ಸಮಗ್ರ ಸಮಾಚಾರ

ಕುಂದಾಪುರ: ವಿವಾಹಿತನೊಂದಿಗೆ ಯುವತಿ ಪರಾರಿ

ಕುಂದಾಪುರ: ವಿವಾಹಿತನೊಂದಿಗೆ ಯುವತಿಯೋರ್ವಳು ಪರಾರಿಯಾದ ಘಟನೆ ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದಿದೆ. ಆಲೂರು ಗ್ರಾಮದ ಹಳ್ಳಿ ಹೆಬ್ಬಾಗಿಲು ನಿವಾಸಿ ಚಂದ್ರ (೪೨) ಹಾಗೂ ನೆರೆಮನೆಯಲ್ಲಿ ವಾಸಿಸುತ್ತಿದ್ದ ವನಜಾ (೨೯) ಎಂಬವರು ಒಂದ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಜೂನ್ ೭ರಂದು ಚಂದ್ರ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆ ಬಿಟ್ಟು ನಾಪತ್ತೆಯಾಗಿದ್ದಾರೆ. ಅದೇ ದಿನ ವನಜಾ ಕೂಡಾ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದು, ಇಬ್ಬರೂ ಕೂಡಾ ಇಲ್ಲಿಯವರೆಗೆ ಮನೆಗೆ ವಾಪಾಸ್ಸಾಗದೇ ನಾಪಾತ್ತೆಯಾಗಿದ್ದಾರೆ ಎಂದು […]

ಕುಂದಾಪುರ: ವಿವಾಹಿತನೊಂದಿಗೆ ಯುವತಿ ಪರಾರಿ Read More »

ನಾವು ಕರ್ನಾಟಕದವರು, ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ | ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆಯಿದೆ : ಕರಂದ್ಲಾಜೆ

ಉಡುಪಿ: ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು. ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ನಾವು ಕರ್ನಾಟಕದವರು. ಆದರೆ ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ನಾನು ಮನವಿ ಸಲ್ಲಿಸಿದ್ದೇನೆ. ಎರಡು ಬಾರಿ ಸಂಸತ್ ನಲ್ಲಿ ಪ್ರಸ್ತಾಪ ಮಾಡಿದ್ದೇನೆ. ತುಳುವನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಏನೆಲ್ಲ ಮಾಡಬೇಕು ಆ

ನಾವು ಕರ್ನಾಟಕದವರು, ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ | ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆಯಿದೆ : ಕರಂದ್ಲಾಜೆ Read More »

ಪ್ರಿಪೇರ್ ಎಜುಟೆಕ್: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ ಕಷ್ಟಪಡುವುದುಂಟು. ಈ ಲೆಕ್ಚರರ್ ಕನ್ನಡದಲ್ಲಿ ಒಂದೂ ವರ್ಡ್ ಹೇಳೋದಿಲ್ಲ ಎನ್ನುವುದು ವಿದ್ಯಾರ್ಥಿಗಳ ದೂರು. ಕನ್ನಡ ವಿದ್ಯಾರ್ಥಿಗಳೇ ಭಯಬೇಡ ಆರಂಭಿಕ ಶಿಕ್ಷಣದಲ್ಲಿ

ಪ್ರಿಪೇರ್ ಎಜುಟೆಕ್: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ Read More »

ಮಂಗಳಾದೇವಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ | ಪ್ರಕರಣ ದಾಖಲು

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿ ಮದುವೆ ಏರ್ಪಡಿಸಲಾಗಿತ್ತು. ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸ್ವಲ್ಪಮಟ್ಟಿಗೆ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆಯಾದರೂ ಅದ್ದೂರಿ ಮದುವೆ ಇನ್ನಿತರ ಸಮಾರಂಭಗಳಿಗೆ ಅವಕಾಶವಿಲ್ಲ. ಮನೆಯಲ್ಲಿ ಮದುವೆಗೆ ಅವಕಾಶವಿದ್ದು ನಿಗದಿತ ಜನ ಸೇರಿಸಬಹುದಾಗಿದೆ. ದೇವಸ್ಥಾನದಲ್ಲಿ ನಡೆದ ಮದುವೆಯಲ್ಲಿ ನಿಯಮ ಮೀರಿ ಜನ ಸೇರಿಸಲಾಗಿದೆ. ಪಾಲಿಕೆಯ ನಾಮನಿರ್ದೇಶಿತ ಸದಸ್ಯರೊಬ್ಬರ ಮಗಳು ಸೇರಿದಂತೆ ಐದಾರು ಜೋಡಿ ಮದುವೆ ನಡೆಯುತ್ತಿತ್ತು. ಸುಮಾರು 40ಕ್ಕೂ ಹೆಚ್ಚು ವಾಹನಗಳಲ್ಲಿ

ಮಂಗಳಾದೇವಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ | ಪ್ರಕರಣ ದಾಖಲು Read More »

ಅಪ್ಪನ ಕಸಿದ ಕೊರೊನ, ಎತ್ತಿ ಮುದ್ದಾಡೋರು, ಹೊರಗಡೆ ಕರೆದೊಯ್ಯುವವರಾರು?

ಬೆಂಗಳೂರು: ‘ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅಪ್ಪ ಮನೆಗೆ ಬಂದು ಒಂದೂವರೆ ವರ್ಷವಾಗಿತ್ತು. ಅವರು ಹೊರಗಡೆ ಕರೆದೊಯ್ದು, ಇಷ್ಟವಾದ ತಿನಿಸು ಹಾಗೂ ವಸ್ತುಗಳನ್ನು ಕೊಡಿಸುತ್ತಿದ್ದರು. ಕೋವಿಡ್‌ ಕಾಯಿಲೆಯು ಅಪ್ಪನನ್ನು ನಮ್ಮಿಂದ ದೂರ ಮಾಡಿತು. ಈಗ ಹೊರಗಡೆ ಕರೆದೊಯ್ಯುವವರು ಯಾರು?’ ಇದು ಎಂಟೂವರೆ ವರ್ಷದ ಬಾಲಕಿಯ ಪ್ರಶ್ನೆ. ಮೂರನೇ ತರಗತಿ ಓದುತ್ತಿರುವ ಪೂರ್ವಿಕಾ ಕಳೆದ ಏಪ್ರಿಲ್‌ನಲ್ಲಿ ತಂದೆಯನ್ನು ಕಳೆದುಕೊಂಡಿದ್ದಾಳೆ. ಅವಳ ತಾಯಿ ಶುಶ್ರೂಷಕಿಯಾಗಿದ್ದು, ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾದ ಹಲವಾರು ಕೊರೊನಾ ಸೋಂಕಿತರ ಆರೈಕೆ ಮಾಡಿದ್ದ

ಅಪ್ಪನ ಕಸಿದ ಕೊರೊನ, ಎತ್ತಿ ಮುದ್ದಾಡೋರು, ಹೊರಗಡೆ ಕರೆದೊಯ್ಯುವವರಾರು? Read More »

ಅಪ್ಪ, ಅಮ್ಮ, ಅಜ್ಜಿ ಮತ್ತು ತಂಗಿಯನ್ನು ಕೊಂದು ಟ್ಯಾಂಕ್’ನಲ್ಲಿ ಅಡಗಿಸಿಟ್ಟ | ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಯುವಕ ನಾಲ್ಕು ತಿಂಗಳ ಬಳಿಕ ಅಂದರ್

ಪಶ್ಚಿಮ ಬಂಗಾಳ: ಅಪ್ಪ, ಅಮ್ಮ, ಅಜ್ಜಿ ಮತ್ತು ತಂಗಿಯನ್ನು ಬರ್ಬರವಾಗಿ ಕೊಂದು ಹೆಣಗಳನ್ನು ನೀರಿನ ಟ್ಯಾಂಕ್ ಒಳಗೆ ಮುಚ್ಚಿಟ್ಟು 4 ತಿಂಗಳಿನಿಂದ ನಾಟಕವಾಡಿದ್ದ ಯುವಕನೊಬ್ಬ ಕೊನೆಗೆ ಪೊಲೀಸರ ಅತಿಥಿಯಾಗಿದ್ದಾನೆ. ರಾಜ್ಯದ ಮಾಲ್ಡ ಜಿಲ್ಲೆಯ ಕಲಿಯಚಲೀಕ್ ಗ್ರಾಮದ ಯುವಕ ಆಸೀಫ್ (19) ತನ್ನ ಮನೆಯವರನ್ನೇ ಕೊಂದ ಪಾಪಿ ಯುವಕ. ಈತ ತನ್ನ ತಂದೆ ಜವಾದ್ ಅಲಿ, ತಾಯಿ ಇರಾ ಬೀಬಿ, ತಂಗಿ ಆರಿಫಾ ಹಾಗೂ ಅಜ್ಜಿ ಅಲೆಕ್ಜಾನ್​ರನ್ನು ಕೊಲೆ ಮಾಡಿದ್ದಾನೆ. ಅವರ ದೇಹಗಳನ್ನು ವಾಟರ್​ ಟ್ಯಾಂಕ್​ನಲ್ಲಿ ಮುಚ್ಚಿಟ್ಟಿದ್ದಾನೆ. ಬಳಿಕ

ಅಪ್ಪ, ಅಮ್ಮ, ಅಜ್ಜಿ ಮತ್ತು ತಂಗಿಯನ್ನು ಕೊಂದು ಟ್ಯಾಂಕ್’ನಲ್ಲಿ ಅಡಗಿಸಿಟ್ಟ | ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಯುವಕ ನಾಲ್ಕು ತಿಂಗಳ ಬಳಿಕ ಅಂದರ್ Read More »

ಹಾಸನ ಕಾರು ಲಾರಿ ಭೀಕರ ಅಪಘಾತ ಬೆಳ್ತಂಗಡಿ ಮೂಲದ ಮೂವರು ಸಾವು | ಓರ್ವ ಗಂಭೀರ

ಬೆಳ್ತಂಗಡಿ: ಹಾಸನದಲ್ಲಿ ಲಾರಿ ಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಹೋದರರರು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೃತಪಟ್ಟ ಇಬ್ಬರನ್ನು ತಾಲೂಕಿನ ಇಂದ್ರಬೆಟ್ಟು ಗ್ರಾಮದ ಕುತ್ರಬೆಟ್ಟುವಿನ ಜಯಪ್ರಕಾಶ್ (25) ಯೋಗೀಶ್(23) ಎಂದು ಗುರುತಿಸಲಾಗಿದೆ. ಮೃತಪಟ್ಟ ಇನ್ನೊಬ್ಬರು ಮತ್ತು ಗಾಯಗೊಂಡ ಒಬ್ಬರ ಮಾಹಿತಿ ತಿಳಿದುಬಂದಿಲ್ಲ.ಹಾಸನ ಹೊರವಲಯದ ಕೆಂಚಟ್ಟಿ ಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿದ್ದ ಹಂಪ್ ಕಂಡು ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ

ಹಾಸನ ಕಾರು ಲಾರಿ ಭೀಕರ ಅಪಘಾತ ಬೆಳ್ತಂಗಡಿ ಮೂಲದ ಮೂವರು ಸಾವು | ಓರ್ವ ಗಂಭೀರ Read More »

ಮತ್ತೆ 13 ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ | ದಕ್ಷಿಣಕನ್ನಡಕ್ಕಿಲ್ಲ ರಿಲೀಫ್ ಭಾಗ್ಯ

ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಶೇಕಡ 5 ಕ್ಕಿಂತ ಕೆಳಕ್ಕೆ ಇಳಿಯದ 13 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಸಲು ರಾಜ್ಯಸರ್ಕಾರ ನಿರ್ಧರಿಸಿದೆ. ಇನ್ನುಳಿದಂತೆ ಪಾಸಿಟಿವಿಟಿ ದರ ಇಳಿಕೆ ಕಂಡಿರುವ 16 ಜಿಲ್ಲೆಗಳಲ್ಲಿ ಲಾಕ್ಡೌನ್ ತೆರವುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪಾಸಿಟಿವಿಟಿ ದರದ ಆಧಾರದ ಮೇಲೆ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಸೇರಿದಂತೆ ಗದಗ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಸೇರಿದಂತೆ 16 ಜಿಲ್ಲೆಗಳಲ್ಲಿ, ಈ

ಮತ್ತೆ 13 ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ | ದಕ್ಷಿಣಕನ್ನಡಕ್ಕಿಲ್ಲ ರಿಲೀಫ್ ಭಾಗ್ಯ Read More »

”ಮದ್ಯದ ಬೆಲೆ ಹೆಚ್ಚಾಗಿದೆ, ಬನ್ನಿ ಕುಳಿತು ಚರ್ಚಿಸೋಣ”

ಕೊಪ್ಪಳ: ಲಾಕ್‌ಡೌನ್ ನೆಪವಾಗಿಟ್ಟುಕೊಂಡು ಅಧಿಕ ದರದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಈ ಆರೋಪಕ್ಕೆ ಪುಷ್ಠಿ ಕೊಡುವಂತೆ ಕೊಪ್ಪಳ ಜಿಲ್ಲೆಯ ಹೊಸಹಳ್ಳಿಯಲ್ಲಿ ದುಪ್ಪಟ್ಟು ದರಕ್ಕೆ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಬೇಸತ್ತ ಮದ್ಯಪ್ರೀಯರು ಗ್ರಾಮದಲ್ಲಿರುವ ಎಲ್ಲಾ ಕುಡುಕರು ಒಂದು ಕಡೆ ಚರ್ಚಿಸೋಣ ಬನ್ನಿ ಎಂದು ಡಂಗುರ ಸಾರಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ನಮ್ಮ ಗ್ರಾಮದಲ್ಲಿ ಹಾಗೂ ಗಂಗಾವತಿಯಲ್ಲಿ ದುಪ್ಪಟ್ಟು ದರಕ್ಕೆ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಬಡವರಿಗೆ ತೊಂದರೆಯಾಗುತ್ತಿದೆ. ಲಾಕ್‌ಡೌನ್ ನೆಪ ಹೇಳಿಕೊಂಡು 50

”ಮದ್ಯದ ಬೆಲೆ ಹೆಚ್ಚಾಗಿದೆ, ಬನ್ನಿ ಕುಳಿತು ಚರ್ಚಿಸೋಣ” Read More »

ತಬ್ಲೀಘಿ ಜಮಾತ್ ಗುರಿಯಾಗಿರಿಸಿ ಕಾರ್ಯಕ್ರಮ ಆರೋಪ | ಸುವರ್ಣ ನ್ಯೂಸ್ ಮತ್ತು ನ್ಯೂಸ್ 18 ಕನ್ನಡ ಮೇಲೆ ದಂಡ | ಕ್ಷಮೆಯಾಚಿಸಲು ಆದೇಶ

ಬೆಂಗಳೂರು: ತಬ್ಲಿಘಿ ಜಮಾತ್ ಗುರಿಯಾಗಿರಿಸಿ ಅಸಂಬದ್ಧವಾಗಿ ಕಾರ್ಯಕ್ರಮ ಬಿತ್ತರಿಸಿದ ಕನ್ನಡದ ನ್ಯೂಸ್ ಚಾನೆಲ್ ಗಳಾದ ಸುವರ್ಣನ್ಯೂಸ್ ಮತ್ತು ನ್ಯೂಸ್ 18 ಕನ್ನಡಕ್ಕೆ 1.5 ಲಕ್ಷ ದಂಡ ವಿಧಿಸಿ ಕ್ಷಮೆಯಾಚಿಸಲು ಆದೇಶಿಸಲಾಗಿದೆ. ಕೊರೋನಾ ಆಕ್ರಮಣ ಆರಂಭದ ದಿನಗಳಲ್ಲಿ ಸರ್ಕಾರದ ಅನುಮತಿ ಮೇರೆಗೆ ತಬ್ಲೀಘಿ ಜಮಾತ್ ಕಾರ್ಯಕ್ರಮ ನಡೆದಿತ್ತು. ಇನ್ನು ಆ ಸಮಯದಲ್ಲಿ ಕೋವಿಡ್ ವೈರಸ್ ವ್ಯಾಪಕವಾಗಿ ಹರಡಲು ಆರಂಭಿಸಿದ್ದರಿಂದ ನ್ಯೂಸ್ ಚಾನೆಲ್ ಗಳು ತಮ್ಮ ಚಾನೆಲ್ ನಲ್ಲಿ ತಬ್ಲಿಘಿ ಜಮಾತ್ ನ್ನು ಕೊರೋನ ಹರಡಿಸಲು ಏರ್ಪಡಿಸಲಾಗಿದೆ ಎಂದು ಬಿಂಬಿಸಿದ್ದವು.

ತಬ್ಲೀಘಿ ಜಮಾತ್ ಗುರಿಯಾಗಿರಿಸಿ ಕಾರ್ಯಕ್ರಮ ಆರೋಪ | ಸುವರ್ಣ ನ್ಯೂಸ್ ಮತ್ತು ನ್ಯೂಸ್ 18 ಕನ್ನಡ ಮೇಲೆ ದಂಡ | ಕ್ಷಮೆಯಾಚಿಸಲು ಆದೇಶ Read More »