ಸಮಗ್ರ ಸಮಾಚಾರ

ವ್ಯಕ್ತಿಯ ಬೀಕರವಾಗಿ‌ ಕೊಲೆಗೈದ 6ಮಂದಿಯ ತಂಡ| ಕೃತ್ಯದಲ್ಲಿ ಮೂವರು ಮಹಿಳೆಯರೂ ಭಾಗಿ| ಸಿಸಿಟಿವಿಯಲ್ಲಿ ಕೊಲೆ ಚಿತ್ರಣ ಸೆರೆ

ಸಮಗ್ರ ನ್ಯೂಸ್: ಆರು ಮಂದಿಯ ತಂಡವೊಂದು ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಶೇಷವೆಂದರೆ ಈ ಕೃತ್ಯದಲ್ಲಿ ಮೂವರು‌ ಮಹಿಳೆಯರೂ ಪಾತ್ರ ವಹಿಸಿರುವುದು. ಈ ಕೊಲೆಯ ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿವೆ. ಕಳೆದ ಶನಿವಾರ ಈ ಪ್ರಕರಣ ನಡೆದಿದ್ದು, ಬರೋಬ್ಬರಿ ಆರು ಮಂದಿ ಸೇರಿ ಅಪರಿಚಿತ ವ್ಯಕ್ತಿಯನ್ನು ಕೊಲೆಗೈದಿದ್ದರು. ಅದರಲ್ಲೂ ಈ ಹತ್ಯೆ ಪ್ರಕರಣದಲ್ಲಿ ಮೂವರು ಮಹಿಳೆಯರೂ ಭಾಗಿಯಾಗಿರುವುದು ಮತ್ತಷ್ಟು ಆಘಾತಕಾರಿ ಅಂಶವಾಗಿದೆ. ಇನ್ನು ಈ ಪ್ರಕರಣದ ಭಯಾನಕತೆ ಅದೆಷ್ಟರ ಮಟ್ಟಿಗೆ ಇತ್ತೆಂದರೆ ಕೊಲೆಗಾರರು ಇಪ್ಪತ್ತು ಬಾರಿ […]

ವ್ಯಕ್ತಿಯ ಬೀಕರವಾಗಿ‌ ಕೊಲೆಗೈದ 6ಮಂದಿಯ ತಂಡ| ಕೃತ್ಯದಲ್ಲಿ ಮೂವರು ಮಹಿಳೆಯರೂ ಭಾಗಿ| ಸಿಸಿಟಿವಿಯಲ್ಲಿ ಕೊಲೆ ಚಿತ್ರಣ ಸೆರೆ Read More »

ಮಗನನ್ನು ಹತ್ಯೆ ಮಾಡಿ ನಾಪತ್ತೆ ನಾಟಕವಾಡಿದ ತಂದೆ

ಸಮಗ್ರ ನ್ಯೂಸ್ : ತನ್ನ ಮಗನನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದಲ್ಲದೆ ನಾಪತ್ತೆಯ ನಾಟಕವಾಡಿದ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಅಖಿಲ್ ಭರತ್ ಮಹಾಜನ ಶೇಠ್ (26) ಎಂಬಾತ ಕೊಲೆಯಾಗಿದ್ದು, ಇಲ್ಲಿನ ಕೇಶ್ವಾಪುರ ಅರಿಹಂತ ನಗರದಲ್ಲಿ ಚಿನ್ನದ ಅಂಗಡಿ ಮಾಲಕನಾಗಿರುವ ಭರತ್ ಜೈನ್‌ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ನಾಪತ್ತೆ ದೂರು ದಾಖಲಾಗಿತ್ತು: ಡಿ. 3ರಂದು ಕೇಶ್ವಾಪುರ ಠಾಣೆಯಲ್ಲಿ ಅಖಿಲ್ ಕಾಣೆಯಾದ ಬಗ್ಗೆ ಹಾಗೂ ತಂದೆ ಭರತ್ ಜೈನ್‌ಗೆ ವಿಡಿಯೋ ಕಾಲ್

ಮಗನನ್ನು ಹತ್ಯೆ ಮಾಡಿ ನಾಪತ್ತೆ ನಾಟಕವಾಡಿದ ತಂದೆ Read More »

ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ| ಖಂಡನೆ ವ್ಯಕ್ತಪಡಿಸಿದ ವಕೀಲರ ಸಂಘ

ಸಮಗ್ರ ನ್ಯೂಸ್: ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಠಾಣೆಯ ಪೊಲೀಸರು ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿರುವ ಮಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಘಟನೆಯನ್ನು ಖಂಡಿಸುವುದಾಗಿ ಹೇಳಿದೆ.ಈ ಕುರಿತಂತೆ ನಡೆದ ತುರ್ತು ಸಭೆ ನಡೆಸಲಾಗಿದ್ದು, ಸಭೆಯಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ ಎಂದು ಸಮಿತಿ ಪ್ರಕಟನೆ ತಿಳಿಸಿದೆ. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ಧ ಪ್ರತಿಬಂದಕಾಜ್ಞೆ ಇದ್ದೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ ಎಫ್‌ಐಆರ್

ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ| ಖಂಡನೆ ವ್ಯಕ್ತಪಡಿಸಿದ ವಕೀಲರ ಸಂಘ Read More »

ಎನ್.ಆರ್.ಪೊಲೀಸರ ಕಾರ್ಯಾಚರಣೆ|ಐವರು ಅಪಹರಣಕಾರರ ಬಂಧನ

ಸಮಗ್ರ ನ್ಯೂಸ್: ಮೈಸೂರಿನ ಎನ್ ಆರ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಐವರು ಅಪಹರಣಕಾರರ ಬಂಧನವಾಗಿದೆ. ಹಣಕ್ಕೆ ಬೇಡಿಕೆ ಇಡುವ ಉದ್ದೇಶದಿಂದ ಉದ್ಯಮಿಯೊಬ್ಬರನ್ನು ಅಪಹರಿಸಲು ಯತ್ನಿಸಿ ವಿಫಲರಾಗಿದ್ದ ಆರೋಪಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಕಳೆದ ನವೆಂಬರ್ 24ರಂದು ಉದ್ಯಮಿ ಒಬ್ಬರನ್ನು ಅವರ ಲಾರಿ ಚಾಲಕನೇ ಇತರ ಸಹಚರರೊಂದಿಗೆ ಸೇರಿಕೊಂಡು ಅಪಹರಣಕ್ಕೆ ಯತ್ನಿಸಿದ್ದ.ಬೆಂಗಳೂರು-ಮೈಸೂರು ಹೈವೇಯಲ್ಲಿರುವ ಮಣಿಪಾಲ್ ಆಸ್ಪತ್ರೆ ಸಿಗ್ನಲ್ ಬಳಿಯಲ್ಲಿ ಉದ್ಯಮಿಯ ಅಪಹರಣಕ್ಕೆ ಯತ್ನಿಸಿದ್ದರು.ಆದರೆ ಉದ್ಯಮಿಯ ಅಪಹರಣ ಯತ್ನ ವಿಫಲವಾಗಿತ್ತು. ಈ ಸಂಬಂಧ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಗಳ ಹೆಜ್ಜೆ

ಎನ್.ಆರ್.ಪೊಲೀಸರ ಕಾರ್ಯಾಚರಣೆ|ಐವರು ಅಪಹರಣಕಾರರ ಬಂಧನ Read More »

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ| ನಾಲ್ವರ ಮೇಲೆ FIR ದಾಖಲು

ಸಮಗ್ರ ನ್ಯೂಸ್: ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಗಂಜಾಂನಲ್ಲಿ ಹಸಿರು ಬಾವುಟ ಕಿತ್ತು ಹಾಕಿ ಕೇಸರಿ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣ ಪೊಲೀಸ್ ಠಾಣೆಗೆ ಸುಮಾರು 40ಕ್ಕೂ ಹೆಚ್ಚು ಮುಸ್ಲಿಂ ಜನರು ಭೇಟಿ ನೀಡಿ ಶಾಂತಿಯುತ ಯಾತ್ರೆ ವೇಳೆ ಕೆಲವರು ನಡೆಸಿದ ಕೋಮು ಪ್ರಚೋದನೆ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದರು. ಗಂಜಾಂನ ಪೇಟೆ ಬೀದಿಯ ನಿವಾಸಿ ಸೈಯದ್ ರೆಹಮನ್ ಎಂಬುವರ ಮನೆ ಮೇಲೆ ಹಲವು ವರ್ಷಗಳಿಂದ ಅಳವಡಿಸಿದ್ದ

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ| ನಾಲ್ವರ ಮೇಲೆ FIR ದಾಖಲು Read More »

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ| ಓರ್ವ ಸಾವು, ಮತ್ತೋರ್ವ ಗಂಭೀರ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕನಿಗೆ ಗಂಬೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ| ಓರ್ವ ಸಾವು, ಮತ್ತೋರ್ವ ಗಂಭೀರ Read More »

ಉಗ್ರ ಶಾರೀಖ್‌ ಕೆಲದಿನದ ಹಿಂದೆ ಮಹಿಳೆಯರ ಜೊತೆ ಮಡಿಕೇರಿಯ ಹೋಮ್‌ ಸ್ಟೇಯಲ್ಲಿ….!!

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್‌ ಮಾಡುವುದಕ್ಕೂ ಮೊದಲ ಉಗ್ರ ಶಾರೀಖ್‌, ಇಬ್ಬರು ಮಹಿಳೆಯರ ಜೊತೆ ಆತ ಮಡಿಕೇರಿ ಜಿಲ್ಲೆ ಹೋಮ್‌ ಸ್ಟೇ ಒಂದಕ್ಕೆ ಬಂದಿದ್ದ ಎಂದು ತನಿಖೆ ವೇಳೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಶಾರೀಖ್‌ ಹಾಗೂ ಆತನ ಸಹಚರರು ಕೊಡಗು ಜಿಲ್ಲೆಗೂ ಭೇಟಿ ನೀಡಿದ್ದರಾ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಹಾಗೂ ಮಂಗಳೂರು ಪೊಲೀಸರು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಬಳಿಯ ನೆಮ್ಮಲೆ ಗ್ರಾಮದ ಓಟೆಕಾಡ್ ಹೋಂಸ್ಟೇಯಲ್ಲಿ

ಉಗ್ರ ಶಾರೀಖ್‌ ಕೆಲದಿನದ ಹಿಂದೆ ಮಹಿಳೆಯರ ಜೊತೆ ಮಡಿಕೇರಿಯ ಹೋಮ್‌ ಸ್ಟೇಯಲ್ಲಿ….!! Read More »

ವಿಟ್ಲ: ಮರಾಟಿ ಯುವವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ|
ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ|ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು

ಸಮಗ್ರ ನ್ಯೂಸ್: ವಿಟ್ಲ ಇಲ್ಲಿನ ಮರಾಟಿ ಯುವವೇದಿಕೆ ರಿ. ವಿಟ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಡಿ.4 ರಂದು ನಡೆಯಿತು. ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ, ಉಪಾಧ್ಯಕ್ಷರಾಗಿ ದಿನೇಶ್ ಗೋಳ್ತಮಜಲು, ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು, ಜೊತೆ ಕಾರ್ಯದರ್ಶಿಯಾಗಿ ಚಿತ್ರಾಕ್ಷ ನೆಕ್ಕರೆಕಾಡು, ಕ್ರೀಡಾ ಕಾರ್ಯದರ್ಶಿಯಾಗಿ ರಾಮಚಂದ್ರ ನೆಕ್ಕರೆಕಾಡು, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ, ಸಿ ಎಚ್ ಸಾಮಾಜಿಕ ಜಾಲತಾಣದ ನಿರ್ವಹಕರಾಗಿ ವಿವೇಕ್ ಅನ್ನಮೂಲೆ, ಗೌರವಾಧ್ಯಕ್ಷರಾಗಿ ರವಿ ಕಲ್ಲಜರಿ ರವರು ಆಯ್ಕೆಯಾಗಿದ್ದಾರೆ.

ವಿಟ್ಲ: ಮರಾಟಿ ಯುವವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ|
ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ|ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು
Read More »

80ರ ಒಂಟಿ ವೃದ್ಧೆ ಮೇಲೆ 30ರ ಯುವಕನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಎಂಬತ್ತು ವರ್ಷದ ಒಂಟಿ ವೃದ್ಧೆ ಮೇಲೆ 30 ವರ್ಷದ ಕಾಮುಕನೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೀರಗೊಂಡನಹಳ್ಳಿಯಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡಿದ್ದ ವೃದ್ಧೆ ಒಂಟಿಯಾಗಿ ಜೀವನ ಸಾಗಿಸುತ್ತಿದ್ದಳು. ಆಕೆಯ ಮೇಲೆ ಎಸ್‌.ರವಿ ಎಂಬಾತ ಅತ್ಯಾಚಾರ ಎಸಗಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ. ಶನಿವಾರ ಬೆಳಗ್ಗೆ ಒಂಟಿಯಾಗಿದ್ದ ವೃದ್ಧೆಯ ಮನೆಗೆ ನುಗ್ಗಿದ ಆರೋಪಿ ಎಸ್‌.ರವಿ, ವೃದ್ಧೆಯನ್ನು ಅಡುಗೆ ಕೋಣೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬೇಡ ಎಂದು ಎಷ್ಟೇ ಕೂಗಿಕೊಂಡರೂ ಆತ ಬಿಡಲಿಲ್ಲ

80ರ ಒಂಟಿ ವೃದ್ಧೆ ಮೇಲೆ 30ರ ಯುವಕನಿಂದ ಅತ್ಯಾಚಾರ Read More »

ದಕ್ಷಿಣ ಕನ್ನಡ ಸೇರಿ ರಾಜ್ಯದ 10 ಜಿಲ್ಲೆಗಳಲ್ಲಿ
ಮೆದುಳು ಜ್ವರಕ್ಕೆ ಲಸಿಕೆ ಅಭಿಯಾನ

ಸಮಗ್ರ ನ್ಯೂಸ್ : ಜೆಇ ಮೆದುಳು ಜ್ವರ ನಿಯಂತ್ರಣಕ್ಕಾಗಿ ಇಂದಿನಿಂದ ರಾಜ್ಯದ 10 ಜಿಲ್ಲೆಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಜೆಇ ಲಸಿಕಾ ಅಭಿಯಾನ ಕುರಿತುಮಾಹಿತಿ ನೀಡಿದ ಅವರು, ‘ಜೆಇ ಮೆದುಳು ಜ್ವರ ಫ್ಲೇವಿ ವೈರಸ್‌ನಿಂದ ಬರುತ್ತದೆ. ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟುಮಾಡುವ ಸಾಧ್ಯತೆಗಳಿವೆ.

ದಕ್ಷಿಣ ಕನ್ನಡ ಸೇರಿ ರಾಜ್ಯದ 10 ಜಿಲ್ಲೆಗಳಲ್ಲಿ
ಮೆದುಳು ಜ್ವರಕ್ಕೆ ಲಸಿಕೆ ಅಭಿಯಾನ
Read More »