ಸಮಗ್ರ ಸಮಾಚಾರ

ಕರಾವಳಿಗೆ ಎಂಟ್ರಿ ಕೊಡದ ಮುಂಗಾರು| ಆತಂಕದಲ್ಲಿ ರೈತಾಪಿ ವರ್ಗ| ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದರೆ ಬಚಾವ್!!

ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ಬಾರಿ ಮುಂಗಾರು ಪ್ರವೇಶದ ಲೆಕ್ಕದಲ್ಲಿ ಗೊಂದಲದಲ್ಲಿ ಸಿಲುಕಿದೆ. ಈ ಬಾರಿ ನಿರೀಕ್ಷೆಯ ಪ್ರಕಾರ ಮುಂಗಾರು ಪ್ರವೇಶ ಕೇರಳಕ್ಕೆ ನಿಧಾನವಾಗುತ್ತಿದೆ. ಇದಕ್ಕಾಗಿ ಎರಡು ದಿನಗಳ ಕಾಲ ಮುಂಗಾರು ಕುರಿತು ಮತ್ತಷ್ಟು ಅಧ್ಯಯನಕ್ಕೆ ಇಳಿದು ಬಿಟ್ಟಿದೆ. ಕೇರಳದಲ್ಲಿ ಮುಂಗಾರು ಪ್ರವೇಶ ಜೂನ್ 4ರ ಬಳಿಕ ಆಗಬಹುದು ಎಂದು ಐಎಂಡಿ ಮೊದಲು ವರದಿ ನೀಡಿತ್ತು. ಆದರೆ ಈ ಬಳಿಕ ಇದು ಜೂನ್ 7ರಿಂದ 8ರೊಳಗೆ ಆಗುವ ಸಾಧ್ಯತೆಗಳು ಇದೆ ಎನ್ನುವ ಅಂದಾಜು […]

ಕರಾವಳಿಗೆ ಎಂಟ್ರಿ ಕೊಡದ ಮುಂಗಾರು| ಆತಂಕದಲ್ಲಿ ರೈತಾಪಿ ವರ್ಗ| ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದರೆ ಬಚಾವ್!! Read More »

ಪುತ್ತೂರು: ಕೇರಳದ ಕೊಲೆ ಆರೋಪಿಯ ಬಂಧಿಸಿದ ಕರ್ನಾಟಕ ಪೊಲೀಸ್

ಸಮಗ್ರ ನ್ಯೂಸ್: ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಸುಕಿನ ವೇಳೆ ತಮ್ಮನನ್ನು ಕೊಲೆ ಮಾಡಿ ಪುತ್ತೂರು ಕಡೆಗೆ ತಪ್ಪಿಸಿಕೊಳ್ಳಲು ತೆರಳಿದ್ದ ಆರೋಪಿ ಅಣ್ಣನನ್ನು ಪುತ್ತೂರು ನಗರ ಠಾಣೆ ಪೊಲೀಸರು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಪತ್ತೆ ಮಾಡಿ ಬಂಧಿಸಿದ್ದಾರೆ. ಬಳಿಕ ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೈವಳಿಕೆಯ ನಿವಾಸಿ ಜಯರಾಮ ನೋಂಡ ಬಂಧಿತ ಆರೋಪಿ. ಜಯರಾಮ ನೋಂಡ ತನ್ನ ಸಹೋದರ ಪ್ರಭಾಕರ ನೋಂಡ ಅವರನ್ನು ಶನಿವಾರ ನಸುಕಿನ ವೇಳೆ ಕೊಲೆ

ಪುತ್ತೂರು: ಕೇರಳದ ಕೊಲೆ ಆರೋಪಿಯ ಬಂಧಿಸಿದ ಕರ್ನಾಟಕ ಪೊಲೀಸ್ Read More »

ಅವರಿವರಂತೆ ಗ್ಯಾರಂಟಿ ಬಗ್ಗೆ ನಾನು ಟೀಕೆ ಮಾಡಲ್ಲ – ಯಡಿಯೂರಪ್ಪ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಗ್ಯಾರಂಟಿ ಜಾರಿ ಬಗ್ಗೆ ನನಗೆ ಗ್ಯಾರಂಟಿ ಇದೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಭರವಸೆಗಳು ನಮ್ಮ ಹಿನ್ನಡೆಗೆ ಬಹುಮುಖ್ಯ ಕಾರಣವಾಗಿದೆ. ಅವರು ಅದನ್ನು ಅನುಷ್ಠಾನಕ್ಕೆ ತರಲಿ. ಒಟ್ಟಾರೆಯಾಗಿ ಜನರಿಗೆ ಒಳ್ಳೆಯದಾಗಲಿ ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್‌ನವರ ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಅನಗತ್ಯವಾಗಿ ಟೀಕೆ ಮಾಡಲು ಹೋಗುವುದಿಲ್ಲ. ಬೇರೆಯವರು ಮಾತನಾಡಿದಂತೆ ನಾನು ಮಾತನಾಡಲ್ಲ ಎಂದು ಬಿ.ಎಸ್.‌ ಯಡಿಯೂರಪ್ಪ ಅವರು

ಅವರಿವರಂತೆ ಗ್ಯಾರಂಟಿ ಬಗ್ಗೆ ನಾನು ಟೀಕೆ ಮಾಡಲ್ಲ – ಯಡಿಯೂರಪ್ಪ Read More »

ಪ್ರಧಾನಿ ಮೋದಿ ಕಾಲಿಗೆರಗಿ ಸ್ವಾಗತಿಸಿದ ಪಪುವಾ ನ್ಯೂಗಿನಿಯಾದ ಪ್ರಧಾನಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮೂರು ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ಜಪಾನ್‌ನಲ್ಲಿ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡ ಮಂದಿ ಇದೀಗ ಪಪುವಾ ನ್ಯೂಗಿನಿಯಾಗೆ ಬಂದಿಳಿದಿದ್ದಾರೆ. ಮೋದಿ ಆಗಮನದಿಂದ ಪಪುವಾ ನ್ಯೂಗಿನಿಯಾ ಪುಟ್ಟ ದೇಶ ಪುಳಕಿತಗೊಂಡಿದೆ. ಶಿಷ್ಟಾಚಾರ ಬದಿಗೊತ್ತಿ ಪ್ರಧಾನಿ ಮೋದಿಗೆ ಪಪುವಾ ನ್ಯೂಗಿನಿಯಾ ಭರ್ಜರಿ ಸ್ವಾಗತ ನೀಡಿದೆ. ವಿಮಾನದಿಂದ ಇಳಿದು ಬಂದ ಮೋದಿಯನ್ನು ಸ್ವಾಗತಿಸಿದ ಪಪುವಾ ಪ್ರಧಾನಿ ಜೇಮ್ಸ್ ಮರಾಪೆ, ಮೋದಿ ಕಾಲಿಗೆರಗಿದ ಘಟನೆ ನಡೆದಿದೆ. ಈ ವಿಡಿಯೋ ಭಾರಿ ವೈರಲ್ ಆಗಿದ್ದು, ಮೋದಿ ಜನಪ್ರೀಯತೆ ಹಾಗೂ ಮೋದಿ

ಪ್ರಧಾನಿ ಮೋದಿ ಕಾಲಿಗೆರಗಿ ಸ್ವಾಗತಿಸಿದ ಪಪುವಾ ನ್ಯೂಗಿನಿಯಾದ ಪ್ರಧಾನಿ Read More »

ಚಿಕ್ಕಮಗಳೂರು: ಮಲೆನಾಡಲ್ಲಿ ಧಾರಾಕಾರ ಆಲಿಕಲ್ಲು ಮಳೆ| ಧರೆಗುರುಳಿದ ಮರ, ಟ್ರಾಫಿಕ್ ಜಾಮ್

ಸಮಗ್ರ ನ್ಯೂಸ್: ಕಾದ ಕಾವಲಿಯಂತಾಗಿದ್ದ ಜಿಲ್ಲೆಯ ಮಲೆನಾಡು ಭಾಗಕ್ಕೆ ವರುಣದೇವ ಕೃಪೆ ತೋರಿದ್ದು, ಕಳೆದೊಂದು ಗಂಟೆಯಿಂದ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಧಾರಾಕಾರವಾಗಿ ಆಲಿಕಲ್ಲು ಮಳೆ ಸುರಿಯುತ್ತಿತ್ತು ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.‌ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಬಾಳೂರು, ಹೊರಟ್ಟಿ, ಸಬ್ಬೇನಹಳ್ಳಿ ಸೇರಿದಂತೆ ಸುತ್ತಮುತ್ತ ಆಲಿಕಲ್ಲು ಸಮೇತ ಭಾರೀ ಮಳೆ ಸುರಿಯುತ್ತಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಭಾರಿ ಮಳೆ-ಗಾಳಿಯಿಂದ ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ವಾಹನದಟ್ಟಣೆ ಕೂಡ

ಚಿಕ್ಕಮಗಳೂರು: ಮಲೆನಾಡಲ್ಲಿ ಧಾರಾಕಾರ ಆಲಿಕಲ್ಲು ಮಳೆ| ಧರೆಗುರುಳಿದ ಮರ, ಟ್ರಾಫಿಕ್ ಜಾಮ್ Read More »

ಚಿಕ್ಕಮಗಳೂರು : ಬೈಕ್ ಮೇಲೆ ಬಿದ್ದ ಮರ| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್:‌ ಬೈಕ್ ಮೇಲೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ಸಂಭವಿಸಿದೆ. ವೇಣುಗೋಪಾಲ್ (45) ಮೃತ ದುರ್ದೈವಿ. ಮೂಲತಃ ಉತ್ತರ ಕರ್ನಾಟಕದವರಾದ ಇವರು ಚಿಕ್ಕಹಳ್ಳ ಗ್ರಾಮದಲ್ಲಿ ಹೋಂ ಸ್ಟೇ ಜೊತೆಗೆ ಮೂಡಿಗೆರೆಯಲ್ಲಿ ಬಳೆ ಅಂಗಡಿ ನಡೆಸುತ್ತಿದ್ದರು. ಈ ಕಾರಣ ಇವರು ತನ್ನ ಹೋಂ ಸ್ಟೇಯಿಂದ ಮನೆಗೆ ತೆರಳುತ್ತಿದ್ದಾಗ ಹೋಂ ಸ್ಟೇಯ ತುಸು ದೂರದಲ್ಲಿ ಒಂದರ ಹಿಂದೆ ಒಂದರಂತೆ ಒಂದೇ ಕಾಲಕ್ಕೆ ಮೂರು ಮರಗಳು ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಚಿಕ್ಕಮಗಳೂರು : ಬೈಕ್ ಮೇಲೆ ಬಿದ್ದ ಮರ| ಸವಾರ ಸ್ಥಳದಲ್ಲೇ ಸಾವು Read More »

ಬೆಂಗಳೂರಿನಲ್ಲಿ ಮರಣ ಮಳೆ| ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ‌ ಘೋಷಣೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದರ ಇನ್ಫೋಸಿಸ್‌ ಉದ್ಯೋಗಿಯಾಗಿದ್ದ ಭಾನುರೇಖಾ ಎಂಬ ಮಹಿಳೆ ಭಾರೀ ಮಳೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ

ಬೆಂಗಳೂರಿನಲ್ಲಿ ಮರಣ ಮಳೆ| ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ‌ ಘೋಷಣೆ Read More »

ಸಿಎಂ ಆಯ್ಕೆ ಪ್ರಕ್ರಿಯೆ ಪ್ರಾರಂಭ|ಮೂವರು ವೀಕ್ಷಕರನ್ನು ನೇಮಿಸಿದ ಮಲ್ಲಿಕಾರ್ಜುನ ಖರ್ಗೆ

Samagra news: ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್‌ನಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಇದೀಗ ಪ್ರಕ್ರಿಯೆ ಪ್ರಾರಂಭಗೊಂಡಿವೆ. ಅದರಂತೆ ಮುಂದಿನ ಮುಖ್ಯಮಂತ್ರಿಗಳು ಯಾರು ಆಗುತ್ತಾರೆ ಎನ್ನುವ ಚರ್ಚೆ ಜೋರಾಗುತ್ತಿದ್ದಂತೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಮೂವರು ವೀಕ್ಷಕರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕಗೊಳಿಸಿದ್ದಾರೆ. ಕೇಂದ್ರದ ಮಾಜಿ ಗೃಹ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್‌ಕುಮಾರ್ ಶಿಂಧೆ ಮತ್ತು ಪಕ್ಷದ ನಾಯಕರಾದ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರನ್ನು ಕರ್ನಾಟಕದಲ್ಲಿ ಸಿಎಲ್‌ಪಿ ನಾಯಕನ

ಸಿಎಂ ಆಯ್ಕೆ ಪ್ರಕ್ರಿಯೆ ಪ್ರಾರಂಭ|ಮೂವರು ವೀಕ್ಷಕರನ್ನು ನೇಮಿಸಿದ ಮಲ್ಲಿಕಾರ್ಜುನ ಖರ್ಗೆ Read More »

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮರುದಿನವೇ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ಭಾನುವಾರ ರಾಜೀನಾಮೆ ನೀಡಿದರು. 2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. 2018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಹೆಚ್​ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್,

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ Read More »

ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನ ಧ್ವಜವಲ್ಲ- ಉ.ಕ ಎಸ್ಪಿ ಸ್ಪಷ್ಟನೆ

ಸಮಗ್ರ ನ್ಯೂಸ್: ಹೊನ್ನಾವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಭಟ್ಕಳ ಶಂಶುದ್ದೀನ್ ವೃತ್ತದಲ್ಲಿ ಹಸಿರು, ಕೇಸರಿ ಬಾವುಟ ಹಿಡಿದು ಕಾಂಗ್ರೆಸ್ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಆದರೆ ಪಾಕಿಸ್ತಾನ ಧ್ವಜ ಹಾರಿಸಿದ್ದಾರೆ, ಮುಸ್ಲಿಂ ಧ್ವಜ ಹಾರಿಸಿದ್ದಾರೆ ಎಂಬ ವಾಟ್ಸಾಪ್ ಬರಹಗಳು ಎಲ್ಲೆಡೆ ಹರಿದಾಡಿದ್ದವು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್‌ರವರು ಭಟ್ಕಳದಲ್ಲಿ ಹಾರಿಸಲಾದ ಧ್ವಜ ಪಾಕಿಸ್ತಾನದ ಧ್ವಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರು ಬಳಸಿದ ಧ್ವಜ ಪಾಕಿಸ್ತಾನದ ಧ್ವಜ

ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನ ಧ್ವಜವಲ್ಲ- ಉ.ಕ ಎಸ್ಪಿ ಸ್ಪಷ್ಟನೆ Read More »