ಸಮಗ್ರ ಸಮಾಚಾರ

ಭಾರತದಲ್ಲಿ ಮತ್ತೆ ಹವಾ ಸೃಷ್ಟಿಸಲು ಬರುತ್ತಿದೆ ಇನೋವಾ ಹೈಕ್ರಾಸ್|ಹೇಗಿದೆ ಗೊತ್ತ..?

ಟೊಯೊಟಾ ಹಲವಾರು ಜನಪ್ರಿಯ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದೀಗ ಟೊಯೊಟಾ ಕಂಪನಿಯು ಹೊಸ ಇನೋವಾ ಹೈಕ್ರಾಸ್ ಕಾರನ್ನು ಇದೇ ತಿಂಗಳಿನಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಟೊಯೊಟಾ ಮತ್ತೊಮ್ಮೆ ಬಹುನಿರೀಕ್ಷಿತ ಹೊಸ ಇನೋವಾ ಹೈಕ್ರಾಸ್‌ನ ಹೊಸ ಟೀಸರ್ ಅನ್ನು ಬಿಡುಗಡೆ ಮಾಡಿದ್ದು ನ. 25, ರಂದು ಭಾರತಕ್ಕೆ ಪಾದಾರ್ಪಣೆ ಮಾಡಲು ಯೋಜಿಸಲಾಗಿದೆ, ಹೊಸ ಟೊಯೋಟಾ ಹೈಕ್ರಾಸ್ ಮೊದಲ ಬಾರಿಗೆ ಇಂಡೋನೇಷ್ಯಾದಲ್ಲಿ ಮಾರಾಟವಾಗಲಿದೆ. ಹೊಸ ಟೀಸರ್‌ನೊಂದಿಗೆ, ಟೊಯೋಟಾ, “ಲೆಜೆಂಡ್ ತನ್ನನ್ನು ಹೊಸ HY ಗೆ ಏರಿಸಿಕೊಂಡಿದೆ, ಸ್ನಾಯುವಿನ SUV ನಿಲುವು […]

ಭಾರತದಲ್ಲಿ ಮತ್ತೆ ಹವಾ ಸೃಷ್ಟಿಸಲು ಬರುತ್ತಿದೆ ಇನೋವಾ ಹೈಕ್ರಾಸ್|ಹೇಗಿದೆ ಗೊತ್ತ..? Read More »

ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ

ಸಮಗ್ರ ನ್ಯೂಸ್: ಶಾಲೆಗೆ ಮುಗಿದ ನಂತರ ನಾಪತ್ತೆಯಾಗಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಂದಿತಾ ಇದೀಗ ತುಮಕೂರಿನಲ್ಲಿ ಪತ್ತೆಯಾಗಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು. ನ. 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಳು. ಆದರೆ ಶುಕ್ರವಾರ ಸಂಜೆ ಬಾಲಕಿ ನಂದಿತಾ ತುಮಕೂರಿನಲ್ಲಿ ಪತ್ತೆಯಾಗಿದ್ದು, ನುಗ್ಗೇಹಳ್ಳಿ ಪೊಲೀಸರು ಬಾಲಕಿಯನ್ನು ಕರೆತಂದಿದ್ದಾರೆ. ತುಮಕೂರಿನಲ್ಲಿ ಅಳುತ್ತಾ ನಿಂತಿದ್ದ ಬಾಲಕಿಯನ್ನು ಮಹಿಳೆಯೊಬ್ಬರು ಮನೆಗೆ ಕರೆದುಕೊಂಡು ಹೋಗಿ

ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ Read More »

ಮಂಗಳೂರು: ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ| ನನಸಾಯಿತು ಒಕ್ಕಲಿಗರ ದಶಕಗಳ ಕನಸು

ಸಮಗ್ರ ನ್ಯೂಸ್: ಮಂಗಳೂರು ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಲೋಕಾರ್ಪಣೆ ಮಾಡಿದರು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಯಿ.ಟಿ.

ಮಂಗಳೂರು: ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ| ನನಸಾಯಿತು ಒಕ್ಕಲಿಗರ ದಶಕಗಳ ಕನಸು Read More »

ಸುಳ್ಯ: ಅನಾರೋಗ್ಯದಿಂದಾಗಿ ಯುವತಿ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಸಮೀಪದ ಜನತಾ ಕಾಲೋನಿಯಲ್ಲಿ ನಡೆದಿದೆ. ಉಮೇಶ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಸುಪ್ರೀತಾ (19) ಮೃತ ಯುವತಿ. ಇವರು ನಿಂತಿಕಲ್ಲ್ ನಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು, ನ.14 ರಂದು ಮನೆಯಲ್ಲಿದ್ದ ವೇಳೆ ಹಠಾತ್ ಅನಾರೋಗ್ಯಕ್ಕೆ ಒಳಗಾದರು. ಅವರನ್ನು ಮೊದಲು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಯುವತಿಯ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದರಿಂದ ನ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಯುವತಿ

ಸುಳ್ಯ: ಅನಾರೋಗ್ಯದಿಂದಾಗಿ ಯುವತಿ ಸಾವು Read More »

ಮುಂಬೈ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆ

ಮುಂಬಯಿ: ರಸ್ತೆ ಬದಿ ನಿಲ್ಲಿಸಿದ್ದ ಐಷಾರಾಮಿ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯ ನಡೆದಿದೆ. ಮೃತ ವ್ಯಕ್ತಿಯನ್ನು ಪುಣೆಯ ಯಶವಂತ್ ನಗರದ ನಿವಾಸಿಯಾದ ಸಂಜಯ್ ಕಾರ್ಲೆ ಎಂದು ಗುರುತಿಸಲಾಗಿದೆ. ಪೊಲೀಸರ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ದೇಹದ ಮೇಲೆ ನಾಲ್ಕು ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪನ್ವೇಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಂಬೈ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆ Read More »

ನಾಳೆ ಸುರತ್ಕಲ್ ಬಂಟರ ಭವನದಲ್ಲಿ “ರಂಗ ಚಾವಡಿ” ಸಂಭ್ರಮ! “ಬಲೇ ತೆಲಿಪುಲೆ” ಹಾಸ್ಯ ರಸಾಯಣ!!

ಸುರತ್ಕಲ್: ನಾಳೆ (ನ.20) ಸಂಜೆ 4:30ಕ್ಕೆ ಸರಿಯಾಗಿ “ರಂಗ ಚಾವಡಿ” ಸಂಘಟನೆಯ ವರ್ಷದ ಸಂಭ್ರಮ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ಜರುಗಲಿದೆ. ಈ ಬಾರಿಯ ಪ್ರತಿಷ್ಠಿತ ರಂಗ ಚಾವಡಿ 2022 ಪ್ರಶಸ್ತಿಗೆ ಸಾಹಿತಿ ಜಾನಪದ ವಿದ್ವಾಂಸರಾದ ಮುದ್ದು ಮೂಡುಬೆಳ್ಳೆ ಅವನ್ನು ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು ಅದೇ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಖ್ಯಾತ ಗಾಯಕರಾದ ವಿಶ್ವಾಸ್ ಗುರುಪುರ, ಮಲ್ಲಿಕಾ ವಿಶ್ವಾಸ್ ಹಾಗೂ ಜ್ಯುನಿಯರ್ ರಾಜ್ ಕುಮಾರ್ ಅವರಿಂದ ಸಂಗೀತ

ನಾಳೆ ಸುರತ್ಕಲ್ ಬಂಟರ ಭವನದಲ್ಲಿ “ರಂಗ ಚಾವಡಿ” ಸಂಭ್ರಮ! “ಬಲೇ ತೆಲಿಪುಲೆ” ಹಾಸ್ಯ ರಸಾಯಣ!! Read More »

ಸುಬ್ರಹಣ್ಯದಲ್ಲಿ ನ.28 ರಿಂದ ನ.29 ತನಕ
ಮದ್ಯದ ಅಂಗಡಿ ಬಂದ್

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲು ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಡಿ ಪ್ರದತ್ತ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶ ಹೊರಡಿಸಿದ್ದಾರೆ. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾ ಪ್ತಿಯ ಇಂಚಾಡಿ ಬಳಿಯ ಪ್ರಶಾಂತ್ ಬಾರ್ ಮತ್ತು ರೆಸ್ಟೋ ರೆಂಟ್ ಹಾಗೂ ಬೆಳ್ಳಿ ಬಾರ್

ಸುಬ್ರಹಣ್ಯದಲ್ಲಿ ನ.28 ರಿಂದ ನ.29 ತನಕ
ಮದ್ಯದ ಅಂಗಡಿ ಬಂದ್
Read More »

50ದಿನ ಪೂರೈಸಿದ ‘ಕಾಂತಾರ’| ಈ ಸಕ್ಸಸ್ ಗುಳಿಗ, ಪಂಜುರ್ಲಿಗೆ ಸಮರ್ಪಣೆ ಎಂದ ರಿಷಬ್

ಸಮಗ್ರ ನ್ಯೂಸ್: ಇಂಡಿಯನ್ ಬಾಕ್ಸಾಫೀಸ್‌ಗೆ ಕಿಚ್ಚು ಹಚ್ಚಿದ ‘ಕಾಂತಾರ’ ಏಳು ವಾರಗಳನ್ನು ಯಶಸ್ವಿಯಾಗಿ ಪೂರೈಸಿದೆ. ವಿಶ್ವ ಮಟ್ಟದಲ್ಲಿ ಸದ್ದು ಮಾಡಿದ್ದ ‘ಕಾಂತಾರ’ ಇಂದು (ನವೆಂಬರ್ 18) ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿ ಮುನ್ನುಗುತ್ತಿದೆ. ಈ ಖುಷಿಯನ್ನು ರಿಷಬ್ ಶೆಟ್ಟಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 50 ದಿನಗಳನ್ನು ಪೂರೈಸಿದ ಸಂದರ್ಭದಲ್ಲೂ ‘ಕಾಂತಾರ’ ಸಿನಿಮಾದ ಕಲೆಕ್ಷನ್ ಕೋಟಿ ಲೆಕ್ಕದಲ್ಲಿಯೇ ಇದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ‘ಕಾಂತಾರ’ ಕಲೆಕ್ಷನ್ ಅದ್ಭುತವಾಗಿದ್ದು, ಪ್ರತಿವಾರ ಬಾಕ್ಸಾಫೀಸ್‌ನಲ್ಲಿ ದಾಖಲೆ ನಿರ್ಮಿಸುತ್ತಿದೆ. ಏಳನೇ ವಾರವೂ (50

50ದಿನ ಪೂರೈಸಿದ ‘ಕಾಂತಾರ’| ಈ ಸಕ್ಸಸ್ ಗುಳಿಗ, ಪಂಜುರ್ಲಿಗೆ ಸಮರ್ಪಣೆ ಎಂದ ರಿಷಬ್ Read More »

ಬಪ್ಪನಾಡು ದುರ್ಗಾಪರಮೇಶ್ವರಿ ಕೃಪೆಯಿಂದ ಬೆಳೆದೆ – ಸುನಿಲ್ ಶೆಟ್ಟಿ

ಸಮಗ್ರ ನ್ಯೂಸ್: ಮಂಗಳೂರಿನ ಮುಲ್ಕಿಯಲ್ಲಿ ಹುಟ್ಟಿದ್ದೆ, ಬಪ್ಪನಾಡಿನ‌ ದುರ್ಗಾ ದೇವಿಯ ಕೃಪೆಯಲ್ಲಿ ಬೆಳೆದೆ ಎಂದು ಬಾಲಿವುಡ್ ನಟ ಸುನಿಲ್ ಶೆಟ್ಟಿ ತಮ್ಮ ಬಾಲ್ಯವನ್ನು ಸ್ಮರಿಸಿಕೊಂಡರು. ಬೆಂಗಳೂರು ತಂತ್ರಜ್ಞಾನ ಸಮ್ಮೇಳನದಲ್ಲಿನ‌ ಸಂವಾದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತ, ತಂದೆಯೇ ನನ್ನ ಹೀರೋ ಆಗಿದ್ದಾರೆ. ಅವರು ತಮ್ಮ 9ನೇ ವಯಸ್ಸಿನಲ್ಲಿ ಮುಂಬೈಗೆ ತೆರಳಿ ಅನೇಕ ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡಿದ್ದರು. ಅಲ್ಲಿ ಟೇಬಲ್ ಕ್ಲೀನ್‌ ಮಾಡುತ್ತಿದ್ದರು. ಐಸ್ ಬ್ಯಾಗ್ ಮೇಲೆ‌ ಮಲಗುತ್ತಿದ್ದರು. ಅವರು ಯಾವ ರೆಸ್ಟೋರೆಂಟ್​ನಲ್ಲಿ ಕೆಲಸ‌ ಮಾಡುತ್ತಿದ್ದರೋ ಬಳಿಕ ಅದೇ ರೆಸ್ಟೋರೆಂಟ್​​ನ‌

ಬಪ್ಪನಾಡು ದುರ್ಗಾಪರಮೇಶ್ವರಿ ಕೃಪೆಯಿಂದ ಬೆಳೆದೆ – ಸುನಿಲ್ ಶೆಟ್ಟಿ Read More »

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ

ಸಮಗ್ರ ನ್ಯೂಸ್: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರಾವಳಿಯಲ್ಲಿ ಕಿಕ್ ಏರಿಸುತ್ತಿದ್ದ ಗಾಂಜಾ ದಂಧೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 32 ಲಕ್ಷ ರೂ. ಮೌಲ್ಯದ 132 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. 17 ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ XUV 500 ಕಾರ್ ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕು ನರಿಂಗಾನ ಗ್ರಾಮ ತೌಡುಗೋಳಿ ಕ್ರಾಸ್ ನಿವಾಸಿ ರಮೀಝ್ ರಾಝ್(30), ಕೇರಳದ ಕಾಸರಗೋಡು ಜಿಲ್ಲೆ

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ Read More »