ಸಮಗ್ರ ಸಮಾಚಾರ

ಮಂಡ್ಯದ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ನಾಲ್ವರು ಪ್ರವಾಸಿಗರು ಸಾವು

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ನಡೆದ ಘೋರ ದುರಂತದಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರು ಈಜಲು ಇಳಿದಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನದಿಯ ಆಳ ಮತ್ತು ಸುಳಿಯ ಅರಿವಿಲ್ಲದೆ ಈಜಲು ಮುಂದಾದ ಯುವಕರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯು ಮೃತ ಯುವಕರ ಕುಟುಂಬಸ್ಥರು ಮತ್ತು ಸ್ಥಳೀಯರಲ್ಲಿ ತೀವ್ರ ಶೋಕವನ್ನು ಉಂಟುಮಾಡಿದೆ. ಮಾಹಿತಿಯಂತೆ, ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಈ ನಾಲ್ವರು ಯುವಕರು […]

ಮಂಡ್ಯದ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ನಾಲ್ವರು ಪ್ರವಾಸಿಗರು ಸಾವು Read More »

ರಾಜ್ಯದಲ್ಲೊಂದು ಬೆಚ್ಚಿಬೀಳಿಸುವ ಘಟನೆ|ಎಲ್ಐಸಿ ಹಣಕ್ಕಾಗಿ ಸಹೋದರನ ಕೊಲೆ!!

ಸಮಗ್ರ ನ್ಯೂಸ್: ಹಣದ ದುರಾಸೆ ಮನುಷ್ಯನನ್ನು ಎಷ್ಟರಮಟ್ಟಿಗೆ ಕುರುಡಾಗಿಸುತ್ತದೆ ಎಂಬುದಕ್ಕೆ ತುಮಕೂರಿನಲ್ಲಿ ನಡೆದ ಈ ಭೀಕರ ಹತ್ಯೆ ಪ್ರಕರಣವೇ ಸಾಕ್ಷಿ. ಜೀವ ವಿಮೆ (LIC) ಹಣದ ಆಸೆಗೆ ಬಿದ್ದ ಅಣ್ಣನೊಬ್ಬ, ಸುಪಾರಿ ಹಂತಕರ ನೆರವಿನೊಂದಿಗೆ ಸ್ವಂತ ತಮ್ಮನನ್ನೇ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಅಪಘಾತ ಎಂದು ಬಿಂಬಿಸಲು ಯತ್ನಿಸಿದ ವಿಲಕ್ಷಣ ಘಟನೆಯನ್ನು ಪಟ್ಟನಾಯಕನಹಳ್ಳಿ ಪೊಲೀಸರು ಭೇದಿಸಿದ್ದಾರೆ. ಬೈಕ್ ಅಪಘಾತ ಎಂದು ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಅಣ್ಣ ಹನುಮಂತರಾಜು ಸೇರಿದಂತೆ ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ

ರಾಜ್ಯದಲ್ಲೊಂದು ಬೆಚ್ಚಿಬೀಳಿಸುವ ಘಟನೆ|ಎಲ್ಐಸಿ ಹಣಕ್ಕಾಗಿ ಸಹೋದರನ ಕೊಲೆ!! Read More »

ದೇಶದ 111 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ| ಕೇಂದ್ರ ಕೃಷಿ ಸಚಿವ ಚೌಹಾಣ್ ಆತಂಕ

ಸಮಗ್ರ ನ್ಯೂಸ್: ದೇಶದಲ್ಲಿ ಮುಂಗಾರು ಮಳೆ ಕೊರತೆ ಮತ್ತು ಕೆಲವು ರಾಜ್ಯಗಳಲ್ಲಿ ಅತಿವೃಷ್ಟಿಯ ಅನಿಶ್ಚಿತತೆ ಒಟ್ಟಿಗೇ ಎದುರಾಗಿದೆ. ಎಲ್ ನಿನೋ ಪ್ರಭಾವದಿಂದಾಗಿ ದೇಶದಲ್ಲಿ ಸದ್ಯ ಶೇಕಡಾ 43 ರಷ್ಟು ಮುಂಗಾರು ಮಳೆ ಕೊರತೆ ಉಂಟಾಗಿದ್ದು, ಇದರಿಂದಾಗಿ ಬಿತ್ತನೆ ಕಾರ್ಯಕ್ಕೆ ಭಾರಿ ಹಿನ್ನಡೆಯಾಗಿದೆ.‌ ದೇಶದ ಒಟ್ಟು 111 ಜಿಲ್ಲೆಗಳು ತೀವ್ರ ಬೆಳೆ ಹಾನಿಯ ಅಪಾಯವನ್ನು ಎದುರಿಸುತ್ತಿವೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಸಕ್ತ ವರ್ಷ ದೇಶದಲ್ಲಿ ಎಲ್-ನಿನೋ ಎಫೆಕ್ಟ್ ಭೀತಿ

ದೇಶದ 111 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ| ಕೇಂದ್ರ ಕೃಷಿ ಸಚಿವ ಚೌಹಾಣ್ ಆತಂಕ Read More »

ಪುತ್ತೂರು: ನಾಪತ್ತೆಯಾಗಿದ್ದ ‘ಚಿನ್ನು’ ಪತ್ತೆ ಮಾಡಿದಾತನಿಗೆ ₹50 ಸಾವಿರ ಚೆಕ್ ನೀಡಿದ ಮಾಲೀಕ

ಸಮಗ್ರ ನ್ಯೂಸ್: ಸಾಕು ನಾಯಿಗಳೆಂದರೆ ಕೇವಲ ಪ್ರಾಣಿಗಳಲ್ಲ, ಅವು ಮನೆಯ ಒಂದು ಅವಿಭಾಜ್ಯ ಅಂಗ ಎಂಬುದನ್ನು ಪುತ್ತೂರಿನ ಶ್ವಾನಪ್ರೇಮಿಯೊಬ್ಬರು ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ನಾಪತ್ತೆಯಾಗಿದ್ದ ತಮ್ಮ ಪ್ರೀತಿಯ ದೇಸಿ ತಳಿಯ ನಾಯಿಯನ್ನು ಹುಡುಕಿಕೊಟ್ಟ ಸ್ಥಳೀಯ ವ್ಯಕ್ತಿಗೆ, ಮಾಲೀಕರು ಕೊಟ್ಟ ಮಾತಿನಂತೆ ₹50 ಸಾವಿರ ನಗದು ಬಹುಮಾನದ ಚೆಕ್ ವಿತರಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಸಮೀಪದ ಪೋಳ್ಯ ನಿವಾಸಿ, ಪ್ರಸಿದ್ಧ ಶ್ವಾನಪ್ರೇಮಿ ಗಣೇಶ್ ಕೇರ ಅವರ ಮನೆಯ ‘ಚಿನ್ನು’ ಹೆಸರಿನ ದೇಸಿ ತಳಿಯ

ಪುತ್ತೂರು: ನಾಪತ್ತೆಯಾಗಿದ್ದ ‘ಚಿನ್ನು’ ಪತ್ತೆ ಮಾಡಿದಾತನಿಗೆ ₹50 ಸಾವಿರ ಚೆಕ್ ನೀಡಿದ ಮಾಲೀಕ Read More »

ಹವಾಮಾನ ಆಧಾರಿತ ಬೆಳೆವಿಮೆ| ವಿಮಾ ಪಾವತಿಗೆ ಜು.31 ಕೊನೆ ದಿನ

ಸಮಗ್ರ ನ್ಯೂಸ್: 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಅಡಿಕೆ, ಮಾವು, ಕಾಳು ಮೆಳಸು, ಶುಂಠಿ ಬೆಳೆಗಳಿಗೆ ವಿಮೆ ದರವನ್ನು ನಿಗದಿಪಡಿಸಲಾಗಿದ್ದು, ರೈತರು ನಿಗದಿತ ಅವಧಿಯೊಳಗೆ ಪಾವತಿಸಬಹುದು ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ. ಫಸಲು ಬಿಡುವಂತಹ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವಂತಹ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದೆ. ಆಸಕ್ತ ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಗ್ರಾಮ ಒನ್ ಅಥವಾ ಬ್ಯಾಂಕುಗಳಲ್ಲಿ ವಿಮೆ

ಹವಾಮಾನ ಆಧಾರಿತ ಬೆಳೆವಿಮೆ| ವಿಮಾ ಪಾವತಿಗೆ ಜು.31 ಕೊನೆ ದಿನ Read More »

ಕಡಬ: ಆಲಂಕಾರಿನಲ್ಲಿ ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ| ಹೆಣಗಳ ನಡುವೆ ಅತ್ತೂ ಅತ್ತು ನಿದ್ದೆಗೆ ಜಾರಿದ ಕಂದಮ್ಮ!!

ಸಮಗ್ರ ನ್ಯೂಸ್: ಪತ್ನಿಯನ್ನು ಕೊಂದು ಪತಿ‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಅಪರಾಹ್ನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು ಎಂಬಲ್ಲಿ ನಡೆದಿದೆ. ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಮೂಲತಃ ಕಾರ್ಕಳ ಬಜಗೋಳಿ ನಿವಾಸಿ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತಾ ದಂಪತಿಯು ಆಲಂಕಾರು ಕಜೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಶನಿವಾರದಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ದಂಪತಿಗೆ ಎರಡು

ಕಡಬ: ಆಲಂಕಾರಿನಲ್ಲಿ ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ| ಹೆಣಗಳ ನಡುವೆ ಅತ್ತೂ ಅತ್ತು ನಿದ್ದೆಗೆ ಜಾರಿದ ಕಂದಮ್ಮ!! Read More »

ಬಂಟ್ವಾಳ: ಕಾರು – ಸ್ಕೂಟರ್ ನಡುವೆ ಅಪಘಾತ; ಸವಾರ ಸಾವು

ಸಮಗ್ರ ನ್ಯೂಸ್: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಜಿಪನಡು ಸಮೀಪದ ದೇರಾಜೆ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಸಜಿಪನಡು ಸಮೀಪದ ಮಡ್ಯಲಚ್ಚಿಲ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಅಹ್ಮದ್ ಅಸೀರ್ (22) ಮೃತಪಟ್ಟ ದುರ್ದೈವಿ ಸವಾರ. ಗುರುವಾರ ಸಂಜೆ ವೇಳೆ ಅಹ್ಮದ್ ಅಸೀರ್ ಅವರು ತಮ್ಮ ಆಕ್ಟಿವಾ ಸ್ಕೂಟರ್‌ನಲ್ಲಿ ಸಜಿಪ ಕಡೆಯಿಂದ ಬೇಂಕೆ ಕಡೆಗೆ ಸಂಚರಿಸುತ್ತಿದ್ದರು. ಈ ವೇಳೆ ದೇರಾಜೆ ತಲುಪುತ್ತಿದ್ದಂತೆ ಎದುರಿನಿಂದ

ಬಂಟ್ವಾಳ: ಕಾರು – ಸ್ಕೂಟರ್ ನಡುವೆ ಅಪಘಾತ; ಸವಾರ ಸಾವು Read More »

ರಾಜ್ಯದಲ್ಲಿ ಭೀಕರ ಬರಗಾಲ ವದಂತಿಗೆ ತೆರೆ| ನಿರಾಳತೆ ತಂದ ಹವಾಮಾನ ತಜ್ಞರ ಮಾಹಿತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಈ ಬಾರಿ ಸರಿಯಾಗಿ ಮಳೆಯಾಗುವುದಿಲ್ಲ, ಭೀಕರ ಬರಗಾಲ ಆವರಿಸಲಿದೆ ಎಂಬ ವದಂತಿಗಳು ಇತ್ತೀಚೆಗೆ ಅನ್ನದಾತರಲ್ಲಿ ತೀವ್ರ ಆತಂಕ ಮೂಡಿಸಿದ್ದವು. ಭೀಕರ ಬರಗಾಲದ ಭೀತಿಯಿಂದ ಕೃಷಿ ಚಟುವಟಿಕೆಗಳ ಗತಿಯೇನು ಎಂದು ಕಂಗಾಲಾಗಿದ್ದ ರೈತರಿಗೆ ಹವಾಮಾನ ತಜ್ಞರು ಹಾಗೂ ವಿಜ್ಞಾನಿಗಳು ಮಹತ್ವದ ಮಾಹಿತಿ ನೀಡುವ ಮೂಲಕ ದೊಡ್ಡ ನಿರಾಳತೆ ತಂದಿದ್ದಾರೆ. ರಾಜ್ಯದಲ್ಲಿ ಯಾವುದೇ ಭೀಕರ ಬರಗಾಲ ಬರುವುದಿಲ್ಲ ಮತ್ತು ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ತಜ್ಞರು ಖಡಕ್ ಆಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಭೀಕರ

ರಾಜ್ಯದಲ್ಲಿ ಭೀಕರ ಬರಗಾಲ ವದಂತಿಗೆ ತೆರೆ| ನಿರಾಳತೆ ತಂದ ಹವಾಮಾನ ತಜ್ಞರ ಮಾಹಿತಿ Read More »

ಹಾರ್ಮೋಜ್ ಜಲಸಂಧಿ ಸಂಚಾರಕ್ಕೆ ಮುಕ್ತ| ಭಾರತಕ್ಕೆ ಬಂದ LNG ತುಂಬಿದ ಹಡಗು

ಸಮಗ್ರ ನ್ಯೂಸ್: ಅಮೆರಿಕ ಸೇನಾ ದಿಗ್ಬಂಧನ ತೆರವಾದ ನಂತರ ಹಾರ್ಮೋಜ್ ಜಲಸಂಧಿಯಿಂದ ಭಾರತಕ್ಕೆ ಇಂಧನ ಹೊತ್ತ ಹಡಗುಗಳು ಬರಲಾರಂಭಿಸಿವೆ. ಅಮೆರಿಕ-ಇರಾನ್ ನಡುವಿನ ತಾತ್ಕಾಲಿಕ ಒಪ್ಪಂದದ ಮೇಲಿರುವ ಈ ವ್ಯವಸ್ಥೆಯು ಮುಂದಿನ 60 ದಿನಗಳವರೆಗೆ ಜಗತ್ತಿಗೆ ಕುತೂಹಲ ಮೂಡಿಸಿದೆ. ಅಮೆರಿಕ ಸೇನಾ ದಿಗ್ಬಂಧನ ತೆರವುಗೊಳಿಸಿದ ನಂತರ ಹಾರ್ಮೋಜ್ ಜಲಸಂಧಿಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಭಾರತಕ್ಕೆ ಹೊರಟಿದ್ದ ಮೊದಲ ಹಡಗು ಇಂದು ಗುಜರಾತ್‌ನ ದಹೇಜ್ ಬಂದರನ್ನು ತಲುಪಲಿದೆ. ಈ ಹಡಗು ಬರೋಬ್ಬರಿ 62,370 ಮೆಟ್ರಿಕ್ ಟನ್ ಎಲ್‌ಎನ್‌ಜಿ (ಲಿಕ್ವಿಫೈಡ್

ಹಾರ್ಮೋಜ್ ಜಲಸಂಧಿ ಸಂಚಾರಕ್ಕೆ ಮುಕ್ತ| ಭಾರತಕ್ಕೆ ಬಂದ LNG ತುಂಬಿದ ಹಡಗು Read More »

ಇಂದು ಪರಿಷತ್ ಚುನಾವಣೆ| ಬಿಜೆಪಿ ರೆಬಲ್ಸ್ ಗಳು ಕಾಂಗ್ರೆಸ್ ಕೈ ಹಿಡೀತಾರಾ?

ಸಮಗ್ರ ನ್ಯೂಸ್: ಇಂದು ಕರ್ನಾಟಕದಲ್ಲಿ ಮೇಲ್ಮನೆ ಮಹಾಯುದ್ಧ ನಡೆಯುತ್ತಿದೆ. ವಿಧಾನಪರಿಷತ್ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾದ ಮೇಲೆ ಈ ಚುನಾವಣೆ ಎದುರಾಗಿದ್ದು, ಸಹಜವಾಗಿಯೇ ಕುತೂಹಲ ಹೆಚ್ಚಿಸಿದೆ. ಕಣದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದು, ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲು ಕನಿಷ್ಠ 28 ಪ್ರಥಮ ಪ್ರಾಶಸ್ತ್ಯದ ಮತಗಳ ಅಗತ್ಯವಿದೆ. ಕಾಂಗ್ರೆಸ್ ಪಕ್ಷವು ಕಣಕ್ಕಿಳಿಸಿರುವ ಐದೂ ಅಭ್ಯರ್ಥಿಗಳನ್ನು ನಿರಾಯಾಸವಾಗಿ ಗೆಲ್ಲಿಸಲು ಒಟ್ಟು 140 ಮತಗಳ ಅವಶ್ಯಕತೆಯಿದೆ. ಆದರೆ ಕಾಂಗ್ರೆಸ್‌ನ ಸ್ವಂತ ಬಲ ಇರುವುದು 135 ಮಾತ್ರ. ಈ

ಇಂದು ಪರಿಷತ್ ಚುನಾವಣೆ| ಬಿಜೆಪಿ ರೆಬಲ್ಸ್ ಗಳು ಕಾಂಗ್ರೆಸ್ ಕೈ ಹಿಡೀತಾರಾ? Read More »