ಸಮಗ್ರ ಸಮಾಚಾರ

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ|ಪೋಲೀಸರ ವಿಚಾರಣೆಯರಲ್ಲಿ ನಿಜಾಂಶ ಬಯಲು

ಸಮಗ್ರ ನ್ಯೂಸ್: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ನಿಜಾಂಶ ಬಯಲಾಗಿದೆ. ಬಂಧಿತ ಆರೋಪಿಯನ್ನು ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಎನ್ನಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಅದ್ರಾಮ, ಸಮಾದ್ ಎಂಬಾತನನ್ನು ಪೆಟ್ರೋಲ್ ಹಚ್ಚಿ ಕೊಲೆ ಮಾಡಿದ್ದ. ಏನಿದು ಪ್ರಕರಣ..!ಆದಿತ್ಯವಾರ ರಾತ್ರಿ ಯುವಕನೋರ್ವನನ್ನು ಕಿಡ್ನಾಪ್ ಮಾಡಿ ಬಳಿಕ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಸೋಮವಾರ ಬೆಳಿಗ್ಗೆಯಿಂದ ಹರಡಿತ್ತು. ಇದು ವದಂತಿಯೋ ಅಥವಾ ಸತ್ಯ ವಿಚಾರವೋ ಎಂದು […]

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ|ಪೋಲೀಸರ ವಿಚಾರಣೆಯರಲ್ಲಿ ನಿಜಾಂಶ ಬಯಲು Read More »

ಕರಾವಳಿಯ ಮೂರು ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆ ಆರಂಭ| ಜನಸಂಕಲ್ಪ ಸಭೆಯಲ್ಲಿ ಸಿಎಂ ಘೋಷಣೆ

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಉಡುಪಿ ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ಜನ ಸಂಕಲ್ಪ ಸಭೆಯಲ್ಲಿ ಘೋಷಿಸಿದ್ದಾರೆ. ಈಗ ನೀಡುತ್ತಿರುವ ಪಡಿತರ ಅಕ್ಕಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬರುತ್ತಿಲ್ಲವೆಂಬ ಹಿನ್ನೆಲೆಯಲ್ಲಿ ಪಡಿತರ ವ್ಯವಸ್ಥೆಗೆ ಕುಚಲಕ್ಕಿ ನೀಡುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಲೇ ವೇದಿಕೆಯಲ್ಲಿ ಎದ್ದು ನಿಂತು ಮುಖ್ಯಮಂತ್ರಿಗಳಿಗೆ ಕೈಮುಗಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದರು.

ಕರಾವಳಿಯ ಮೂರು ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆ ಆರಂಭ| ಜನಸಂಕಲ್ಪ ಸಭೆಯಲ್ಲಿ ಸಿಎಂ ಘೋಷಣೆ Read More »

ಚಂದ್ರಶೇಖರ್ ನಾಲೆಗೆ ಬಿದ್ದೇ ಸತ್ತರಾ? ಡಯಾಟಮ್ ವರದಿಯಲ್ಲೇನಿದೆ…?

ಸಮಗ್ರ ನ್ಯೂಸ್: ಹೊನ್ನಾಳಿಯ ಬಿಜೆಪಿ ಶಾಸಕ ಸೋದರನ ಪುತ್ರನ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಯಾಟಮ್‌ ವರದಿ ಪೊಲೀಸರ ಕೈ ಸೇರಿದೆ. ಶ್ವಾಸಕೋಶದಲ್ಲಿ ನೀರು ಇರುವುದನ್ನು ಈ ವರದಿ ಖಚಿತಪಡಿಸಿದೆ. ಈ ಹಿನ್ನೆಲೆ ಚಂದ್ರಶೇಖರ್‌ ಬದುಕಿದ್ದಾಗಲೇ ನಾಲೆಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಡಯಾಟಮ್‌ ಪರೀಕ್ಷಾ ವರದಿ ಸಹಜ ಸಾವು ಎಂದು ಹೇಳುತ್ತಿದೆ. ಎಫ್‌ಎಸ್‌ಎಲ್‌, ಮರಣೋತ್ತರ ಪರೀಕ್ಷಾ ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ಇನ್ನು, ಚಂದ್ರು ಸಾವಿನ ಬಗ್ಗೆ ಎಡಿಜಿಪಿ ಅಲೋಕ್‌ ಕುಮಾರ್‌ ಮಾಹಿತಿ ಪಡೆದಿದ್ದಾರೆ ಎಂದೂ

ಚಂದ್ರಶೇಖರ್ ನಾಲೆಗೆ ಬಿದ್ದೇ ಸತ್ತರಾ? ಡಯಾಟಮ್ ವರದಿಯಲ್ಲೇನಿದೆ…? Read More »

ಸುಳ್ಯ:ಬೈಕ್-ಜೀಪು ಅಪಘಾತ|ಸವಾರ ಗಂಭೀರ

ಸಮಗ್ರ ನ್ಯೂಸ್: ಬೈಕ್, ಜೀಪು ಅಪಘಾತದಿಂದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅರಂತೋಡು ಗ್ರಾಮದ ಬಿಳಿಯಾರು ಪೆಟ್ರೋಲ್ ಬಂಕ್ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಸಂಪಾಜೆಯ ಕಲ್ಲುಗುಂಡಿ ಕಡೆಯಿಂದ ಸುಳ್ಯ ಕಡೆಗೆ ಧನಂಜಯ ಎಂಬ ಯುವಕ ಬೈಕಿನಲ್ಲಿ ಬರುತ್ತಿರುವಾಗ ಸುಳ್ಯ ಕಡೆಯಿಂದ ತೊಡಿಕಾನ ಕಡೆಗೆ ಹರೀಶ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಜೀಪು ಬಸ್ಸನ್ನು ಓವರ್ ಟೆಕ್ ಮಾಡುವ ಸಂದರ್ಭದಲ್ಲಿ ವಿರುದ್ದ ದಿಕ್ಕಿನಿಂದ ಬಂದು ಡಿಕ್ಕಿ ಹೊಡೆದಿದೆ. ಇನ್ನು ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು

ಸುಳ್ಯ:ಬೈಕ್-ಜೀಪು ಅಪಘಾತ|ಸವಾರ ಗಂಭೀರ Read More »

ಪೇಪರ್ ಓದುತ್ತಿದ್ದ ವ್ಯಕ್ತಿಗೆ ಹೃದಯಾಘಾತ

ಸಮಗ್ರ ನ್ಯೂಸ್ : ಪೇಪರ್ ಓದುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ರಾಜಸ್ಥಾನದಲ್ಲಿ ಸಂಭವಿಸಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಪಚ್ಚಪದ್ರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಆಸ್ಪತ್ರೆಗೆ ಆಗಮಿಸಿದ್ದ ವ್ಯಕ್ತಿ ಹೊರಗೆ ಕುಳಿತು ಪೇಪರ್ ಓದುತ್ತಿದ್ದರು. ಇದ್ದಕ್ಕಿದ್ದಂತೆ ವ್ಯಕ್ತಿ ಕುಸಿದು ಬಿದ್ದಿದ್ದಾರೆ. ಕೂಡಲೇ ಜನರು ಬಂದು ಕುಸಿದು ಬಿದ್ದ ವ್ಯಕ್ತಿಯ ಉಪಚರಿಸಿದ್ದಾರೆ. ಆದರೆ ಅದಾಗಲೇ ವ್ಯಕ್ತ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪೇಪರ್ ಓದುತ್ತಿದ್ದ ವ್ಯಕ್ತಿಗೆ ಹೃದಯಾಘಾತ Read More »

ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಸಮಗ್ರ ನ್ಯೂಸ್: ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ನ.22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ. ನ. 23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಅಂಗವಾಗಿ ಕೆಎಸ್‌ಆರ್‌ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ Read More »

ಚಿಕ್ಕಮಗಳೂರು: ರಸ್ತೆ ಅವ್ಯವಸ್ಥೆ ಬಗ್ಗೆ ವ್ಯಂಗ್ಯ ಚಿತ್ರದ ಮೂಲಕ ಆಕ್ರೋಶ ಹೊರ ಹಾಕಿದ ನಾಗರೀಕರು

ಸಮಗ್ರ ನ್ಯೂಸ್: ರಸ್ತೆ ಅವ್ಯವಸ್ಥೆ ಬಗ್ಗೆ ನಾಗರೀಕರು ವ್ಯಂಗ್ಯ ಚಿತ್ರದ ಮೂಲಕ ಆಕ್ರೋಶ ಹೊರ ಹಾಕಿದ ಘಟನೆ ಚಿಕ್ಕಮಗಳೂರಿನ ಕಳಸ ಪಟ್ಟಣದಲ್ಲಿ ನಡೆದಿದೆ. ಕಳಸ ಪಟ್ಟಣದ ಮುಖ್ಯ ರಸ್ತೆಯಿಂದ ಹೊರನಾಡಿಗೆ ತೆರಳುವ ರಸ್ತೆಯ ದುಸ್ಥಿತಿಯಿಂದ ವಾಹನಗಳು ಚಲಿಸದಷ್ಟು ಹೊಂಡ-ಗುಂಡುಗಳಿಂದ ಹದಗಟ್ಟು ಹೋಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಗಿಲ್ಲ. ಈ ಹಿನ್ನಲೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಚಿತ್ರಗಳು ವ್ಯಾಪಕವಾಗಿ ವೈರಲ್ ಮಾಡಲಾಗಿದೆ. ಅಲ್ಲದೆ ಕಳಸ ತಾಲೂಕು ಕೇಂದ್ರವಾಗಿದ್ದರೂ ಅಭಿವೃದ್ದಿ ಶೂನ್ಯ ಎನ್ನುವ

ಚಿಕ್ಕಮಗಳೂರು: ರಸ್ತೆ ಅವ್ಯವಸ್ಥೆ ಬಗ್ಗೆ ವ್ಯಂಗ್ಯ ಚಿತ್ರದ ಮೂಲಕ ಆಕ್ರೋಶ ಹೊರ ಹಾಕಿದ ನಾಗರೀಕರು Read More »

ಸುಳ್ಯ: ಭಜರಂಗದಳ ಕಾರ್ಯಕ್ರಮದಲ್ಲಿ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ|ಎಫ್‌ಐಆರ್ ದಾಖಲು

ಸಮಗ್ರ ನ್ಯೂಸ್: ಕಾರ್ಯಕ್ರಮವೊಂದರಲ್ಲಿ ಯುವಕನೋರ್ವ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಸುಳ್ಯದ ಅಮರ ಪಡ್ನೂರು ಗ್ರಾಮದಿಂದ ವರದಿಯಾಗಿದೆ.ಅಮರ ಪಡ್ನೂರು ಗ್ರಾಮದ ಚೊಕ್ಕಾಡಿ ಪದವು ಸತ್ಯ ಸಾಯಿಬಾಬಾ ಮಂದಿರದ ಮುಂಭಾಗದಲ್ಲಿ ಬಜರಂಗದಳದ ಕಾರ್ಯಕರ್ತರು ಸಾಮೂಹಿಕ ಗೋಪೂಜೆ ನಡೆಸಿದ್ದರು. ಇದೇ ಸ್ಥಳದಲ್ಲಿ ಯುವಕನೋರ್ವ ೧೬ ವರ್ಷದ ಬಾಲಕಿಗೆ ಲೈಂಗಿಕ ಕಿರುಕಳ ನೀಡಿದ್ದಾನೆ ಎನ್ನಲಾಗಿದೆ. ಪ್ರಕರಣದ ಆರೋಪಿಯನ್ನು ಮೇರ್ಕಜೆಯ ಯತಿ ಎಂದು ಗುರುತಿಸಲಾಗಿದೆ. ಈ ಘಟನೆಯ ಬಗ್ಗೆ ಬಾಲಕಿ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಮಾಹಿತಿ ನೀಡಿದ್ದಾಳೆ. ತಕ್ಷಣ ರಾಜ್ಯ

ಸುಳ್ಯ: ಭಜರಂಗದಳ ಕಾರ್ಯಕ್ರಮದಲ್ಲಿ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ|ಎಫ್‌ಐಆರ್ ದಾಖಲು Read More »

ಮತ್ತೊಂದು ಮಹಾಮಾರಿಗೆ ಮುನ್ನುಡಿ? ರಾವಲ್ಪಿಂಡಿ ಬಳಿ ಹೊಸತೊಂದು ‌ವೈರಸ್ ಸೃಷ್ಟಿಸುತ್ತಿದೆ ಚೀನಾ!!

ಸಮಗ್ರ ನ್ಯೂಸ್: ಕೋವಿಡ್ ವೈರಸ್​ಗಿಂತಲೂ ಹೆಚ್ಚು ಮಾರಕವಾದ ವೈರಸ್​ಅನ್ನು ಪಾಕಿಸ್ತಾನದಲ್ಲಿ ಚೀನಾ ಸೃಷ್ಟಿಸುತ್ತಿದೆ ಎಂಬ ಕಳವಳಕಾರಿ ಅಂಶ ಬಹಿರಂಗವಾಗಿದೆ. ಕೋವಿಡ್ ಮತ್ತು ಅದರ ಪ್ರಭೇದಗಳು ಇನ್ನೂ ಜಗತ್ತನ್ನು ಕಾಡುತ್ತಿರುವುದರ ನಡುವೆಯೇ, ಪಾಕಿಸ್ತಾನ ಮತ್ತು ಚೀನಾ ರಾವಲ್ಪಿಂಡಿ ಸಮೀಪದ ರಹಸ್ಯ ಪ್ರಯೋಗಾಲಯವೊಂದರಲ್ಲಿ ಜೈವಿಕಾಸ್ತ್ರದ ಸಂಶೋಧನೆಯನ್ನು ಮುಂದುವರಿಸಿದೆ ಎನ್ನಲಾಗಿದೆ. ಕುಖ್ಯಾತ ವುಹಾನ್ ವೈರಾಣು ಸಂಸ್ಥೆ ಮತ್ತು ಪಾಕ್ ಸೇನೆ ನಡೆಸುವ ರಕ್ಷಣಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಡಿಎಸ್​ಟಿಒ) ಮಾರಕ ವೈರಸ್ ಸಂಶೋಧಿಸಲು ಅತ್ಯಂತ ಸುಧಾರಿತ ವೈಜ್ಞಾನಿಕ ಮೂಲಸೌಕರ್ಯವನ್ನು ಪಾಕ್​ನಲ್ಲಿ

ಮತ್ತೊಂದು ಮಹಾಮಾರಿಗೆ ಮುನ್ನುಡಿ? ರಾವಲ್ಪಿಂಡಿ ಬಳಿ ಹೊಸತೊಂದು ‌ವೈರಸ್ ಸೃಷ್ಟಿಸುತ್ತಿದೆ ಚೀನಾ!! Read More »

ನಾಳೆ(ನ.8) ಈ ವರ್ಷದ ಕೊನೆಯ ಚಂದ್ರಗ್ರಹಣ| ಎಲ್ಲೆಲ್ಲಿ ಕಂಡುಬರುತ್ತೆ ಗೊತ್ತಾ‌ ನೆರಳು ಬೆಳಕಿನಾಟ!?

ಸಮಗ್ರ ನ್ಯೂಸ್: ಈ ವರ್ಷದ ಕೊನೆಯ ʻಸಂಪೂರ್ಣ ಚಂದ್ರಗ್ರಹಣʼವು ನಾಳೆ(ನವೆಂಬರ್ 8) ರಂದು ಸಂಭವಿಸಲಿದೆ. ನಾಸಾ ಪ್ರಕಾರ, ಮುಂದಿನ ಸಂಪೂರ್ಣ ಚಂದ್ರಗ್ರಹಣವು ಮೂರು ವರ್ಷಗಳವರೆಗೆ ಸಂಭವಿಸುವುದಿಲ್ಲ. ಈ ಬಗ್ಗೆ ನಾಸಾ ಟ್ವೀಟ್ ಮಾಡಿದ್ದು, ‘ನವೆಂಬರ್ 8, 2022 ರಂದು ಚಂದ್ರನು ಭೂಮಿಯ ನೆರಳಿನಲ್ಲಿ ಹಾದುಹೋಗುತ್ತಾನೆ ಮತ್ತು ಕೆಂಪು ಬಣ್ಣಕ್ಕೆ ತಿರುಗುತ್ತಾನೆ. ಇದು ಮತ್ತೆ 3 ವರ್ಷಗಳ ನಂತರ ಸಂಭವಿಸುತ್ತದೆ. ಆದ್ದರಿಂದ ಇದು ನಿಮ್ಮ ಪ್ರದೇಶದಲ್ಲಿ ಗೋಚರಿಸುತ್ತದೆಯೇ ಎಂದು ಪರೀಕ್ಷಿಸಲು ಮರೆಯದಿರಿ’ ಎಂದು ಹೇಳಿದೆ. ನಾಸಾ ಪ್ರಕಾರ ಮುಂದಿನ

ನಾಳೆ(ನ.8) ಈ ವರ್ಷದ ಕೊನೆಯ ಚಂದ್ರಗ್ರಹಣ| ಎಲ್ಲೆಲ್ಲಿ ಕಂಡುಬರುತ್ತೆ ಗೊತ್ತಾ‌ ನೆರಳು ಬೆಳಕಿನಾಟ!? Read More »