ಸಮಗ್ರ ಸಮಾಚಾರ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ| ಗೆದ್ದು ದಾಖಲೆ ಬರೆದ ಮಂಗಳಮುಖಿ

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ. ದೆಹಲಿ ಮಹಾನಗರ ಪಾಲಿಕೆಯ ಸುಲ್ತಾನ್ ಪುರಿ ಮಜ್ರಾ ಎ ವಾರ್ಡ್ ನಿಂದ ಆಪ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬೋಬಿ ಜಯಭೇರಿ ಭಾರಿಸಿದ್ದಾರೆ. ಆ ಮೂಲಕ ಮೊದಲ ಬಾರಿಗೆ, MCD ಚುನಾವಣೆಯಲ್ಲಿ ಟ್ರಾನ್ಸ್ ಜೆಂಡರ್ ಸಮುದಾಯದ ಸದಸ್ಯರೊಬ್ಬರು ಪಾಲಿಕೆಗೆ ಆಯ್ಕೆಯಾಗಿ ಬಂದಿದ್ದಾರೆ. ಬೋಬಿ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ವರುಣಾ ಢಾಕಾ […]

ದೆಹಲಿ ಮಹಾನಗರ ಪಾಲಿಕೆ ಚುನಾವಣೆ| ಗೆದ್ದು ದಾಖಲೆ ಬರೆದ ಮಂಗಳಮುಖಿ Read More »

ಸರಣಿ‌ ಅಪಘಾತಕ್ಕೆ ಕಾರಣವಾಯ್ತು ಉರಗ| ಹಾವಿನಂತ ರಸ್ತೆಯಲ್ಲಿ ಹಾವೇ ಬಂದು ಮಲಗಿತ್ತು!!

ಸಮಗ್ರ ನ್ಯೂಸ್: ಆ ಒಂದು ಹಾವು ಹೆದ್ದಾರಿಯಲ್ಲಿ ಅಡ್ಡ ಬಂದ ಕಾರಣ ಚಿಕ್ಕಬಳ್ಳಾಪುರ ಬಳಿ ಇಂದು ಬೆಳಗ್ಗೆ 6 ಗಂಟೆಯಲ್ಲಿ ಸರಣಿ ಅಪಘಾತಗಳು ಸಂಭವಿಸಿಬಿಟ್ಟಿವೆ. ಹೆದ್ದಾರಿಯಲ್ಲಿ ಹಾವು ಅಡ್ಡ ಬಂತು ಅಂತಾ ಹಿಂದೆಮುಂದೆ ನೋಡದೇ ಕಂಟೇನರ್ ಲಾರಿ ಚಾಲಕ ಬ್ರೇಕ್ ಹಾಕಿದ್ದಾನೆ. ಅಷ್ಟರಲ್ಲಿ ಮುಂದೆ ಲಾರಿ ಚಾಲಕನ ಅವಾಂತರದಿಂದ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಎರಡು ಕಂಟೈನರ್ ಲಾರಿ, ಒಂದು ಟಾಟಾ ಏಸ್, ಒಂದು ಕಾರು, ಒಂದು ಟಿಪ್ಪರ್ ಮಧ್ಯೆ ಸರಣಿ ಅಪಘಾತಗಳು ತನ್ನಿಂತಾನೇ ಆಗಿವೆ. ಟಾಟಾ

ಸರಣಿ‌ ಅಪಘಾತಕ್ಕೆ ಕಾರಣವಾಯ್ತು ಉರಗ| ಹಾವಿನಂತ ರಸ್ತೆಯಲ್ಲಿ ಹಾವೇ ಬಂದು ಮಲಗಿತ್ತು!! Read More »

ಹೆಲ್ಮೆಟ್ ಧರಿಸದ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುತ್ತೇನೆ: SP ಹರಿರಾಂ ಶಂಕರ್ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು ತಪ್ಪಿದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡುತ್ತೇನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರೇ ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಹಾಸನ ಎಸ್‍ಪಿ ಎಚ್ಚರಿಕೆ ನೀಡಿದ್ದಾರೆ. ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು

ಹೆಲ್ಮೆಟ್ ಧರಿಸದ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುತ್ತೇನೆ: SP ಹರಿರಾಂ ಶಂಕರ್ ಖಡಕ್ ಎಚ್ಚರಿಕೆ Read More »

ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆ!|ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿದ ಮತ್ತೊಬ್ಬ

ಲಕ್ನೋ: 7 ವರ್ಷದ ಹಿಂದೆ ಸತ್ತೋಗಿದ್ದಾಳೆ ಎಂದು ಆಕೆಯ ಸಾವಿಗೆ ಕಾರಣನಾಗಿದ್ದಾನೆಂದು 7 ವರ್ಷದ ಹಿಂದೆ ವ್ಯಕ್ತಿಯೋರ್ವ ಜೈಲು ಸೇರಿದ್ದ. ಆದರೆ ಇದೀಗ ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾಳೆ. ಆಕೆಯನ್ನು ಕೊಲೆಮಾಡಿದ ಆರೋಪದಲ್ಲಿ ವಿಷ್ಣು ಎಂಬಾತನಿಗೆ ನ್ಯಾಯಾಲಯವು 7 ವರ್ಷಗಳ ಹಿಂದೆ ಜೈಲು ಶಿಕ್ಷೆಯನ್ನು ವಿಧಿಸಿದ್ದು, ಮಹಿಳೆಯ ತಂದೆ ಆಗ್ರಾದಲ್ಲಿ ಅಪರಿಚಿತ ಶವವನ್ನು ತಮ್ಮ ಮಗಳು ಎಂದು ಗುರುತಿಸಿದ್ದರು. ಇನ್ನು ಅಪ್ರಾಪ್ತೆಯನ್ನು ಅಪಹರಿಸಿ ಕೊಂದ ಆರೋಪ ಪ್ರಕರಣದಲ್ಲಿ ವಿಷ್ಣು ಜೈಲು ಪಾಲಾಗಿದ್ದ. ಈ ಮಧ್ಯೆ,

ಕೊಲೆಯಾದವಳು 7 ವರ್ಷದ ಬಳಿಕ ಪ್ರಿಯಕರನೊಂದಿಗೆ ಪತ್ತೆ!|ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿದ ಮತ್ತೊಬ್ಬ Read More »

ಸೆಲ್ಪಿ ಹುಚ್ಚಿಗೆ ಮರ್ಮಾಂಗ ಸುಟ್ಟುಕೊಂಡ ವಿದ್ಯಾರ್ಥಿ

ಸಮಗ್ರ ನ್ಯೂಸ್: ವಿದ್ಯುತ್ ಚಾಲಿತ ರೈಲುಗಳು ಸಂಚರಿಸುವ ಹಳಿಯಲ್ಲಿ ಸೆಲ್ಪಿ ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿಯೊಬ್ಬನಿಗೆ ವಿದ್ಯುತ್ ತಗುಲಿ ಮರ್ಮಾಂಗಕ್ಕೆ ತೀವ್ರತರ ಗಾಯವಾದ ಘಟನೆ ಶಿರಡಿನಗರದ ರೈಲು ಹಳಿಯಲ್ಲಿ ನಡೆದಿದೆ. ನಗರದ ವಿನಾಯಕ ಎಂಬಾತನೇ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿ. ಸದ್ಯ ಆತನನ್ನು ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಈತ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಪಸರಿಸಿದ್ದರಿಂದ ಬಟ್ಟೆಗೆ ಬೆಂಕಿ ಹತ್ತಿಕೊಂಡು ದೇಹಕ್ಕೆ ಆವರಿಸಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ. ಸೇಲ್ಫಿ ಗೀಳುಗೆ

ಸೆಲ್ಪಿ ಹುಚ್ಚಿಗೆ ಮರ್ಮಾಂಗ ಸುಟ್ಟುಕೊಂಡ ವಿದ್ಯಾರ್ಥಿ Read More »

ಮಂಗಳೂರು:ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಶೋರೂಂ ಸಿಬ್ಬಂದಿ ಮೇಲೆ ಹಲ್ಲೆ| ಯದ್ವಾತದ್ವ ಥಳಿಸಿದ ಸಂಘಪರಿವಾರದ ಕಾರ್ಯಕರ್ತರು

ಸಮಗ್ರ ನ್ಯೂಸ್: ಸಂಘಪರಿವಾರ ಕಾರ್ಯಕರ್ತರು ಚಿನ್ನದ ಶೋರೂಮಿಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಮಂಗಳವಾರ ಸಂಘಪರಿವಾರ ಕಾರ್ಯಕರ್ತರ ತಂಡವೊಂದು ಕಂಕನಾಡಿ ಬಳಿ ಇರುವ ಚಿನ್ನದ ಶೋರೂಮ್ ಒಂದಕ್ಕೆ ಏಕಾಏಕಿ ನುಗ್ಗಿ ದಾಂಧಲೆ ನಡೆಸಿದೆ. ಈ ತಂಡ ರಜೆಯಲ್ಲಿದ್ದ ಸಿಬ್ಬಂದಿಯನ್ನು ಎಳೆದು ತಂದು ಶೋರೂಮ್ ಒಳಗೆ ಯದ್ವಾತದ್ವ ಥಳಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹಲ್ಲೆಗೀಡಾದ ಸಿಬ್ಬಂದಿ ಮುಸ್ಲಿಮನಾಗಿದ್ದು, ತನ್ನ ಸಹೋದ್ಯೋಗಿಯಾಗಿರುವ ಅನ್ಯಮತೀಯ ಯುವತಿಯ ಜೊತೆ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ಈ ಹಲ್ಲೆ

ಮಂಗಳೂರು:ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಶೋರೂಂ ಸಿಬ್ಬಂದಿ ಮೇಲೆ ಹಲ್ಲೆ| ಯದ್ವಾತದ್ವ ಥಳಿಸಿದ ಸಂಘಪರಿವಾರದ ಕಾರ್ಯಕರ್ತರು Read More »

ಸುರತ್ಕಲ್ : ಆತಂಕಕ್ಕೆ ಕಾರಣವಾದ ಮಗು ಅಪಹರಣ ಯತ್ನ ಪ್ರಕರಣ!

ಸಮಗ್ರ ನ್ಯೂಸ್: ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಎಂಬಲ್ಲಿ ಮನೆಯ ಮುಂದೆ ನಿಂತಿದ್ದ ಮಗುವನ್ನು ಅಪಹರಿಸಲು ಯತ್ನಿಸಿದ ಘಟನೆ ನಿನ್ನೆ ರಾತ್ರಿ ನಡೆದಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ರಾತ್ರಿ ಪರಿಸರದಲ್ಲಿ ವಿದ್ಯುತ್ ಕಡಿತಗೊಂಡಿದ್ದು ಈ ವೇಳೆ ಚೊಕ್ಕಬೆಟ್ಟು ಮಸೀದಿ ಪಕ್ಕದ ಮನೆಯ ಮುಂದೆ ಮಗು ಆಟವಾಡುತ್ತಿತ್ತು. ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿ ಮಗುವಿನ ಕೈ ಹಿಡಿದು ಎಳೆದು ಅಪಹರಣಕ್ಕೆ ಯತ್ನಿಸಿದ್ದು ಮಗು ಆತನ‌ ಕೈಯಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿರುವುದು ಸಿಸಿ ಕೆಮರಾದಲ್ಲಿ ದಾಖಲಾಗಿದೆ.ಸ್ಥಳಕ್ಕೆ ಸುರತ್ಕಲ್‌ ಪೊಲೀಸರು

ಸುರತ್ಕಲ್ : ಆತಂಕಕ್ಕೆ ಕಾರಣವಾದ ಮಗು ಅಪಹರಣ ಯತ್ನ ಪ್ರಕರಣ! Read More »

ಕಾರಿನಲ್ಲಿ ಲಿಕ್ಕರ್ ಬಾಟಲಿ ಸಾಗಿಸಿದ ಬಿಜೆಪಿ ಜಿಲ್ಲಾಧ್ಯಕ್ಷ| ಪ್ರಕರಣ ದಾಖಲಿಸಿದ ಚುನಾವಣಾ ಆಯೋಗ

ಸಮಗ್ರ ನ್ಯೂಸ್: ಗುಜರಾತ್ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ಗುಜರಾತ್‌ನ ಅರಾವಳಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರ ವರ್ತನೆ ಬಗ್ಗೆ ಟೀಕೆಗಳು ಬರುತ್ತಿವೆ. ಅರವಳಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮದ್ಯದ ಬಾಟಲಿಗಳನ್ನು ಮುಕ್ತವಾಗಿ ಸಾಗಿಸುತ್ತಿರುವ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಅರಾವಳಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಹಿರಂಗವಾಗಿ ಮದ್ಯದ ಪೆಟ್ಟಿಗೆಗಳನ್ನು ಒಯ್ಯುತ್ತಿದ್ದಾರೆ ಎಂದು ದೀಪಕ್ ಖತ್ರಿ ಎನ್ನುವವರು ಟ್ವಿಟ್ಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ತಮ್ಮ ಟ್ವೀಟ್​ನಲ್ಲಿ ‘ಗುಜರಾತ್​ನ ಅರಾವಳಿ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ

ಕಾರಿನಲ್ಲಿ ಲಿಕ್ಕರ್ ಬಾಟಲಿ ಸಾಗಿಸಿದ ಬಿಜೆಪಿ ಜಿಲ್ಲಾಧ್ಯಕ್ಷ| ಪ್ರಕರಣ ದಾಖಲಿಸಿದ ಚುನಾವಣಾ ಆಯೋಗ Read More »

ಮಂಗಳೂರು – ಮುಂಬೈ ಸಂಚರಿಸಲಿದೆ ವಿಶೇಷ ರೈಲು

ಸಮಗ್ರ ನ್ಯೂಸ್: ಮಂಗಳೂರಿನಿಂದ ಮುಂಬೈಗೆ ಸಾಪ್ತಾಹಿಕ ವಿಶೇಷ ರೈಲು ಸಂಚರಿಸಲಿದೆ . ಮಂಗಳೂರು ಜಂಕ್ಷನ್‌ ಹಾಗೂ ಮುಂಬೈನ ಲೋಕಮಾನ್ಯ ತಿಲಕ್‌ ನಿಲ್ದಾಣದ ಮಧ್ಯೆ ನಂ. 01453 ಸಾಪ್ತಾಹಿಕ ವಿಶೇಷ ರೈಲು ಸಂಚರಿಸಲಿದೆ. ಈ ರೈಲು ಮುಂಬೈಯಿಂದ ಡಿ. 9, 16, 23, 30 ಹಾಗೂ ಜನವರಿ 6 (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್‌ ತಲಪಲಿದೆ. ನಂ. 01454 ಮಂಗಳೂರು ಜಂಕ್ಷನ್‌ ಲೋಕಮಾನ್ಯ ತಿಲಕ್‌ ಮುಂಬಯಿ ಸಾಪ್ತಾಹಿಕ ರೈಲು ಮಂಗಳೂರು ಜಂಕ್ಷನ್‌ನಿಂದ

ಮಂಗಳೂರು – ಮುಂಬೈ ಸಂಚರಿಸಲಿದೆ ವಿಶೇಷ ರೈಲು Read More »

ಮಂಗಳೂರು: ಪಿಜಿ ನಿಯಮದಲ್ಲಿ ಬಿಗಿ ಕ್ರಮ ಸಾಧ್ಯತೆ

ಸಮಗ್ರ ನ್ಯೂಸ್: ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಪಿಜಿಗಳಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಲು ಪೊಲೀಸರು ಮುಂದಾಗಿದ್ದು, ಶೀಘ್ರದಲ್ಲಿ ಸಮಗ್ರ ನಿಯಮಾವಳಿ ರೂಪುಗೊಳ್ಳುವ ಸಾಧ್ಯತೆ ಇದೆ. ಪಿಜಿ ಆರಂಭಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಪರವಾನಿಗೆ ಹಾಗೂ ಪೊಲೀಸ್‌ ಆಯುಕ್ತರ ಕಚೇರಿಯಿಂದಲೂ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯುವುದು ಮತ್ತು ಪಿಜಿ ನಿವಾಸಿಗಳಿಗೆ ಪೊಲೀಸ್‌ ದೃಢೀಕರಣ ಪ್ರಮಾಣಪತ್ರ (ಪಿಸಿಸಿ)ವನ್ನು ಕಡ್ಡಾಯ ಮಾಡಲಾಗುತ್ತಿದೆ. ಜತೆಗೆ ಸ್ಥಳೀಯ ಆಗುಹೋಗುಗಳ ಮೇಲೆ ಸಾರ್ವಜನಿಕರು ನಿಗಾ ಇಡುವಂತಹ “ನೇಬರ್‌ಹುಡ್‌ ವಾಚ್‌’ ಪರಿಕಲ್ಪನೆಯನ್ನೂ ಜಾರಿಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಮಂಗಳೂರಿನಲ್ಲಿ ನ.19ರಂದು

ಮಂಗಳೂರು: ಪಿಜಿ ನಿಯಮದಲ್ಲಿ ಬಿಗಿ ಕ್ರಮ ಸಾಧ್ಯತೆ Read More »