ಸಮಗ್ರ ಸಮಾಚಾರ

ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲೇಟು| ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

ಸಮಗ್ರ ನ್ಯೂಸ್: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದ ವೇಳೆ ಕಾರ್ಯಕರ್ತರ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದು‌ ಬೆಳ್ತಂಗಡಿ ‌ಉದ್ವಿಗ್ನವಾಗಿದೆ. ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ಮರಳುತ್ತಿದ್ದ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು.‌ ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು. ಈ ವೇಳೆ ಕಾಂಗ್ರೆಸ್ ಪುಂಡನೊಬ್ಬ ಬಿಜೆಪಿ ಕಾರ್ಯಕರ್ತನ ಕಾರಿಗೆ ಬಾಟಲ್ ಮತ್ತು ಕಲ್ಲು ಎಸೆದಿದ್ದು ಇದರ ಪರಿಣಾಮ ಕಾರಿನ ಗ್ಲಾಸ್ ಪುದಿಪುಡಿಯಾಗಿದೆ. ಸ್ಥಳದಲ್ಲಿ ಉಧ್ವಿಗ್ನ ವಾತಾವರಣ […]

ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲೇಟು| ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ Read More »

ಸುಳ್ಯ: ಹರಿವು ನಿಲ್ಲಿಸಿದ ಪಯಸ್ವಿನಿ| ಏಳು ವರ್ಷಗಳ ಬಳಿಕ ಮತ್ತೆ ಬರಗಾಲದ ಕರಿಛಾಯೆ

ಸಮಗ್ರ ನ್ಯೂಸ್: ವಿಪರೀತ ಬಿಸಿಲು ಹಾಗ ಸುರಿಯದ ಬೇಸಿಗೆ ಮಳೆಯಿಂದಾಗಿ ಸುಳ್ಯದ ಜೀವನದಿ ಪಯಸ್ವಿನಿ ಹರಿವು ನಿಲ್ಲಿಸಿದೆ. ಏಳು ವರ್ಷಗಳ ಬಳಿಕ ಮತ್ತೆ ತಾಲೂಕಿನ ಹಲವೆಡೆ ನೀರಿಗೆ ತತ್ವಾರ ಎದುರಾಗಿದ್ದು, ಮಳೆ ಸುರಿಯದಿದ್ದರೆ‌ ಜಲಮೂಲಗಳು ಸಂಪೂರ್ಣ ಬರಿದಾಗಲಿವೆ. ಭೂಮಿ ಬೆಂದು ಬರಡಾಗಿ ಬಸವಳಿಯುತ್ತಿದ್ದಂತೆ ಜಲಮೂಲಗಳು ಆವಿಯಾಗಿ ಬತ್ತಿ ಬರಡಾಗುತಿವೆ. ಬರಗಾಲದ ಮತ್ತು ನೀರಿಗೆ ಹಾಹಾಕಾರದ ಮುನ್ಸೂಚನೆ ನೀಡಿ ಸುಳ್ಯದ ಜೀವ ನದಿ ಪಯಸ್ವಿನಿ ಬತ್ತಿ ಹೋಗಿದೆ. ವಿಶಾಲ ನದಿ ಒಡಲಲ್ಲಿ‌ ಅಲ್ಲಲ್ಲಿ ಹೊಂಡಗಳಲ್ಲಿ ಮಾತ್ರ ಅಲ್ಪ ಸ್ವಲ್ಪ

ಸುಳ್ಯ: ಹರಿವು ನಿಲ್ಲಿಸಿದ ಪಯಸ್ವಿನಿ| ಏಳು ವರ್ಷಗಳ ಬಳಿಕ ಮತ್ತೆ ಬರಗಾಲದ ಕರಿಛಾಯೆ Read More »

ಶ್ರೀಮಂತ ದೇಗುಲಗಳ ಪಟ್ಟಿಯಲ್ಲಿ ಈ ಬಾರಿಯೂ ಕುಕ್ಕೆ ನಂ.1| ಸುಬ್ರಹ್ಮಣ್ಯನ ಆದಾಯ ಕೇಳಿದ್ರೆ ಬೆರಗಾಗ್ತೀರಾ..!

ಸಮಗ್ರ ನ್ಯೂಸ್: ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಖ್ಯಾತಿಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಉಳಿಸಿಕೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಈ ಬಾರಿಯೂ 123 ಕೋಟಿ ರೂ. ಆದಾಯ ಗಳಿಸುವ ಮೂಲಕ ರಾಜ್ಯದಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ. 2022ರ ಏಪ್ರಿಲ್‌ನಿಂದ 2023ರ ಮಾ.31ರವರೆಗಿನ ಆರ್ಥಿಕ ವರ್ಷದಲ್ಲಿ 123,64,49,480 ರೂ. ಆದಾಯ ಗಳಿಸಿದೆ. ದೇವಾಲಯಕ್ಕೆ ಹರಕೆ ಸೇವೆ, ಕಾಣಿಕೆ ಮಾತ್ರವಲ್ಲದೇ ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಕೃಷಿ ತೋಟದಿಂದಲೂ ಆದಾಯ ಬರುತ್ತದೆ. ಕೊರೊನಾ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಭಕ್ತರ ಪ್ರವೇಶಕ್ಕೆ

ಶ್ರೀಮಂತ ದೇಗುಲಗಳ ಪಟ್ಟಿಯಲ್ಲಿ ಈ ಬಾರಿಯೂ ಕುಕ್ಕೆ ನಂ.1| ಸುಬ್ರಹ್ಮಣ್ಯನ ಆದಾಯ ಕೇಳಿದ್ರೆ ಬೆರಗಾಗ್ತೀರಾ..! Read More »

ಕಾಣಿಯೂರು: ರೈಲ್ವೆ ಟ್ರಾಕ್ ನಲ್ಲಿ ಶವವಾಗಿ ಪತ್ತೆಯಾದ ಕೆಎಸ್ಆರ್ ಟಿಸಿ‌ ಡ್ರೈವರ್

ಸಮಗ್ರ ನ್ಯೂಸ್: ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಎ.7 ರಂದು ನಡೆದಿದೆ. ರಾತ್ರಿ ಕರ್ತವ್ಯದಿಂದ ಇಳಿದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34 ವ.) ಮೃತಪಟ್ಟವರು. ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಉದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು. ದುರ್ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕಾಣಿಯೂರು: ರೈಲ್ವೆ ಟ್ರಾಕ್ ನಲ್ಲಿ ಶವವಾಗಿ ಪತ್ತೆಯಾದ ಕೆಎಸ್ಆರ್ ಟಿಸಿ‌ ಡ್ರೈವರ್ Read More »

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಲ್ಲಿ ತಿಳಿಯಿರಿ

ಸಮಗ್ರ ನ್ಯೂಸ್: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮಾ.31ರಂದು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ಅಧಿಕೃತ ವೆಬ್‌ಸೈಟ್‌ಗೆ https://result.dkpucpa.com/ ಭೇಟಿ ನೀಡಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಲು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಲ್ಲಿ ತಿಳಿಯಿರಿ Read More »

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ| ಕೆಲವೇ ಸೆಕೆಂಡುಗಳಲ್ಲಿ ಅಡಿಕೆ ಮರ ಏರಲು ಬಂದಿದೆ ವಿನೂತನ ‘ಟ್ರೀ ಸ್ಕೂಟರ್’!| ವಾರಕ್ಕೆ ಉಳಿತಾಯವಾಗುತ್ತೆ ₹ 24 ಸಾವಿರ!!

ಸಮಗ್ರ ನ್ಯೂಸ್: ಮುಂದಿನ ದಿನಗಳಲ್ಲಿ ಕೆಲಸ ಮಾಡುವುದಕ್ಕೆ ಕಾರ್ಮಿಕರು ಸಿಗುವುದಿಲ್ಲ ಎಂಬುದು ಎಲ್ಲ ರೈತರ ಅಳಲು. ಇದಕ್ಕೆ ಪರಿಹಾರ ಎನ್ನುವಂತೆ ಮಂಗಳೂರು ಮೂಲದ ನಿವಾಸಿಯೊಬ್ಬರು ವಿನೂತನವಾದ ‘ಟ್ರೀ ಸ್ಕೂಟರ್’ ಕಂಡುಹಿಡಿದಿದ್ದಾರೆ. ಕಾರ್ಮಿಕ ಶಕ್ತಿ ಮತ್ತು ಅಡಿಕೆ ಮರಗಳ ಅಕಾಲಿಕ ನಿರ್ವಹಣೆಯು ಕೃಷಿ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಈ ಅಂತರವನ್ನು ಮನಗಂಡ ಗಣಪತಿ ಭಟ್ ಅವರು ರೈತರಿಗೆ ಬಳಸಲು ಸುಲಭವಾದ ಟ್ರೀ ಸ್ಕೂಟರ್ ಅನ್ನು ಆವಿಷ್ಕರಿಸಿದ್ದಾರೆ, ಇದು ಕಾರ್ಮಿಕರ ಮೇಲೆ ಅವಲಂಬನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ| ಕೆಲವೇ ಸೆಕೆಂಡುಗಳಲ್ಲಿ ಅಡಿಕೆ ಮರ ಏರಲು ಬಂದಿದೆ ವಿನೂತನ ‘ಟ್ರೀ ಸ್ಕೂಟರ್’!| ವಾರಕ್ಕೆ ಉಳಿತಾಯವಾಗುತ್ತೆ ₹ 24 ಸಾವಿರ!! Read More »

ಸುಳ್ಯ: ಹೃದಯಾಘಾತಕ್ಕೆ ಯುವಕ‌ ಬಲಿ

ಸಮಗ್ರ ನ್ಯೂಸ್: ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದಿಂದ ವರದಿಯಾಗಿದೆ. ಪಂಬೆತ್ತಾಡಿ ಗ್ರಾಮದ ಎದುರುಮಜಲು ಮಹಾಲಿಂಗ ನಾಯ್ಕ ರವರ ಪುತ್ರ ಜಗದೀಶ್ (33) ಮೃತ ಪಟ್ಟ ದುರ್ದೈವಿ. ಮೂರು ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾ.23ರಂದು ಕೊನೆಯುಸಿರೆಳೆದಿದ್ದಾರೆ.

ಸುಳ್ಯ: ಹೃದಯಾಘಾತಕ್ಕೆ ಯುವಕ‌ ಬಲಿ Read More »

ಸುಳ್ಯ: ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಅರಮನೆಗಯ ನಿವಾಸಿಗಳು| ಬ್ಯಾನರ್ ಹರಿದವರಿಗೆ ಕೊರಗಜ್ಜ ಶಿಕ್ಷೆ ನೀಡಲಿ ಎಂದು ಪ್ರಾರ್ಥನೆ| ಕೋಟಿ ಲೆಕ್ಕದ ಅನುದಾನ ಪೊಳ್ಳು ಭರವಸೆಯೇ?

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಅರಮನೆಗಯ ಎಂಬಲ್ಲಿ ಸುಮಾರು 30 ವರ್ಷಗಳಿಂದ ಬೇಡಿಕೆಯ ಸೇತುವೆಯನ್ನು ನಿರ್ಮಿಸದ ಹಿನ್ನಲೆ ಆ ಭಾಗದ ಜನರು ಇದೀಗ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಅರಮನೆಗಯ ಎಂಬ ಊರು ಹಳ್ಳಿ ಪ್ರದೇಶವಾಗಿದ್ದು ಮರ್ಕಂಜ ಹಾಗೂ ಅಂರತೋಡು ಗ್ರಾಮಕ್ಕೆ ಸೇರಿಕೊಂಡಿರುವ ಊರಾಗಿದೆ. ಈ ಭಾಗದಲ್ಲಿ ಸುಮಾರು ನೂರಕ್ಕಿಂತ ಹೆಚ್ಚು ಜನರು ವಾಸ ಮಾಡುತ್ತಿದ್ದಾರೆ. ಈ ಊರಿನ ಮಧ್ಯದಲ್ಲಿ ನದಿಯಿದ್ದು, ಮಳೆಗಾಲದಲ್ಲಿ ಉಕ್ಕಿ ಹರಿಯುತ್ತದೆ. ಆ ಸಮಯದಲ್ಲಿ ಅಲ್ಲಿಯ ಜನರು ಸೇರಿದಂತೆ ಶಾಲಾ ಮಕ್ಕಳ

ಸುಳ್ಯ: ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಅರಮನೆಗಯ ನಿವಾಸಿಗಳು| ಬ್ಯಾನರ್ ಹರಿದವರಿಗೆ ಕೊರಗಜ್ಜ ಶಿಕ್ಷೆ ನೀಡಲಿ ಎಂದು ಪ್ರಾರ್ಥನೆ| ಕೋಟಿ ಲೆಕ್ಕದ ಅನುದಾನ ಪೊಳ್ಳು ಭರವಸೆಯೇ? Read More »

ಅರಂತೋಡು – ಅಡ್ತಲೆ ರಸ್ತೆ ಕಾಮಗಾರಿ ಆರಂಭ| ನಾಗರಿಕ ‌ಹಿತರಕ್ಷಣಾ ವೇದಿಕೆಯ ಹೋರಾಟಕ್ಕೆ ಮಣಿದ ಜನಪ್ರತಿನಿಧಿಗಳು

ಸಮಗ್ರ ನ್ಯೂಸ್: ಅರಂತೋಡು – ಅಡ್ತಲೆ ರಸ್ತೆ ಕಾಮಗಾರಿ ಆರಂಭವಾಗದಿದ್ದರೆ ಅಡ್ತಲೆ ವಾರ್ಡ್ ವ್ಯಾಪ್ತಿಯಲ್ಲಿ ಮಾ.23ರಿಂದ ನೋಟ ಅಭಿಯಾನದ ಜಾಗೃತಿಯ ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ ಅರಂತೋಡು – ಅಡ್ತಲೆ ರಸ್ತೆ ಕಾಮಗಾರಿ ಆರಂಭಗೊಂಡಿದೆ. ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಅಡ್ತಲೆಯ ನಾಗರಿಕ ‌ಹಿತರಕ್ಷಣಾ ವೇದಿಕೆ ಹೋರಾಟ ನಡೆಸುತ್ತಾ ಬಂದಿದ್ದು ಅದರ ಪರಿಣಾಮ ಆರಂಭದಲ್ಲಿ ರೂ.1 ಕೋಟಿ ಅನುದಾನ ಬಿಡುಗಡೆ ಗೊಂಡು‌ ಅರಂತೋಡಿನಿಂದ ಅಡ್ತಲೆ ರಸ್ತೆಯ 1357 ಮೀಟರ್ ಕಾಮಗಾರಿ ನಡೆದಿದೆ. ಆದಾದ ಬಳಿಕ ಕಾಮಗಾರಿ ನಿಲ್ಲಿಸಲಾಗಿತ್ತು. ಆದರೆ ಮುಂದಿನ

ಅರಂತೋಡು – ಅಡ್ತಲೆ ರಸ್ತೆ ಕಾಮಗಾರಿ ಆರಂಭ| ನಾಗರಿಕ ‌ಹಿತರಕ್ಷಣಾ ವೇದಿಕೆಯ ಹೋರಾಟಕ್ಕೆ ಮಣಿದ ಜನಪ್ರತಿನಿಧಿಗಳು Read More »

ಕೊಟ್ಟಿಗೆಹಾರ: ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಸಮಗ್ರ ನ್ಯೂಸ್ : ಕೊಟ್ಟಿಗೆಹಾರ, ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಬಿದರಹಳ್ಳಿಯ ಮಂಜುಳ ಎಂಬುವವರ ಮನೆಯ ಮೇಲೆ ದಾಳಿ‌ ನಡೆಸಿದ್ದು 15 ಲೀ ಬೆಲ್ಲದ ಕೊಳೆ, 6 ಲೀ ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ‌. ಕಾರ್ಯಾಚರಣೆಯಲ್ಲಿ ಮೂಡಿಗೆರೆ ಉಪ ವಿಭಾಗದ ಅಬಕಾರಿ ನಿರೀಕ್ಷಕರಾದ ಲೋಕೇಶ್ ಅಬಕಾರಿ ಪೇದೆಯಾದ ರಮೇಶ್ ವಾಹನ ಚಾಲಕರಾದ ಪ್ರಸನ್ನ ಕುಮಾರ್ ಹಾಜರಿದ್ದರು.

ಕೊಟ್ಟಿಗೆಹಾರ: ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ Read More »