ಕುಂದಾಪುರ: ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಮೃತ್ಯು
ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಕುಂದಾಪುರ: ಗದ್ದೆಯಲ್ಲಿ ಮೇಯುತ್ತಿದ್ದ ನಾಲ್ಕು ಹಸುಗಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರಿನಲ್ಲಿ ನಡೆದಿದೆ. ಪಶು ವೈದ್ಯಾಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತಂತಿಗಳು ತೀರಾ ಹಳೆಯದಾಗಿದ್ದು, ಇದರಿಂದ ಹಸುಗಳು ಸಾವನ್ನಪ್ಪಿರಬಹುದು ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಂದಾಪುರ: ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಮೃತ್ಯು Read More »










