೆ. ಹಿಜಾಬ್, ಪೇಟ ಅಥವಾ ಟರ್ಬನ್

ಬಿಜೆಪಿ ಸರ್ಕಾರದ ‌ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆದ ರಾಜ್ಯ ಸರ್ಕಾರ| ಸರ್ಕಾರಿ, ಶಾಲಾ ಕಾಲೇಜುಗಳಲ್ಲಿ ಹಿಜಾಬ್, ಜನಿವಾರ, ರುದ್ರಾಕ್ಷಿ‌ ಧರಿಸಲು ಅವಕಾಶ Read More »

ಹವಾಮಾನ ವರದಿ| ರಾಜ್ಯದಲ್ಲಿ ಇನ್ನೂ ಮೂರು ದಿನ ಉತ್ತಮ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಎಫೆಕ್ಟ್‌ ಇದಾಗಿದೆ. ಹವಾಮಾನದಲ್ಲಿ ವಿಭಿನ್ನ ಬದಲಾವಣೆ ಕಾಣಿಸಿದ್ದು, ಆಲಿಕಲ್ಲು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ನಾಳೆ ಹಾಗೂ ನಾಡಿದ್ದು ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಸಹಿತ ಮಳೆ, ನಾಡಿದ್ದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಮಳೆ

ಹವಾಮಾನ ವರದಿ| ರಾಜ್ಯದಲ್ಲಿ ಇನ್ನೂ ಮೂರು ದಿನ ಉತ್ತಮ ಮಳೆ ಸಾಧ್ಯತೆ Read More »

ಆಭರಣ ಪ್ರೀಯರಿಗೆ ಶಾಕ್ ನೀಡಿದ ಕೇಂದ್ರ| ಚಿನ್ನಾಭರಣಗಳ ಮೇಲೆ ಆಮದು ಸುಂಕ 15% ಏರಿಕೆ

ಸಮಗ್ರ ನ್ಯೂಸ್: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇನ್ನು ಮುಂದೆ ಮತ್ತಷ್ಟು ದುಬಾರಿಯಾಗಲಿವೆ. ಕೇಂದ್ರ ಸರ್ಕಾರವು ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂ ಸೇರಿದಂತೆ ಅಮೂಲ್ಯ ಲೋಹಗಳ ಮೇಲಿನ ಆಮದು ಸುಂಕವನ್ನು ಶೇ.15%ರಷ್ಟು ಹೆಚ್ಚಿಸಿದೆ. ಹಣಕಾಸು ಸಚಿವಾಲಯವು ಮಂಗಳವಾರ ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಪರಿಷ್ಕೃತ ದರಗಳು ಇಂದು ಅಂದರೆ ಮೇ 13, 2026 ರಿಂದಲೇ ಜಾರಿಗೆ ಬರಲಿವೆ. ಈ ಹಿಂದೆ ಶೇ. 6ರಷ್ಟಿದ್ದ ಆಮದು ಸುಂಕವನ್ನು ಈಗ ಒಟ್ಟಾರೆಯಾಗಿ ಶೇ. 15ಕ್ಕೆ ಏರಿಸಲಾಗಿದೆ. ಇದರಲ್ಲಿ

ಆಭರಣ ಪ್ರೀಯರಿಗೆ ಶಾಕ್ ನೀಡಿದ ಕೇಂದ್ರ| ಚಿನ್ನಾಭರಣಗಳ ಮೇಲೆ ಆಮದು ಸುಂಕ 15% ಏರಿಕೆ Read More »

ಕುಕ್ಕೆ ಸುಬ್ರಹ್ಮಣ್ಯ: ಭಕ್ತಾದಿಗಳಿಗೆ ದೇವರ ದರ್ಶನಕ್ಕೆ 1ಗಂಟೆ ಹೆಚ್ಚುವರಿ ಸಮಯ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ದೇವರ ದರ್ಶನದ ಸಮಯದಲ್ಲಿ ಅಲ್ಪ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಹೆಚ್ಚಿನ ಸಮಯದ ದರ್ಶನ ಸೌಲಭ್ಯ ಕಲ್ಪಿಸಲಾಗಿದೆ. ಈ ಮೊದಲು ಮಧ್ಯಾಹ್ನ 1.30ರಿಂದ 3.30ರವರೆಗೆ ದರ್ಶನ ಸ್ಥಗಿತಗೊಳ್ಳುತ್ತಿತ್ತು. ಆಡಳಿತ ಮಂಡಳಿಯ ಹೊಸ ನಿರ್ಣಯದಂತೆ ಮಧ್ಯಾಹ್ನ 2ರಿಂದ 3ರವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಹೊಸ ವ್ಯವಸ್ಥೆಯಂತೆ ಬೆಳಿಗ್ಗೆ 6.30ರಿಂದ ಮಧ್ಯಾಹ್ನ 2ರ ವರೆಗೆ, ಮಧ್ಯಾಹ್ನ 3ರಿಂದ ರಾತ್ರಿ 8.30ರವರೆಗೆ ನಿರಂತರ ದರ್ಶನ ವ್ಯವಸ್ಥೆ ಇರಲಿದೆ. ಮಹಾಮಂಗಳಾರತಿಯ ಸಮಯದಲ್ಲಿ ಮಾತ್ರ ಹಿಂದಿನಂತೆ ಅಲ್ಪಕಾಲ

ಕುಕ್ಕೆ ಸುಬ್ರಹ್ಮಣ್ಯ: ಭಕ್ತಾದಿಗಳಿಗೆ ದೇವರ ದರ್ಶನಕ್ಕೆ 1ಗಂಟೆ ಹೆಚ್ಚುವರಿ ಸಮಯ Read More »

‘ಹಿಟ್ಲರ್‌ ಕಲ್ಯಾಣ’ ಖ್ಯಾತಿಯ ನಟ ದಿಲೀಪ್ ರಾಜ್ ಇನ್ನಿಲ್ಲ

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ಸ್ಯಾಂಡಲ್‌ವುಡ್‌ ಶೋಕಸಾಗರದಲ್ಲಿ ಮುಳುಗಿದೆ. ಕನ್ನಡ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫಿಟ್ ಅಂಡ್ ಫೈನ್ ಆಗಿದ್ದ 47 ವರ್ಷದ ನಟನಿಗೆ ಇದ್ದಕ್ಕಿದ್ದ ಹಾಗೇ ಹೃದಯಾಘಾತವಾಗಿದ್ದು ಕೊನೆಯುಸಿರೆಳೆದಿದ್ದಾರೆ. ಕನ್ನಡದ ಹಲವು ಸಿನಿಮಾಗಳಲ್ಲಿ ನಾಯಕನಾಗಿ, ಖಳನಾಯಕನಾಗಿ, ಪೋಷಕ ಪಾತ್ರಗಳಲ್ಲಿ ನಟಿಸಿದ್ದರು. ಇಷ್ಟೇ ಅಲ್ಲದೇ ಕಿರುತೆರೆಯಲ್ಲಿಯೂ ದಿಲೀಪ್ ರಾಜ್‌ ನಟಿಸಿದ್ದರು. ‘ಹಿಟ್ಲರ್ ಕಲ್ಯಾಣ’ ದಿಲೀಪ್ ರಾಜ್ ನಟಿಸಿದ್ದ ಜನಪ್ರಿಯ ಧಾರಾವಾಹಿ. ಇಷ್ಟೇ ಅಲ್ಲದೇ ದಿಲೀಪ್ ರಾಜ್ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು. ಅಲ್ಲದೇ, ಎರಡು

‘ಹಿಟ್ಲರ್‌ ಕಲ್ಯಾಣ’ ಖ್ಯಾತಿಯ ನಟ ದಿಲೀಪ್ ರಾಜ್ ಇನ್ನಿಲ್ಲ Read More »

ಮೂಲ್ಕಿ ಪೊಲೀಸರ‌ ಭರ್ಜರಿ‌ ಕಾರ್ಯಾಚರಣೆ| ₹35 ಲಕ್ಷ ಮೌಲ್ಯದ ಗಾಂಜಾ ಸಹಿತ ಸಿಕ್ಕಿಬಿದ್ದ ಬಿಸಿಎ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ದಿನದಿಂದ ದಿನಕ್ಕೆ ಆಳವಾಗಿ ಇಳಿಯುತ್ತಿರುವುದು ಆತಂಕ ಮೂಡಿಸಿದೆ. ಇದಕ್ಕೆ ಪುಷ್ಟಿ ನೀಡುವಂತೆ, ನಗರದ ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿದ್ದಾರೆ. ​ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾದ 21 ವರ್ಷದ ಸುಹಾನ ಬಂಧಿತ ಆರೋಪಿತೆ. ಈಕೆ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು

ಮೂಲ್ಕಿ ಪೊಲೀಸರ‌ ಭರ್ಜರಿ‌ ಕಾರ್ಯಾಚರಣೆ| ₹35 ಲಕ್ಷ ಮೌಲ್ಯದ ಗಾಂಜಾ ಸಹಿತ ಸಿಕ್ಕಿಬಿದ್ದ ಬಿಸಿಎ ವಿದ್ಯಾರ್ಥಿನಿ Read More »

ಬೆಳ್ತಂಗಡಿ: ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ| ಆರೋಪಿಗಳಿಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಕ್ಯಾಂಟಿನ್ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಸಂತ್ರಸ್ತೆಯನ್ನು ರಕ್ಷಿಸಿದ್ದು, ಮೂವರನ್ನು ವಶಕ್ಕೆ ಪಡೆದು ಇಬ್ಬರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆಯಲ್ಲಿರುವ ಸುಂದ‌ರ್ ಶೆಟ್ಟಿ ಮಾಲೀಕತ್ವದ ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಕ್ಯಾಂಟಿನ್ ಮಾಲೀಕ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ಸುಂದ‌ರ್ ಶೆಟ್ಟಿ (55) ಮತ್ತು ಸ್ನೇಹಿತ ನಾವೂರು ಗ್ರಾಮದ ಉಸ್ಮಾನ್ (38) ಎಂಬುವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವೇಶ್ಯಾವಟಿಕೆ ಅಡ್ಡೆಗೆ ಬಂದಿದ್ದ ಕಲ್ಲೇರಿ

ಬೆಳ್ತಂಗಡಿ: ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ| ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಗೃಹಲಕ್ಷ್ಮಿ ಯೋಜನೆ ಹಣದಲ್ಲಿ ಬೋರ್ ವೆಲ್ ಕೊರೆಸಿದ ಮಹಿಳೆ

ಸಮಗ್ರ ನ್ಯೂಸ್: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಮರ್ಶೆಗಳ ನಡುವೆಯೇ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗೃಹಿಣಿಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸದುಪಯೋಗಪಡಿಸಿಕೊಂಡು ಮಾದರಿಯಾಗಿದ್ದಾರೆ. ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪದ ನಿವಾಸಿ ಈರವ್ವ ಭರಮಪ್ಪ ಅಂಗಡಿ (52).ಗೃಹಲಕ್ಷ್ಮಿ ಯೋಜನೆಯಡಿ ತಮಗೆ ಬಂದ ಒಟ್ಟು 29 ಕಂತುಗಳ ಹಣವನ್ನು ಕೂಡಿಟ್ಟ ಈರವ್ವ, ಸುಮಾರು ₹54,000 ಮೊತ್ತವನ್ನು ಸಂಗ್ರಹಿಸಿದ್ದರು.ಈ ಹಣದಲ್ಲಿ ₹50,000 ವ್ಯಯಿಸಿ ತಮ್ಮ 2.5 ಎಕರೆ ಜಮೀನಿನಲ್ಲಿ 220 ಅಡಿ ಆಳದ ಬೋರ್ವೆಲ್ ಕೊರೆಸಿದ್ದಾರೆ. 90 ಅಡಿಗೇ 5

ಗೃಹಲಕ್ಷ್ಮಿ ಯೋಜನೆ ಹಣದಲ್ಲಿ ಬೋರ್ ವೆಲ್ ಕೊರೆಸಿದ ಮಹಿಳೆ Read More »

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು| ವಿವಾದಾತ್ಮಕ ಭಾಷಣ ಮಾಡಿದ ಉದಯನಿಧಿ ಸ್ಟಾಲಿನ್

ಸಮಗ್ರ ನ್ಯೂಸ್: ತಮಿಳುನಾಡಿನ ಹಿಂದಿನ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಉದಯನಿಧಿ ಸ್ಟಾಲಿನ್ ಹೊಸ ಸರ್ಕಾರದಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನ ಅಲಂಕರಿಸಿದ್ದಾರೆ. ಮೊದಲ ವಿಧಾನಸಭೆ ಅಧಿವೇಶನದಲ್ಲಿ ನಿನ್ನೆ(ಮೇ 12) ಶಾಸಕರಾಗಿ ಅವರು ಪ್ರಮಾಣವಚನ ಸ್ವೀಕರಸಿದ್ದರು. ಸದನದಲ್ಲಿ ಎರಡನೇ ದಿನ ವಿರೋಧ ಪಕ್ಷದ ನಾಯಕನಾಗಿ ಭಾಷಣ ಮಾಡಿದ್ದಾರೆ. ಉದಯನಿಧಿ ಸ್ಟಾಲಿನ್ ತಮ್ಮ ಭಾಷಣದ ಕೊನೆಯಲ್ಲಿ ಆಡಿದ ಮಾತು ಈಗ ಮತ್ತೆ ವಿವಾದ ಹುಟ್ಟಾಕ್ಕಿದೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಅವರು ಹೇಳಿರುವುದು ಬಹಳ ವೈರಲ್ ಆಗ್ತಿದೆ. 3 ವರ್ಷಗಳ

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು| ವಿವಾದಾತ್ಮಕ ಭಾಷಣ ಮಾಡಿದ ಉದಯನಿಧಿ ಸ್ಟಾಲಿನ್ Read More »