ಸಮಗ್ರ ಸಮಾಚಾರ

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ

ಸಮಗ್ರ ನ್ಯೂಸ್: ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕ ವಂಚನೆಗೆ ಒಳಗಾದ ವ್ಯಕ್ತಿ. ಈತನ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ಪ್ರಕರಣವನ್ನು ವಿಜಯಪುರ ಸಿಇಎನ್‌ ಪೊಲೀಸರು ಭೇದಿಸಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ಮೂಲದ ಮಂಜುಳಾ ಎಂಬಾಕೆ ಫೇಸ್‌ಬುಕ್‌ […]

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ Read More »

ವಿದ್ಯಾರ್ಥಿನಿಯನ್ನು ಕೊಂದು ತಿಂದವ ನಿಧನ|ಯಾರಿವ ನರಭಕ್ಷ…!!!

ಟೋಕಿಯೊ: ವಿದ್ಯಾರ್ಥಿನಿಗೆ ಗುಂಡು ಹಾರಿಸಿ ಅತ್ಯಾಚಾರವೆಸಗಿ ನಂತರ ಆಕೆಯ ಮೃತದೇಹವನ್ನು ತುಂಡುಗಳಾಗಿಸಿ ಹಲವು ದಿನಗಳವರೆಗೆ ಇಟ್ಟುಕೊಂಡು ಸೇವಿಸಿ ಜೈಲು ಶಿಕ್ಷೆಯಿಲ್ಲದೇ ಆರಾಮಾಗಿ ಓಡಾಡಿಕೊಂಡಿದ್ದ ಜಪಾನ್‌ ವ್ಯಕ್ತಿ ನಿಧನ ಹೊಂದಿದ್ದಾನೆ. ʼಕೋಬ್ ಕ್ಯಾನಿಬಾಲ್ʼ (ನರಭಕ್ಷಕ) ಎಂದೇ ಕುಖ್ಯಾತಿಯಾಗಿದ್ದ ಜಪಾನಿನ ಕೊಲೆಗಾರ ಇಸ್ಸೆ ಸಗಾವಾ (Issei Sagawa), ಕೊಲೆ ಮಾಡಿದ್ದರೂ ಜೈಲು ಶಿಕ್ಷೆ ಅನುಭವಿಸದೇ ಸ್ವತಂತ್ರನಾಗಿ ಇದ್ದ. ಇದೀಗ ತನ್ನ 73ನೇ ವಯಸ್ಸಿನಲ್ಲಿ ಮೃತಪಟ್ಟಿದ್ದಾನೆ. ಸಗಾವಾ, ನ್ಯುಮೋನಿಯಾದಿಂದ ಸಾವಿಗೀಡಾಗಿದ್ದು, ಕುಟುಂಬದ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. 1981 ರಲ್ಲಿ ಸಗಾವಾ ಪ್ಯಾರಿಸ್‌ನಲ್ಲಿ

ವಿದ್ಯಾರ್ಥಿನಿಯನ್ನು ಕೊಂದು ತಿಂದವ ನಿಧನ|ಯಾರಿವ ನರಭಕ್ಷ…!!! Read More »

ಸುರತ್ಕಲ್ ಟೋಲ್ ಎತ್ತಂಗಡಿ!
ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!

ಸಮಗ್ರ ನ್ಯೂಸ್: ಇಲ್ಲಿನ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವು ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಪ್ರತಿಭಾ ಕುಳಾಯಿ ಅವರು, “ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35 ಮಂದಿಯನ್ನು ನಾನು ಭೇಟಿಯಾಗಿ ಅವರಿಗೆ ಅವರ

ಸುರತ್ಕಲ್ ಟೋಲ್ ಎತ್ತಂಗಡಿ!
ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!
Read More »

ಪುತ್ತೂರು: ಕುಡಿದು ತಮ್ಮನನ್ನೇ ಕಡಿದ ಅಣ್ಣ

ಸಮಗ್ರ ನ್ಯೂಸ್: ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ನಡೆದಿದೆ. ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರು ಮೂಲದ ನಿಂಗನ ಗೌಡ, ಒಡಹುಟ್ಟಿದ ತಮ್ಮ ಮಾದೇವಪ್ಪನನ್ನು ಕೊಲೆಮಾಡಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ ಗೌಡನು, ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಪುತ್ತೂರು ನಗರ ಠಾಣೆಯಲ್ಲಿ ಕಲಂ

ಪುತ್ತೂರು: ಕುಡಿದು ತಮ್ಮನನ್ನೇ ಕಡಿದ ಅಣ್ಣ Read More »

ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆ

ಸಮಗ್ರ ನ್ಯೂಸ್: ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆಗೈದಿರುವ ಕೃತ್ಯ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ಪ್ರಭಾಕರ್ ಶೆಟ್ರು (75) ವಿಜಯ ಲಕ್ಷ್ಮಿ (65) ಎಂದು ಗುರುತಿಸಲಾಗಿದೆ.ನಗರದ ವಿನಾಯಕ ಬಡಾವಣೆಯಲ್ಲಿ ವಾಸವಾಗಿದ್ದ ವೃದ್ಧ ದಂಪತಿ ಮನೆಯಲ್ಲಿ ಇಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಗುರುವಾರ ಸಂಜೆ ಘಟನೆ ನಡೆದಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವೃದ್ಧ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಚಿಕ್ಕನಾಯಕನಹಳ್ಳಿ ಹಾಗೂ ದಾವಣಗೆರೆಗೆ ಮದುವೆ ಮಾಡಿ

ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆ Read More »

ಮನೆಮುಂದೆ ಕುಳಿತಿದ್ದ ಯುವತಿ ಮೇಲೆ ಚಿರತೆ ದಾಳಿ| ಕುತ್ತಿಗೆಯನ್ನೇ ಕಚ್ಚಿ ಸಾಯಿಸಿದ ನರಭಕ್ಷಕ

ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ ಚಿರತೆ ದಾಳಿ ವಿಪರೀತವಾಗಿದ್ದು, ಇದುವರೆಗೆ ಕಾಡಿನ ನಿರ್ಜನ ದಾರಿಯಲ್ಲಿ ಹೊಂಚು ಹಾಕಿ ದಾಳಿ ಮಾಡುತ್ತಿದ್ದ, ಹೊಲ ಗದ್ದೆಗಳಲ್ಲಿ ಮನುಷ್ಯರ ಮೇಲೆ ಮುಗಿಬೀಳುತ್ತಿದ್ದ ಚಿರತೆ ಈಗ ಮನೆ ಬಾಗಿಲಿಗೇ ಬಂದು ಪ್ರಾಣ ತೆಗೆಯುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದೆ. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಭಯಾನಕ ಘಟನೆ ನಡೆದಿದೆ. ಸಂಜೆಯ ಹೊತ್ತು ಮನೆ ಮುಂದೆ ಕುಳಿತಿದ್ದ ಯುವತಿಯ ಮೇಲೆ ದಾಳಿ ಮಾಡಿದ ಚಿರತೆ ಆಕೆಯ ಕುತ್ತಿಗೆಯನ್ನೇ ಹಿಡಿದು ಸಾಯಿಸಿದೆ. ಮೇಘನಾ (20)

ಮನೆಮುಂದೆ ಕುಳಿತಿದ್ದ ಯುವತಿ ಮೇಲೆ ಚಿರತೆ ದಾಳಿ| ಕುತ್ತಿಗೆಯನ್ನೇ ಕಚ್ಚಿ ಸಾಯಿಸಿದ ನರಭಕ್ಷಕ Read More »

ಮಂಡ್ಯ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

ಸಮಗ್ರ ನ್ಯೂಸ್: ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿ ನೇಣಿಗೆ ಕೊರಳೊಡ್ಡಿರುವ ದಾರುಣ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಮಹಾವೀರ ಚಿತ್ರಮಂದಿರದ ಹಿಂಭಾಗದಲ್ಲಿ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬದ ಉಸ್ನಾ ಕೌಸರ್ ಬಿನ್ ಆಖಿಲ್ ಅಹಮ್ಮದ್( 30) ಮದ್ದೂರು ಮೆಡಿಕಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ತನ್ನ ಮೂವರು ಮಕ್ಕಳಾದ ಹಾರಿಸ್ ಗಂಡು (7) ವರ್ಷ, ಅಲೀಸಾ ಹೆಣ್ಣು ( 4 )ವರ್ಷ, ಅನಮ್ ಫಾತಿಮಾ ಹೆಣ್ಣು

ಮಂಡ್ಯ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ Read More »

ಸುಳ್ಯ: ಮತ್ತೆ ಲಘು‌ ಭೂಕಂಪನ

ಸಮಗ್ರ ನ್ಯೂಸ್: ಕೆಲದಿನಗಳಿಂದ ತಣ್ಣಗಾಗಿದ್ದ ಭೂಮಿ ಸುಳ್ಯದಲ್ಲಿ ಮತ್ತೆ ಕಂಪಿಸಿರುವ ಬಗ್ಗೆ ವರದಿಯಾಗಿದೆ. ತಾಲೂಕಿನ ಮಡಪ್ಪಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಭೂಕಂಪನವಾದ ಘಟನೆ ಗುರುವಾರ ಸಂಜೆ ವೇಳೆಗೆ ನಡೆದಿದೆ. ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು, ಮಡಪ್ಪಾಡಿ ಪೇಟೆ ಹಾಗೂ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸುಳ್ಯ: ಮತ್ತೆ ಲಘು‌ ಭೂಕಂಪನ Read More »

ಸರ್ಕಾರಿ ವೈದ್ಯರಾಗಿ ನೇಮಕವಾದ ಇಬ್ಬರು ಮಂಗಳಮುಖಿಯರು| ಖಾಸಗಿ ಆಸ್ಪತ್ರೆಯಿಂದ ವಜಾಗೊಂಡಿದ್ದವರು ಸರ್ಕಾರಿ ಸೇವೆಗೆ ಹಾಜರ್

ಸಮಗ್ರ ನ್ಯೂಸ್: ಮೊದಲ ಬಾರಿಗೆ ಮಂಗಳಮುಖಿಯರಿಬ್ಬರು ತೆಲಂಗಾಣದಲ್ಲಿ ಸರ್ಕಾರಿ ವೈದ್ಯರಾಗಿ ನೇಮಕವಾಗಿದ್ದಾರೆ. ಎಂಬಿಬಿಎಸ್ ಪದವಿ ಮುಗಿಸಿರುವ ಪ್ರಾಚಿ ರಾತೋಡ್ ಹಾಗೂ ರುತ್ ಜಾನ್ ಪೌಲ್ ಅವರೇ ಈ ಸಾಧನೆ ಮಾಡಿದವರು. ಈ ಮೂಲಕ ಈ ಇಬ್ಬರು ಮಂಗಳಮುಖಿ ವೈದ್ಯರು ತೆಲಂಗಾಣದಲ್ಲಿ ಇತಿಹಾಸ ಬರೆದಂತಾಗಿದೆ. ೨೦೧೫ ರಲ್ಲಿ ಈ ಲೈಂಗಿಕ ಅಲ್ಪಸಂಖ್ಯಾತರು ಎಂಬಿಬಿಎಸ್ ಪದವಿ ಮುಗಿಸಿದ್ದರು. ನಂತರ ಕೆಲ ವರ್ಷ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಾಚಿ ರಾತೋಡ್ ಅವರ ಲಿಂಗ ವಿಚಾರವಾಗಿ ಅವರು ಸೇವೆ ಸಲ್ಲಿಸುತ್ತಿದ್ದ

ಸರ್ಕಾರಿ ವೈದ್ಯರಾಗಿ ನೇಮಕವಾದ ಇಬ್ಬರು ಮಂಗಳಮುಖಿಯರು| ಖಾಸಗಿ ಆಸ್ಪತ್ರೆಯಿಂದ ವಜಾಗೊಂಡಿದ್ದವರು ಸರ್ಕಾರಿ ಸೇವೆಗೆ ಹಾಜರ್ Read More »

ಮದ್ಯ ಸೇವನೆ ವೇಳೆ ಅತ್ತ ಕಂದಮ್ಮ| ಕತ್ತು ಹಿಸುಕಿ ಪುತ್ರಿಯನ್ನೇ ಕೊಂದ ಪಾಪಿ ತಂದೆ

ಸಮಗ್ರ ನ್ಯೂಸ್: ಮದ್ಯ ಸೇವಿಸುತ್ತಿದ್ದ ವೇಳೆ ಮಗು ಅಳುತ್ತಿದ್ದಕ್ಕೆ ತಂದೆಯೇ ಕಂದಮ್ಮನನ್ನು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆ ಬದ್ದೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. 9 ತಿಂಗಳ ಮಗು ತನುಶ್ರೀ ಕೊಲೆಯಾದ ಕಂದಮ್ಮ. ರಾಮು(30) ಮಗುವನ್ನು ಕೊಂದ ಪಾಪಿ ತಂದೆ. ರಾಮು ಮನೆಯಲ್ಲಿ ರಾಮು ಮದ್ಯ ಸೇವಿಸುತ್ತಿದ್ದಾಗ ತನುಶ್ರೀ ಅಳುತ್ತಿದ್ದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಕೃತ್ಯವೆಸಗಿದ್ದಾನೆ. ತನುಶ್ರೀ ಕುತ್ತಿಗೆಯಲ್ಲಿದ್ದ ದಾರ ಹಿಡಿದು ಮೇಲೆ ಎತ್ತಿದ್ದಾನೆ. ಉಸಿರುಗಟ್ಟಿ ತನುಶ್ರೀ ಸಾವನ್ನಪ್ಪಿದ್ದಾಳೆ. ಪತ್ನಿ ಹಾಗೂ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲೇ

ಮದ್ಯ ಸೇವನೆ ವೇಳೆ ಅತ್ತ ಕಂದಮ್ಮ| ಕತ್ತು ಹಿಸುಕಿ ಪುತ್ರಿಯನ್ನೇ ಕೊಂದ ಪಾಪಿ ತಂದೆ Read More »